ಬ್ಯಾಂಕ್ ಆಫ್ ಬರೋಡಾವು 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಬಲಿಷ್ಠ ಆಸ್ತಿ ಗುಣಮಟ್ಟದೊಂದಿಗೆ ತನ್ನ ನಿರಂತರ ಸದೃಢ ಬೆಳವಣಿಗೆಯನ್ನು ಯಶಸ್ವಿಯಾಗಿ ಮುಂದುವರೆಸಿದೆ. ಪ್ರಸಕ್ತ ತ್ರೈಮಾಸಿಕದಲ್ಲಿ ಬ್ಯಾಂಕ್ನ ಜಾಗತಿಕ ವ್ಯವಹಾರವು ಗಣನೀಯವಾಗಿ ಏರಿಕೆಯಾಗಿ ₹30,50,457 ಕೋಟಿಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ (YoY) 15.4 ಪ್ರತಿಶತದಷ್ಟು ಪ್ರಭಾವಶಾಲಿ ಬೆಳವಣಿಗೆಯನ್ನು ದಾಖಲಿಸಿದೆ. ಬ್ಯಾಂಕ್ನ ಒಟ್ಟು ಜಾಗತಿಕ ಮುಂಗಡಗಳು 17.4 ಪ್ರತಿಶತ ಹಾಗೂ ದೇಶೀಯ ಮುಂಗಡಗಳು 16.1 ಪ್ರತಿಶತದಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸಿವೆ. ಪ್ರಮುಖವಾಗಿ ಆಟೋ […]
ನವದೆಹಲಿ: ನೀಟ್-ಯುಜಿ 2026 ಪರೀಕ್ಷೆಯ ಸುತ್ತ ನಡೆಯುತ್ತಿರುವ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನೀಟ್ ವಿವಾದ ವಿದ್ಯಾರ್ಥಿಗಳ ಹೋರಾಟಕ್ಕೆ, ಮತ್ತು ಈ ವಿಷಯಕ್ಕಾಗಿ ಹೋರಾಟ ಮಾಡಿದ ಸಂಘ ಸಂಸ್ಥೆಗಳಿಗೆ ಜಯ ಸಿಕ್ಕಿದೆ. ರಾಜಿನಾಮೆ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ದೇಶದ ಯುವಜನರನ್ನು ಉದ್ದೇಶಿಸಿ ನೀಡಿದ ವಿವರವಾದ ಹೇಳಿಕೆಯಲ್ಲಿ, ಮೇ 3 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ನಂತರ […]
NewsBank of Baroda Marks its 119th Foundation Day with a Comprehensive Suite of Digital, Retail and MSME Initiatives ಮಂಗಳೂರು, ಜುಲೈ 20, 2026: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ, ವಿಶ್ವಾಸ, ನಾವೀನ್ಯತೆ ಮತ್ತು ಸುಸ್ಥಿರ ಬೆಳವಣಿಗೆಯೆಡೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುವ ಮೂಲಕ ತನ್ನ 119 ನೇ ಸಂಸ್ಥಾಪನಾ ದಿನವನ್ನು ಆಚರಿಸಿತು. ಬ್ಯಾಂಕಿನ 119 ನೇ ವರ್ಷದ ಥೀಮ್ ಆದ ‘ಲೀಡಿಂಗ್ ವಿತ್ ಟ್ರಸ್ಟ್’ […]
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಖ್ಯಾತ ಗಾಯಕಿ ಎಸ್ ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ ಜಾನಕಿ ಇಂದು (ಜುಲೈ 11) ವಿಧಿವಶರಾಗಿದ್ದಾರೆ. ಎಸ್ ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಳೆದ ಜನವರಿ ತಿಂಗಳಲ್ಲಿ ಮಗ ಮುರಳಿಕೃಷ್ಣ ಸಾವನ್ನಪ್ಪಿದ್ದರು. ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯಲ್ಲಿರುವ ತಮ್ಮ ಆಪ್ತರ ಮನೆಯಲ್ಲಿ ಎಸ್ ಜಾನಕಿ ವಾಸವಿದ್ದರು. ಯಾರ ಸಂಪರ್ಕಕ್ಕೂ ಎಸ್ ಜಾನಕಿ ಸಿಗುತ್ತಿರಲಿಲ್ಲ. ಇಂದು ಎಸ್ ಜಾನಕಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಅವರನ್ನ ಮೈಸೂರಿನ ಅಪೋಲೋ ಆಸ್ಪತ್ರೆಗೆ […]
ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕ ತರುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಇ೦ದು ಜುಲಾಯ್ 9ರಂದು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯೇಸು ಕ್ರಿಸ್ತರು ಕೇವಲ ಚರ್ಚ್ ಗೋಡೆಗಳಲ್ಲಿ ಮಾತ್ರವಲ್ಲ, ಜನರ ಹೃದಯಗಳಲ್ಲಿ, […]
