ಹೊಸದಿಲ್ಲಿ: ಶೀತಗಾಳಿಯಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ತಾಪಮಾನ ಮತ್ತಷ್ಟು ಕುಸಿದಿದೆ. ಸಫ್ದರ್ಜಂಗ್ ನಲ್ಲಿ 3.2 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಮೂರು ವರ್ಷಗಳಲ್ಲೇ ಕನಿಷ್ಠ ಹಾಗೂ ವಾಡಿಕೆ ತಾಪಮಾನಕ್ಕಿಂತ ನಾಲ್ಕು ಡಿಗ್ರಿ ಕಡಿಮೆ ಎಂದು ಹವಾಮಾನ ಇಲಾಖೆ ಅಂಕಿ ಅಂಶಗಳಿಂದ ತಿಳಿದುಬಂದಿದೆ. ದೆಹಲಿಯ ಪ್ರಮುಖ ಚಳಿಮಾಪನಾ ಕೇಂದ್ರವಾಗಿರುವ ಸಫ್ದರ್ಜಂಗ್ ನಲ್ಲಿ 2023ರ ಜನವರಿ 18ರಂದು 2.6 ಡಿಗ್ರಿ ತಾಪಮಾನ ದಾಖಲಾಗಿತ್ತು. ಬುಧವಾರ ವರೆಗೂ ಇದೇ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. […]
ಶ್ರೀಹರಿಕೋಟಾ (ಜ. 12, 2026): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಅತ್ಯಂತ ನಂಬಿಕಸ್ತ ಉಡಾವಣಾ ವಾಹನ ಎಂದೇ ಖ್ಯಾತಿಯಾಗಿರುವ ಪಿಎಸ್ಎಲ್ವಿ (PSLV), ಇಂದು ಮಧ್ಯಾಹ್ನ ನಡೆದ ತನ್ನ 64ನೇ ಉಡಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. 2026ರ ಮೊದಲ ಮಿಷನ್ ಆಗಿದ್ದ ಪಿಎಸ್ಎಲ್ವಿ-ಸಿ62 (PSLV-C62) ಉಡಾವಣೆಯು ತಾಂತ್ರಿಕ ದೋಷದಿಂದಾಗಿ ವಿಫಲವಾಗಿದ್ದು, ಇದರಲ್ಲಿದ್ದ 16 ಉಪಗ್ರಹಗಳು ಬಾಹ್ಯಾಕಾಶದಲ್ಲಿ ನಾಶವಾಗಿವೆ. ಶ್ರೀಹರಿಕೋಟಾದಿಂದ ಬೆಳಿಗ್ಗೆ 10:17ಕ್ಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ರಾಕೆಟ್, ಮೊದಲ ಮತ್ತು ಎರಡನೇ ಹಂತಗಳನ್ನು ಯಾವುದೇ ಅಡೆತಡೆಯಿಲ್ಲದೆ ಪೂರೈಸಿತ್ತು. ಆದರೆ, ಉಡಾವಣೆಯಾದ ಎಂಟು […]
ಉಡುಪಿ ; ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆಯಾಗಿದೆ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯ ತೀವ್ರ ಕಳವಳ ಹಾಗೂ ನೋವು ವ್ಯಕ್ತಪಡಿಸಿದೆಜಗತ್ತಿಗೆ ಶಾಂತಿ, ಪ್ರೀತಿ, ಕ್ಷಮೆಯನ್ನು ಭೋದಿಸಿದ ಯೇಸು ಸ್ವಾಮಿಯ ಜನನದ ಹಬ್ಬ ಈವರ್ಷ ಭಾರತದ ಕ್ರೈಸ್ತ ಸಮುದಾಯಕ್ಕೆ ಭಯ ಮತ್ತು ಆತಂಕವನ್ನು ಸೃಷ್ಟಿ ಮಾಡಿದೆ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಾದ ಕೇರಳ, ನವದೆಹಲಿ ಉತ್ತರಪ್ರದೇಶ, ರಾಜಸ್ಥಾನ, ಉತ್ತರಕಾಂಡ, ಒರಿಸ್ಸಾ ಸೇರಿದಂತೆ ವಿವಿಧೆಡೆ […]
Christmas and 3L (least the last, lost students and their families) friends ಗೋವಾ ; 3L ಪರವಾಗಿ, ಅವರ ಬಡ ಕುಟುಂಬಗಳು ಮತ್ತು 3L ನ ಸ್ನೇಹಿತರ ಪರವಾಗಿ, ನೀವು ಮತ್ತು ನಿಮ್ಮ ಕುಟುಂಬ ಸದಸ್ಯರು ಸಂತೋಷ, ಕೃಪೆ ಮತ್ತು ಶಾಂತಿಯಿಂದ ತುಂಬಿದ ಕ್ರಿಸ್ಮಸ್ ಅನ್ನು ಹಾರೈಸುತ್ತೇನೆ. ಶಾಂತಿಯ ರಾಜಕುಮಾರ ಯೇಸು, ತನ್ನ ದೈವಿಕ ಶಾಂತಿ ಮತ್ತು ಸಂತೋಷದಿಂದ ಮುರಿದ ಮತ್ತು ಗಾಯಗೊಂಡ ಜಗತ್ತನ್ನು ಗುಣಪಡಿಸಲಿ. ಕ್ರಿಸ್ಮಸ್ ಋತುವು ಡಿಸೆಂಬರ್ 24 ರಂದು […]
Bank of Baroda recognised as ‘Best Bank in India’ at The Banker’s Bank of the Year Awards 2025 ಮಂಗಳೂರಿನಲ್ಲಿ, ಡಿಸೆಂಬರ್ 10, 2025: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ಅನ್ನು ಫೈನಾನ್ಷಿಯಲ್ ಟೈಮ್ಸ್ ಪ್ರಕಟಿಸುವ ದಿ ಬ್ಯಾಂಕರ್ ಪತ್ರಿಕೆಯ ಬ್ಯಾಂಕ್ ಆಫ್ ದಿ ಇಯರ್ ಅವಾರ್ಡ್ಸ್ 2025 ನಲ್ಲಿ ‘ಭಾರತದ ಅತ್ಯುತ್ತಮ ಬ್ಯಾಂಕ್’ ಎಂದು ಘೋಷಿಸಲಾಗಿದೆ. ಈ ಪ್ರಶಸ್ತಿ ಬ್ಯಾಂಕ್ ಆಫ್ […]
