
ಶ್ರೀನಿವಾಸಪುರ: 18 ವರ್ಷ ತುಂಬಿದ ವ್ಯಕ್ತಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಎಂದು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹೇಳಿದರು. ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವ್ಯವಸ್ಥಿತ ಮತದಾರರ ಜಾಗೃತಿ ಮತ್ತು ಭಾಗವಹಿಸುವಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. ಈ ನಿಟ್ಟಿನಲ್ಲಿ ಮತದಾರರ ಸಾಕ್ಷರತಾ ಕ್ಲಬ್ ಸದಸ್ಯರು ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು, ನಿಸ್ಪಕ್ಷಪಾತ ಚುನಾವಣೆ ನಡೆಸಲು ಸಹಕರಿಸಬೇಕು ಎಂದು ಹೇಳಿದರು. ತಾಲ್ಲೂಕು […]

ಕೋಲಾರ,ನ.22: ಆದಾಯ ತೆರಿಗೆ ನಿರ್ದೇಶನಾಲಯ (ಇಂಟೆಲಿಜೆನ್ಸ್ ಅಂಡ್ ಇನ್ವೆಸ್ಟಿಗೇಷನ್) ಮತ್ತು ಕೋಲಾರ ಜಿಲ್ಲಾ ತೆರಿಗೆ ಪ್ರಾಕ್ಟೀಸ್ನರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಇತ್ತೀಚಿನ ದಿನಗಳಲ್ಲಿ ಆದಾಯ ತೆರಿಗೆ ಇಲಾಖೆ ತಂದಿರುವ ಹಲವು ಹೊಸ ಕಾರ್ಯಕ್ರಮಗಳ ಮತ್ತು ತೆರಿಗೆದಾರರಿಗೆ “ಇ ಪರಿಶೀಲನೆ” ಮತ್ತು ಪೂರಕ ಕ್ರಮಗಳ ಬಗ್ಗೆ ನಗರದ ಪತ್ರಕರ್ತರ ಭವನದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಹಿರಿಯ ಸದಸ್ಯರಾದ ಬಿ.ಆರ್.ಪ್ರಸಾದ್ ಹಾಗೂ ದೇವರಾಜ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಉಶಸ್ವಿಯಾಗಿ ನಡೆದಿದ್ದು, ಆದಾಯ ತೆರಿಗೆ ಇಲಾಖೆಯ ಅಪರ ನಿರ್ದೇಶಕ ಪಿ.ಸುರೇಶ್ ರಾವ್ ಸಂತಸ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಆದಾಯ […]

ಶ್ರೀನಿವಾಸಪುರ: ಪಟ್ಟಣದಲ್ಲಿ ನ.30 ರಂದು ಕನಕ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಬೇಕು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನಕ ಜಯಂತಿ ಆಚಣೆ ಬಗ್ಗೆ ಚರ್ಚಿಸಲು ಮಂಗಳವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರುಹಾಜರಿ ಸಹಿಸಲಾಗದು. ಅಂದು ನಾನೇ ಅಧಿಕಾರಿಗಳ ಹಾಜರಾತಿ ಪಡೆಯುತ್ತೇನೆ ಎಂದು ಎಚ್ಚರಿಸಿದರು.ಈ ಬಾರಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ […]

ಶ್ರೀನಿವಾಸಪುರ: ಗ್ರಾಮೀಣ ಜನರ ಮನೆಮನೆಗೂ ನೀರು ಕೊಡುವಂತ ಜಲಜೀವನ್ ಮಿಷನ್ ಯೋಜನೆ ರಾಜ್ಯ ಹಾಗು ಕೇಂದ್ರ ಸರ್ಕಾರಗಳ ಮಹತ್ತರ ಕಾರ್ಯಕ್ರಮ,ಆದರೆ ಕೆಲವೊಂದು ಹಳ್ಳಿಗಳಲ್ಲಿ ಕಾಮಗಾರಿ ಪೂರ್ಣ ಆಗದೆ ಗ್ರಾಮಗಳಲ್ಲಿ ಜನತೆ ಇಲ್ಲದ ತೊಂದರೆ ಅನುಭವಿಸುತ್ತಿದ್ದಾರೆ ಈ ಬಗ್ಗೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರನ ನಿಧಾನಗತಿಗೆ ಆಕ್ರೋಶ ವ್ಯಕ್ತಪಡಿಸಿತ್ತಾರೆ. ಭಾರತ ಸರ್ಕಾರ ಹಾಗು ರಾಜ್ಯ ಸರ್ಕಾರದ ಸಹಬಾಗಿತ್ವದಲ್ಲಿ ಅನುಷ್ಟಾನವಾಗುತ್ತಿರುವ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ-ಮನೆಗೆ ಕೊಳಾಯಿ ಮೂಲಕ ನೀರು ಸರಬರಾಜು ಮಾಡುವಂತ ಅದ್ಭುತವಾದ ಕಾರ್ಯಕ್ರಮವಾಗಿದೆ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತಗೆದುಕೊಂಡು ನಿಲಿ […]

ಶ್ರೀನಿವಾಸಪುರ ತಾಲ್ಲೂಕಿನ ನೂತನ ತಹಶೀಲ್ದಾರಾಗಿ ಜಿ.ಎನ್.ಸುಧೀಂದ್ರ ಶನಿವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ತಹಶೀಲ್ದಾರ್ ಶಿರಿನ್ ತಾಜ್ ಇದ್ದರು.

