
ಶ್ರೀನಿವಾಸಪುರ: ಸಾಲ ಪಡೆದಿರುವ ಫಲಾನುಭವಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಕಸಬಾ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ವಿ.ಅಯ್ಯಪ್ಪ ಹೇಳಿದರು.ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಂಘದ ಸದಸ್ಯರಿಗೆ ಪಕ್ಷಾತೀತವಾಗಿ ಸಾಲ ವಿತರಣೆ ಮಾಡಲಾಗಿದೆ. ಮರುಪಾವತಿ ಪ್ರಮಾಣ ತೃಪ್ತಿಕರವಾಗಿದ್ದರೂ, ಇನ್ನಷ್ಟು ಪ್ರಾಮಾಣಿಕವಾಗಿ ಸಮಯಕ್ಕೆ ಸರಿಯಾಗಿ ಸಾಲ […]

ಶ್ರೀನಿವಾಸಪುರ : ಪುರಸಭಾ ವ್ಯಾಪ್ತಿಯ ಇಂದಿರಾ ನಗರ, ಮಾರುತಿ ನಗರ, ಡಾ. ಜಾಕೀರ್ ಹುಸೇನ್ ಮೊಹಲ್ಲಾ, ವೆಂಕಟೇಶ್ವರ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಅಕ್ರಂಪಾಷ ರವರು ಇಂದು ಭೇಟಿ ನೀಡಿ ಸ್ವಚ್ಛತೆ, ಬೀದಿ ದೀಪಗಳ CCMS Lights ನಿರ್ವಹಣೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ನಿರ್ವಹಿಸಿರುವ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿ ಸೇರಿದಂತೆ Dry Weste Management ನಿರ್ವಹಣೆ ಘಟಕಗಳನ್ನು ಖುದ್ದಾಗಿ ಪರಿಶೀಲಿಸಿದರು. ನಂತರ ಪುರಸಭಾ ಕಚೇರಿಗೆ ಭೇಟಿ ನೀಡಿದ […]

ಶ್ರೀನಿವಾಸಪುರ: ತಾಲೂಕಿನ ರೋಣೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವತಿಯಿಂದ ಶನಿವಾರ ದಿಂಬಾಲ ಗ್ರಾಮದ ಹೆಲ್ತ್ ಅಂಡ್ ವೆಲ್ನೆಸ್ ಸೆಂಟರ್ನ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .ರೋಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಉಮಾಭಾರತಿ, ಬಿಎಇಒ ಆಂಜಲಮ್ಮ, ಎಚ್ಐಒ ವಿಜಯಲಕ್ಷ್ಮಿ, ಸಿಎಚ್ಒ ಮೀನಾಕ್ಷಿ, ಪಿಎಚ್ಸಿಒ ಜಿ.ಸಿ.ಶ್ಯಾಮಲ, ಗ್ರಾ.ಪಂ ಸದಸ್ಯ ವೆಂಕಟರಮಣಾರೆಡ್ಡಿ ಇದ್ದರು.

ಶ್ರೀನಿವಾಸಪುರ: ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಸೆ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಭೆ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ತಿಳಿಸಿದ್ದಾರೆ.ಸಭೆಯಲ್ಲಿ ಗ್ರಾಹಕರೊಂದಿಗೆ ಸಂವಾದ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು. ಗಣೇಶ ವಿಗ್ರಹ ಪ್ರತಿಷ್ಠಾಪನಾ ಸ್ಥಳಗಳಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶ್ರೀನಿವಾಸಪುರ: ಪ್ರತಿಯೊಬರೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಪ್ರಪಂಚದಲ್ಲಿ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಜನಪ್ರಿಯವಾಗಿದೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ ಹಾಗೂ ಪ್ರಜೆಗಳಿಗೋಸ್ಕರ ನಡೆಸುವ ಸರ್ಕಾರವನ್ನು ಪ್ರಜಾಪ್ರಭುತ್ವ ಸರ್ಕಾರ ಎಂದು ಕರೆಯುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಇಲ್ಲಿ ತಮ್ಮ ಪ್ರತಿನಿಧಿಗಳನ್ನು ಚುನಾವಣೆ ಮೂಲಕ […]

