JANANUDI.COM NETWORK ಕಾಲಿಗೆ ಕೋಳ ಬಿಗಿದು ಪಂಚ ಗಂಗಾವಳಿಯಲ್ಲಿ ಈಜಿನ ದಾಖಲೇ ಬರೆದ ಸಂಪತ್ ಖಾರ್ವಿ ಕುಂದಾಪುರ , ಸ್ಥಳೀಯ ಖಾರ್ವಿ ಕೇರಿಯ ಈಜು ಪ್ರತಿಭೆ ಕುಂದಾಪುರ ಭಂಡಾರ್ ಕಾರ್ ಕಾಲೇಜಿನ ಪದವಿ ವಿದ್ಯಾರ್ಥಿ ಸಂಪತ್ ಡಿ ಖಾರ್ವಿ ಅವರು ನಿನ್ನೆ ಬಸ್ರುರು ರೈಲು ಸೇತುವೆ ಬಳಿಯಿಂದ ಗಂಗೊಳ್ಳಿ ಕಡವಿನ ತನಕ ಕಾಲುಗಳಿಗೆ ಸರಪಳಿಗಳನ್ನು ಬಿಗಿದು ಈಜುವ ಮೂಲಕ ನೂತನ ವೈಯುಕ್ತಿಕ ದಾಖಲೆ ನಿರ್ಮಿಸಿದ್ದಾರೆ. ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ಖಾರ್ವಿಯವರು ಸಂಪತ್ ಅವರ ಕಾಲುಗಳಿಗೆ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಪಂಚಾಯತಿ ನೂತನ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ತಮ್ಮ ಗೆಲುವಿನ ಬೆಂಬಲಕ್ಕೆ ಸಚಿವ ಹೆಚ್. ನಾಗೇಶ್ಗೆ ಸನ್ಮಾನ ಕೋಲಾರ: ಕೋಲಾರ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ರವರು ತಮ್ಮ ಗೆಲುವಿಗೆ ಬೆಂಬಲ ನೀಡಿದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ನಾಗೇಶ್ ರವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಗೆ ಹೆಚ್ಚಿನ ಅನುದಾನ ಪಡೆಯುವ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಿದ್ಯಾರ್ಥಿ ದೆಸೆಯ ಪ್ರತಿ ಕ್ಷಣವನ್ನು ಸದುಪಯೋಗಪಡಿಸಿಕೊಳ್ಳಿ – ಡಾ. ಎಸ್.ಎನ್.ವಿಜಯ್ ಕುಮಾರ್ ಕೋಲಾರ: ವಿದ್ಯಾರ್ಥಿದೆಸೆಯ ಪ್ರತಿ ಕ್ಷಣವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಎಸ್.ಎನ್.ವಿಜಯ್ಕುಮಾರ್ ಅವರು ತಿಳಿಸಿದರು. ಎಸ್.ಎನ್.ಆರ್ ಇನ್ಸಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸೆಸ್, ಕೋಲಾರ ಇವರ ವತಿಯಿಂದ ಹಮ್ಮಿಕೊಂಡಿದ್ದ “ರಕ್ತದಾನದ ಮಹತ್ವದ ಬಗ್ಗೆ” ಕುರಿತು ಕಾರ್ಯಗಾರ ಹಾಗೂ ನಾಲ್ಕನೇ ತಂಡದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸಿ.ಎಸ್ ವೆಂಕಟೇಶ್ ಆಯ್ಕೆ ಕೋಲಾರ:ಕೋಲಾರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಸಿ.ಎಸ್ ವೆಂಕಟೇಶ್ ಅವರು ಆಯ್ಕೆಯಾದರು. ಇಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹರ್ಷಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ 07 ಅಭ್ಯರ್ಥಿಗಳು 09 ನಾಮಪತ್ರಗಳನ್ನು ಸಲ್ಲಿಸಿದ್ದರು. ಸಿ.ಎಸ್ ವೆಂಕಟೇಶ್, ಗೀತಮ್ಮ (02 ನಾಮಪತ್ರ), ಕೆ.ಎಸ್ ನಂಜುಡಪ್ಪ, ನಾರಾಯಣಸ್ವಾಮಿ, ಅರವಿಂದ್ ಕುಮಾರ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಗ್ರಂಥಾಲಯ ಎನ್ನುವುದು ಎಲ್ಲಾ ಮಾಹಿತಿ ಕೊಡುವ ಒಂದು ಸಂಗ್ರಹಾಲಯ -ಜೆ.