ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಮಾರ್ಚ್ 8ರಿಂದ ಮಾರ್ಚ್ 11ರವರೆಗೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ತಮ್ಮ […]
ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು.ಅವರು ಮಾರ್ಚ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ *ಟೀಂ ಯುವಶಕ್ತಿ ಟ್ರಸ್ಟ್” ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು […]
ಕೋಲಾರ : ರಾಜ್ಯ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ಪ್ರಧಾನ ಮಂತ್ರಿಯ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ (DLC) ಸದಸ್ಯ ಶಬ್ಬೀರ್ ಅಹ್ಮದ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಜೆಟ್ ಸರ್ವರ ಸಬಲೀಕರಣ ಅವಕಾಶಗಳ ಅನಾವರಣ ಹಾಗೂ ನವ ಕರ್ನಾಟಕದ ನಿರ್ಮಾಣ ಎಂಬ ಉದ್ದೇಶದೊಂದಿಗೆ ರೂಪುಗೊಂಡಿದ್ದು, ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ […]
Mother Teresa Vichara Vedike to Hold Souharda Iftar Gathering on March 10 ಮಂಗಳೂರು; ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ,ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ,ರಂಜಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ತಾ.10-03-2026ರಂದು ಸಂಜೆ 5.15ಕ್ಕೆ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ._ *ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]
Bengaluru; Jamaat-e-Islami Hind holds Iftar with media personalities ಬೆಂಗಳೂರು; ಉಪವಾಸ, ಸುಳ್ಳು ನಿರೂಪಣೆಗಳು ಮತ್ತು ವಿಭಜಿತ ಮಾಧ್ಯಮ: ಪರದೆಯ ಮೇಲೆ ಮತ್ತು ಹೊರಗಿನ ದ್ವೇಷವನ್ನು ಎದುರಿಸಲು ಜಮಾತ್-ಎ-ಇಸ್ಲಾಮಿ ಹಿಂದ್ ಆಯೋಜಿಸಿದ ಇಫ್ತಾರ್ ಕೂಟಬೆಂಗಳೂರಿನಲ್ಲಿ ಫೆಬ್ರವರಿ 27 ರಂದು ಪತ್ರಕರ್ತರೊಂದಿಗೆ ಜಮಾತ್-ಎ-ಇಸ್ಲಾಮಿ ಹಿಂದ್ ಹಮ್ಮಿಕೊಂಡಿದ್ದ ಇಫ್ತಾರ್ ಸೌಹಾರ್ದ ಕೂಟವು, ಹೆಚ್ಚುತ್ತಿರುವ ಧ್ರುವೀಕೃತ ಮಾಧ್ಯಮ ವಾತಾವರಣದ ನಡುವೆ ಒಂದು ಪ್ರಮುಖ ಹಸ್ತಕ್ಷೇಪವಾಗಿ ಗಮನ ಸೆಳೆಯಿತು. ಮುಸ್ಲಿಮರು ಪರದೆಯ ಮೇಲೆ ಮತ್ತು ಪ್ರಸಾರ ಮಾಧ್ಯಮಗಳಲ್ಲಿ ವಿಲನ್ಗಳಂತೆ ಬಿಂಬಿತವಾಗುತ್ತಿದ್ದಾರೆ ಎಂಬ […]
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಗೆ ಸೇರುವ ಕನಸು ಕಾಣುತ್ತಿರುವ ಯುವಕರಿಗೆ ಮಹತ್ವದ ಸುದ್ದಿ ಲಭ್ಯವಾಗಿದೆ. ಒಟ್ಟು 8,176 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು Karnataka Police ಮುಖ್ಯ ಕಚೇರಿಯಿಂದ ಮಾರ್ಚ್ 4, 2026ರಂದು ಅನುಮತಿ ಜಾರಿಗೊಂಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲು ದಾರಿ ತೆರೆಯಲಾಗಿದೆ.ಯಾವ ಹುದ್ದೆಗಳಿಗೆ ಅವಕಾಶ? ಈ ನೇಮಕಾತಿಯಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್, ಕೆಎಸ್ಆರ್ಪಿ ಕಾನ್ಸ್ಟೇಬಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್, ಕೆಎಸ್ಐಎಸ್ಎಫ್ ಕಾನ್ಸ್ಟೇಬಲ್ ಹಾಗೂ ಡಿಟೆಕ್ಟಿವ್ ಸಬ್ […]
ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2025ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಮೂರು ರ್ಯಾಂಕ್ ಗಳು ದೊರಕಿವೆ.ಬಿ.ಬಿ.ಎ ಪದವಿ ವಿಭಾಗದಲ್ಲಿ ಕೋಟೇಶ್ವರದ ಸೂರ್ಯನಾರಾಯಣ ಅಡಿಗ ಅವರ ಪುತ್ರಿ ಶ್ರಾವ್ಯ ಎಸ್.ಅಡಿಗ ಅವರಿಗೆ ಆರನೇ ರ್ಯಾಂಕ್ ದೊರೆತಿದೆ.ಬಿ.ಸಿ.ಎ. ವಿಭಾಗದಲ್ಲಿ ಮರವಂತೆಯ ಮೋಹನದಾಸ ಶೆಣೈ ಅವರ ಪುತ್ರಿ ಶ್ರಾವ್ಯ ಶೆಣೈ ಅವರಿಗೆ ಎಂಟನೇ ರ್ಯಾಂಕ್ ಮತ್ತು ತೆಕ್ಕಟ್ಟೆಯ ರಾಘು ಅವರು ಪುತ್ರಿ ರಕ್ಷಿತಾ ಅವರಿಗೆ ಒಂಬತ್ತನೇ ರ್ಯಾಂಕ್ ದೊರೆತಿದೆ.ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ವಿಶ್ವಸ್ಥ […]
FIRST RANK in B.Sc. (Food, Nutrition & Dietetics) to Student of P.A. First Grade College ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್ಗಳ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳೂರು ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್ಫಾ ನಜಾ ಕೆ.ಎ. (ನೋಂದಣಿ ಸಂಖ್ಯೆ: U05PA22S0023) ರವರು ಬಿ.ಎಸ್.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇವರು […]
Catechism Day Celebrated at St. Francis Assisi Church, Tallur ತಲ್ಲೂರು; ದಿನಾಂಕ 1/3/2026 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಕ್ರೈಸ್ತ ಶಿಕ್ಷಣ ಆಯೋಗದ ನೇತೃತ್ವದಲ್ಲಿ ದಿವ್ಯ ಬಲಿ ಪೂಜೆಯ ಮೂಲಕ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಮಂಗಳೂರು ಧರ್ಮಪ್ರಾಂತ್ಯದ ವೈಸಿಎಸ್ ನಿರ್ದೇಶಕರಾದ ವಂದನೀಯ ಫಾ. ರೋಷನ್ ಡಿಸೋಜಾ ಅವರು ಪ್ರಧಾನ ಯಾಜಕರಾಗಿ ಆಗಮಿಸಿ ದಿವ್ಯ ಬಲಿ ಪೂಜೆಯನ್ನು ನೆರವೇರಿಸಿದರು. ತಮ್ಮ ಪ್ರವಚನದಲ್ಲಿ ಅವರು, “ಕ್ರೈಸ್ತ ಶಿಕ್ಷಣವು ಯೇಸುಕ್ರಿಸ್ತರ ರೂಪಾಂತರದ ಅರ್ಥವನ್ನು ನಮಗೆ […]

