ಬಾಲಿವುಡ್ನ ಹಿರಿಯ ನಟ ಸತೀಶ್ ಶಾ ನಿನ್ನೆ ಮದ್ಯಾನ್ಹಾ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಸದ್ಯ ಶಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಮ್ಯಾನೇಜರ್ ತಿಳಿಸಿದ್ದಾರೆ.ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ಅವರು ದೀರ್ಥಕಾಲದದರೆಗೆ ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಇತ್ತೀಚೆಗೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು.ಸಾರಾಭಾಯ್ ವರ್ಸಸ್ ಸಾರಾಭಾಯ್ ಮತ್ತು ಜಾನೆ ಭಿದೋ ಯಾರೋ ಎಂಬ ಟಿವಿ ಸೀರಿಯಲ್ಗಳ ಮೂಲಕ ಸತೀಶ್ ಶಾ ಖ್ಯಾತಿ ಪಡೆದಿದ್ದರು. ಅದರೊಂದಿಗೆ ಅವರು ಮೈ ಹೂನಾ (2004), […]
ಆಂಧ್ರ ಪ್ರದೇಶದ ಕರ್ನೂಲ್ ನಲ್ಲಿ ನಡೆದ ಬಸ್ ದುರಂತದಲ್ಲಿ 20 ಜನ ಸಾವನ್ನಪ್ಪಿದ್ದು, ಈ ಮೂವರು ಯುವತಿಯರು ಸಾವನ್ನಪ್ಪಿದ್ದಾರೆ.ಈ ಮೂವರು ಯುವತಿಯರು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಮೃತ ದುರ್ದೈವಿಗಳನ್ನು ಅನುಷಾ ರೆಡ್ಡಿ (22), ಗನ್ನಮನೇನಿ ಧಾತ್ರಿ (27) ಹಾಗೂ ಚಂದನಾ (23) ಎಂದು ಗುರುತಿಸಲಾಗಿದೆ.ಬಾಪಟ್ಟ ಜಿಲ್ಲೆಯ ಗನ್ನಮನೇನಿ ಧಾತ್ರಿ ಅವರು ಮಾವನ ಮನೆಯಿಂದ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ ಬಸ್ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಟೆಕ್ಕಿ ಅನುಷಾ ರೆಡ್ಡಿ ಮೂಲತಃ ಯದಾದ್ರಿ ಭುವನಗಿರಿ […]
ತಿರುವನಂತಪುರಂ; ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಮಣ್ಣಿನಲ್ಲಿ ಚಕ್ರ ಹೂತ ಘಟನೆ ನಡೆದಿದೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತೀಯ ವಾಯುಸೇನೆ ಎಂಐ-17 ಹೆಲಿಕಾಪ್ಟರ್ ನಲ್ಲಿ ತಿರುವನಂತಪುರಂನಿಂದ ತೆರಳಿದ್ದರು. ಬೆಳಿಗ್ಗೆ ಪ್ರಮಾಡಂ ಇನ್ ಡೋರ್ ಸ್ಟೇಡಿಯಂ ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಚಕ್ರ ನೆಲದಲ್ಲಿ ಹೋತು ಹೋಗಿ ಅವಾಂತರ ಸೃಷ್ಟಿಯಾಯಿತು.ಬಳಿಕ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರನ್ನು ತಳ್ಳಿ ಬದಿಗೆ ಸರಿಸಿದ್ದಾರೆ. […]
ನವದೆಹಲಿ/ಶ್ರೀನಿವಾಸಪುರ : ಮುಂದಿನ ವಿಧಾನಸಭಾ ಚುನಾವಣೆಯ ಸನ್ನಾಹದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮದಂತೆ ಕೇರಳ ರಾಜ್ಯ ಕಾಂಗ್ರೆಸ್ ವಾರ ರೂಂ ಅಧ್ಯಕ್ಷರಾಗಿ ಶ್ರೀನಿವಾಸಪುರದ ಹರ್ಷ ಕನಡಂ ಅವರನ್ನು ನೇಮಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪ್ರಕಟಣೆಯ ಪ್ರಕಾರ, ಪಕ್ಷದ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಯಾಗಲಿದೆ. ಹರ್ಷ ಕನಡಂ ಅವರು ಕರ್ನಾಟಕ ವಿಧಾನಸಭೆಯ ಮಾಜಿ […]
