
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸೈದಾನಿಬಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷೆಯಾಗಿದ್ದ ಮಂಗಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಪಡಿಸಲಾಗಿತ್ತು. ಆದರೆ ಜೆಡಿಎಸ್ ಬೆಂಬಲಿತ ಸೈದಾನಿಬಿ ಅವಿರೋಧ ಆಯ್ಕೆಯಾದರು. ಪಿಡಿಒ ವೆಂಕಟರಾಮರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಸದಸ್ಯರಾದ ಗಂಗಿರೆಡ್ಡಿ, ಈರಪ್ಪ, ನಾರೆಮ್ಮ, ಮಂಗಮ್ಮ, ನಿರ್ಮಲಮ್ಮ, ಚಿನ್ನಪ್ಪಯ್ಯ, ರಾಜ್ಕುಮಾರ್, ನಾಗರಾಜ್, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನ್ಯಾಯಾಲಯದಲ್ಲಿ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ವಿರುದ್ಧ ಮಾನಹಾನಿ ಮೊಕ್ದಮೆ ದಾಖಲಿಸಿದ ಬಳಿಕ, ನ್ಯಾಯಾಲಯದ ಹೊರಗೆ ಹೈಕೋರ್ಟ್ ವಕೀಲ ಎ.ಶಂಕರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಕೆ.ಆರ್.ರಮೇಶ್ ಕುಮಾರ್ ಇದ್ದರು. ಶ್ರೀನಿವಾಸಪುರ: ಇಲ್ಲಿನ ನ್ಯಾಯಾಲಯದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ವಿರುದ್ಧ ಮಾನ ಹಾನಿ ಮೊಕದ್ದಮೆ ದಾಖಲಿಸಿದರು. ಮೊಕದ್ದಮೆ ದಾಖಲಿಸಿದ ಬಳಿಕ ನ್ಯಾಯಾಲಯದ ಹೊರಗೆ ಹೈಕೋರ್ಟ್ ವಕೀಲ ಎ.ಶಂಕರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಹಾಗೂ ವಿಧಾನಸಭೆ ಮಾಜಿ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ 24ಕ್ಕೂ ಹೆಚ್ಚು ಮಂದಿ ಗಾಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀನಿವಾಸಪುರ: ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ಬುಧವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘ, ಅಂಗನವಾಡಿ ನೌಕರರ ಸಂಘ, ಮಧ್ಯಾಹ್ನದ ಬಿಸಿಯೂಟ ನೌಕರರ ಸಂಘ, ಗ್ರಾಮ ಪಂಚಾಯಿತಿ ನೌಕರರ ಸಂಘ, ಕಟ್ಟಡ ಕಾರ್ಮಿಕರ ಸಂಘ, ಅಮಾಲಿ ಕಾರ್ಮಿಕರ ಸಂಘ ಹಾಗೂ ಟಿಪ್ಪು ಕ್ರಾಂತಿ ಸೇನೆ ಕಾರ್ಯಕರ್ತರು ಮುಷ್ಕರದಲ್ಲಿ ಭಾಗವಹಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನೂತನ ಕೋಲಾರ ಜಿಲ್ಲಾ ಆಟೋಮೊಬೈಲ್ಸ್ ಕ್ಷೇಮಾಭಿವೃದ್ಧಿ ಸಂಘಕ್ಕೆ ಚಾಲನೆ ಕೋಲಾರ: ಪ್ರತಿ ಕ್ಷೇತ್ರವೂ ಸ್ಪರ್ಧಾತ್ಮಕತೆಯಿಂದ ಕೂಡಿದ್ದು ವ್ಯಾಪರಿಕರಣದಲ್ಲಿ ತಮ್ಮ ಛಾಪು ಮೂಡಿಸಲು ಶ್ರಮಪಡುವುದು ಅತ್ಯವಶ್ಯಕ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ವೆಂಕಟೇಶಪ್ಪ ತಿಳಿಸಿದರು. ಕೋಲಾರ ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಕೆಜಿಎನ್ ಪ್ಯಾಲೇಸ್ ನಲ್ಲಿ ಮಂಗಳವಾರ ನೂತನ ಕೋಲಾರ ಜಿಲ್ಲಾ ಆಟೋಮೊಬೈಲ್ಸ್ ಕ್ಷೇಮಾಭಿವೃದ್ಧಿ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಆಧುನಿಕ ಜೀವನ ಬಿರುಸಿನಿಂದ ಕೂಡಿದ್ದು, ಪ್ರತಿಯೊಬ್ಬರು ವಾಹನಕ್ಕೆ ಮೊರೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನಿವಾಸಪುರದಲ್ಲಿ ಏರ್ಪಡಿಸಿದ್ದ ಮೌಲ್ಯ ಶಿಕ್ಷಣ ಕಾರ್ಯಾಗಾರವನ್ನು ವಿಜಯಪುರದ ಬಸವ ಕಲ್ಯಾಣ ಮಠದ ಮಹದೇವಸ್ವಾಮೀಜಿ ಉದ್ಘಾಟಿಸಿದರು. ಶ್ರೀನಿವಾಸಪುರ: ಶಿಕ್ಷಕರು ಮಕ್ಕಳಲ್ಲಿ ಅವರಲ್ಲಿ ಸೆವಾ ಮನೋಭಾವ ಮೂಡಿಸಬೇಕು ಎಂದು ವಿಜಯಪುರದ ಬಸವ ಕಲ್ಯಾಣ ಮಠದ ಮಹದೇವಸ್ವಾಮೀಜಿ ಹೇಳಿದರು. ಪಟ್ಟಣದ ಕನಕ ಸಮುದಾಯ ಭವನದ ಸಭಾಂಗಣದಲ್ಲಿ ತಾಲ್ಲೂಕು ವಿಶ್ವ ಹಿಂದೂ ಪರಿಷತ್ ಟ್ರಸ್ಟ್ ವತಿಯಿಂದ ಶನಿವಾರ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಮೌಲ್ಯ ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅಪಾರವಾದ ಗೌರವ […]

JANANUDI.COM NETWORK ಗ್ರೇಸಿ ಟೀಚರ್ ಇವರಿಗೆ ನುಡಿನಮನ ಕುಂದಾಪುರ, ಡಿ.3: ತಿಂಗಳ ಹಿಂದೆ ಇಹಲೋಕ ತ್ಯಜಿಸಿದ, ಶಿಷ್ಯರ ಅಚ್ಚುಮೆಚ್ಚಿನ ಶಿಕ್ಷಯಾಗಿ, ಅಪಾರ ಶಿಷ್ಯ ವ್ರಂದ ಪಡೆದುಕೊಂಡ ಗ್ರೇಸಿ ಟೀಚರ್ ಇವರ ಶ್ರದ್ದಾಂಜಲಿ ಕಾರ್ಯಕ್ರಮ ಕುಂದಾಪುರದ ಕಲಾಮಂದಿರದಲ್ಲಿ ಡಿ.3 ರಂದು ಜರುಗಿತು. ಟೀಚರ್ ಡೇಜಿ ಮೆಂಡೊನ್ಸಾ ನುಡಿನಮನಗಳನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಕುಂದಾಪುರ, ಗಂಗೊಳ್ಳಿ ಮುಂತಾದ ಕ್ರೈಸ್ತ ಬಂಧುಗಳು, ಹಾಗೂ ಎಸ್.ವಿ ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಎಚ್.ಗಣೇಶ್ ಕಾಮತ್,ಸದಾಶಿವ ನಾಯಕ್, ಎಸ್.ವಿ. ಕಾಲೇಜಿನ ಪ್ರಾಂಶುಪಾಲರು, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರದಲ್ಲಿ ಕೊರೆಂಗಾವ್ ವಿಜಯೋತ್ಸವ ಆಚರಣೆ ಕೋಲಾರ : ಸ್ವಾಬಿಮಾನಕ್ಕಾಗಿ ಅಸಮಾನತೆಯ ವಿರುದ್ಧ ದಂಗೆ ಎದ್ದಂತಹ ಕೊರೆಗಾಂವ್ ಯುದ್ದ 500 ಜನ ಮಹರ್ ಸೈನಿಕರು ಹಾಗೂ 30,000 ಪೇಶ್ವೆಗಳ ನಡುವೆ ನಡೆದಂತಹ ಮೊದಲ ಸಿಪಾಯಿ ದಂಗೆ ಎಂತಲೇ ಹೇಳಬಹುದಾದ ಈ ವಿಜಯೋತ್ಸವ ನೆನಪಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಸಿ. ವಿಭಾಗದ ಅಧ್ಯಕ್ಷ ಜಯದೇವ್ ತಿಳಿಸಿದರು. ಜನವರಿ 1ರಂದು ಕೋಲಾರ ನಗರದ ನಚಿಕೇತನ ನಿಲಯದಲ್ಲಿ 202 ನೇ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಶಾಸಕ ಕೆ.ಆರ್.ರಮೇಶ್ ಕುಮಾರ್ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ರೈತರ ಹಿತದೃಷ್ಟಿಯಿಂದ ಪೋಡಿ ಹಾಗೂ ಪಿ.ನಂಬರ್ ತೆಗೆಯುವ ಕಾರ್ಯ ಶೀಘ್ರವಾಗಿ ಮುಕ್ತಾಯವಾಗಬೇಕು. ಫೆ.ಅಂತ್ಯದ ವೇಳೆಗೆ ಪಿ.ನಂಬರ್ ಸಮಸ್ಯೆ ಪರಿಹಾರವಾಗಿರಬೇಕು ಎಂದು ಸೂಚಿಸಿದರು. ತಾಲ್ಲೂಕಿನ 71 ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ […]