ಬೆಂಗಳೂರು, ಫೆಬ್ರವರಿ 27: ನಂಬಿಕೆ ಮತ್ತು ನಾಗರಿಕ ಜವಾಬ್ದಾರಿಯನ್ನು ಸಂಯೋಜಿಸಿದ ಮಹತ್ವದ ಸಭೆಯಲ್ಲಿ, ಕರ್ನಾಟಕದ ಕ್ಯಾಥೋಲಿಕ್ ಕೌನ್ಸಿಲ್ (CCK) ಬೆಂಗಳೂರಿನ ಸುಬೋಧನ (KROSS) ನಲ್ಲಿ ತನ್ನ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು., ರಾಜ್ಯದ 14 ಡಯಾಸಿಸ್ಗಳಿಂದ ಸುಮಾರು 90 ಪ್ರತಿನಿಧಿಗಳನ್ನು ಒಟ್ಟುಗೂಡಿದರು. 2009 ರಲ್ಲಿ ಸ್ಥಾಪನೆಯಾದ ಕರ್ನಾಟಕದ ಕ್ಯಾಥೋಲಿಕ್ ಕೌನ್ಸಿಲ್, ಕರ್ನಾಟಕದಲ್ಲಿ ಸಂಘಟಿತ ಧರ್ಮಗುರುಗಳು ಮತ್ತು ಸಾಮಾಜಿಕ ತೊಡಗಿಸಿಕೊಳ್ಳುವಿಕೆಯ ಮೇಲೆ ಕೇಂದ್ರೀಕರಿಸುವ ಬಿಷಪ್ಗಳು, ಧರ್ಮಗುರುಗಳು, ಧಾರ್ಮಿಕ ಮತ್ತು ಸಾಮಾನ್ಯ ಭಕ್ತರ ಪ್ರತಿನಿಧಿಗಳ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಸಂವಿಧಾನ ಮತ್ತು […]
ಟೆಹ್ರಾನ್, ಫೆ.28: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆ ಇಸ್ರೇಲ್ ಶನಿವಾರ ಮುಂಜಾನೆ ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸಿದೆ.ಅಮೆರಿಕದ ಎಚ್ಚರಿಕೆಗಳ ಬೆನ್ನಲ್ಲೇ ನಡೆದ ಈ ದಾಳಿ, ಇರಾನ್ – ಇಸ್ರೇಲ್ ನಡುವಿನ ನೇರ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದ್ದು, ಪೂರ್ಣ ಪ್ರಮಾಣದ ಯುದ್ಧದ ಭೀತಿ ಉಂಟಾಗಿದೆ. ಪರಿಸ್ಥಿತಿ ಗಂಭೀರವಾಗಿದೆ. ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅಧಿಕೃತ ಘೋಷಣೆ ನೀಡುತ್ತಾ, “ಮುನ್ನೆಚ್ಚರಿಕಾ ಕ್ರಮವಾಗಿ” ಇರಾನ್ ವಿರುದ್ಧ ದಾಳಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಇರಾನ್ […]
ಶಿವಮೊಗ್ಗ, ಫೆ.27: ಸೈಬರ್ ಅಪರಾಧಗಳಿಗೆ ಸಂಘಟಿತ ರೀತಿಯಲ್ಲಿ ಬ್ಯಾಂಕ್ ಖಾತೆಗಳನ್ನು ಒದಗಿಸಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದ್ದ ಮಹಾಜಾಲವನ್ನು ಶಿವಮೊಗ್ಗ ಪೊಲೀಸರು ಬಯಲಿಗೆಳೆದಿದ್ದಾರೆ.15 ಬೇನಾಮಿ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಗಳ ಮೂಲಕ ಸುಮಾರು ₹82 ಕೋಟಿ ಹಣ ವಂಚನೆಗೊಳಗಾಗಿರುವ ಅಚ್ಚರಿ ಮಾಹಿತಿ ತನಿಖೆಯಲ್ಲಿ ಹೊರಬಿದ್ದಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲೆಯ ಶರಾವತಿ ನಗರದ ಜಗದೀಶ್ (43), ಚಿಕ್ಕಮಗಳೂರಿನ ಅರ್ಷಾದ್ (39) ಹಾಗೂ ಶಿವಮೊಗ್ಗ ಹೊಸಮನೆ ಬಡಾವಣೆಯ ಅನಂತ (34)ರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ವಿವಿಧ […]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೇರಳ ಮಾದಕವಸ್ತು ವಿರೋಧಿ ವಿಶೇಷ ಕಾರ್ಯಪಡೆ ಭರ್ಜರಿ ಕಾರ್ಯಾಚರಣೆ ನಡೆಸಿ, ಅಂತರರಾಜ್ಯ ಡ್ರಗ್ ಜಾಲಕ್ಕೆ ಸಂಬಂಧಿಸಿದ ಕುಖ್ಯಾತ ಪೆಡ್ಲರ್ನನ್ನು ಬಂಧಿಸಿದೆ.ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ.ಖಚಿತ ಮಾಹಿತಿಯ ಮೇರೆಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರದ ರಮೇಶ್ ರೆಡ್ಡಿ ಬಡಾವಣೆಯ ಮನೆಯೊಂದರ ಮೇಲೆ ದಾಳಿ ನಡೆಸಿದ ತಂಡ, ಸುಮಾರು ₹1 ಕೋಟಿ ಮೌಲ್ಯದ 2 ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದೆ. ದಾಳಿಯ ವೇಳೆ 2 ಕೆಜಿ ತೂಕದ ನಾಲ್ಕು ಪ್ಯಾಕೆಟ್ಗಳು ಹಾಗೂ […]
ರಿಯಾದ್: ಸೌದಿ ಅರೇಬಿಯಾದ ತೈಫ್ ಬಳಿಯ ಮಹ್ಲುಮಿಯಾದಲ್ಲಿ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಇಬ್ಬರು ಮಲಯಾಳಿಗಳು ಸಾವನ್ನಪ್ಪಿದ್ದಾರೆ. ರಿಯಾದ್ನ ಹೋತಾದಿಂದ ಮೆಕ್ಕಾಗೆ ಹೊರಟಿದ್ದ ಬಸ್ ಟೈರ್ ಸ್ಫೋಟಗೊಂಡು ಉರುಳಿಬಿದ್ದಿದೆ. ಮೃತರನ್ನು ಮಲಪ್ಪುರಂನ ನೀಲಂಬೂರು ಮೂಲದ ಇಸ್ಮಾಯಿಲ್ ಮತ್ತು ಕೊಲ್ಲಂನ ಪಠಾಣಪುರಂ ಮೂಲದ ಶೀಬಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸುಮಾರು ಇಪ್ಪತ್ತು ಮಲಯಾಳಿಗಳು ಗಾಯಗೊಂಡಿದ್ದಾರೆ. ಬಸ್ನಲ್ಲಿ ವಿವಿಧ ರಾಜ್ಯಗಳ ಅನೇಕ ಜನರು ಇದ್ದರು.
ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ಕರ್ನಾಟಕ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಫೆ.೨೩ ರಂದು ಮೊಗವೀರ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಿದರು. ಇದೇ ಸಂದರ್ಭದಲ್ಲಿ ಅರಣ್ಯಹಕ್ಕು ಹೋರಾಟಗಾರರ ವೇದಿಕೆಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅರಣ್ಯ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಗ್ರ ಮಾತುಕತೆ ನಡೆಸಲಾಯಿತು. ಈ ಸಭೆಯಲ್ಲಿ ಸಚಿವರಾದ ಶ್ರೀ ಮಂಕಾಳ ವೈದ್ಯ ಅವರು ಉಪಸ್ಥಿತರಿದ್ದರು.
