ಕುಂದಾಪುರ: ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಸೆಪ್ಟಂಬರ್ 13 ರಂದು ಹಣ್ಣುಹಂಪಲು ವಿತರಿಸುವ ಮೂಲಕ ಕೇಂದ್ರ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರ್ ಪ್ರಥಮ ಪುಣ್ಯತಿಥಿಯನ್ನು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗವರು ಆಚರಿಸಿದರು. ಕುಂದಾಪುರದ ಸರಕಾರಿ ಆಸ್ಪತ್ರೆಯ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲು ಗಳನ್ನು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗವರು ವಿತರಿಸಿದರು. ಈ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಪ್ರಮುಖರಾದ ಮಂಜಿತ್ ನಾಗರಾಜ್, ಬರ್ನಾಡ್ ಡಿಕೋಸ್ತಾ, ಪವನ್ ಬಂಗೇರ, ಕಿಶನ್, ಭರತ್ ರಾವ್, […]
ಬಾಗಲಕೋಟೆ: ದಿನಾಂಕ 11-09-2022 ರಂದು ಬಾಗಲಕೋಟೆ ನಗರದ ಕಲಾ ಭವನದಲ್ಲಿ ಹಿರಿಯ ದಲಿತ ಚಿಂತಕರು ಹಾಗೂ ಸಂಸ್ಥಾಪಕ ಅಧ್ಯಕ್ಷರು ಪ್ರಜಾ ಪರಿವರ್ತನ ವೇದಿಕೆಯ ಪರಶುರಾಮ ಮಹಾರಾಜನವರ್ ಕಾಂಗ್ರೆಸ್ ಪಕ್ಷಕ್ಕೆ ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಸಾಹುಕಾರ ಸಮ್ಮುಖದಲ್ಲಿ ಸೇರ್ಪಡೆಯಾದರು.
ಕುಂದಾಪುರ, ಸೆ.9: ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಎಂಟು ಶಾಖೆಗಳಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗಾಗಿ ಕೌಶಲ್ಯ ಅಭಿವೃದ್ಧಿ, ದಕ್ಷತೆ, ಹಾಗೂ ಗ್ರಾಹಕರ ಸಂಬಂಧ ಕಾರ್ಯಾಗಾರ ನಡೆಯಿತು. ಹೋಟೆಲ್ ಶಿವಪ್ರಸಾದ್ ಗ್ರಾಂಡ್ ನ ಸಭಾಂಗಣದಲ್ಲಿ ನಡೆದ ಈ ಕಾರ್ಯಗಾರವನ್ನು ಸಂಸ್ಥೆಯ ಮಾರ್ಗದರ್ಶಕರಾದ ಅತೀ ವಂದನೀಯ ಸ್ಟ್ಯಾನಿ ತಾವ್ರೋ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು. ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರೋಟೇರಿಯನ್ ಪಿ. ಡಿ. ಜಿ. ಅಭಿನಂದನ್ ಶೆಟ್ಟಿ, ಹೋಟೆಲ್ ಉದ್ಯಮಿ, ಕುಂದಾಪುರ. ವಾಸುದೇವ ಕಾರಂತ್, ಸಿಂಡಿಕೇಟ್ ಬ್ಯಾಂಕ್ […]
ಕುಂದಾಪುರ/ಜಗಳೂರು(ಸೆ.09): ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಮನನೊಂದ ಕುಂದಾಪುರದ ವಡೇರಹೋಬಳಿ ಜೆಎಲ್ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬವರ ಪುತ್ರ ಸಾಯೀಶ್ ಶೆಟ್ಟಿ(18) ಕುಂದಾಪುರ ಸಂಗಮ್ ಬಳಿಯ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ನೀಟ್ ಪರೀಕ್ಷೆ ಫಲಿತಾಂಶ ಬುಧವಾರ ರಾತ್ರಿಯಷ್ಟೇ ಪ್ರಕಟವಾಗಿತ್ತು. ಶಿವಮೊಗ್ಗದ ಕಾಲೇಜಲ್ಲಿ ಓದುತ್ತಿದ್ದ ಸಾಯೀಶ್ ಕಲಿಕೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದ್ದ. ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಮತ್ತೊಂದು ಪ್ರಕರಣ ಇದೇ ರೀತಿ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರದ ಹಿನ್ನೆಲೆಯಲ್ಲಿ ದಾವಣಗೆರೆ […]
ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. […]
ಕುಂದಾಪುರ: ಅಗಸ್ಟ್ 18 ರಿಂದ 22 ರ ವರೆಗೆ ನಡೆದ ಶಿವಮೊಗ್ಗ ಓಪನ್ 3 ನೇ ಅಂತರಾಷ್ಟ್ರೀಯ ಕರಾಟೆ 22 ರ ಪಂದ್ಯಾವಳಿಯಲ್ಲಿ ಬ್ಲ್ಯಾಕ್ ಬೆಲ್ಟ್ ವಿಘ್ನೇಶ್ ಮಧುಸೂದನ್ ನಾಯಕ್ ಹುಣ್ಸೆಮಕ್ಕಿ ಇವನು ಕಟಾ ಮತ್ತು ಕುಮೀಟ್ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾನೆ. ಇವನು ಮಧುಸೂದನ್ ಮತ್ತು ಶಶಿಕಲಾ ದಂಪತಿಯ ಪುತ್ರನಾಗಿದ್ದಾನೆ.
ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. ಆಗಸ್ಟ್ 23 ಹಾಗೂ 24 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.
ಕುಂದಾಪುರ. ಅ.16:ನಮ್ಮ ದೇಶದ ಸ್ವಾತಂತ್ರ್ಯ ಸಂಭ್ರಮದ ಅಮ್ರತ ಮಹೋತ್ಸವದ ಪ್ರಯುಕ್ತ ಕುಂದಾಪುರ ಮತ್ತು ಕೋಟ ಬ್ಲಾಕಿನ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ 10 ಸಾವಿರ ಲಡ್ಡುಗಳ ವಿತರಣೆಯನ್ನು ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ವಿತರಣೆ ಮಾಡಿತು. ಮಾಜಿ ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿಯವರು ತಮ್ಮ ನಿವಾಸದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಇದಕ್ಕೆ ಸಹಕಾರ ನೀಡಿದ ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದಲ್ಲಿ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ ನಾಗರಾಜ್, ಮಹ್ಮಮದ್ ಶೀಸ್, ಕಿಶನ್ ಖಾರ್ವಿ, […]
ಕುಂದಾಪುರ,ಅ.15: ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ, ಸಮುದಾಯ ಕುಂದಾಪುರ, ರೋಜರಿ ಕ್ರೆಡಿಟ್ ಕೊ-ಅಪರೇಟವ್ ಸೊಸೈಟಿ, ಕುಂದಾಪುರ, ಇವರ ಸ೦ಯುಕ್ತ ಅಶ್ರಯದಲ್ಲಿ ಸ್ವಾತಂತ್ರ್ಯ ಅಮ್ರತ ಮಹೋತ್ಸ್ವವದ ಪ್ರಯುಕ್ತ ಸಂತ ಮೇರಿ ಪ.ಪೂ.ಕಾಲೇಜ್ ಸಭಾಂಗಣದಲ್ಲಿ ಎರಡು ದಿನಗಳ ಮಹೋತ್ಸವ ಕಾರ್ಯಕ್ರಮ ನಡೆಯಿತು. ಅ.14 ರಂದು ಕುಂದಾಪುರ ಮತ್ತು ಬೈಂದೂರು ವಲಯಗಳ ವಿದ್ಯಾರ್ಥಿಗಳಿಗಾಗಿ ದೇಶ ಭಕ್ತಿ ಗೀತೆ, ಹಾಡು ಭಾಷಣ ಸ್ಪರ್ಧೆಗಳು ನಡೆದವು.ಅ.15 ರಂದು ಸಭಾಕಾರ್ಯಕ್ರಮ ನಡೆಯಿತು. ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕರು ಹೋಲಿ […]