ಶ್ರೀನಿವಾಸಪುರ, ಮೇ 19: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದರೂ, ಶಾಲೆಯ ಈ ಸಾಧನೆಗೆ ಸಮರ್ಪಕ ಪ್ರಚಾರ ಸಿಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾದ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆ ಶೇಕಡ 100 ಫಲಿತಾಂಶ ದಾಖಲಿಸಿದೆ. ಅಲ್ಲದೆ ಹಲವು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಶಾಲೆಗೆ […]
ಕೋಲಾರ:- ಸಾಮಾಜಿಕ ಸೇವೆಯ ಮೂಲಕ ಬಡವರಿಗೆ ನೆರವಾಗುವ ಕೆಲಸ ದೇವರಿಗೂ ಪ್ರೀತಿಯಾಗಿರುತ್ತದೆ, ಹಸಿದವನಿಗೆ, ಅಗತ್ಯವಿದ್ದವನಿಗೆ ಊಟ ಹಾಕಿದರೆ ಅದು ಸಾರ್ಥಕವಾಗುತ್ತದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು.ತಾಲ್ಲೂಕಿನ ಯಲ್ದೂರು ಹಾಗೂ ರೋಣೂರು ಗ್ರಾಮದಲ್ಲಿ ಡಿ.ಕೆ.ಶಿವಕುಮರ್ ಅವರ ಹುಟ್ಟುಹಬ್ಬದ ಅಂಗವಾಗಿ ನಡೆದ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಡಿಕೆಶಿ ಆಪ್ತರಾದ ಪುರ್ನಹಳ್ಳಿಯ ಚೆನ್ನಮ್ಮ ವರದಪ್ಪ ಕುಟುಂಬದವರು ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಚಿತವಾಗಿ ನೀಡಿರುವ ಶವ ಪೆಟ್ಟಿಗೆ ಫ್ರೀಜರ್ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.ಇಂದು ಸಮಾಜದಲ್ಲಿ ಉಳ್ಳವರು […]
ಶ್ರೀನಿವಾಸಪುರ: ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಬ್ಬಟ ಗ್ರಾಮದಲ್ಲಿ ಉರ್ದು ಶಾಲೆಯಿಂದ ಮಸೀದಿ ರಸ್ತೆಯ ನಜಿರ್ ಸಾಬ್ ಅವರ ಮನೆ ಸಮೀಪದವರೆಗೆ ಮೋರಿ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಿ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎಚ್.ಎಂ. ಆನಂದ್ ಕುಮಾರ್ ತಿಳಿಸಿದ್ದಾರೆ. ಗ್ರಾಮದ ಪ್ರಮುಖ ರಸ್ತೆಯ ಭಾಗದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಹಾಗೂ ಚರಂಡಿ ನೀರು ರಸ್ತೆ ಮೇಲೆ ನಿಂತು ಸಾರ್ವಜನಿಕರಿಗೆ ತೀವ್ರ […]
ಕೋಲಾರ, ಮೇ ೧೩: ಮೇ ೩ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಗಂಭೀರ ವಿಚಾರವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಕೇಂದ್ರ ಉನ್ನತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಎಸ್. ಮಂಜುನಾಥ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ […]
ಶ್ರೀನಿವಾಸಪುರ ಮೇ 13: ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಈ ಕಾಮಗಾರಿಯ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿರಲಿಲ್ಲ. ದೇವರ ಪ್ರೇರಣೆಯಿಂದ ನನ್ನಿಂದ ಈ ಕಾರ್ಯ ನಡೆಯುತ್ತಿದ್ದು, ಈ ಅವಕಾಶ ನೀಡಿದ ದೇವರಿಗೆ ನಾನು ಧನ್ಯನಾಗಿದ್ದೇನೆ ಎಂದು ಹೇಳಿದರು. ರಾಜಗೋಪುರ ನಿರ್ಮಾಣಕ್ಕಾಗಿ ಶಾಸಕ ನಿಧಿಯಿಂದ ₹1 ಕೋಟಿ ಹಾಗೂ ಮುಜರಾಯಿ ಇಲಾಖೆಯಿಂದ ₹50 […]
ಶ್ರೀನಿವಾಸಪುರ, ಮೇ 12: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ನಗರಾಭಿವೃದ್ಧಿ ಕೋಶದ ಘನ ತ್ಯಾಜ್ಯ ನಿರ್ವಹಣೆ ಜಿಲ್ಲಾ ನೋಡಲ್ ಅಧಿಕಾರಿ ನವೀನ್ ಚಂದ್ರ ಹಾಗೂ ಎಸ್ಡಬ್ಲ್ಯೂಎಂ ತಜ್ಞ ಹರ್ಷ ಅವರು ಘನ ತ್ಯಾಜ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ಮನೆಮನೆಗಳಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಹಸಿ, ಒಣ, ಸ್ಯಾನಿಟರಿ ಹಾಗೂ ಅಪಾಯಕಾರಿ ತ್ಯಾಜ್ಯವಾಗಿ ವಿಂಗಡಣೆ ಮಾಡುವುದು, ಸಂಗ್ರಹಣೆ, ಸಾಕಾಣಿಕೆ ಹಾಗೂ ವೈಜ್ಞಾನಿಕ ವಿಲೇವಾರಿ ಮಾಡುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಸ್ವಚ್ಛ […]
ಮಂಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಪುಸ್ತಕಕ್ಕೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ […]
ಪಾರದರ್ಶಕ ಆಡಳಿತ, ಜನಸಹಭಾಗಿತ್ವ ಮತ್ತು ಅಭಿವೃದ್ಧಿ ಕಾರ್ಯಗಳ ಸಮರ್ಪಕ ಜಾರಿಗೆ ಸಾರ್ವಜನಿಕರ ಒತ್ತು ಶ್ರೀನಿವಾಸಪುರ : ಗ್ರಾಮ ಪಂಚಾಯಿತಿಗಳು ಗ್ರಾಮೀಣ ಭಾರತದ ಆಡಳಿತ ವ್ಯವಸ್ಥೆಯ ಮೂಲ ಆಧಾರವಾಗಿದ್ದು, ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪ್ರಮುಖ ಶಕ್ತಿಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ.ಸರ್ಕಾರದ ಜನಪರ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಜನರಿಗೆ ತಲುಪಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ವಹಿಸುವ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ವೃದ್ಧಿ, ಜನಸಾಮಾನ್ಯರ ಸಮಸ್ಯೆಗಳ ತ್ವರಿತ ಪರಿಹಾರ ಮತ್ತು ಪಾರದರ್ಶಕ ಆಡಳಿತ ವ್ಯವಸ್ಥೆ ನಿರ್ಮಾಣದಲ್ಲಿ […]
ಕೋಲಾರ, ಮೇ.೯: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವೇ ಕಾರ್ಯಕರ್ತರು. ಗ್ರಾಮ ಮಟ್ಟದಲ್ಲಿ ಸಂಘಟನೆ ಗಟ್ಟಿಗೊಂಡರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಯಶಸ್ಸು ದೊರೆಯಲಿದೆ ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಹೇಳಿದರು. ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಹಾಗೂ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಬೂತ್ ಮಟ್ಟದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್ಐಆರ್ ಜಾಗೃತಿ ಕಾರ್ಯಕ್ರಮ ಹಾಗೂ ಪಕ್ಷದ ವತಿಯಿಂದ ಬೂತ್ ಮಟ್ಟದ ಏಜೆಂಟ್ಗಳ ನೇಮಕಾತಿ ಕುರಿತು […]

