ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 2ನೇ ತರಗತಿಯ ವಿದ್ಯಾರ್ಥಿ, ಏಳು ವರ್ಷದ ರಾನನ್ ಸಿಯೋನ್ ಡಿ’ಕೋಸ್ಟಾ ತನ್ನ ಅಸಾಧಾರಣ ಸಾಧನೆಗಳಿಗಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಗಳಿಸಿದ್ದಾನೆ. ರೋಹನ್ ಐವನ್ ಡಿ’ಕೋಸ್ಟಾ ಮತ್ತು ಶಾಲೆಟ್ ಜೇನ್ ಪಿಂಟೊ ಅವರ ಪುತ್ರ ರಾನನ್, 2025ರ ವಿಶ್ವ ಗಣಿತ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾನೆ ಮತ್ತು ವಿಜ್ಞಾನ, ಇಂಗ್ಲಿಷ್, ಗಣಿತ, ಸಾಮಾನ್ಯ ಜ್ಞಾನ ಹಾಗೂ ಕಂಪ್ಯೂಟರ್ ವಿಜ್ಞಾನ ಸೇರಿದಂತೆ ಹಲವು SOF ಒಲಿಂಪಿಯಾಡ್ಗಳಲ್ಲಿ ತರಗತಿ ಟಾಪರ್ ಆಗಿ ಹೊರಹೊಮ್ಮಿದ್ದಾನೆ. […]
ಉಡುಪಿ, ಮಾ. 15: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ತಿಳಿಸಿದರು. ಅವರು ಬುಧವಾರ ಉಡುಪಿ ಶೋಕಮಾತಾ ಚರ್ಚಿನ ಆವೆ ಮರಿಯಾ ಸಭಾಂಗಣದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗೋವಾ ಮತ್ತು ದಮನ್ ಮಹಾಧರ್ಮಪ್ರಾಂತ್ಯದ ಮಹಾಧರ್ಮಾಧ್ಯಕ್ಷರು […]
ಕುಂದಾಪುರ; ರಂಗೋಲಿಯಲ್ಲಿ ಮೂಡಿದ ಕೆ.ಕೆ. ಹೆಬ್ಬಾರರ ಭಾವ ಚಿತ್ರ ಏಪ್ರಿಲ್ 15 ರ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ವತಿಯಿಂದ ಇಲ್ಲಿನ ಕಲಾವಿದ್ಯಾರ್ಥಿಯರಾದ ಕೃತಿ ಕೆ. ದೇವಾಡಿಗ, ಸಾತ್ವಿಕ್ ಆರ್, ರಿಶು ಜೆ. ಶೆಟ್ಟಿಯವವರಿಂದ ರಚಿತವಾದ ರಂಗೋಲಿ ಕಲಾಕೃತಿ. ಸುಮಾರು 112 ಚ.ಅಡಿ ವಿಸ್ತೀರ್ಣದ ಈ ಕೃತಿಯು ಉಡುಪಿಯ ಖ್ಯಾತ ಮತ್ತು ಪದ್ಮಶ್ರೀ, ಪದ್ಮ ವಿಭೂ಼ಷಣ ಚಿತ್ರಕಲಾವಿದರಾದ ಕೆ.ಕೆ. ಹೆಬ್ಬಾರರ ಸ್ಮರಣಾರ್ಥವಾಗಿ ಕಲಾವಿದ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ಗೌರವಾರ್ಥವಾಗಿ ಕಪ್ಪು ಬಿಳುಪಿನ ರಂಗೋಲಿಯಲ್ಲಿ […]
ಕೋಲಾರ; ಲಘು ಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೇಷಲ್ನ್ನು ಬಳಸುವುದರಿಂದ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ತೋಟಗಾರಿಕಾ ಮಹಾವಿದ್ಯಾಲಯ ಕೋಲಾರದ ಹಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ಕೆ. ಎಸ್. ರವರು ತಿಳಿಸಿದರು.ಕೋಲಾರದ ತೋಟಗಾರಿಕಾ ಮಹಾವಿದ್ಯಾಲಯದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ತಾಲ್ಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ತೋಟಗಾರಿಕಾ ಕಾರ್ಯಾನುಭವ ಶಿಬಿರದಲ್ಲಿ ಹಮ್ಮಿಕೊಳ್ಳಲಾದ ‘ಮಾವಿನ ಬೆಳೆಯಲ್ಲಿ ಮಾವು ಸ್ಪೇಷಲ್ ಬಳಕೆ ಪದ್ದತಿ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮಾವು ಸ್ಪೇಷಲ್ ಎಂಬುದು ಲಘು […]
