ಕೋಲಾರ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ಯೋಜನೆಗಳು ಕೇವಲ ಕಡತಕ್ಕೆ ಸೀಮಿತವಾಗದೆ, ಜನಸಾಮಾನ್ಯರಿಗೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ “ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ’ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಬಲ ನೀಡುವ ಉದ್ದೇಶದಿಂದ ಹೊಸದಾಗಿ ‘ವಕ್ಸ್ ಮಹಿಳಾ ಪಿಯು ಕಾಲೇಜು’ ಪ್ರಾರಂಭಿಸಲು ಸಭೆಯಲ್ಲಿ […]
ಶ್ರೀನಿವಾಸಪುರ : ಪಟ್ಟಣದ ಹೊರವಲಯದ ಮ್ಯಾಂಗೋವ್ಯಾಲಿ ಶಾಲೆಯಲ್ಲಿ ಗುರುವಾರ ಸಿಬಿಎಸ್ಸಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಕುರಿತು ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು.ಮ್ಯಾಂಗೋವ್ಯಾಲಿ ಆಡಳಿತ ಮಂಡಲಿ ಅಧ್ಯಕ್ಷ ಎಸ್.ಎ.ಅಮರನಾಥ್ ಮಾತನಾಡಿ ಶ್ರೀಧರ್ ಎಂಬ ವಿದ್ಯಾರ್ಥಿಯು 485 (97%) ಅಂಕಗಳನ್ನು ಪಡೆದು ಜಿಲ್ಲೆಗೆ ಎರಡನೇ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯು ನಮ್ಮ ಶಾಲೆ ಕೀರ್ತಿಯನ್ನ ಹೆಚ್ಚಿಸಿದ್ದಾನೆ. ತಾಲೂಕಿಗೆ ಈ ವಿದ್ಯಾರ್ಥಿಯು ಮೊದಲನೇ ಸ್ಥಾನ ಪಡೆದಿದ್ದಾನೆ . ಅದೇ ರೀತಿಯಲ್ಲಿ ತಾಲೂಕಿಗೆ ದ್ವಿತೀಯ […]
ಶ್ರೀನಿವಾಸಪುರ : ಸಂಸ್ಕಾರ ಎಂದರೆ ಅಜ್ಞಾನವಂತ ವ್ಯಕ್ತಿ ಬದಲಾವಣೆ ಶುದ್ಧಿಕರಣ ಮತ್ತು ಪರಿಷ್ಕರಣೆ ಸುದಾರಣೆ ಆಗುವುದೆಂದರ್ಥ. ಕಲ್ಲಿನಂತ್ತಿರುವ ಮಕ್ಕಳು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸಿ ಶಾರೀರಕವಾಗಿ ದಂಡಿಸಿ ಮಾನಸಿಕವಾಗಿ ಭೌತಿಕವಾಗಿ ಆದ್ಯಾತ್ಮಿಕ ಜ್ಞಾನವಂತರಾಗಿ ಹೆತ್ತವರನ್ನು ಗೌರವಿಸುವ ಮೌಲ್ಯಗಳು ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಯೋಗ ಶಿಕ್ಷಣ ಪ್ರಮುಖ ಚೌಡಪ್ಪ ಹೇಳಿದರು. ತಾಲೂಕಿನ ಆರ್.ತಿಮ್ಮಸಂದ್ರ ಸಮೀಪದ ನಂದಗೋಕುಲ ಆಶ್ರಮದ ಜಾಗನಾಥ ಮಹಾದೇವ ದೇವಾಲಯ ಸಂಕೀರಣದಲ್ಲಿ ಮಂಗಳವಾರ ಆಯೋಜಿಸಿದ್ದ ೨೦ ದಿನಗಳ್ದುಚಿತ ಸಂಸ್ಕಾರಾಮೃತ ವಸಂತ ಶಿಭಿರ ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನ ಬೆಳೆದ […]
ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ ರಾತ್ರಿ ಈಶ ನಾಟ್ಯಕಲಾ ಅಕಾಡೆಮಿ ಹಾಗೂ ಈಶ ನಾಟ್ಯಕಲಾ ಸೇವಾ ಟ್ರಸ್ಟ್ ವತಿಯಿಂದ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಭರತನಾಟ್ಯ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವೆಂಕಟೇಶ್ವರ ನರ್ಸಿಂಗ್ ಹೋಂ ವೈದ್ಯಾಧಿಕಾರಿ ಡಾ.ವೈ.ವಿ.ವೆಂಕಟಾಚಲ ಮಾತನಾಡಿ, ದೈಹಿಕ ಆರೋಗ್ಯ ರಕ್ಷಣೆಗೆ ನಾಟ್ಯ ಸಹಕಾರಿಯಾಗಿದೆ. ಅದರಲ್ಲೂ ಭರತನಾಟ್ಯ ಮೂಳೆ ಮತ್ತು ಮಾಂಸ ಖಂಡಗಳ ಚಲನೆಗೆ ಪೂರಕವಾಗಿದೆ ಎಂದು ಹೇಳಿದರು. ಪೋಷಕರು ತಮ್ಮ ಮಕ್ಕಳನ್ನು ನೃತ್ಯ, ಸಂಗೀತ ಹಾಗೂ ಕ್ರೀಡಾ […]