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಭಾರೀ ಅನಾಹುತಕ್ಕೆ ಕಾರಣವಾಗಿದೆ. ಪ್ರವಾಹದ ನೀರು ಹಿಂದೂಸ್ತಾನ್ ಪೆಟ್ರೋಲಿಯಂ ಕರ್ಪೊರೇಷನ್ ಲಿಮಿಟೆಡ್ (ಎಚ್ಪಿಸಿಎಲ್)ನ ಪಾತಾಳಗಂಗಾ ಎಲ್ಪಿಜಿ ಬಾಟ್ಲಿಂಗ್ ಘಟಕಕ್ಕೆ ನುಗ್ಗಿದ ಪರಿಣಾಮ ಸುಮಾರು 3,000 ತುಂಬಿದ ಹಾಗೂ ಖಾಲಿ ಎಲ್ಪಿಜಿ ಸಿಲಿಂಡರ್ಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿ ಪಾತಾಳಗಂಗಾ ನದಿಯಲ್ಲಿ ತೇಲುತ್ತಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಪನ್ವೇಲ್ ತಾಲ್ಲೂಕಿನಲ್ಲಿರುವ ಎಚ್ಪಿಸಿಎಲ್ನ ಪಾತಾಳಗಂಗಾ ಘಟಕದಲ್ಲಿ ಪ್ರವಾಹದ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿತ್ತು. ನೀರಿನ ರಭಸಕ್ಕೆ ಘಟಕದ ಸುರಕ್ಷತಾ ವ್ಯವಸ್ಥೆ ಹಾನಿಗೊಳಗಾದ ಪರಿಣಾಮ […]
St. Peter’s Association (Barkur), Mumbai Celebrates Patronal Feast with Faith, Fellowship and Recognition ಮುಂಬೈ, ಜುಲೈ 5, 2026: 1988 ರಲ್ಲಿ ಸ್ಥಾಪನೆಯಾದ ಮುಂಬೈನ ಸೇಂಟ್ ಪೀಟರ್ಸ್ ಅಸೋಸಿಯೇಷನ್ (ಬಾರ್ಕೂರ್) ಸದಸ್ಯರು, ಮುಂಬೈನ ಅಂಧೇರಿಯ (ಪೂರ್ವ) ಮರೋಲ್ನಲ್ಲಿರುವ ಸೇಂಟ್ ಜಾನ್ ಸುವಾರ್ತಾಬೋಧಕ ಚರ್ಚ್ನಲ್ಲಿ ಸೇಂಟ್ ಪೀಟರ್ ಅವರ ಪೋಷಕ ಹಬ್ಬವನ್ನು ಸಂತೋಷದಿಂದ ಆಚರಿಸಿದರು, ಬಾರ್ಕುರಿನವರು ಮತ್ತು ಅವರ ಕುಟುಂಬಗಳನ್ನು ಪ್ರಾರ್ಥನೆ, ಏಕತೆ ಮತ್ತು ಕೃತಜ್ಞತೆಯ ವಾತಾವರಣದಲ್ಲಿ ಒಟ್ಟುಗೂಡಿಸಿದರು. ಊರಿನಿಂದ ದೂರದಲ್ಲಿರುವ ಎಲ್ಲಾ ಮುಂಬಯಲ್ಲಿನ […]
ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಗರಾಡಿ ಕ್ಲಾಸಿಕ್ 2026 – ಮಿಸ್ಟರ್ & ಮಿಸ್ ಸೌತ್ ಇಂಡಿಯಾ ದೇಹಸೌಷ್ಟವ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶ್ರೀನಿವಾಸಪುರಕ್ಕೆ ಕೀರ್ತಿ ತಂದಿದ್ದಾರೆ. ದಕ್ಷಿಣ ಏಷ್ಯಾ ಬಾಡಿಬಿಲ್ಡಿಂಗ್ ಅಸೋಸಿಯೇಷನ್ ವತಿಯಿಂದ ಮೇ 10ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಬಿಜಿಎಸ್ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಹಾಗೂ ದಕ್ಷಿಣ ಭಾರತ ಮಟ್ಟದ ದೇಹಸೌಷ್ಟವ ಮತ್ತು ಮೆನ್ಸ್ ಫಿಸಿಕ್ ಚಾಂಪಿಯನ್ಶಿಪ್ನಲ್ಲಿ ಅಬ್ಬಾಸ್ ಬಾಬು ಅವರು ಮಾಸ್ಟರ್ಸ್ 50 […]
ಮಂಗಳೂರು; ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೌತಮ್ ಕಟ್ಟರ್ ಎಂಬುವವರು ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಯು ಸಮಸ್ತ ಕ್ರೈಸ್ತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟ(AICU) ಕರ್ನಾಟಕ ರಾಜಾಧ್ಯಕ್ಷ ಅಲ್ವಿನ್ ಡಿಸೋಜ ತೀವ್ರ ಖಂಡನೆ ವ್ಯಕ್ತ ಪಡಿಸಿದ್ದಾರೆ. ಏಪ್ರಿಲ್ 2026 ರಲ್ಲಿ ಗೋವಾದ ವಾಸ್ಕೋದಲ್ಲಿ ನಡೆದ ಭಗವಾನ್ ಪರಶುರಾಮ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗೌತಮ್ ಕಟ್ಟರ್, ಗೋವಾಚೊ ಸಾಯ್ಭ್ (Lord of Goa) ಎಂದೇ ಗೌರವಿಸಲ್ಪಡುವ ಸಂತ ಫ್ರಾನ್ಸಿಸ್ […]

