ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳಾ ಕಾರ್ಮಿಕರಿಗೆ ತೊಂದರೆಯಾದರೆ ಉಗ್ರ ಹೋರಾಟ: ಕೆ.ಎಂ.ಸಂದೇಶ್ ಮಹಿಳಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೋರಿ ಕಾರ್ಖಾನೆ ಎದುರು ಪ್ರತಿಭಟನೆ   ಕೋಲಾರ: ಅಂಬೇಡ್ಕರ್ ಸೇವಾ ಸಮಿತಿಯ 120ನೇ ಹೋರಾಟವನ್ನು ಕೋಲಾರದ ಬೆತ್ತನಿ ಗ್ರಾಮದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಎದುರು ಮಹಿಳಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಸಂಸ್ಥಾಪಕ ಅದ್ಯಕ್ಷ ಕೆ.ಎಂ.ಸಂದೇಶ್ ಮಾತನಾಡಿ ಮಹಿಳಾ ಕಾರ್ಮಿಕರಿಗೆ ತೊಂದರೆಯಾದರೆ ಉಗ್ರ ಹೋರಾಟ ಮಾಡಲಾಗುತ್ತದೆ ಹಾಗೂ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡ(ಎಸ್.ಟಿ)ಗೆ ಕೇಂದ್ರ ಸರ್ಕಾರದಲ್ಲಿ ನೀಡುತ್ತಿರುವ ಪ್ರಕಾರ ಸಂವಿಧಾನತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ  ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಟನೆಗಳ ಒತ್ತಾಯ ಕೋಲಾರ.ಜೂ,6: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡ(ಎಸ್.ಟಿ)ಗೆ ಕೇಂದ್ರ ಸರ್ಕಾರದಲ್ಲಿ ನೀಡುತ್ತಿರುವ ಪ್ರಕಾರ ಸಂವಿಧಾನತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ ಒತ್ತಾಯಿಸಿ ಕೋಲಾರ ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಟನೆಗಳ ಯುವ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪರಿಶಿಷ್ಟ ವರ್ಗದವರಿಗೆ ಕರ್ನಾಟಕ ರಾಜ್ಯದಸಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿರುವ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಕೋಲಾರ.ಜೂ,6: ಜಿಲ್ಲೆಯಲ್ಲಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಕೋಲಾರ.ಜೂ,6: ಜಿಲ್ಲೆಯಲ್ಲಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಆವರಣದೊಳಗೆ ಪ್ರವೇಶಿಸದಾಗ ಪೊಲೀಸರು ಕಾಂಪೌಂಡ್ ಗೇಟ್ ಬಾಗಿಲು ಮುಚ್ಚಿ ಒಳಗೆ ಬಿಡಲು ನಿರಾಕರಿಸಿದಾಗ ಸಂಘದ ಮುಖಂಡರಿಗೂ ಹಾಗೂ ಪೊಲೀಸರಿಗೂ ವಾಗ್ವಾದ ನಡೆದು ಕೊನೆಗೆ ಸಂಘಟನೆಯವರು ರಾಷ್ಟ್ರೀಯ ಹೆದ್ದಾರಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ   ನಿರ್ದೇಶಕರಿಂದ ಜಿಲ್ಲೆಯ ಜನತೆಗೆ ರಂಜಾನ್ ಈದುಲ್ ಫಿತ್ರ್ ಹಬ್ಬದ ಶುಭಾಶಯ. ಶ್ರೀನಿವಾಸಪುರ: ದಿನಾಂಕ: 05-06-2019 ರಂದು ಬುಧವಾರ ಕೋಲಾರ ಜಿಲ್ಲೆಯಾದ್ಯಂತ ಆಚರಿಸುತ್ತಿರುವ ಈದುಲ್ ಫಿತ್ರ್ ಹಬ್ಬವು ಮುಸ್ಲಿಂ ಬಾಂಧವರಿಗೆ ಸುಖ, ಶಾಂತಿ, ನೆಮ್ಮದಿಯನ್ನು ನೀಡಲೆಂದು ನಿರ್ದೇಶಕರು ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ಶ್ರೀನಿವಾಸಪುರ ತಾಲ್ಲೂಕು ಶಬ್ಬೀರ್ ಅಹಮ್ಮದ್ ಅವರು ಹೃದಯಪೂರ್ವಕವಾಗಿ ಶುಭಾಶಯಗಳನ್ನು ಹಾರೈಸಿದ್ದಾರೆ.

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಸರ್ಕಾರದ ಎಲ್ಲಾ ಯೋಜನೆಗಳ ಮಾಹಿತಿ ಜನರಿಗೆ ತಿಳಿಯುವಂತಾಗಬೇಕು-ಎಸ್.ಮುನಿಸ್ವಾಮಿ ಕೋಲಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳ ಮಾಹಿತಿಯು ಜನರಿಗೆ ತಿಳಿಯಬೇಕು. ಇದರಿಂದ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು.   ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಗ್ರೀನ್ ಯೋಜನೆಯಡಿ ಟೊಮ್ಯೋಟೋ ಸಮಗ್ರ ಅಭಿವೃದ್ಧಿ ಕಾರ್ಯಾಚರಣೆ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಡಿಸಿಸಿ ಬ್ಯಾಂಕಿನಿಂದ 186 ಮಹಿಳಾ ಸಂಘಗಳಿಗೆ 10 ಕೋ.ರೂ ಸಾಲ ವಿತರಣೆ ಬಡ್ಡಿರಹಿತ ಸಾಲದ ಮೊತ್ತ 10ಲಕ್ಷಕ್ಕೇರಿಸಲು ಕ್ರಮ -ಸ್ವೀಕರ್ ರಮೇಶ್‍ಕುಮಾರ್ ಕೋಲಾರ:- ಡಿಸಿಸಿ ಬ್ಯಾಂಕಿನಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುವ ಬಡ್ಡಿರಹಿತ ಸಾಲವನ್ನು 5 ಲಕ್ಷದಿಂದ 10 ಲಕ್ಷಕ್ಕೇರಿಸಲು ಒಂದು ವಾರದೊಳಗೆ ಸರ್ಕಾರದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಭರವಸೆ ನೀಡಿದರು. ಭಾನುವಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ನಡೆದ ಸುಗಟೂರು ಹೋಬಳಿಯ 186 ಸ್ವಸಹಾಯ […]

Read More

ವರದಿ:ಶಬ್ಬೀರ್ ಅಹ್ಮದ್ ಅರ್ಕ ಶಾಲೆಯಲ್ಲಿ ಮಾನಸಿಕ ಆರೋಗ್ಯ, ಸಂವಹನ ಕಾರ್ಯಾಗಾರ : ಕಲಿಕೆಗೆ ಮನೋವಿಜ್ಞಾನವು ಪೂರಕ-ಡಾ.ಸುಬ್ರಹ್ಮಣ್ಯಂ ಅಭಿಮತ ಕೋಲಾರ:- ಮಕ್ಕಳ ಮನಸ್ಸಿನ ಭಾವನೆಗೆ ಘಾಸಿಗೊಳಿಸದೆ ಪೋಷಣೆ ಮಾಡಿದಲ್ಲಿ ಸಕಾರಾತ್ಮಕ ವ್ಯಕ್ತಿತ್ವ ರೂಪಗೊಂಡು ಸಮಾಜಕ್ಕೆ ಮಾದರಿಯಾಗಲು ಸಾಧ್ಯ ಎಂದು ಮನೋವೈದ್ಯ ಡಾ|| ಎಸ್. ಸುಬ್ರಹ್ಮಣ್ಯ ತಿಳಿಸಿದರು. ಶನಿವಾರ ತಾಲ್ಲೂಕಿನ ಮಡೇರಹಳ್ಳಿಯ ಅರ್ಕ ಅಂತಾರಾಷ್ಟ್ರೀಯ ಶಾಲೆಯಲ್ಲಿ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸಂವಹನೆ ಕುರಿತಾಗಿ ಶಿಕ್ಷಕರಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು. ಪೋಷಕರು ಬಾಲ್ಯದಿಂದಲೇ ಮಗುವಿನ ಗುಣಗಳನ್ನು ಗಮನಿಸುತ್ತಾ ಅವಶ್ಯವಿದ್ದಲ್ಲಿ ಸೂಕ್ತ […]

Read More

ವರದಿ:ಶಬ್ಬೀರ್ ಅಹ್ಮದ್ ಕೆ.ಸಿ. ವ್ಯಾಲಿ ನೀರು ಅಂತರ್ಜಲ ವೃದ್ಧಿಗಾಗಿ ಮಾತ್ರ: ಉಲ್ಲಂಘನೆಯಾದಲ್ಲಿ ನಿರ್ದಾಕ್ಷಿಣ್ಯ ಕ್ರಮ -ಶ್ರೀ ಕೃಷ್ಣ ಬೈರೇಗೌಡ ಕೋಲಾರ: ಜೂನ್ 01 ಕೆ.ಸಿವ್ಯಾಲಿಯ ಸಂಸ್ಕರಿಸಿದ ನೀರು ಜಿಲ್ಲೆಯ ಅಂತರ್ಜಲ ಮಟ್ಟವನ್ನು ವೃದ್ಧಿಸಲು ಮಾತ್ರ ಉದ್ದೇಶಿಸಿದ್ದು,  ಸಾರ್ವಜನಿಕರು ಇದನ್ನು ನೇರವಾಗಿ ಕೃಷಿ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು  ಸರ್ವೋಚ್ಛ ನ್ಯಾಯಾಲಯ ಸೂಚನೆ ನೀಡಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ […]

Read More

ವರದಿ:ಶಬ್ಬೀರ್ ಅಹ್ಮದ್ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಿಸಿ: ಡಾ.ಸಿ.ಜಿ.ರಮೇಶ್  ಕೋಲಾರ: ಜೂನ್ 01 ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮಡಿಯಲ್ಲಿ ಶಿಶು ಮರಣ ಪ್ರಮಾಣವನ್ನು ತಡೆಗಟ್ಟುವ ಸಲುವಾಗಿ 0 ಯಿಂದ 5 ವರ್ಷದೊಳಗಿನ ಮಕ್ಕಳ ಕುಟುಂಬಗಳಲ್ಲಿ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕವನ್ನು ಅಂಗನವಾಡಿಗಳಲ್ಲಿ ಜೂನ್. 3 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿಯಾದ ಡಾ.ಸಿ.ಜಿ.ರಮೇಶ್ ಅವರು ತಿಳಿಸಿದರು.  ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಆರ್.ಬಿ.ಎಸ್.ಕೆ, ಆರ್.ಕೆ.ಎಸ್.ಕೆ, […]

Read More