
JANANUDI.COM NETWORK ಬೆಂಗಳೂರು,ಮೇ 21: ರಾಜ್ಯದಲ್ಲಿ ಕೊರೊನಾ ಆರ್ಭಟ ತಗ್ಗದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮತ್ತೇ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈಗಾಗಲೇ ವಿಧಿಸಲಾಗಿರುವ ಲಾಕ್ಡೌನ್ ಇನ್ನೆರಡು ದಿನಗಳಲ್ಲಿ ಮುಗಿಯಲಿದ್ದು. ಈ ಹಿನ್ನೆಲೆಯಲ್ಲಿ ಇನ್ನೂ 14 ದಿನಗಳಕಾಲ ಲಾಕ್ಡೌನ್ ಮುಂದುವರಿಸಲಾಗಿದೆ. ಎಂದು ಸಿಎಂಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಅದರಂತೆ ಜೂ. 7ರ ಬೆಳಗ್ಗೆ 6 ಗಂಟೆಯ ತನಕ ರಾಜ್ಯದಲ್ಲಿ ಲಾಕ್ಡೌನ್ ಇರಲಿದೆ.

JANANUDI.COM NETWORK ಮಂಗಳೂರು,ಮೇ.20: ಲಸಿಕೆ ಬಗ್ಗೆ ಚರ್ಚ್ಗಳಲ್ಲಿ ಅಪಪ್ರಚಾರ ಮಾಡುತ್ತಾರೆಂಬ ಸುಳ್ಳು ಹೇಳಿಕೆಗೆ ಸಂಬಂಧಪಟ್ಟಂತೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರು, ಈ ಬಗ್ಗೆ ಡಿಸಿಪಿ ಹರಿರಾಂ ಶಂಕರ್ ಅವರಿಗೆ ಮನವಿ ನೀಡಿದ್ದಾರೆ.ಈ ವೇಳೆ ಮಾತನಾಡಿದ ಐವನ್ ಡಿಸೋಜ, “ದೇಶದ ಲೋಕಸಭೆಗೆ ಶೋಭಾ ಕರಂದ್ಲಾಜೆಯಂತಹ ಸಂಸದರು ಆಯ್ಕೆಯಾಗಿರುವುದು ಪ್ರಜಾಪ್ರಭುತ್ವದ ಒಂದು ದೊಡ್ಡ ದುರಂತ. ಇಂತಹವರನ್ನು ಪ್ರಜಾಪ್ರಭುತ್ವದ ಸದಸ್ಯತ್ವದಿಂದ ರದ್ದು ಮಾಡಬೇಕು. ತಮ್ಮ ಸ್ವಾರ್ಥಕ್ಕಾಗಿ ಒಂದು ಸಮುದಾಯವನ್ನೇ ಬಲಿತೆಗೆದುಕೊಂಡು, ಸುಳ್ಳು ಹೇಳಿಕೆಗಳನ್ನು ನೀಡಿರುವುದು […]

JANANUDI.COM NETWORK ಮಧ್ಯಪ್ರದೇಶ,ಮೇ. 20: ಮಾಸ್ಕ್ ಹಾಕದ ಮಹಿಳೆಯನ್ನು ಪೊಲೀಸರು ನಡುರಸ್ತೆಯಲ್ಲಿ ಎಳೆದಾಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.ಲಾಕ್ ಡೌನ್ ವೇಳೆ ಅವಶ್ಯಕ ವಸ್ತುಗಳನ್ನು ತರಲು ತಾಯಿ ಮಗಳ ಜೊತೆ ಅಂಗಡಿಗೆ ತೆರಳುತ್ತಿದ್ದಳು. ಈ ವೇಳೆ ಮಾಸ್ಕ್ ಧರಿಸಿಲ್ಲ ಎಂದು ಪೊಲೀಸರು ಆಕೆಯ ಮೇಲೆ ಕೈ ಮಾಡಿ ಎಳೆದಾಡಿದ್ದಾರೆ. ಪುರುಷ ಪೊಲೀಸರು ಕೂಡ ಮಹಿಳೆಯನ್ನು ಎಳೆದಾಡಿದ್ದಾರೆ. ಮಹಿಳಾ ಪೇದೆ ಆಕೆಯ ಜಡೆಯನ್ನು ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ.ಮಹಿಳೆಯ ಮೇಲೆ ಪೊಲೀಸರು ದೌರ್ಜನ್ಯ ನಡೆಸುವ ಭಯಾನಕ ದೃಶ್ಯದ […]