ಶಂಕರನಾರಾಯಣ; ಗುರು ಅಬಾಕಸ್ ಮತ್ತು ವೇದಿಕ್ ಮ್ಯಾತ್ ಸೆಂಟರ್ ಪುಣೆ,ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಮದರ್ ತೆರೇಸಾ ಶಾಲೆ ಶಂಕರನಾರಾಯಣ, ಇಲ್ಲಿನ ನಲ್ಮೆಯ ವಿದ್ಯಾರ್ಥಿನಿಯರಾದ 4ನೇ ತರಗತಿಯ ದಶಮಿ ಡಿ ಹಾಗೂ 3ನೇ ತರಗತಿಯ ಸಮೀಕ್ಷಾ ದಿನೇಶ್ ಶೆಟ್ಟಿ ಇವರು ಚಾಂಪಿಯನ್ ಶಿಪ್ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಪುಟಾಣಿ ವಿದ್ಯಾರ್ಥಿನಿಯರ ಯಶಸ್ಸಿಗೆ ಶಾಲಾ ಆಡಳಿತ ಮಂಡಳಿ , ಬೋಧಕ ಬೋಧಕೇತರ ವೃಂದದವರು ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಗೆಲುವಿನ ಭವಿಷ್ಯ […]
ದೇಶದ ಕ್ರಿಶ್ಚಿಯನ್ ನಾಗರಿಕರ ಹಕ್ಕು-ಸಂರಕ್ಷಣೆಗಾಗಿ ಹಲವು ವರ್ಷಗಳಿಂದ ರಾರ್ಯನಿರ್ವಹಿಸುತ್ತಿರುವ Concerned Christian Citizens of India (ccci) ಸಂಘಟನೆಯ ರಾಷ್ಟ್ರೀಯ ಕ್ರಿಶ್ಚಿಯನ್ ಕನ್ವೆನ್ಷನ್ನ್ನು ನವೆಂಬರ್ 29ರಂದು ಶನಿವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ನವೆಂಬರ್ 29 ರಂದು 10 ರಿಂದ ಸಂಜೆ 5 ಗಂಚೆಯವರೆಗೆ ನಡೆಸಲು ಘೋಷಿಸಿದೆ. AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇದರಲ್ಲಿ ಭಾಗಿಯಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದವರನ್ನುಪ್ರತಿನಿಧಿಸಲಿದ್ದಾರೆ. ವಿಭಿನ್ನ ಪಂಥಗಳ ನಾಗರಿಕರ ಒಕ್ಕೂಟದಿಂದ ಆರಂಭವಾದ ಈ ಚಳವಳಿಗೆ ಯುನೈಟೆಡ್ ಕ್ರಿಶ್ಚಿಯನ್ ಫೋರಂ (UCF) ಸಂಪೂರ್ಣ […]
Statement from the All India Catholic Federation on the bomb blast in Delhi 2025 ರ ನವೆಂಬರ್ 12 ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ ಸಂಭವಿಸಿದ ಹೃದಯ ವಿದ್ರಾವಕ ಜೀವಹಾನಿಯ ರಾಷ್ಟ್ರೀಯ ದುಃಖದಲ್ಲಿ ಅಖಿಲ ಭಾರತ ಕ್ಯಾಥೋಲಿಕ್ ಒಕ್ಕೂಟವು ನಮ್ಮ ದೇಶದ ಜನರೊಂದಿಗೆ ಸೇರುತ್ತದೆ. 13 ಜನರ ಸಾವು ಮತ್ತು 20 ಇತರರಿಗೆ ಗಾಯಗಳಾಗಿರುವುದನ್ನು ಸರ್ಕಾರ ದೃಢಪಡಿಸಿದೆ – ಅವರಲ್ಲಿ ಅನೇಕರು ಇನ್ನೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಲಿಪಶುಗಳನ್ನು […]
ನವೆಂಬರ್ 3, ಸೋಮವಾರ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಆರ್ಟಿಸಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಇಪ್ಪತ್ತು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೈದರಾಬಾದ್ನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಚೆವೆಲ್ಲಾ ಮಂಡಲದ ಮಿರ್ಜಾಗುಡ ಬಳಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ತಂದೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಬಸ್ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾಂಕ್ರೀಟ್ ತುಂಬಿದ ಟಿಪ್ಪರ್ ಟ್ರಕ್ ಡಿಕ್ಕಿ ಹೊಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಟಿಪ್ಪರ್ ಲಾರಿ ಬಸ್ನೊಳಗೆ ನುಗ್ಗಿದಾಗ […]

