ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (595) ಶೇ.99.16 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ 5 ನೇ ಸ್ಥಾನಕ್ಕೆ ಜಿಗಿದು ಕಾಲೇಜಿನಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ವಿಜ್ಞಾನ ವಿಭಾಗದ ಪ್ರಥಮ ಫಲಿತಾಂಶದಲ್ಲಿ ತನುಶ್ರೀ (593) ಶೇ.98.83 ಅಂಕ ಗಳಿಸಿ ರಾಜ್ಯದಲ್ಲಿ 7 ಸ್ಥಾನ ಪಡೆದಿದ್ದರು. ಈ ವೇಳೆ ಚಿನ್ಮಯ್ ಜಿ.ಕೆ. ಅವರು ಮರು ಮೌಲ್ಯಮಾಪನಕ್ಕೆ ಒಳಪಡಿಸಿದಂತೆ ಏಪ್ರಿಲ್ 29 […]

Read More

ಕಲ್ಯಾಣಪುರದ ಮಿಲಾಗ್ರೀಸ್ ಆಂಗ್ಲ ಮಾಧ್ಯಮ ಶಾಲೆಯು 2025-2026 ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ಪಡೆದುಕೊಂಡಿದೆ . 72 ವಿದ್ಯಾರ್ಥಿಗಳು ಪರೀಕ್ಷೆ ಹಾಜರಿದು, 38 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಮತ್ತು 33 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. AFSAH ನಹೀದ್ 620 ಅಂಕಗಳನ್ನು ಗಳಿಸಿದರು – (99.20%) ಮತ್ತು ರಾಜ್ಯದಲ್ಲಿ 6 ನೇ ರ‍್ಯಾಂಕ್ ಪಡೆದಿರುತ್ತಾರೆ, ಜಿಶಾ ಜಿತೇಶ್ 618 ಅಂಕಗಳನ್ನು (98.88%) ಗಳಿಸಿ ರಾಜ್ಯದಲ್ಲಿ 8 ನೇ ರ‍್ಯಾಂಕ್ […]

Read More

ಉಡುಪಿ: ಜಾತಿ ಧರ್ಮದ ಗೋಡೆಗಳನ್ನು ಕೆಡವಿ ಸರ್ವ ಜನಾಂಗದ ಶಾಂತಿಯ ತೋಟವನ್ನು ಕಟ್ಟುವ ವಿಶೇಷ ಸಾಧನೆಯನ್ನು ಮಾಡುವ ಮೂಲಕ ತೊಟ್ಟಂ ಪರಿಸರ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಇದಕ್ಕೆ ಪ್ರಮುಖ ಕಾರಣಕರ್ತರಾದವರು ತೊಟ್ಟಂ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಎಂದು ಸರ್ವಧರ್ಮ ಸಮನ್ವಯ ಸಮಿತಿಯ ಅಧ್ಯಕ್ಷರಾದ ರಮೇಶ್ ತಿಂಗಳಾಯ ಅಭಿಪ್ರಾಯಪಟ್ಟರು.ಅವರು ಭಾನುವಾರು ಸತತ ನಾಲ್ಕು ವರ್ಷಗಳ ಸೇವೆಯನ್ನು ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಸಲ್ಲಿಸಿ ಪ್ರಸ್ತುತ ಉಡುಪಿ ಶೋಕಮಾತಾ ಇಗರ್ಜಿಯ ಪ್ರಧಾನ ಧರ್ಮಗುರುಗಳಾಗಿ ವರ್ಗಾವಣೆಗೊಂಡ ವಂ|ಡೆನಿಸ್ ಡೆಸಾ ಅವರಿಗೆ ತೊಟ್ಟಂ […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿ ದಿನಾಂಕ 25 ಏಪ್ರಿಲ್ 2026ರಂದು ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಸುಂದರ್ ರಾಜ್, ಸಿಎಫ್ಓ,ಎನ್ ಎಕ್ಸ್ ಪಿ ಸೆಮಿಕಂಡಕ್ಟರ್ ಇವರು ಆಗಮಿಸಿ ಇಂದಿನ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಕ್ಕೆ ಸರಿಸಾಟಿಯಾಗಿ ಕ್ಷಮತೆಯನ್ನು  ಬೆಳೆಸಿಕೊಂಡಾಗ ಮಾತ್ರ ಉದ್ಯೋಗಾವಕಾಶಗಳು ಸಿಗಲು ಸಾಧ್ಯ ಎಂದು ತಿಳಿಸಿದರು . ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಇವರು ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿದರು.  ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಇವರು ಕಾಲೇಜಿನ […]