Reported and photography by Ganesh Nayak ಕಲ್ಯಾಣಪುರ; ಮಿಲಾಗ್ರಿಸ್ ಕಾಲೇಜ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕವು ಉಡುಪಿಯ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಸಹಯೋಗದೊಂದಿಗೆ ಏಪ್ರಿಲ್ 10, 2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸ್ವಯಂಸೇವಕರ ಸಕ್ರಿಯ ಭಾಗವಹಿಸುವಿಕೆ ಕಂಡುಬಂದಿತು, ಇದರ ಪರಿಣಾಮವಾಗಿ 66 ಯೂನಿಟ್ ರಕ್ತ ಸಂಗ್ರಹವಾಯಿತು. ಕಾಲೇಜಿನ ಆಡಿಯೋ ವಿಶುವಲ್ ಹಾಲ್ನಲ್ಲಿ ಗಣ್ಯ ಅತಿಥಿಗಳು, ಅಧ್ಯಾಪಕರು ಮತ್ತು ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದ […]
ಮಂಗಳೂರು; ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್ಗೆ ಸೇರಿದ ಸಹೋದರಿ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್ನ ಧರ್ಮಗುರು ರೆ. […]
ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜ್ಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆಗೆ ಕುಳಿತಿದ್ದ 80 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಬಂದಿದೆ. ಫಲಿತಾಂಶ ಗಳಿಕೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದು 46 ಬಾಲಕಿಯರು ಹಾಗೂ 34 ಬಾಲಕರು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಈ ಎಸ್ ಸಾನಿಕಾ 600 ಅಂಕಕ್ಕೆ 588 ಅಂಕ ಗಳಿಸಿ ಶೇ. 98 ಫಲಿತಾಂಶ ಗಳಿಸಿದ್ದಾರೆ. ಕಲಾ ವಿಭಾಗದ ಎಂ ಜಿ ಶಮಿತಾ 600 ಅಂಕಕ್ಕೆ 582 ಅಂಕ ಗಳಿಸಿ […]
ಕುಂದಾಪುರ ; ಆರ್.ಎನ್ ಶೆಟ್ಟಿ ಸಂಯುಕ್ತ ಪ. ಪೂ. ಕಾಲೇಜು, ಪಿಯು ಅಂತಿಮ ಪರೀಕ್ಷೆಯಲ್ಲಿ ಶೇ. 99.1 ಫಲಿತಾಂಶ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ssಸಂಯುಕ್ತ ಪದವಿಪೂರ್ವ ಕಾಲೇಜು ಶೇ. 99.1 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 328 ವಿದ್ಯಾರ್ಥಿಗಳಲ್ಲಿ 325 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 140 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 161 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸ್ನೇಹಾ 592 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ಸ್ಥಾನಿಯಾಗಿ, ಕಾಲೇಜಿಗೆ […]
ಕುಂದಾಪುರ: ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ ಹೆಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ.ಈ ವರ್ಷ ಸಣ್ಣಕಥೆಯನ್ನು ಪರಿಗಣಿಸಿದ್ದು , 2024 ಮತ್ತು 2025ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು ಮತ್ತು ಲೇಖಕರು ಸಣ್ಣ ಕಥಾಸಂಕಲನದ ನಾಲ್ಕು ಪ್ರತಿಗಳನ್ನು 10ಮೇ 2026 ರೊಳಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, […]

