ಶ್ರೀನಿವಾಸಪುರ;ಪಟ್ಟಣದ ಪುರಸಭೆ ಮುಂಭಾಗ ಮಂಗಳವಾರ ದಿ.ಪುನಿತ್ರಾಜಕುಮಾರ್ರವರ 3ನೇ ವರ್ಷದ ಪುಣ್ಯ ತಿಥಿಯನ್ನು ಪುನಿತ್ರಾಜಕುಮಾರ್ ಬಳಗವು ಆಯೋಜಿಸಿ ಅನ್ನಸಂತರ್ಪನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಪುರಸಭೆ ಅಧ್ಯಕ್ಷ ಬಿ.ಆರ್.ಬಾಸ್ಕರ್, ಪಿಎಸ್ಐ ಜಯರಾಮ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಜಿ.ಎಸ್.ಶ್ರೀನಿವಾಸ್, ಪುನಿತ್ರಾಜಕುಮಾರ್ ಅಭಿಮಾನಿ ಬಳಗದ ಪದಾಧಿಕಾರಿಗಳಾದ ರಾಜ್ ದ್ವನಿ ವರ್ಧಕ ಮಾಲೀಕ ಶ್ರೀನಿವಾಸ್, ಚಂದ್ರು, ಎಚ್.ಎಸ್. ನಾರಾಯಣಮೂರ್ತಿ, ಲಕ್ಷ್ಮಣಬಾಬು, ಗೊಂಗರ್ ಶ್ರೀನಿವಾಸ್, ಕಾರ್ತೀಕ್ , ಮುನಿರಾಜು, ಮಂಜು ಇದ್ದರು.
ಶ್ರೀನಿವಾಸಪುರ : ಈ ಭಾಗದಲ್ಲಿ ಅತಿ ಹೆಚ್ಚು ಹಣ್ಣು ಮತ್ತು ತರಕಾರಿಗಳನ್ನು ಯಥೇಚ್ಛವಾಗಿ ಬೆಳೆಯುತ್ತಿದ್ದೇವೆ ಕೃಷಿ ಆಧಾರಿತ ಕಂಪನಿಗಳು ಎಂದರೆ ಉಪ್ಪಿನಕಾಯಿ ಕಾರ್ಖಾನೆಗಳು ಹಣ್ಣು ತಿರುಳು ತೆಗೆಯುವ ಕಾರ್ಖಾನೆಗಳು ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ತಯಾರು ಮಾಡುವಂತಹ ಕಾರ್ಖಾನೆಗಳು ಹಾಗೂ ಇವುಗಳಿಗೆ ಬೇಕಾದಂತಹ ಪ್ಯಾಕಿಂಗ್ ಮೆಟೀರಿಯಲ್ ಇಂದ ಹಿಡಿದು ಇನ್ನು ಅನೇಕ ಕಂಪನಿಗಳು ಬರಬಹುದು ನಂತರ ನಾವು ತಯಾರಿಸಿದ ಪ್ರಾಡಕ್ಟ್ಸ್ ಅನ್ನು ದೇಶವಿದೇಶಗಳಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತಹ ಪ್ರಕ್ರಿಯೆಗಳನ್ನು ಮಾಡಿದರೆ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗುತ್ತದೆ ಎಂದು […]
ಶ್ರೀನಿವಾಸಪುರ; ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಬಾವಿ ಸಭೆ, ಕುಂದುಕೊರತೆ ಸಭೆ, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಇಒ ಎ.ಎನ್.ರವಿ ಹಾಗು ಇತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಶ್ರೀನಿವಾಸಪುರ : ತಾಲ್ಲೂಕಿನ ಯಲವಳ್ಳಿ ಯಿಂದ ಕೋಲಾರ ಶ್ರೀನಿವಾಸಪುರ ಮುಖ್ಯ ರಸ್ತೆಯ ತನಕ ಬಂಡಿದಾರಿಯಿದ್ದು ರಸ್ತೆ ಬದಿಯ ಜಮೀನು ಮಾಲೀಕರು ರಸ್ತೆಯನ್ನು ಸೋಮವಾರ ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸಲಾಯಿತು.ಹಲವು ವರ್ಷಗಳಿಂದ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕದ ಜಮೀನು ಮಾಲೀಕರು ರಸ್ತೆ ಸಮಸ್ಯೆಯನ್ನು ಬಗೆಹರಿಸುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು ಸಹ ಸಮಸ್ಯೆ ಬಗೆಹರಿದಿಲ್ಲ ಕಳೆದ ಏಳು ದಿನಗಳ ಹಿಂದೆ ಗ್ರಾಮಸ್ಥರು ಪುನಃ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು ಸ್ಥಳಕ್ಕೆ ತಾಲೂಕು ದಂಡಾಧಿಕಾರಿಗಳು ಕಂದಾಯ ಇಲಾಖೆ […]