ಮಂಜುನಾಥ್. ಕೋಲಾರ: ನಾವೆಲ್ಲರೂ ಮಾಹಿತಿ ಪ್ರಪಂಚದಲ್ಲಿ ಬದುಕುತ್ತಿದ್ದೇವೆ. ಗ್ರಂಥಾಲಯ ಎನ್ನುವುದು ಎಲ್ಲಾ ಮಾಹಿತಿ ಕೊಡುವ ಒಂದು ಸಂಗ್ರಹಾಲಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಜೆ.ಮಂಜುನಾಥ್ ಅವರು ತಿಳಿಸಿದರು. ಇಂದು ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೋಲಾರ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2019 ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನವು ಬೆಳೆದಂತೆ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ,ನ.28: ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ ಕೋಲಾರ,ನ.28: ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ ಪುಷ್ಪಲತಾರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸುವ ಸಂಬಂಧ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಿಶ್ವದಲ್ಲೇ ಶ್ರೇಷ್ಠ ಹಾಗೂ ಬೃಹತ್ ಸಂವಿಧಾನ ಭಾರತ ಸಂವಿಧಾನ – ಹೆಚ್.ನಾಗೇಶ್ ಕೋಲಾರ: ಭಾರತ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಹಾಗೂ ಬೃಹತ್ ಸಂವಿಧಾನವಾಗಿದ್ದು, ಡಾ.ಬಿ.ಆರ್ ಅಂಬೇಡ್ಕರ್ ಅವರು ಇದರ ರಚನೆ ಮಾಡಿ ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ್ದಾರೆ ಎಂದು ಅಬಕಾರಿ ಮತ್ತು ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪೊಲೀಸ್ ಇಲಾಖೆಯಿಂದ ಸಂವಿಧಾನ ದಿನ ಪ್ರತಿಜ್ಞಾ ವಿಧಿ ಸ್ವೀಕಾರ ಆಸ್ಪತ್ರೆ ಸಿಬ್ಬಂದಿಯ ಮೇಲೆ ಹಲ್ಲೆ, ಆರೋಪಿ ನ್ಯಾಯಾಂಗ ಬಂಧನ ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ ಭಾರತದ ಸಂವಿಧಾನ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರ ಅಧ್ಯಕ್ಷತೆಯಲ್ಲಿ ನಡೆದ ಭಾರತದ ಸಂವಿಧಾನ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಭಾರತವನ್ನು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರದಲ್ಲಿ ಮುಖ್ಯಮಂತ್ರಿಗಳ ಮತ್ತು ರಾಷ್ಟ್ರಪತಿ ಪದಕ ಮುಖ್ಯಪೇದೆ ಬಿ.ಎನ್.ಮೆಹಬೂಬ್ರಿಗೆ ಸನ್ಮಾನ ಕೋಲಾರದಲ್ಲಿ ಮಣಪ್ಪುರಂ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮತ್ತು ರಾಷ್ಟ್ರಪತಿ ಪದಕ ವಿಜೇತ ನಗರದ ಸಂಚಾರಿ ಠಾಣೆ ಮುಖ್ಯಪೇದೆ ಬಿ.ಎನ್.ಮೆಹಬೂಬ್ರನ್ನು ಅವರ ಪ್ರಾಮಾಣಿಕ ಸೇವೆ ಗಮನಿಸಿ ಚಿನ್ನದ ನಾಣ್ಯ ನೀಡಿ ಸನ್ಮಾನಿಸಲಾಯಿತು.