ಶ್ರೀನಿವಾಸಪುರ : ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಹೋಬಳಿ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಯೋಗ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿಸಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಜೆ ತಿರುಮಲಪ್ಪ ಎಜುಕೇಶನಲ್ ಟ್ರಸ್ಟ್ ನ ಶ್ರೀ ಸಪ್ತಗಿರಿ ವಿದ್ಯಾಲಯದ ಆಕಾಶ್ ಆರ್ ಎಂಬ ವಿದ್ಯಾರ್ಥಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಬಚ್ಚಿರೆಡ್ಡಿಗಾರಪಲ್ಲಿ ಗ್ರಾಮದ ಆಕಾಶ್ ಆರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ […]

ಶ್ರೀನಿವಾಸಪುರ : ಪುರಸಭಾ ಕಚೇರಿಯ ಸಭಾಂಗಣದಲ್ಲಿಂದು ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ,ಚಾಲನೆ ನೀಡಿದರು ಕಚೇರಿ ವ್ಯವಸ್ಥಾಪಕರಾದ ಶ್ರೀ ನವೀನ್ ಚಂದ್ರ,ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಕೆ ಜಿ. ರಮೇಶ್,ಕಂದಾಯ ನಿರೀಕ್ಷಕ ಎನ್.ಶಂಕರ್ ಸರ್ಕಾರಿ ಬಾಲಕಿಯರ ಕಾಲೇಜಿನ ಶಿಕ್ಷಕಿ ಶ್ರೀಮತಿ ಮಂಜುಳಾ,ಸ್ವಚ್ಛ ಭಾರತ್ ರಾಯಬಾರಿ ಶ್ರೀಮತಿ ಮಾಯಾ ಬಾಲಚಂದ್ರ,,ನಂದಿನಿ ಅರ್ಜುನ್ ಸೇರಿದಂತೆ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬರಹ : ಶಬೀನಾ. ವೈ.ಕೆ “ಈ ಮಗುವನ್ನು ದೊಂಬರಾಟ ಆಡುವವರಿಗೆ ಕೊಟ್ಟು ಬಿಡಿ” ಎಂದು ಒಬ್ಬ ಮಹಿಳೆ ಹೇಳಿ ಬಿಟ್ಟರು. ಇದರಿಂದ ಕುಪಿತರಾದ ವಿಠ್ಠಪ್ಪ “ಅವಳು ನನ್ನ ಮಗಳು. ಬದುಕಿರುವ ತನಕ ನಾನೇ ಸಾಕುತ್ತೇನೆ” ಎಂದು ಬಂದವರ ಬಾಯಿ ಮುಚ್ಚಿಸಿ ಬಿಟ್ಟರು. ಯಶೋದ ಕುಮಾರಿ ಹುಟ್ಟಿನಿಂದಲೇ ವಿಶೇಷಚೇತನರು. ಅವರ ಎಡಗಾಲು ಸಂಪೂರ್ಣ ರೂಪು ಪಡೆದಿರಲಿಲ್ಲ; ಇದ್ದ ಬಲಗಾಲಿಗೂ ಪೋಲಿಯೋ ಘಾಸಿ ನೀಡಿತ್ತು. ಹುಟ್ಟಿದ ಮಗುವನ್ನು ಜನರು ವೀಕ್ಷಿಸಲೆಂದೇ ಮೂರು ದಿನಗಳ ಕಾಲ ಹೊರಗಡೆ ತೊಟ್ಟಿಲಲ್ಲಿ ಇಟ್ಟಿದ್ದರು. ಆಗ […]

ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ವಿಚ್ಛೇದಿತ ಪತ್ನಿ ಹಾಗೂ ಮಾವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.ರಾಧಾ ಹಾಗೂ ಅವರ ತಂದೆ ಮುನಿಯಪ್ಪ ಕೊಲೆಯಾದವರು. ಶ್ರೀನಿವಾಸಪುರದ ಮಾಂಸದ ವ್ಯಾಪಾರಿ ನಾಗೇಶ್ ಕೊಲೆ ಆರೋಪಿ.ನಾಗೇಶ ತನ್ನ ಮೊದಲ ಪತ್ನಿ ರಾಧಾಗೆ ವಿಚ್ಛೇದನ ನೀಡಿದ್ದ, ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುತ್ತಿದ್ದ. ಎರಡನೇ ಪತ್ನಿಯೊಂದಿಗೆ ಶ್ರೀನಿವಾಸಪುರದಲ್ಲಿ ವಾಸವಾಗಿದ್ದ. ಮಂಗಳವಾರ ನಂಬಿಹಳ್ಳಿಗೆ ಬಂದ ನಾಗೇಶ, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವಿಚ್ಛೇದಿತ ಪತ್ನಿ ರಾಧಾ ಮತ್ತು ಮಾವನ […]