ಶ್ರೀನಿವಾಸಪುರ : ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡುವ ವ್ಯವಸ್ಥೆ ಮಾಡಲು ಇಚ್ಚಿಸಿದ್ದೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯ ಆವರಣದ ಮುಂಭಾಗದಲ್ಲಿ ಸೋಮವಾರ ಕೃಷಿ ಇಲಾಖೆಯಿಂದ ಕೃಷಿ ಪರಿಕರಗಳನ್ನು ಅರ್ಹ ಫಲಾನುಭವಿಗಳಿಗೆ ವಿವಿಧ ಯಂತ್ರೋಪಕರಣಗಳನ್ನು ವಿತರಿಸಿ ಮಾತನಾಡಿದರು.ಜನತೆ ನನ್ನ ಮೇಲಿನ ಪ್ರೀತಿ ವಿಶ್ವಾಸಕ್ಕೆ ಮತ ಹಾಕಿ ನನ್ನನ್ನು ಗೆಲ್ಲಿಸಿಕೊಟ್ಟಿದ್ದಾರೆ […]
ಕೋಲಾರ.ಅ.28: ಗಡಿಭಾಗಗಳಲ್ಲಿ ರೈತರ ಬೆಳೆ ನಾಶಮಾಡುತ್ತಿರುವ ಕಾಡಾನೆಗಳು ಹಾಗೂ ಕಾಡಂದಿಗಳ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೆ 5 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ರೈತ ಸಂಘದಿಂದ ಉಪ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲು ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಕಳ್ಳರು ಬಂದು ಊರು ದೋಚಿದ ಮೇಲೆ ಊರ ಬಾಗಿಲು ಹಾಕಿದರೂ ಎಂಬ ಗಾದೆಯಂತೆ ಕಾಡಾನೆಗಳಿಂದ ರೈತರ ಬೆವರು ಸುರಿಸಿ ಬೆಳೆದ ಬೆಳೆ ನಾಶವಾದ ನಂತರ ಪತ್ತೆಯಾಗುವ ಅರಣ್ಯ ಅಧಿಕಾರಿಗಳ ರೈತ ವಿರೋಧಿ ದೋರಣೆ ಹಾಗೂ ಗಡಿಭಾಗದ […]
ಶ್ರೀನಿವಾಸಪುರ : ತಾಲೂಕಿನ ಗೌನಿಪಲ್ಲಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಗೋದಾಮಿನಲ್ಲಿ ಆಕ್ರಮವಾಗಿ ಸಂಗ್ರಹಿಸಲಾಗಿದ್ದ ಪಟಾಕಿಗಳನ್ನು ಭಾನುವಾರ ತಹಶೀಲ್ದಾರ್ ಜಿ.ಎನ್.ಸುದೀಂದ್ರ ವಶಕ್ಕೆ ಪಡೆದುಕೊಂಡಿದ್ದಾರೆ.ಶ್ರೀರಾಮಪ್ಪ ಎಂಬುವವರು ದೀಪಾವಳಿ ಹಬ್ಬದ ಪ್ರಯುಕ್ತ ಚೀಟಿ ಹಾಕಿದ ಗ್ರಾಹಕರಿಗೆ ಪಟಾಕಿ ನೀಡಲು 100 ಬಾಕ್ಸ್ಗಳ ಗೋಡನ್ ನಲ್ಲಿ ಆಕ್ರಮವಾಗಿ ಇರಿಸಿದ್ದರು . ಖಚಿತ ಮಾಹಿತಿಯ ಮೇರೆಗೆ ಗೋಡನ್ ಮೇಲೆ ದಾಳಿ ನಡೆಸಿ ಅಕ್ರವಾಗಿ ಇರಿಸಿದ್ದ ಪಟಾಕಿ ಬಾಕ್ಸ್ಗಳನ್ನು ಪೋಲಿಸ್ ವಶಕ್ಕೆ ನೀಡಲಾಗಿದೆ ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಮಾಹಿತಿ ನೀಡಿದರು.