ಶ್ರೀನಿವಾಸಪುರ, ಏಪ್ರಿಲ್ 14: ತಾಲೂಕಿನ ಶ್ರೀನಿವಾಸಪುರ–ಯಲ್ದೂರು ಮುಖ್ಯ ರಸ್ತೆಯ ಸಮೀಪದಲ್ಲಿರುವ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆಯಲಾಗುತ್ತಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಈ ಜಮೀನು ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಲಕ್ಷ್ಮಿ ಅವರಿಗೆ ಸೇರಿದ್ದು, ಅಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆಸಲಾಗುತ್ತಿತ್ತು ಎನ್ನಲಾಗಿದೆ. ಗಾಂಜಾ ಬೆಳೆ ಬೆಳೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಂಕರಾಚಾರ್ ಅವರ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿತು. […]
ಕೋಲಾರ:- ಸಮ ಸಮಾಜ ನಿರ್ಮಾಣದ ಪರಿಕಲ್ಪನೆ ಸಾಕಾರಗೊಳ್ಳಲು ಇಂದು ಶಿಕ್ಷಣ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದರು. ಸೆಂಟ್ಆನ್ಸ್ ಶಾಲೆಯ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕೇಂದ್ರದಲ್ಲಿ ವಿಜ್ಞಾನ ಶಿಕ್ಷಕರ ಸಂಘದಿAದ ನಡೆದ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಸಾಲಿನಲ್ಲಿ ನಿವೃತ್ತರಾಗುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ, ಅವರೂ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು. ಅಂಬೇಡ್ಕರ್ ಅವರ […]
ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ಪತ್ರಕರ್ತರ ಭವನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 136ನೇ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ಸಿ. ನಾಗರಾಜ ಅವರು ಅಧ್ಯಕ್ಷತೆ ವಹಿಸಿದರು. ಹಿರಿಯ ಪತ್ರಕರ್ತರಾದ ಆರ್. ಚೌಡರೆಡ್ಡಿ, ಕೆ.ಎಂ. ಚೌಡಪ್ಪ, ಶಬ್ಬೀರ್ ಅಹ್ಮದ್ ಹಾಗೂ ಆರ್. ಜಿ. ನರಸಿಂಹಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆರ್. ಜಿ. ನರಸಿಂಹಯ್ಯ ಅವರು ಸಂವಿಧಾನದ ಪೀಠವನ್ನು ಓದಿ, ಎಲ್ಲರಿಗೂ ಪ್ರತಿಜ್ಞೆ ಮಾಡಿಸಿದರು. ಸಂವಿಧಾನದ […]
ಶ್ರೀನಿವಾಸಪುರ, ಏಪ್ರಿಲ್ 14: ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮಾಜಕ್ಕೆ ಸೀಮಿತ ವ್ಯಕ್ತಿಯಲ್ಲ; ಎಲ್ಲಾ ಸಮುದಾಯಗಳಿಗೆ ಸಂವಿಧಾನದ ಮೂಲಕ ನ್ಯಾಯ ಒದಗಿಸಿದ ಮಹಾನ್ ವ್ಯಕ್ತಿ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರ ಆದರ್ಶಗಳನ್ನು ಯಾವುದೇ ಸರ್ಕಾರವಾಗಲಿ ಪಾಲಿಸಬೇಕು. ಸಮಾಜದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸುವುದು ಅವರ ಪ್ರಮುಖ ಧ್ಯೇಯವಾಗಿತ್ತು ಎಂದು ಹೇಳಿದರು. […]
ಕೋಲಾರ:- ಪ್ರಸಕ್ತ ಸಾಲಿನ ಪ್ರತಿಷ್ಠಿತ ಅಂಬೇಡ್ಕರ್ ಪ್ರಶಸ್ತಿಗೆ ಕೋಲಾರ ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ, ಪತ್ರಕರ್ತ, ಸಾಮಾಜಿಕ ಚಿಂತಕ, ಸಿ.ಎಂ.ಮುನಿಯಪ್ಪ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಅವರನ್ನು ಡಿಐಜಿಪಿ ಡಿ.ದೇವರಾಜ್ ಮತ್ತು ಹಲವು ದಲಿತ ಮುಖಂಡರು ಸನ್ಮಾನಿಸಿದರು.ರಾಜ್ಯ ಸರಕಾರವು ಕೊಡ ಮಾಡುವ ಈ ಪ್ರಶಸ್ತಿಗೆ ಸಿ.ಎಂ.ಮುನಿಯಪ್ಪ ಸೇರಿದಂತೆ ಐದು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ 20 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ, ಇಂತಹ ಗೌರವಕ್ಕೆ ಕೋಲಾರದ ಸಿ.ಎಂ.ಮುನಿಯಪ್ಪ ಅವರ ಆಯ್ಕೆ ಸಂತಸ […]

