ಕುಂದಾಪುರ; ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ದಿನಾಂಕ 28.02.2026 ಶನಿವಾರ ಮಧ್ಯಾಹ್ನ 2:30ಕ್ಕೆ ಶಿಕ್ಷಣಕ್ಕೆ ಸಹಭಾಗಿಗಳು ಎಂಬ ಧ್ಯೇಯ ವಾಕ್ಯದೊಂದಿಗೆ ಶಿಕ್ಷಕರಕ್ಷಕ ಸಭೆ ನಡೆಯಿತು. ಶಾಲಾ ಸಂಚಾಲಕಿ ಐರಿನ್ ಸಾಲಿನ್ಸ್ ರವರು ಅಧ್ಯಕ್ಷತೆಯನ್ನು ವಹಿಸಿದರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಸಿ ಎಸ್ ಐ ಕೃಪಾ ಚರ್ಚ್ ನ ಧರ್ಮಗುರುಗಳಾದ ರೆವೆರೆಂಡ್ ಇಮಾನುಯಲ್ ಜಯಕರರವರು ನಿರ್ವಹಿಸಿದರು . ಇವರು ತಮ್ಮ ಭಾಷಣದಲ್ಲಿ ಮಕ್ಕಳಿಗೆ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ಶಿಕ್ಷಕರು ಮತ್ತು ರಕ್ಷಕರ ಆದ್ಯ ಕರ್ತವ್ಯ ಎಂದು […]

Read More

ಶಿವಮೊಗ್ಗ, ಮಾ.1: ಕುಂದಾಪುರದಿಂದ ಶಿವಮೊಗ್ಗಕ್ಕೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ಸುಟ್ಟು ಕರಕಲಾದ ಭೀಕರ ಘಟನೆ ನಿನ್ನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ:ಕುಂದಾಪುರ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ‘ದುರ್ಗಾಂಬಾ’ ಸಂಸ್ಥೆಗೆ ಸೇರಿದ ಬಸ್, ಘಾಟ್ ರಸ್ತೆಯ ಅಪಾಯಕಾರಿ ತಿರುವುಗಳಿರುವ ಫಾಲ್ಸ್ ಸಮೀಪ ತಲುಪಿದಾಗ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದಂತೆಯೇ ಬಸ್ಸಿನ ಇಂಜಿನ್ ಭಾಗದಲ್ಲಿ ದಿಢೀರ್ ಹೊಗೆ […]

Read More

ಕುಂದಾಪುರ; ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು ಕುಂದಾಪುರ ಮಯೂರ ಮೆಡಿಕಲ್ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರಕ್ಕಿಂಗ್ ಹೋಗಿದ್ದರು ಎಂದು ಹೇಳಲಾಗುತ್ತದೆ. ಮೃತದೇಹವನ್ನು‌ ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ‌ಕಲೆಹಾಕಿದ್ದಾರೆ. ಶುಭಶ್ರೀ ಕಾರಂತ್ ಕುಂದಾಪುರ ಚಿಕ್ಕನಸಾಲ್ ರಸ್ತೆಯಲ್ಲಿರುವ ಶ್ರೀ ಮೈಲಾರೇಶ್ವರ ದೇವಸ್ಥಾನದ ಬಳಿಯ ನಿವಾಸಿಯಾಗಿದ್ದು. ಬಹಳ ವರ್ಷದಿಂದ […]

Read More

ಬೆಂಗಳೂರು, ಫೆಬ್ರವರಿ 27: ನಂಬಿಕೆ ಮತ್ತು ನಾಗರಿಕ ಜವಾಬ್ದಾರಿಯನ್ನು ಸಂಯೋಜಿಸಿದ ಮಹತ್ವದ ಸಭೆಯಲ್ಲಿ, ಕರ್ನಾಟಕದ ಕ್ಯಾಥೋಲಿಕ್ ಕೌನ್ಸಿಲ್ (CCK) ಬೆಂಗಳೂರಿನ ಸುಬೋಧನ (KROSS) ನಲ್ಲಿ ತನ್ನ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು., ರಾಜ್ಯದ 14 ಡಯಾಸಿಸ್‌ಗಳಿಂದ ಸುಮಾರು 90 ಪ್ರತಿನಿಧಿಗಳನ್ನು ಒಟ್ಟುಗೂಡಿದರು. 2009 ರಲ್ಲಿ ಸ್ಥಾಪನೆಯಾದ ಕರ್ನಾಟಕದ ಕ್ಯಾಥೋಲಿಕ್ ಕೌನ್ಸಿಲ್, ಕರ್ನಾಟಕದಲ್ಲಿ ಸಂಘಟಿತ ಧರ್ಮಗುರುಗಳು ಮತ್ತು ಸಾಮಾಜಿಕ ತೊಡಗಿಸಿಕೊಳ್ಳುವಿಕೆಯ ಮೇಲೆ ಕೇಂದ್ರೀಕರಿಸುವ ಬಿಷಪ್‌ಗಳು, ಧರ್ಮಗುರುಗಳು, ಧಾರ್ಮಿಕ ಮತ್ತು ಸಾಮಾನ್ಯ ಭಕ್ತರ ಪ್ರತಿನಿಧಿಗಳ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಸಂವಿಧಾನ ಮತ್ತು […]