Read More

ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು. ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಧರ್ಮ ಪ್ರಾಂತ್ಯದ ವಿಶ್ರಾಂತ ಧರ್ಮಾದ್ಯಕ್ಷರಾದ ಅ. ವoದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ, ಜಾಗತಿಕ ಮತ್ತು ಅಂತರಾಷ್ಟ್ರೀಯ ಭಾಷೆಗಳ ನಡುವೆ ಪ್ರಾದೇಶಿಕ ಭಾಷೆಗಳ ಪ್ರಭಾವ ಕಡಿಮೆಯಾಗುತ್ತಿದೆಯಾದರೂ, ಕೊಂಕಣಿ ಸಾಹಿತ್ಯ ಅಕಾಡೆಮಿಯು ಭಾಷೆಯನ್ನು ಉಳಿಸುವಲ್ಲಿ ದೀಪದಂತೆ ಪ್ರಜ್ವಲಿಸಲು ಪ್ರಯತ್ನಿಸುತ್ತಿರುವುದು ಅಭಿನಂದನೀಯ. […]

Read More

ಬೈಂದೂರು ಹೋಲಿಕ್ರಾಸ್‌  ಚರ್ಚಿನಲ್ಲಿ ಕಳೆದ 7 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ವಂದನೀಯ ಧರ್ಮಗುರು  ವಿನ್ಸೆಂಟ್‌ ಕುವೆಲ್ಲೊ ರವರು  ಶಿರ್ವ ವಲಯದ ಮುದರಂಗಡಿ ಸೈಂಟ್ ಪ್ರಾನ್ಸಿಸ್‌ ಕ್ಸೇವಿಯರ್ ಚರ್ಚಿಗೆ ವರ್ಗಾವಣೆ ಗೊಂಡಿದ್ದು ಮೇ 13ರಂದು ನಿರ್ಗಮಿಸಲ್ಲಿದ್ದಾರೆ. ಇವರು ತಮ್ಮ ಸೇವಾವಧಿಯಲ್ಲಿ ದಾನಿಗಳ ಸಹಾಯದಿಂದ ಆರೋಗ್ಯ ನಿಧಿ ಸ್ಥಾಪನೆ ಇಗರ್ಜಿ ಗುಡ್ಡೆ ಅಭಿವೃದ್ದಿ, ,ಇಗರ್ಜಿ ವಠಾರಕ್ಕೆ ಇಂಟರ್ ಲಾಕ್‌ ಅಳವಡಿಕೆ, ಚರ್ಚ್ ರಸ್ತೆಯ ಅಗಲಿಕರಣಕ್ಕೆ ಶ್ರಮಿಸಿದ್ದರು  ಪರಿಸರದ ಎಲ್ಲಾ ಸಮಾಜ ಬಾಂಧವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.   ಅವರ ಸ್ಥಾನಕ್ಕೆ ಕಾರ್ಕಳ ಸಮೀಪದ ಪರಪ್ಪಾಡಿ ಚರ್ಚಿನ ಧರ್ಮಗುರು ರೆ.ಫಾ ಡೆನ್ನಿಸ್‌ ಡಿ ಸೋಜಾರವರು ನಿಯುಕ್ತಿಗೊಂಡಿದ್ದು ಮೇ 12 ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ

Read More

ಕುಂದಾಪುರ: ಏಪ್ರಿಲ್ 24ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಗಾಂಗ ದಾನ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ನಡೆಯಿತು.ದೇಹದಾನದ ಮಹತ್ವದ ಕುರಿತು ಮಾತನಾಡಿದ ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಅಂಗಾಂಗ ಕಸಿ ವಿಭಾಗದ ಸಂಯೋಜಕರಾದ ಪ್ರೀತಿ ಶೆಟ್ಟಿ ಮಾತನಾಡಿ ಬದುಕಿರುವಾಗ ಕೆಲವು ಅಂಗಾಂಗವನ್ನು ದಾನ ಮಾಡಬಹುದು. ದೇಹದಾನ ಶ್ರೇಷ್ಠ ದಾನ. ಯಾಕೆಂದರೆ ಇನ್ನೋರ್ವರಿಗೆ ನೀವು ಬದುಕನ್ನು ನೀಡಿದಂತಹ ಪುಣ್ಯ ಸಲ್ಲುತ್ತದೆ. ಬೇರೆ ಬೇರೆ ಕಾರಣಕ್ಕೆ ಮರಣ ಹೊಂದಿದಾಗಲೂ ಅಂಗಾಂಗಳನ್ನು ದಾನ ಮಾಡಬಹುದು. ಆದರೆ ಬೇರೆ ಬೇರೆ ಅಂಗಾಂಗಗಳಿಗೆ ಸಮಯದ ಮಿತಿ […]

Read More

Reported and photography by Ganesh Nayak ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು, ವಾಣಿಜ್ಯ ಮತ್ತು ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶ ವಿಭಾಗದ ಮೂಲಕ, ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದೊಂದಿಗೆ, ಏಪ್ರಿಲ್ 24, 2026 ರಂದು ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಮತ್ತು ಮಂಗಳೂರಿನ ಬೈಕಂಪಾಡಿಯಲ್ಲಿರುವ ಗುರುಚರಣ್ ಇಂಡಸ್ಟ್ರೀಸ್‌ಗೆ ಕೈಗಾರಿಕಾ ಭೇಟಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಭೇಟಿಯು ವಿದ್ಯಾರ್ಥಿಗಳಿಗೆ ನೈಜ-ಪ್ರಪಂಚದ ಕೈಗಾರಿಕಾ ಕಾರ್ಯಾಚರಣೆಗಳಿಗೆ ಪ್ರಾಯೋಗಿಕ ಮಾನ್ಯತೆಯನ್ನು ಒದಗಿಸುವ ಮತ್ತು ಸೈದ್ಧಾಂತಿಕ ಜ್ಞಾನ ಮತ್ತು […]

Read More

ಹೋಮಿಯೋಪತಿಯ ಸಂಸ್ಥಾಪಕ ಡಾ. ಸ್ಯಾಮ್ಯುಯೆಲ್ ಹಾನೆಮನ್ ಅವರ 271 ನೇ ಜನ್ಮ ದಿನಾಚರಣೆಯ ಸ್ಮರಣರ‍್ಥವಾಗಿ, ವಿಶ್ವ ಹೋಮಿಯೋಪತಿ ದಿನ 2026 ಅನ್ನು 25.04.2026 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಉದ್ಘಾಟನಾ ಕರ‍್ಯಕ್ರಮವು ಬೆಳಿಗ್ಗೆ 9:30 ಕ್ಕೆ ಕಾಲೇಜು ಸಭಾಂಗಣದಲ್ಲಿ ಪ್ರಾರಂಭವಾಯಿತು. ಈ ಕರ‍್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್. ಆರ್. ತಿಮ್ಮಯ್ಯ ಭಾಗವಹಿಸಿದ್ದರು. ಗೌರವಾನ್ವಿತ ಗಣ್ಯ […]

Read More
1 2 3 536