ಶಿವಮೊಗ್ಗದ ಪ್ರೇಷಿತ ಆಡಳಿತಾಧಿಕಾರಿಯನ್ನಾಗಿ ಕಾರವಾರದ ಪ್ರಸ್ತುತ ಧರ್ಮಾಧ್ಯಕ್ಷ ಪರಮಪೂಜ್ಯ ಡಾ. ಡುಮಿಂಗ್ ಡಯಾಸ್ ರವರನ್ನು ಭಾರತ ಮತ್ತು ನೇಪಾಳದ ಜಗದ್ಗುರುಗಳ ರಾಯಭಾರಿಯಾದ ನುನ್ಸಿಯೋ ಆರ್ಚ್ಬಿಷಪ್ ಲಿಯೋಪೋಲ್ಡೊ ಗಿರೆಲ್ಲಿ ಮೈಸೂರಿನಲ್ಲಿ ಘೋಷಿಸಿದ್ದಾರೆ
ಬೆಂಗಳೂರು; ಅಕ್ಟೋಬರ್ 5ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ತುಮಕೂರು, ಧಾರವಾಡ, ರಾಯಚೂರು, ಬಳ್ಳಾರಿ, ಕೊಡಗು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. […]
ಮಂಗಳೂರು; ವಿವಾದಾತ್ಮಕ ಮತಾಂತರ ವಿರೋಧಿ ಕಾನೂನುಗಳ ಅಡಿಯಲ್ಲಿ ಪೂಜಾ ಸೇವೆಗಳನ್ನು ಅಪರಾಧೀಕರಿಸಲಾಗುತ್ತಿರುವ ದೇಶದ ಹಲವಾರು ರಾಜ್ಯಗಳಲ್ಲಿ ಕ್ರೈಸ್ತರ ಮೇಲಿನ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ಅಖಿಲ ಭಾರತ ಕ್ಯಾಥೋಲಿಕ್ ಒಕ್ಕೂಟ (ಎಐಸಿಯು) ತನ್ನ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ನಡೆದ ತನ್ನ ಸಾಮಾನ್ಯ ಸಭೆಯಲ್ಲಿ, 106 ವರ್ಷ ವಯಸ್ಸಿನ ಎಐಸಿಯು ಸುಮಾರು 12 ರಾಜ್ಯಗಳಲ್ಲಿನ ಮತಾಂತರ ವಿರೋಧಿ ಕಾನೂನುಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ ಎಂದು ಗಮನಿಸಿದೆ, ಇದು ಸಂವಿಧಾನ ವಿರೋಧಿ ಮತ್ತು ದೇಶದ ನಂಬಿಕೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ […]
ಬೆಂಗಳೂರು: ದೆಹಲಿಯ ಪ್ರತಿಷ್ಠಿತ ಡಿ ಕೆ ಪೆಜೆನ್ಟ್ ಸಂಸ್ಥೆಯವರು ಆಯೋಜಿಸುವ “ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025” ಕಿರೀಟವು ಕುಂದಾಪುರದ ನಿಶಾಲಿ ಅವರ ಮುಡಿಗೇರಿದೆ. ದೆಹಲಿಯ ರ್ಯಾಡಿಸನ್ ಬ್ಲೂ ಹೋಟೆಲಿನಲ್ಲಿ ಸೋಮವಾರ ನಡೆದ ಮಿಸ್ ಇಂಡಿಯಾ – ಪ್ರೈಡ್ ಆಫ್ ಇಂಡಿಯಾ 2025 ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಬಂದಿದ್ದ 44 ಸ್ಪರ್ಧಿಗಳನ್ನು ಎದುರಿಸಿ ನಿಶಾಲಿ ಈ ಪ್ರತಿಷ್ಠಿತ ಟೈಟಲ್ಗೆ ಕೊರಳೊಡ್ಡುವುದರ ಮೂಲಕ ರಾಜ್ಯಕ್ಕೆ ಹೆಮ್ಮೆ – ಸಂಭ್ರಮ ತಂದಿದ್ದಾರೆ. ನಿಶಾಲಿ […]
ನವದೆಹಲಿ; ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರ ಸಹೋದರ ಉದ್ಯಮಿ ಸಮೀರ್ ಮೋದಿ ಅವರನ್ನು ಬಂಧಿಸಲಾಗಿದೆ. ಅವರನ್ನು ದೆಹಲಿ ಪೊಲೀಸರು. ಬಂಧಿಸಿದ್ದಾರೆ. ಗುರುವಾರ ಸಂಜೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಮೀರ್ ಮೋದಿ ಅವರನ್ನು ವಶಕ್ಕೆ ಪಡೆಯಲಾಯಿತು. ಐದು ದಿನಗಳ ಹಿಂದೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ. ಅತ್ಯಾಚಾರ ಮತ್ತು.ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ದೂರಿನಪ್ರಕಾರ, […]