ಶ್ರೀನಿವಾಸಪುರ : ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಸಮೀಪ ಭಾನುವಾರ ಅಭಿನಯ ಗೀತೆಯೊಂದರ ಚಿತ್ರೀಕರಣಕ್ಕೆ ಮುಖ್ಯ ಶಿಕ್ಷಕ ಎಂ.ಬೈರೇಗೌಡ ಚಾಲನೆ ನೀಡಿ ನಾಡು ನುಡಿ ಅಭಿವೃದ್ಧಿಗೆ ಸಾಂಘಿಕ ಪ್ರಯತ್ನ ಅಗತ್ಯ ಎಂದು ಮುಖ್ಯ ಶಿಕ್ಷಕ ಎಂ.ಬೈರೇಗೌಡ ಹೇಳಿ ‘ಗಡಿ ಪ್ರದೇಶದ ನಾಗರಿಕರು ಸ್ಥಳೀಯ ಸಾಹಿತಿ ಕಲಾವಿದರನ್ನು ಪ್ರೋತ್ಸಾಹಿಸಬೇಕು. ನಾಡು ನುಡಿ ಅಭಿವೃದ್ಧಿಗೆ ಸಾಂಘಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಸಮೀಪ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದ ಉದ್ಯಾನದಲ್ಲಿ ಭಾನುವಾರ, ಕೇರ್ ಆಫ್ ಅಡ್ರಸ್ ಫಿಲಿಂಸ್ ವತಿಯಿಂದ, ಕವಿ […]

ಕೋಲಾರ : ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಚುನಾವಣೆ ನಡೆ ಸದೇ ಆಡಳಿತಾಧಿಕಾರಿ ನೇಮಿಸುವ ಮೂಲಕ ವೈಯಕ್ತಿಕ ಭಿನ್ನಾಭಿಪ್ರಾಯಗಳಿಗಾಗಿ ಜಿಲ್ಲೆಯ ಬಡ ಮಹಿಳೆಯರು , ರೈತರ ಜೀವನಾಡಿಯಾಗಿದ್ದ ಡಿಸಿಸಿ ಬ್ಯಾಂಕ್ ಅನ್ನು ಬಲಿಕೊಡುವ ಪ್ರಯತ್ನ ಖಂಡನಿಯವಾಗಿದ್ದು , ಕೂಡಲೇ ತಾಯಂದಿರು ಎಚ್ಚೆತ್ತುಕೊಳ್ಳುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕರೆ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ , ಜಿಲ್ಲಾ ಸಹಕಾರ ಒಕ್ಕೂಟ , ಡಿಸಿಸಿ ಬ್ಯಾಂಕ್ , ಕೋಲಾರ ಮತ್ತು ಚಿಕ್ಕಬಳ್ಳಾಪುರಜಿಲ್ಲಾ ಕಾರ್ಯನಿರತ […]

ಬಂಗಾರಪೇಟೆ, ನ.20, ರಾಜ್ಯದ ಬರ ನಿರ್ವಹಣೆಗೆ ಕೇಂದ್ರ ಸರ್ಕಾರ 25 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿ ಕುಡಿಯುವ ನೀರು ಜಾನುವಾರುಗಳಿಗೆ ಮೇವು ಬೆಳೆ ಪರಿಹಾರ ವಿತರಣೆ ಮಾಡುವಂತೆ ಮಾನ್ಯ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸಿ ನ.25 ರ ಶನಿವಾರ ಒಣ ಮೇವು , ಜಾನುವಾರುಗಳ ಸಮೇತ ರೈಲ್ವೆ ನಿಲ್ದಾಣ ಮುತ್ತಿಗೆ ಹಾಕಲು ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.ಗ್ಯಾರಂಟಿಗಳ ಅನುಕಂಪದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ರಾಜ್ಯದ 224 ತಾಲ್ಲೂಕುಗಳನ್ನು ಬರ ಪೀಡಿತವೆಂದು […]

ಕೋಲಾರ: ಚುನಾವಣಾ ಸೆಕ್ಟರ್ ಅಧಿಕಾರಿಗಳು ಸದಾ ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಬೇಕು.ಲೋಕಸಭಾ ಚುನಾವಣೆಯ ಅಧಿಸೂಚನೆಯು ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕಿದೆ. ಆದ್ದರಿಂದ ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳ ಬಗ್ಗೆ ಮಾಹಿತಿಯನ್ನು ನಿಗಧಿತ ಕಾಲಾವಧಿ ಒಳಗೆ ಒದಗಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಲೋಕಸಭಾ […]