
ಕೋಲಾರ,ಜೂ.14: ಸೆಹಗಲ್ ಪೌಂಡೇಶನ್ ವತಿಯಿಂದ ಕೋಲಾರ ಜಿಲ್ಲೆಯ 15 ರೈತ ಉತ್ಪಾದಕ ಸಂಸ್ಥೆಗಳ ಅತಿ ಬಡತನ ಕುಟುಂಬದ ಮಹಿಳೆಯರಿಗೆ ಜೀವನೋಪಯಕ್ಕಾಗಿ ಮತ್ತು ಆರ್ಥಿಕ ಸ್ಥಿತಿ ಸುದಾರಿಸಿಕೊಳ್ಳಲು ಕುರಿ ವಿತರಣೆ ಮತ್ತು ತರಬೇತಿ ಕಾರ್ಯಕ್ರಮವನ್ನು ಸೆಹಗಲ್ ಪೌಂಡೇಶನ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಸೆಹಗಲ್ ಪೌಂಡೇಶನ್ ಪ್ರಾಜೆಕ್ಟ್ ಲೀಡ್ ಶಿವಶರಣಪ್ಪ ಮಾತನಾಡಿ, ಯೋಜನೆಯ ಉದ್ದೇಶ ಮತ್ತು ಕುರಿ ಸಾಕಾಣಿಕೆ ಮುಖಾಂತರ ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ತಿಳಿಸಿದರು.ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಸುದರ್ಶನ್ ಕುರಿಸಾಕಾಣಿಕೆಯ ವಿವಿಧ ಅಂಶಗಳ ಕುರಿತು ತಿಳಿವಳಿಕೆ […]

ಶ್ರೀನಿವಾಸಪುರ : ಕಷ್ಟಗಳು ಎಂಬುದು ಎಲ್ಲರಿಗೂ ಬರುತ್ತದೆ ಆದರೆ ದುಶ್ಚಟಗಳಿಗೆ ಮೊರೆಹೋಗುವುದು ತಪ್ಪು ಎಂದು ಹೇಳಿ , ಕಷ್ಟ ಪಟ್ಟು ದುಡಿಮೆ ಮಾಡಿ ಕುಟುಂಬವನ್ನ ಪಾಲಿಸುವಂತೆ ಶಾಸಕ ಜಿ.ಕೆ.ವೆಂಟಶಿವಾರೆಡ್ಡಿ ಸಲಹೆ ನೀಡಿದರು.ತಾಲೂಕಿನ ಗುರವಲ್ಲೋಳ್ಳಗಡ್ಡ ಗ್ರಾಮಕ್ಕೆ ಬುಧವಾರ ಮೃತ ಕುಟುಂಬದ ಮನೆಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನವನ್ನ ತಿಳಿಸಿ ಮಾತನಾಡಿದರು.ಮೃತರ ಅಂತ್ಯ ಸಂಸ್ಕಾರಕ್ಕಾಗಿ ಐವತ್ತು ಸಾವಿರ ರೂಗಳನ್ನು ನೀಡಿ , 1 ಲಕ್ಷರೂಗಳನ್ನು 11 ದಿವಸದೊಳಗೆ ಕುಟುಂಬಕ್ಕೆ ನೀಡುವುದಾಗಿ ಭರವಸೆ ನೀಡಿದರು.ಶ್ರೀನಿವಾಸಪುರ ಠಾಣೆಯ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ, […]

ಕೋಲಾರ:- ಕೋಲಾರದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇಮಾಭಿವೃದ್ದಿ ಸೇವಾ ಟ್ರಸ್ಟ್ಗೆ ಸರ್ಕಾರಿ ಜಮೀನು ಮಂಜೂರು ಮಾಡಲು ಆಗ್ರಹಿಸಿ ಟ್ರಸ್ಟ್ನ ಗೌರವಾಧ್ಯಕ್ಷ ಕೆ.ಜಯದೇವ್, ಅಧ್ಯಕ್ಷ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಎಂ.ಸೋಮಶೇಖರ್, ಖಜಾಂಚಿ ಮಾರ್ಜೇನಹಳ್ಳಿ ವಿ.ಬಾಬು ನೇತೃತ್ವದಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಪದಾಧಿಕಾರಿಗಳು ಕೋಲಾರ ಜಿಲ್ಲೆಯಲ್ಲಿ ಪರಿಶಿಷ್ಟ ಜನಾಂಗಕ್ಕೆ ಸೇರಿದ ಶೇ.70ರಷ್ಟಿರುವ ಚಿಕ್ಕತಾಳಿ ಯಲ್ಲಮ್ಮ ಬಳಗದ ಜನಾಂಗವಿದ್ದು, ನಾವು ಮೂಲತಃ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದರೂ ಕಾಂಗ್ರೆಸ್ ಪಕ್ಷ ನಮ್ಮನ್ನು […]

ಶ್ರೀನಿವಾಸಪುರ : ವಿಶ್ವ ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿದ್ದು ನಿರ್ಮೂಲನೆಗೆ ಶಿಕ್ಷಕರು ಹಾಗು ಶಿಕ್ಷಣ ಇಲಾಖಾಧಿಕಾರಿಗಳು ಜಾಗೃತಿ ಮೂಲಕ ಶ್ರಮಿಸಬೇಕು ಜೆಎಂಎಫ್ಸಿಯ ಅಪರ ಸಿವಿಲ್ ನ್ಯಾಯಾದೀಶ ಹೆಚ್ .ಆರ್.ಸಚಿನ್ ಎಂದು ಹೇಳಿದರು.ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಿಶ್ವಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಬಾಲ್ಯದಲ್ಲಿ ಆಟವಾಡುತ್ತಾ, ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇದು ಒಂದು […]

ಕೋಲಾರ:- ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದ ರೀತಿ ಕರ್ತವ್ಯ ನಿರ್ವಹಿಸಿ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೆ ಮುಖ್ಯಅಧೀಕ್ಷಕರೂ ಆದ ಉಪಪ್ರಾಂಶುಪಾಲರಾದ ರಾಧಮ್ಮ ಸಲಹೆ ನೀಡಿದರು.ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಜೂ.14 ರಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ಹಾಗೂ ನೋಂದಣಿ ಸಂಖ್ಯೆ ದಾಖಲಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಮಕ್ಕಳಲ್ಲಿ ಆತಂಕ,ಭಯ ಮೂಡಿಸುವ ಕೆಲಸ ಬೇಡ, ಆತ್ಮಸೈರ್ಯ ತುಂಬುವ ಕೆಲಸ ಮಾಡೋಣ […]

ಕೋಲಾರ:- ಜಿಲ್ಲಾದ್ಯಂತ ಜೂ.14 ರಿಂದ 22 ರವರೆಗೂ 17 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯ 385 ಪ್ರೌಢಶಾಲೆಗಳ 5346 ವಿದ್ಯಾರ್ಥಿಗಳು ಕುಳಿತಿದ್ದು,ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಎಲ್ಲಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಗುರುವಾರ ಕೋಲಾರದ ಸರ್ಕಾರಿ ಬಾಲಕರ ಪದವಿ ಪೂರ್ವಕಾಲೇಜಿನಲ್ಲಿ ಉಪಪ್ರಾಂಶುಪಾಲರಾದ ರಾಧಮ್ಮ ನೇತೃತ್ವದಲ್ಲಿ ಶಿಕ್ಷಕರು […]

ಕೋಲಾರ,ಜೂ.13: ಟಮಕ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪ್ಲಾಸ್ಟಿಕ್ ತಯಾರಿಸುವ ಕಾರ್ಖಾನೆಗಳಿಂದ ಆಗುತ್ತಿರುವ ಪರಿಸರ ಮಾಲಿನ್ಯದ ಬಗ್ಗೆ ಎರಡು ತಿಂಗಳ ಹಿಂದೆ ಪರಿಸರ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ರಾಜ್ಯಾಧ್ಯಕ್ಷ ಗಲ್ಪೇಟೆ ಕೆ.ಸಿ.ಸಂತೋಷ್, ಜಿಲ್ಲಾಧ್ಯಕ್ಷ ಟಮಕ ಶ್ರೀನಾಥ್ ಆರೋಪಿಸಿದ್ದಾರೆ.ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಮನುಷ್ಯ, ಪ್ರಾಣಿ ಮತ್ತು ಪಕ್ಷಿಗಳ ಮೇಲೆ ಪ್ಲಾಸ್ಟಿಕ್ನಿಂದ ಆಗುತ್ತಿರುವ ದುಷ್ಪರಿಣಾಮಗಳು ಹೆಚ್ಚಾಗುತ್ತಿವೆ. ಇವುಗಳಲ್ಲಿ ಮಕ್ಕಳ ಎಲುಬುಗಳನ್ನು ನಿರೂಪಗೊಳಿಸಬಲ್ಲ ವಿಷಕಾರಿ ವಸ್ತುಗಳಿವೆ. […]

ಶ್ರೀನಿವಾಸಪುರ: ಪಟ್ಟಣದ ಸ್ನೇಹಿತರ ಬಳಗ ವತಿಯಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಲೇಖನಿ ಸಾಮಗ್ರಿಗಳು ವಿತರಣೆ ಮಾಡಲಾಯಿತು. ಶ್ರೀನಿವಾಸಪುರ ಪಟ್ಟಣದ ರಂಗಾ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಸ್ನೇಹ ಬಳಗ ವತಿಯಿಂದ ನೋಟ್ ಪುಸ್ತಕ ಹಾಗೂ ಲೇಖನಿ ಸಾಮಗ್ರಿಗಳು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ ಸಿ ವಸಂತ, ಸಿ ಆರ್ ಪಿ. ರಾಧಾಕೃಷ್ಣ, ಮುಖ್ಯ […]

ಕೋಲಾರ: ಜಾಗತಿಕ ತಾಪಮಾನದ ಬಗ್ಗೆ ಎಚ್ಚೆತ್ತುಕೊಂಡು ಜಿಲ್ಲೆಯನ್ನು ಹಸಿರು ಹೊದಿಕೆಯಂತಾಗಿಸಲು ಸಾರ್ವಜನಿಕರು ಸಹಕಾರಿಸಬೇಕಾಗಿದೆ. ಪರಿಸರದ ರಕ್ಷಣೆ ಮಾಡಿದಾಗ ಮಾಡಿದಾಗ ಮಾತ್ರ ಮನುಕುಲ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದು ಕೋಲಾರ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷಾ ರವರು ಅಭಿಪ್ರಾಯಪಟ್ಟಿದ್ದಾರೆ.ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗಳ ಆವರಣದಲ್ಲಿ ಕದಂಬ ಸೇವಾ ಫೌಂಡೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತೀ ದಿನ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕದಂಬ ಸೇವಾ ಫೌಂಡೇಷನ್ ವತಿಯಿಂದ ಪ್ರತೀ ದಿನ ಕನಿಷ್ಠ ಒಂದು ಗಿಡ ನೆಡುವ ಸಂಕಲ್ಪದೊಂದಿಗೆ ದಿನಕ್ಕೊಂದು ಗಿಡ ನೆಡುವ […]