Read More

ಟೆಹ್ರಾನ್, ಫೆ.28: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆ ಇಸ್ರೇಲ್ ಶನಿವಾರ ಮುಂಜಾನೆ ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸಿದೆ.ಅಮೆರಿಕದ ಎಚ್ಚರಿಕೆಗಳ ಬೆನ್ನಲ್ಲೇ ನಡೆದ ಈ ದಾಳಿ, ಇರಾನ್ – ಇಸ್ರೇಲ್ ನಡುವಿನ ನೇರ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದ್ದು, ಪೂರ್ಣ ಪ್ರಮಾಣದ ಯುದ್ಧದ ಭೀತಿ ಉಂಟಾಗಿದೆ. ಪರಿಸ್ಥಿತಿ ಗಂಭೀರವಾಗಿದೆ. ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅಧಿಕೃತ ಘೋಷಣೆ ನೀಡುತ್ತಾ, “ಮುನ್ನೆಚ್ಚರಿಕಾ ಕ್ರಮವಾಗಿ” ಇರಾನ್ ವಿರುದ್ಧ ದಾಳಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಇರಾನ್ […]

Read More

ಶಿವಮೊಗ್ಗ, ಫೆ.27: ಸೈಬರ್ ಅಪರಾಧಗಳಿಗೆ ಸಂಘಟಿತ ರೀತಿಯಲ್ಲಿ ಬ್ಯಾಂಕ್ ಖಾತೆಗಳನ್ನು ಒದಗಿಸಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದ್ದ ಮಹಾಜಾಲವನ್ನು ಶಿವಮೊಗ್ಗ ಪೊಲೀಸರು ಬಯಲಿಗೆಳೆದಿದ್ದಾರೆ.15 ಬೇನಾಮಿ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಗಳ ಮೂಲಕ ಸುಮಾರು ₹82 ಕೋಟಿ ಹಣ ವಂಚನೆಗೊಳಗಾಗಿರುವ ಅಚ್ಚರಿ ಮಾಹಿತಿ ತನಿಖೆಯಲ್ಲಿ ಹೊರಬಿದ್ದಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲೆಯ ಶರಾವತಿ ನಗರದ ಜಗದೀಶ್ (43), ಚಿಕ್ಕಮಗಳೂರಿನ ಅರ್ಷಾದ್ (39) ಹಾಗೂ ಶಿವಮೊಗ್ಗ ಹೊಸಮನೆ ಬಡಾವಣೆಯ ಅನಂತ (34)ರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ವಿವಿಧ […]

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೇರಳ ಮಾದಕವಸ್ತು ವಿರೋಧಿ ವಿಶೇಷ ಕಾರ್ಯಪಡೆ ಭರ್ಜರಿ ಕಾರ್ಯಾಚರಣೆ ನಡೆಸಿ, ಅಂತರರಾಜ್ಯ ಡ್ರಗ್ ಜಾಲಕ್ಕೆ ಸಂಬಂಧಿಸಿದ ಕುಖ್ಯಾತ ಪೆಡ್ಲರ್‌ನನ್ನು ಬಂಧಿಸಿದೆ.ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ.ಖಚಿತ ಮಾಹಿತಿಯ ಮೇರೆಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರದ ರಮೇಶ್ ರೆಡ್ಡಿ ಬಡಾವಣೆಯ ಮನೆಯೊಂದರ ಮೇಲೆ ದಾಳಿ ನಡೆಸಿದ ತಂಡ, ಸುಮಾರು ₹1 ಕೋಟಿ ಮೌಲ್ಯದ 2 ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದೆ. ದಾಳಿಯ ವೇಳೆ 2 ಕೆಜಿ ತೂಕದ ನಾಲ್ಕು ಪ್ಯಾಕೆಟ್‌ಗಳು ಹಾಗೂ […]

Read More

ರಿಯಾದ್: ಸೌದಿ ಅರೇಬಿಯಾದ ತೈಫ್ ಬಳಿಯ ಮಹ್ಲುಮಿಯಾದಲ್ಲಿ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಇಬ್ಬರು ಮಲಯಾಳಿಗಳು ಸಾವನ್ನಪ್ಪಿದ್ದಾರೆ. ರಿಯಾದ್‌ನ ಹೋತಾದಿಂದ ಮೆಕ್ಕಾಗೆ ಹೊರಟಿದ್ದ ಬಸ್ ಟೈರ್ ಸ್ಫೋಟಗೊಂಡು ಉರುಳಿಬಿದ್ದಿದೆ. ಮೃತರನ್ನು ಮಲಪ್ಪುರಂನ ನೀಲಂಬೂರು ಮೂಲದ ಇಸ್ಮಾಯಿಲ್ ಮತ್ತು ಕೊಲ್ಲಂನ ಪಠಾಣಪುರಂ ಮೂಲದ ಶೀಬಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸುಮಾರು ಇಪ್ಪತ್ತು ಮಲಯಾಳಿಗಳು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ವಿವಿಧ ರಾಜ್ಯಗಳ ಅನೇಕ ಜನರು ಇದ್ದರು.

Read More

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ಕರ್ನಾಟಕ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಫೆ.೨೩ ರಂದು ಮೊಗವೀರ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಿದರು. ಇದೇ ಸಂದರ್ಭದಲ್ಲಿ ಅರಣ್ಯಹಕ್ಕು ಹೋರಾಟಗಾರರ ವೇದಿಕೆಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅರಣ್ಯ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಗ್ರ ಮಾತುಕತೆ ನಡೆಸಲಾಯಿತು. ಈ ಸಭೆಯಲ್ಲಿ ಸಚಿವರಾದ ಶ್ರೀ ಮಂಕಾಳ ವೈದ್ಯ ಅವರು ಉಪಸ್ಥಿತರಿದ್ದರು.

Read More
1 14 15 16 17 18 278