Reported and photography by Ganesh Nayak ಕಲ್ಯಾಣಪುರ; ಮಿಲಾಗ್ರಿಸ್ ಕಾಲೇಜ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕವು ಉಡುಪಿಯ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಸಹಯೋಗದೊಂದಿಗೆ ಏಪ್ರಿಲ್ 10, 2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸ್ವಯಂಸೇವಕರ ಸಕ್ರಿಯ ಭಾಗವಹಿಸುವಿಕೆ ಕಂಡುಬಂದಿತು, ಇದರ ಪರಿಣಾಮವಾಗಿ 66 ಯೂನಿಟ್ ರಕ್ತ ಸಂಗ್ರಹವಾಯಿತು. ಕಾಲೇಜಿನ ಆಡಿಯೋ ವಿಶುವಲ್ ಹಾಲ್‌ನಲ್ಲಿ ಗಣ್ಯ ಅತಿಥಿಗಳು, ಅಧ್ಯಾಪಕರು ಮತ್ತು ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದ […]

Read More

ಮಂಗಳೂರು; ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಸಹೋದರಿ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್‌ನ ಧರ್ಮಗುರು ರೆ. […]

Read More

ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜ್‌ಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆಗೆ ಕುಳಿತಿದ್ದ 80 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಬಂದಿದೆ. ಫಲಿತಾಂಶ ಗಳಿಕೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದು 46 ಬಾಲಕಿಯರು ಹಾಗೂ 34 ಬಾಲಕರು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಈ ಎಸ್ ಸಾನಿಕಾ 600 ಅಂಕಕ್ಕೆ 588 ಅಂಕ ಗಳಿಸಿ ಶೇ. 98 ಫಲಿತಾಂಶ ಗಳಿಸಿದ್ದಾರೆ. ಕಲಾ ವಿಭಾಗದ ಎಂ ಜಿ ಶಮಿತಾ 600 ಅಂಕಕ್ಕೆ 582 ಅಂಕ ಗಳಿಸಿ […]

Read More

ಕುಂದಾಪುರ ; ಆರ್.ಎನ್ ಶೆಟ್ಟಿ ಸಂಯುಕ್ತ ಪ. ಪೂ. ಕಾಲೇಜು, ಪಿಯು ಅಂತಿಮ ಪರೀಕ್ಷೆಯಲ್ಲಿ ಶೇ. 99.1 ಫಲಿತಾಂಶ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ssಸಂಯುಕ್ತ ಪದವಿಪೂರ್ವ ಕಾಲೇಜು ಶೇ. 99.1 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 328 ವಿದ್ಯಾರ್ಥಿಗಳಲ್ಲಿ 325 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 140 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 161 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸ್ನೇಹಾ 592 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ಸ್ಥಾನಿಯಾಗಿ, ಕಾಲೇಜಿಗೆ […]

Read More

ಕುಂದಾಪುರ: ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ ಹೆಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ.ಈ ವರ್ಷ ಸಣ್ಣಕಥೆಯನ್ನು ಪರಿಗಣಿಸಿದ್ದು , 2024 ಮತ್ತು 2025ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು ಮತ್ತು ಲೇಖಕರು ಸಣ್ಣ ಕಥಾಸಂಕಲನದ ನಾಲ್ಕು ಪ್ರತಿಗಳನ್ನು 10ಮೇ 2026 ರೊಳಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, […]

Read More

ಹೊ ವಿಶ್ವ್ ದಾಖ್ಲೊ ಖಂಡಿತ್ ಘಡ್ತಲೊ – ಲಾಂಛನ್ ಮೆಕ್ಳಿಕ್ ಕರ್ನ್ ಭಲಾಯ್ಕೆ ಮಂತ್ರಿ ದಿನೇಶ್ ಗುಂಡೂರಾವ್ “This Record Will Definitely Happen” – Dinesh Gundu Rao Upon Unveiling the Logo ಮಂಗಳೂರು ; ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು […]

Read More

ಕೋಲಾರ : ಜಿಲ್ಲೆಯಲ್ಲಿ ಆನ್‌ಲೈನ್ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೋಲಾರ ಜಿಲ್ಲಾ ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಂಚಿರುವ ವಿಶೇಷ ಸಂದೇಶ ಇದೀಗ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಬಾಲ್ ಕಳೆದು ಹೋದರೆ ಸಿಗುತ್ತದೆ, ಆದರೆ ಬಾಳೇ ಕಳೆದು ಹೋದರೆ ಮರಳಿ ಸಿಗುವುದಿಲ್ಲ ಎಂಬ ತೀವ್ರ ಎಚ್ಚರಿಕೆಯ ಮಾತುಗಳನ್ನು ಒಳಗೊಂಡಿರುವ ಈ ಜಾಗೃತಿ ಪೋಸ್ಟರ್, ವಿಶೇಷವಾಗಿ ಯುವಜನರಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ. ಕ್ರಿಕೆಟ್ ಆಟವನ್ನು ಆಧಾರವಾಗಿ […]

Read More

2025 26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಬೈಂದೂರು ರಾವತನ್ಕಟ್ಟೆ ನಿವಾಸಿ ಜಿನಲ್ ಫೆರ್ನಾಂಡಿಸ್ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಕುಂದಾಪುರದ ಹೆಮ್ಮಾಡಿಯ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಯಾಗಿರುವ ಇವಳು ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 576 ಅಂಕಗಳನ್ನು ಗಳಿಸುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ 96 ಶೇಕಡ ಪ್ರತಿಶತದೊಂದಿಗೆ ತೆರ್ಗೆಗಡೆಯಾಗಿರುತ್ತಾರೆ. ಇವಳು ಬೈಂದೂರು ರಾಹುತಿನ ಕಟ್ಟೆ ನಿವಾಸಿ ಸ್ಟೇಫನ್ ರಾಜ್ ಮತ್ತು ಜ್ಯೋತಿ ಫೆರ್ನಾಂಡಿಸ್ ದಂಪತಿಯ ಸುಪುತ್ರಿಯಾಗಿದ್ದಾಳೆ.   ಝೀನಲ್ ಫೆರ್ನಾಂಡಿಸ್ ಇವಳಿಗೆ ಹಿಂದೆ […]

Read More

ಕೋಲಾರ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಕು. ಎಂ. ಚಿರಂತನ ಅವರು 596 ಅಂಕಗಳನ್ನು ಗಳಿಸಿ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ನಿರಂತರ ಪರಿಶ್ರಮ, ದೃಢ ನಿಷ್ಠೆ ಮತ್ತು ಶಿಸ್ತಿನ ಅಧ್ಯಯನದ ಫಲವಾಗಿ ಚಿರಂತನ ಅವರು ಈ ಉನ್ನತ ಸಾಧನೆ ಮಾಡಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರ ಸಾಧನೆಗೆ ತಂದೆ ಮಾರುತಿ ತಾಯಿ ಕೆಂಪಮ್ಮ ಮತ್ತು […]

Read More