ಬೆಂಗಳೂರು : ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ ಅವರಿಗೆ ಆಸ್ಪತ್ರೆ ಚಿಕಿತ್ಸೆಗೆ ₹4 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಂಜೂರು ಮಾಡಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಹನುಮಂತಪ್ಪ ಹಳ್ಳಿಕೇರಿ ಅವರು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚ ಎದುರಿಸುತ್ತಿದ್ದು, ಆರ್ಥಿಕ ನೆರವಿನ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಗಮನಕ್ಕೆ ವಿಷಯವನ್ನು ತಂದಿದ್ದು, ತಕ್ಷಣ ನೆರವು […]

Read More

ಶ್ರೀನಿವಾಸಪುರ : ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನ ಅರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯನ್ನ ಸದ್ಭಳಿಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮನವಿ ಮಾಡಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ಬಿಸಿಎಂ ಕಾರ್ಪರೇಷನ್ ಇಲಾಖೆ ವತಿಯಿಂದ ಉಚಿತವಾಗಿ ಅರ್ಹ ಫಲಾನುಭಿವಿಗಳಿಗೆ 14 ಹೊಲಿಗೆ ಯಂತ್ರ ವಿತರಸಿ ಮಾತನಾಡಿದರು. ಪಶ್ಚಿಮ ಬಂಗಳಾದಲ್ಲಿ […]

Read More

ಶ್ರೀನಿವಾಸಪುರ : ಆರೋಗ್ಯವು ಜೀವನದಲ್ಲಿ ಅತ್ಯಂತ ಮಹತ್ವಪೂರ್ಣ ಸಂಪತ್ತು ಹಾಗು ಭಾಗ್ಯ. . ಅಂದರೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯವೇ ಮನಷ್ಯನ ನಿಜವಾದ ಸಂಪತ್ತು. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆ ನೀಡಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳವಾರ 15 ನೇ ಹಣಕಾಸು ಯೋಜನೆಯಡಿಯಲ್ಲಿ 60 ಲಕ್ಷ ಮೌಲ್ಯದಲ್ಲಿ ನಿರ್ಮಿಸಲಾದ ಲ್ಯಾಬ್‌ನ ನೂತನ ಕಟ್ಟಡವನ್ನು ಉದ್ಗಾಟಿಸಿ ಮಾತನಾಡಿದರು. ಹಣ ಅಂತಸ್ತು ಇದ್ದರೂ ಆರೋಗ್ಯವಿಲ್ಲದಿದ್ದರೆ ಜೀವನ ನರಕವಾಗುತ್ತದೆ. ಇಂದು ಆರೋಗ್ಯವಂತ ವ್ಯಕ್ತಿ ಮಾತ್ರ ಜೀವನದ ಸುಖ, ಸಂತೋಷಗಳನ್ನು ಅನುಭವಿಸಲು ಸಾಧ್ಯ. ಉತ್ತಮ […]

Read More

ಕೋಲಾರ:- ಪತ್ರಕರ್ತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಜಮೀನು ಮಂಜೂರು ಮಾಡುವ ಸಾಧ್ಯತೆಗಳ ಪರಿಶೀಲಿಸುವುದರ ಜೊತೆಗೆ ಕೆಯುಡಿಎ ಸೇರಿದಂತೆ ಪರ್ಯಾಯ ಮಾರ್ಗದಿಂದಲೂ ನಿವೇಶನ ಒದಗಿಸಲು ಪರಿಶೀಲಿಸಿ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಭರವಸೆ ನೀಡಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಕೋಲಾರ ಸುತ್ತ ಮುತ್ತ ಪತ್ರಕರ್ತರಿಗೆ ಸೂರು ಕಟ್ಟಿಕೊಳ್ಳಲು ಅಗತ್ಯವಾದ 5 ಎಕರೆ ಜಮೀನು ಮಂಜೂರಾತಿ ಕೋರಿ ಮಾಡಿದ ಮನವಿಗೆ ಸ್ಪಂದಿಸಿ ಅವರು ಮಾತನಾಡುತ್ತಿದ್ದರು.ಸರ್ಕಾರದಿಂದ ಜಮೀನು ಪಡೆಯುವ ಪ್ರಯತ್ನದ ಜೊತೆಗೆ ಪರ್ಯಾಯವಾಗಿಯೂ ನಿವೇಶನ ಪಡೆದುಕೊಳ್ಳಲು ಪ್ರಯತ್ನಿಸಿ […]

Read More

ಶ್ರೀನಿವಾಸಪುರ : ದೇಶದ ಪ್ರಮುಖ ಮಾವು ಉತ್ಪಾದನಾ ಕೇಂದ್ರಗಳಲ್ಲಿ ಒಂದಾಗಿ ಹೆಸರುವಾಸಿಯಾಗಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಮತ್ತೆ ಮಾವಿನ ಸೀಸನ್‌ಗೆ ಸಜ್ಜಾಗಿದ್ದು, ಮೇ 15ರಿಂದ ಅಧಿಕೃತವಾಗಿ ಮಾವಿನ ಮಾರುಕಟ್ಟೆ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಹಬ್ಬದಂತ ವಾತಾವರಣ ನಿರ್ಮಾಣವಾಗಿದ್ದು, ರೈತರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ಹೊಸ ನಿರೀಕ್ಷೆಗಳೊಂದಿಗೆ ಸೀಸನ್‌ಗೆ ಎದುರು ನೋಡುತ್ತಿದ್ದಾರೆ. ಸುಮಾರು 65 ಸಾವಿರ ಎಕರೆ ಪ್ರದೇಶದಲ್ಲಿ ಮಾವು ಬೆಳೆಯುವ ಶ್ರೀನಿವಾಸಪುರ, ‘ಮಾವಿನ ನಾಡು’ ಹಾಗೂ ‘ಮಾವಿನ ರಾಜಧಾನಿ’ ಎಂಬ ಹೆಸರನ್ನು ಸಂಪೂರ್ಣವಾಗಿ […]