ಶ್ರೀನಿವಾಸಪುರ : ಇತ್ತೀಚೆಗೆ ಐಆರ್ಡಿಎ ನಿರ್ದೇಶನದ ಮೇರೆಗೆ ಭಾರತೀಯ ಜೀವವಿಮ ನಿಗಮದಲ್ಲಿ ಆದ ಬದಲಾವಣೆಗಳ ಬಗ್ಗೆ ಮಾಹಿತಿಗಳನ್ನು ಕೋಲಾರ ಶಾಖೆಯ ಹಿರಿಯ ಶಾಖಾಧಿಕಾರಿಗಳಾದ ಎನ್.ಆರ್. ಸಿದ್ದೇಶ್ ಮಾಹಿತಿ ನೀಡಿದರು.ಪಟ್ಟಣದ ಎಲ್ಐಸಿ ಉಪಶಾಖೆಯಲ್ಲಿ ಗುರುವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.ಅಭಿವೃದ್ಧಿ ಅಧಿಕಾರಿ ಆರ್ ವಿ ಕುಲಕರ್ಣಿ ಮಾತನಾಡಿ ಎಲ್ಐಸಿ ನಲ್ಲಿ ಆದ ಹೊಸ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಿ, ವಿಮಾ ಮಾರುಕಟ್ಟೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ತಿಳಿದುಕೊಂಡು ಹೇಗೆ ಹೆಚ್ಚಿನ ವಹಿವಾಟನ್ನು ಮಾಡಬೇಕೆಂದು ತಮ್ಮ ತಂಡದ ಸದಸ್ಯರಿಗೆ ತಿಳಿಸಿಕೊಟ್ಟರು.ಸಭೆಯಲ್ಲಿ ನಿರಂತರ 16 […]
ಶ್ರೀನಿವಾಸಪುರ : ಮಹಿಳೆಯರಿಗೆ ಸಮಾಜದಲ್ಲಿ ಸಮಾನವಾದ ಅವಕಾಶಗಳು ಬಗ್ಗೆ ಸಂವಿದಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದಿನ ಕಾಲದಲ್ಲಿ ಸಾಮಾನ್ಯವಾಗಿ ಮಹಿಳೆಯರು ಮನೆಯಲ್ಲಿ ಇರುತ್ತಿದ್ದರು. ಆದರೆ ಇಂದು ಮಹಿಳೆಯರು ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗುಳ್ಳುವದರ ಮೂಲಕ ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುತ್ತಿರ್ತುವುದು ಮಹಿಳೆಯರು ಸಮಾನವಾದ ಹಕ್ಕು ಪಡೆಯುತ್ತಿರುವುದು ಎದ್ದು ಕಾಣಿಸುತ್ತಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವಗಳ ಸಮಿತಿ, ತಾಲೂಕು ಆಡಳಿತ , ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು […]