ಬರಹ: ಆಲ್ವಿನ್ ಅಂದ್ರಾದೆ, ಸಾಸ್ತಾನ ಸಮಾಜದಲ್ಲಿ ಜಾತಿ ಮತ ಮೀರಿದ ಒಂದು ವರ್ಗ ಇದೆ, ಅವರೇ ಶುಭಸಮಾರಂಭಗಳ ಬೇಡಿಕೆಗಳನ್ನು ಪೂರೈಸುವವರು. ಮುಖ್ಯವಾಗಿ ಉಟೋಪಚಾರದ ವ್ಯವಸ್ಥೆ ಮಾಡುವವರು, ಬಡಿಸುವವರು, ಧ್ವನಿ ಮತ್ತು ಬೆಳಕು ಒದಗಿಸುವವರು, ಛಾಯಾಗ್ರಾಹಕರು, ಡೇಕೋರೇಟರ್ಸ್, ವಾದ್ಯದವರು, ಶಾಮಿಯಾನದವರು, ಪುರೋಹಿತರು, ಸಭಾಂಗಣ ಹಾಗೂ ಹೋಟೆಲ್ ಮಾಲಕರು ಹಾಗೂ ಕಾರ್ಮಿಕರು, ಕಾರ್ಯಕ್ರಮ ನಿರ್ವಾಹಕರು, ಟ್ಯೂರಿಸ್ಟ್ ವಾಹನ ಚಾಲಕ ಮಾಲಕರು, ವಾದ್ಯ ಮತ್ತು ಆರ್ಕೆಸ್ಟ್ರಾದವರು, ಕಲಾವಿದರು ಹೀಗೆ ಹಲವಾರು ರೀತಿಯಲ್ಲಿ ಕೇವಲ ಸಭೆ ಸಮಾರಂಭಗಳನ್ನೇ ನಂಬಿ ಬದುಕು ಸಾಗಿಸುವ ಅದೆಷ್ಟೋ […]

JANANUDI.COM NETWORK ಉಡುಪಿ,.19. ರಾಜ್ಯದ ಮುಖ್ಯಮಂತ್ರಿ ಪ್ರಕಟಿಸಿರುವ ಪ್ಯಾಕೇಜ್ ಅರೆ ಬರೆ ಪ್ಯಾಕೇಜ್ ಆಗಿದೆ. ಇದು ಅರೆ ಬರೆ ಲಾಕ್ಡೌನ್ ಹಾಗೆ ಇದೆ. ಕೋವಿಡ್ ಸಂಕಷ್ಟದ ವೇಳೆ ಜನತೆಯ ಜೀವನ ಉಳಿಸಲು ಇದು ಸಾಲದು ಎಂದು ಭಾರತಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಉಡುಪಿ ಜಿಲ್ಲಾ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿದೆ.ಉಡುಪಿ ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಖಾಸಗಿ ಬಸ್ ನೌಕರರು, ಹಂಚು ಕಾರ್ಮಿಕರು, ಬೀಡಿ ಕಾರ್ಮಿಕರು, ಉದ್ಯೋಗ ಖಾತರಿಯಲ್ಲಿ ಕೆಲಸ ಮಾಡುವವರು ಇದ್ದಾರೆ. ಅವರಿಗೆ ಯಾವುದೇ ಪರಿಹಾರ ಘೋಷಿಸಿಲ್ಲ.ಆದಾಯ ತೆರಿಗೆಯಿಂದ ಹೊರಗಿರುವ […]

JANANUDI.COM NETWORK ನವದೆಹಲಿ: ಕೊರೊನಾ ಎರಡನೇ ಅಲೆಯಿಂದಾಗಿ ಸಾಮಾನ್ಯ ಜನತೆಯ ಜೊತೆಯಲ್ಲೇ ಫ್ರಂಟ್ ಲೈನ್ ವರ್ಕರ್ಸ್ ಆಗಿರುವ ವೈದ್ಯರೂ ಹೆಚ್ಚಿನ ಸಂಖ್ಯೆಯಲ್ಲಿ ತೊಂದರೆಗೊಳಗಾಗಿದ್ದು, ಭಾನುವಾರ ಒಂದೇ ದಿನ ಸುಮಾರು 50 ವೈದ್ಯರು ಸೋಂಕಗೆ ಬಲಿಯಾಗಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ತಿಳಿಸಿದೆ.ಕೊರೊನಾ ಸೋಂಕಿನ ಮೊದಲ ಅಲೆಗೆ ಸಿಲುಕಿ ಸುಮಾರು 736 ವೈದ್ಯರು ಮೃತಪಟ್ಟಿದ್ದು. ಈ ಹಿನ್ನೆಲೆಯಲ್ಲಿ ಲಸಿಕೆ ದೊರೆತ ತಕ್ಷಣ ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಫ್ರಂಟ್ ಲೈನ್ ವರ್ಕರ್ಸ್ ಗೆ ಲಸಿಕೆ ಹಾಕುವ ಅಭಿಯಾನ ಜನವರಿಯಲ್ಲಿ […]

JANANUDI.COM NETWORK ಬೆಂಗಳೂರು:ಮೇ.19; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ನಂತರ ೫ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಕೊರೋನಾ ಸೋಂಕು ತಡೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ. ಹಾಸನದ ಜಿಲ್ಲೆಯ ಲಾಖ್ಡೌನ್ ಮೇ 20 ಹಾಸನದಲ್ಲಿ ಭಾನುವಾರ, ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. ಇತರ ದಿನಗಳಲ್ಲಿ ಬೆಳಿಗ್ಗೆ 6 […]

ಲಾಕ್ ಡೌನ್ ಮುಂದುವರೆಸುವ ಬಗ್ಗೆ ಮೇ 23 ರಂದು ನಿರ್ಧಾರ ತೆಗೆದುಕೊಳ್ಳುತ್ತೇವೆ – ಸಿಎಂ ಬಿಎಸ್ ಯಡಿಯೂರಪ್ಪ. JANANUDI.COM NETWORK ಕೋವಿಡ್ ಲಾಕ್ ಡೌನ್ ನಿಂದ ತೀವ್ರ ಆರ್ಥಿಕ ಸಂಕಷ್ಟ 1250 ಕೋಟಿ ರೂ ವಿಶೇಷ ಪ್ಯಾಕೇಜಿನ ದಯೆಕರ್ನಾಟಕ ಸೇರಿದಂತೆ ದೇಶಾದ್ಯಂತ ಕೊರೋನಾ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗಿದ್ದರಿಂದ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಈ ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ 1,250 […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ ಸೇರಿದಂತೆ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಐದು ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಿಗೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯ ಮೂಲಕ ತಲಾ 5 ಲೀಟರ್ ಸಾಮಥ್ರ್ಯದ 72 ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಮೂಲಕ ಇವುಗಳನ್ನು ಕೋವಿಡ್ ಸೋಂಕಿಗೆ ತುತ್ತಾದ ಶಿಕ್ಷಕರು,ಉಪನ್ಯಾಸಕರಿಗೆ ಆದ್ಯತೆ ಮೇರೆಗೆ ಬಳಸುವಂತೆ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಕೋರಿದ್ದಾರೆ.ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ ತಲಾ 2 ಕೋಟಿ […]