ಕುಂದಾಪುರ; “ಸಾಹಿತಿ, ವಾಗ್ಮಿ, ವಿಮರ್ಶಕ, ಅಂಕಣಗಾರರಾಗಿ ಸಾಹಿತ್ಯ ಲೋಕಕ್ಕೆ ಬಹು ದೊಡ್ಡ ಕೊಡುಗೆ ನೀಡಿದವರು ಕೋಣಿ ಶಿವಾನಂದ ಕಾರಂತರು. ಅಧ್ಯಯನಶೀಲರಾಗಿ ತಮ್ಮ ಪಾಂಡಿತ್ಯದಿಂದ ಯುವ ಬರಹಗಾರರಿಗೆ ಪ್ರೇರಣೆ ತುಂಬುತ್ತಿದ್ದ ಕಾರಂತರು ಹಲವಾರು ಲೇಖಕರ ಕೃತಿಗಳ ವಿಮರ್ಶೆ ಮಾಡಿ ತಿದ್ದಿ ಪ್ರೋತ್ಸಾಹಿಸುವ ಮೂಲಕ ಸ್ಫೂರ್ತಿ ತುಂಬುತ್ತಿದ್ದರು. ಅವರ ಪ್ರಕಟಿತ ಕೃತಿಗಳು ಅಮೂಲ್ಯವಾಗಿದ್ದವು. ಗಂಗೊಳ್ಳಿಯಲ್ಲಿ ನಡೆದ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ “ಗಂಗಾವಳಿ” ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಕೋ. ಶಿವಾನಂದ ಕಾರಂತರ ಕುರಿತು ಪುಸ್ತಕ ಪ್ರಕಟಣೆ ಮಾಡಿದ್ದೆವು. ಅವರ […]
ಶ್ರೀನಿವಾಸಪುರ ಪಟ್ಟಣದಲ್ಲಿ ರಂಜಾನ್ ಮಾಸದ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳ ಜೊತೆಗೆ ವ್ಯಾಪಾರ ಚಟುವಟಿಕೆಗಳೂ ಗರಿಗೆದರಿವೆ. ವಿಶೇಷವಾಗಿ ಇಫ್ತಾರ್ ವೇಳೆ ಸೇವಿಸುವ ತಿಂಡಿಗಳಲ್ಲಿ ಪ್ರಮುಖ ಸ್ಥಾನ ಪಡೆದಿರುವ ಸಮೋಸಗಳಿಗೆ ಅಪಾರ ಬೇಡಿಕೆ ಕಂಡುಬರುತ್ತಿದೆ. ಸಣ್ಣ ಪಟ್ಟಣವಾಗಿದ್ದರೂ ಪ್ರತಿದಿನ ಸರಾಸರಿ 25 ಸಾವಿರದಿಂದ 30 ಸಾವಿರದವರೆಗೆ ಸಮೋಸಗಳು ಮಾರಾಟವಾಗುತ್ತಿರುವುದು ಗಮನಾರ್ಹವಾಗಿದೆ. ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದವರು ಪ್ರಾತಃಕಾಲದಿಂದ ಸೂರ್ಯಾಸ್ತದವರೆಗೆ ಉಪವಾಸ ಆಚರಿಸಿ, ಸಂಜೆ ಮಗರಿಬ್ ನಮಾಜಿನ ಬಳಿಕ ಇಫ್ತಾರ್ ಮೂಲಕ ಉಪವಾಸ ಮುರಿಯುತ್ತಾರೆ. ಖರ್ಜೂರ, ಹಣ್ಣುಹಂಪಲು, ರೂಹ್ ಅಫ್ಜಾ ಪಾನೀಯ, […]
ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮಕ್ಕೆ ಚಾಲನೆ : ಅರ್ಹರಿಗೆ ಸವಲತ್ತು ತಲುಪಿಸುವುದು ನನ್ನ ಗುರಿ – ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಶ್ರೀನಿವಾಸಪುರ : ಬಡಬಗ್ಗರ ಪರ ಕಾಳಜಿ ಹೊಂದಿರುವ ನಾನು, ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳು ಅರ್ಹರಿಗೆ ತಲುಪುವಂತೆ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ತಾಲೂಕಿನ ಅಡ್ಡಗಲ್ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ನಡೆದ ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐದು ಬಾರಿ ಶಾಸಕನನ್ನಾಗಿ ಮಾಡಿದ […]