Read More

ಶ್ರೀನಿವಾಸಪುರ : ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಸೋಮವಾರ ಭಾರೀ ಸಂಭ್ರಮಾಚರಣೆ ನಡೆಯಿತು. ಪಟ್ಟಣದ ಇಂದಿರಾಭವನ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಮಿಠಾಯಿ ಹಂಚಿ ವಿಜಯೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಆರ್.ಎನ್. ಚಂದ್ರಶೇಖರ್, ಮೊದಲನೆಯದಾಗಿ ಮೂರು ರಾಜ್ಯಗಳ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೂರು ರಾಜ್ಯಗಳು ಬಿಜೆಪಿ ಪಕ್ಷದ ತಕ್ಕೆಗೆ ಬಂದಿರುವುದು ಶುಭ ಸೂಚನೆಯಾಗಿದೆ. ಪಟ್ಟಣದಲ್ಲಿ ಎಲ್ಲಾ ಕಾರ್ಯಕರ್ತರ ಸಹಕಾರದೊಂದಿಗೆ ವಿಜೃಂಭಣೆಯಿಂದ ಸಂಭ್ರಮಾಚರಣೆ ಹಮ್ಮಿಕೊಂಡಿದ್ದೇವೆ.  […]

Read More

ಕೋಲಾರ:- ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಜಿ.ಸುರೇಶ್ ಬಾಬು, ಶಿಕ್ಷಕರ ಗೆಳೆಯರ ಬಳಗದ ಅಧ್ಯಕ್ಷ ಕೋರಗಂಡಹಳ್ಳಿ ನಾರಾಯಣಸ್ವಾಮಿ, ಅನಿಲ್ ಕುಮಾರ್ ನೇತೃತ್ವದ ತಂಡ ಎಲ್ಲಾ 20 ಸ್ಥಾನಗಳಲ್ಲೂ ಜಯಭೇರಿ ಬಾರಿಸುವ ಮೂಲಕ ಹಾಲಿ ನೌಕರರ ಸಂಘದ ಅಧ್ಯಕ್ಷ ಅಜಯ್‌ಕುಮಾರ್ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ.ಚುನಾವಣೆ ನಡೆದ ಎಲ್ಲಾ 20 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿರುವ ಅನಿಲ್‌ಕುಮಾರ್ ಹಾಗೂ ಶಿಕ್ಷಕ ಗೆಳೆಯರ ಬಳಗದ ತಂಡ ಗೆಲುವಿನ ನಗೆ ಬೀರಿದ್ದು, ಶಿಕ್ಷಕ ಗೆಳೆಯರ […]

Read More

ನಸೀರ್ ಅಹ್ಮದ್, ಅಬ್ದುಲ್ ಜಬ್ಬಾರ್ ವಿರುದ್ಧದ ಕ್ರಮ ಹಿಂಪಡೆಯಲು ಒತ್ತಾಯ ಕಾಂಗ್ರೆಸ್‌ಗೆ ತೀವ್ರ ಸಂದೇಶ ಶ್ರೀನಿವಾಸಪುರ, ಮೇ 2: ಅಲ್ಪಸಂಖ್ಯಾತ ನಾಯಕರು ಎಂಎಲ್‌ಸಿ ನಸೀರ್ ಅಹ್ಮದ್ ಹಾಗೂ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅವರಿಗೆ ಪುನಃ ಹುದ್ದೆಗಳನ್ನು ನೀಡುವವರೆಗೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಶ್ರೀನಿವಾಸಪುರದ ಉಲಮಾಗಳು ತೀವ್ರ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಆಜಾದ್ ರಸ್ತೆಯ ಜಾಮಿಯಾ ಮಸೀದಿ ಸಮೀಪ ಶುಕ್ರವಾರ ನಡೆದ ರಾಷ್ಟ್ರೀಯ ಏಕತಾ ಕಾರ್ಯಕ್ರಮದಲ್ಲಿ ಮಾತನಾಡಿದ ಧಾರ್ಮಿಕ ಮುಖಂಡರು, ರಾಜ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಕ್ರಮಗಳನ್ನು ಖಂಡಿಸಿದರು. […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ವ್ಯವಸ್ಥಾಪಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಡಿ.ಆರ್. ಮಂಜುನಾಥ್ ಅವರು ಇಂದು ವಯೋನಿವೃತ್ತಿ ಹೊಂದಿದ್ದು, ಅವರ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಾ.ಪಂ. ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮಂಜುನಾಥ್ ಅವರ ಆಡಳಿತ ಕೌಶಲ್ಯ, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯನ್ನು ಸ್ಮರಿಸಿ ಪ್ರಶಂಸಿಸಿದರು. ತಮ್ಮ ಸೇವಾ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿಗೆ ನೀಡಿದ ಕೊಡುಗೆ, ಸಹೋದ್ಯೋಗಿಗಳೊಂದಿಗೆ ಹೊಂದಿದ್ದ ಸ್ನೇಹಪೂರ್ಣ ನಂಟು ಹಾಗೂ ಶಿಸ್ತುಬದ್ಧ ಕಾರ್ಯಪದ್ಧತಿ ಎಲ್ಲರಿಗೂ ಮಾದರಿಯಾಗಿದೆ ಎಂದು […]

Read More
1 5 6 7 8 9 388