JANANUDI.COM NETWORK ಹೊಸದಿಲ್ಲಿ:ಭಾರತೀಯ ರೈಲ್ವೆ ಇಲಾಖೆಯು ತಾಯಂದಿರ ದಿನದ ವಿಶೇಷದ ಅಂಗವಾಗಿ ರೈಲುಗಳಲ್ಲಿ ಪ್ರತ್ಯೇಕ ಬೇಬಿ ಬರ್ತ್ (ನವಜಾತ ಶಿಶುಗಳಆಸನ)ಗಳನ್ನು ಪರಿಚಯಿಸಿದೆ.ಇದರಲ್ಲಿ ಶಿಶುಗಳು ತಮ್ಮ ತಾಯಂದಿರೊಂದಿಗೆ ಮಲಗಲು ಸಾಧ್ಯವಾಗುತ್ತದೆ. ಮಹಿಳೆಯರಿಗೆ೦ದು ಮೀಸಲಿಟ್ಟ ಲೋವರ್ ಬರ್ತ್ಗಳನ್ನು ಬೇಬಿ ಬರ್ತ್ಗಳ ಪಕ್ಕದಲ್ಲಿಯೇ ಇರಿಸಲಾಗಿದೆ. ಇದರಿ೦ದಾಗಿ ಪುಟ್ಟಕ೦ದಮ್ಮಗಳು ಯಾವುದೇ ಅಡಚಣೆಯಿಲ್ಲದೇ ತಮ್ಮ ತಾಯೊಂದಿಗೆ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ. ಪ್ರಾಯೋಗಿಕ ಹಂತವಾಗಿಕೆಲವು ರೈಲುಗಳಲ್ಲಿ ಮಾತ್ರ ಈ ಹೊಸ ವ್ಯವಸ್ಥೆಯನ್ನು ನೀಡಲಾಗಿದೆ. ರೈಲು ಪ್ರಯಾಣದ ಸಮಯದಲ್ಲಿ ಶಿಶುಗಳನ್ನು ಸುರಕ್ಷಿತವಾಗಿರಿಸಲು ಮತ್ತು ತಾಯಂದಿರಿಗೆ ಉತ್ತಮ ನಿದ್ರೆ ಪಡೆಯಲು ಸಾಕಷ್ಟು […]
JANANUDI.COM NETWORK ಬೆಂಗಳೂರು; ಇನ್ನು ಮುಂದೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ, ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಯವರು ಅರಣ್ಯ ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಸೂಚಿಸಿದ್ದಾರೆ.ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆಗಳು ಸುಪ್ರಭಾತದ ಅಭಿಯಾನಕ್ಕೆ ಚಾಲನೆ ನೀಡಿತ್ತು. ಆದ್ದರಿಂದ ಧ್ವನಿ ವರ್ಧಕ ಬಳಕೆ ವಿವಾದ ರಾಜ್ಯದಲ್ಲಿ ವಿವಾದ ಎರ್ಪಟ್ಟಿತ್ತು.ಧ್ವನಿವರ್ಧಕ ಬಳಸುವವರು ಇನ್ನು ಮುಂದೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಧ್ವನಿವರ್ಧಕದ ಶಬ್ದ ಸುಪ್ರೀಂಕೋರ್ಟ್ ನಿಗದಿಪಡಿಸಿದ ಡೆಸಿಬಲ್ ಮಿತಿ […]
JANANUDI.COM NETWORK ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ, ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ ಮುಂದಿನ 3 ಮೂರು ದಿನ ಆಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯೂ, ಅಸಾನಿ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒಡಿಶಾದ ಪುರಿಗೆ ಕಾಲಿಟ್ಟಿದೆ. ಈ ಪರಿಣಾಮವಾಗಿ, ಭಾರೀ ಮಳೆಯಾಗಿದೆ ಇಂದು ಕೂಡ ಭಾರೀ ಮಳೆಯಾಗಲಿದ್ದು, ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು […]
JANANUDI.COM NETWORK ಬೆಂಗಳೂರು: ಆಜಾನ್ ಮೊಳಗುತ್ತಿದ್ದಕ್ಕೆ, ದೇವಸ್ಥಾನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸುಪ್ರಭಾತ ಮತ್ತು ಹನುಮಾನ್ ಚಾಲೀಸಾ ಧ್ವನಿವರ್ಧಕದಲ್ಲಿ ಮೊಳಗಿಸಿ ಅಜಾನ್ ಮೊಳಗಿನ ಅಬರಕ್ಕೆ ಕಡಿವಾಣ ಹಾಕಲು ಮಾಡಿದ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಮಾಡಿದೆ.ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.ಆಜಾನ್ ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಶಂಕರ ಮಠದಲ್ಲಿ ಶುಕ್ರವಾರ ಧರ್ಮಾಚಾರ್ಯರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಅರ್ಚಕ ಸುಬ್ರಮಣಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಯಿತು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮುಸ್ಲಿಮರು ಮಂಗಳವಾರ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಿಸಿದರು. ಆಚರಣೆ ಸಂದರ್ಭದಲ್ಲಿ ಪರಸ್ಪರ ಅಪ್ಪಿ ರಂಜಾನ್ ಶುಭಾಶಯ ತಿಳಿಸಿದರು.ಪ್ರಾರ್ಥನೆ ಮುಗಿದ ಬಳಿಕ ಪಟ್ಟಣದ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಮರಿಗೆ ತಂಪು ಪಾನೀಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ, ಮುಸ್ಲಿಮರು ಪರಸ್ಪರ ಶುಭ ಹಾರೈಸಿದರು.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂಮರು ವಾಸವಾಗಿರುವ ಗೌನಿಪಲ್ಲಿ, ಅಡ್ಡಗಲ್, ಮುದಿಮಡಗು, ಯಚ್ಚನಹಳ್ಳಿ ಮತ್ತಿತರ ಕೆಲವು ಗ್ರಾಮಗಳಲ್ಲಿ ರಂಜಾನ್ ಆಚರಿಸಲಾಯಿತು. ಅಲ್ಲಿ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿ ಪ್ರಾರ್ಥನೆ ಮಾಡಲಾಯಿತು.
ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ದಿನ ನಿತ್ಯ ಮಾಲೂರು ಮತ್ತು ಬಂಗಾರಪೇಟೆ ರೈಲು ನಿಲ್ದಾಣದಿಂದ ಬೆಂಗಳೂರಿನ ಕಡೆಗೆ ಹೊರಡುವ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಮಾಲೂರು ಹಾಗೂ ಬಂಗಾರಪೇಟೆ ರೈಲು ನಿಲ್ದಾಣಗಳಲ್ಲಿ ಹಮ್ಮಿಕೊಂಡಿದ್ದ , ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದ ಅವರು , ಮಾಲೂರಿನ ರೈಲು ನಿಲ್ದಾಣದಲ್ಲಿ ಕಬ್ಬಿಣದ ಮೇಲೇತುವೆಯನ್ನು ಅತಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ನಡೆ ಮತ್ತು ನುಡಿಯಿಂದ ಡಾ. ಪುನೀತ್ ರಾಜಕುಮಾರ್ ರವರು ಹೆಸರು ಕೋಟ್ಯಾಂತರ ಕನ್ನಡಿಗರ ಮನಸ್ಸಿನಲ್ಲಿ ಸದಾ ಹಚ್ಚಹಸಿರಾಗಿ ನೆಲೆಸಿದ್ದಾರೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಕೆಎಸ್. ಗಣೇಶ್ ಅಭಿಪ್ರಾಯಪಟ್ಟರು. ಕೋಲಾರ : ನಗರದ ಮುಸ್ಸಂಜೆ ಮನೆ ವೃದ್ಧಾಶ್ರಮದಲ್ಲಿ ರಾಶಿರಾಪು ಅಭಿಮಾನಿಗಳ ಸಂಘ ಹಾಗೂ ಜಾಗೃತಿ ಸೇವಾ ಸಮಿತಿ ಇವರ ಸಹಯೋಗದೊಂದಿಗೆ ಕರ್ನಾಟಕ ರತ್ನ, ಪವರ್ ಸ್ಟಾರ್, ಯೂತ್ ಐಕಾನ್ ಡಾ. ಪುನೀತ್ ರಾಜಕುಮಾರ್ ರವರ 6ನೇ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಏ. 28 ಲಕ್ಷ್ಮೀಪುರದ ನೂರಾನಿ ಮಸೀದಿಯಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೊಂಡಸಂದ್ರ ಶಿವಾರೆಡ್ಡಿ ಇಪ್ತಿಯಾರ್ ಕೂಟ ಆಯೋಜಿಸಿ ಹಿಂದು-ಮುಸ್ಲಿಂ ಬಾಂಧವರು ಸಹಭಾಗಿಯಾಗಿ ಆಚರಿಸುವ ಮೂಲಕ ಸೌಹಾರ್ದತೆ ಮೆರದಿದ್ದಾರೆ.ತಾಲೂಕಿನ ಲಕ್ಷ್ಮೀಪುರ ನೂರಾನಿ ಮಸೀದಿಯಲ್ಲಿ ನಡೆದ ಪವಿತ್ರ ರಂಜಾನ್ ಕಾರ್ಯಕ್ರಮದಲ್ಲಿ ಹಿಂದೂ ಬಾಂಧವರಿಗೆ ವಿಶೇಷ ಉಪವಾಸ ಹಾಗೂ ಮಸೀದಿಯಲ್ಲಿ ಇಪ್ತಿಯಾರ್ ಮಾಡಿಸುವ ಮೂಲಕ ಹಿಂದೂ-ಮುಸ್ಲಿಂ ಸೌಹಾರ್ದತೆಯಿಂದ ಇದ್ದೀವಿ ಎಂಬ ಮನೋಭಾವ ಶಿವಾರೆಡ್ಡಿ ತೋರಿಸಿ ಮಾತನಾಡಿದ ಅವರು ಇಸ್ಲಾಂನ 5 ತತ್ವಗಳಲ್ಲಿ ರಂಜಾನ್ ಹಬ್ಬ ಎನ್ನುವುದು […]

