ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ಕೃಷಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ಕಾರ್ಯಕ್ರಮವು ಆದಿತ್ಯವಾರ ದಿನಾಂಕ 20 ಜುಲೈ 2025 ರಂದು ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಸಂತ ಜೋಸೆಫ್ ವಾಜ್ ಸಭಾಭವನದಲ್ಲಿ ಜರುಗಿತು. ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ರವರು ಅಧ್ಯಕ್ಷತೆ ವಹಿಸಿದಂತಹ ಕಾರ್ಯಕ್ರಮದಲ್ಲಿ ಶ್ರೀ ಎಲ್ರಾಯ್ ಕಿರನ್ ಕ್ರಾಸ್ಟೊ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕೃಷಿ ಇಲಾಖೆ, ರೈತ […]
ಮಂದಾರ್ತಿ, ಜುಲೈ 19, 2025; ತಮ್ಮ ಪ್ರೀತಿಯ ಪೋಷಕರಾದ ದಿವಂಗತ ಶ್ರೀಮತಿ ಶಾಂತಾ ಮತ್ತು ಶ್ರೀ ಕೆ.ಎಂ. ಉಡುಪ ಅವರಿಗೆ ಹೃತ್ಪೂರ್ವಕ ಗೌರವ ಸಲ್ಲಿಸುವ ಸಲುವಾಗಿ, ಕೆ.ಎಂ. ಉಡುಪ ಪ್ರತಿಷ್ಠಾನದ ಕುಟುಂಬ ಸದಸ್ಯರು, ಜುಲೈ 19, 2025 ರ ಶನಿವಾರದಂದು ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಮಂದಾರ್ತಿ ಗಮನಾರ್ಹವಾದ ಲೋಕೋಪಕಾರಿ ಕಾರ್ಯಕ್ರಮವನ್ನು ಆಯೋಜಿಸಿದರು. ದಾನದ ಉದಾತ್ತ ನಡೆ: ಕೆ.ಎಂ. ಉಡುಪ ಪ್ರತಿಷ್ಠಾನವು ಅರ್ಹ ಫಲಾನುಭವಿಗಳಿಗೆ ₹22 ಲಕ್ಷ ಮೌಲ್ಯದ ಸಹಾಯವನ್ನು ನೀಡಿತು. ಕಾರ್ಯಕ್ರಮವು ದೈವಿಕ ಆಶೀರ್ವಾದಗಳ […]
ಕುಂದಾಪುರ; ದಿನಾಂಕ 19/07/2025 ಶನಿವಾರದಂದು ಕುಂದಾಪುರದ ಯುಬಿಎಂಸಿ ಮತ್ತು ಸಿಎಸ್ಐ ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ 2025-26ರ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಭೆಯು “ಉತ್ತಮ ಪೋಷಕತ್ವ” ಎನ್ನುವ ಧ್ಯೆಯ ವಾಕ್ಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷೆಯಾದ ಶ ಐರಿನ್ ಸಾಲಿನ್ಸ ರವರು ಮಕ್ಕಳ ಸರ್ವತೋಮುಖ ಬೆಳವಣಿಗೆ ಶಿಕ್ಷಕ ಮತ್ತು ಪೋಷಕರಿಬ್ಬರ ಆದ್ಯ ಕರ್ತವ್ಯವಾಗಿರಬೇಕು,ಎಂದು ತಮ್ಮ ಅಧ್ಯಕ್ಷ ನುಡಿಯಲ್ಲಿ ತಿಳಿಸಿದರು. ಮುಖ್ಯ ಅತಿಥಿಗಳಾದ ಸಿಎಸ್ಐ ಕೃಪಾ ಚರ್ಚ್ ಕುಂದಾಪುರದ ಧರ್ಮ ಗುರುಗಳಾದ ರೆವೆರೆಂಡ್ ಜಯಕರ್ ಮಕ್ಕಳಲ್ಲಿ […]
ಕುಂದಾಪುರ(ಜುಲೈ 18) : ಕುಂದಾಪುರ ಎಜುಕೇಶನ್ ಸೊಸೈಟಿ ( ರಿ. )ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳು, ಈಶಾನ್ಯ ಇಂಡಿಯನ್ ಫೌಂಡೇಶನ್ ಬೆಂಗಳೂರು ಮತ್ತು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಮನೆಯು ಕಲಿಕೆಗೆ ಪೂರಕವಾದ ವಾತಾವರಣವಾಗಿರಬೇಕು. ಪೋಷಕರು ಮಗುವಿನ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಬೆನ್ನೆಲುಬಾಗಿ ಪ್ರತಿಯೊಂದು ಚಟುವಟಿಕೆಯಲ್ಲಿ ಸಹಕರಿಸಬೇಕು ಎಂದು ಡಾ. ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ […]
ಕುಂದಾಪುರ, ಜು.20: ಕೊಟೇಶ್ವರ ಕಟ್ಕರೆ ಕಾರ್ಮೆಲ್ ಮೇಳದ ಧರ್ಮಗುರುಗಳ ಬಾಲ ಯೇಸುವಿನ ಆಶ್ರಮದಲ್ಲಿ ತಮ್ಮ ಮೇಳದ ಪಾಲಕಿಯಾದ ಕಾರ್ಮೆಲ್ ಮಾತೆಯ ಹಬ್ಬವನ್ನು ಜು. 19 (2025) ರಂದು ಭಕ್ತಿಪೂರ್ವಕವಾದ ದಿವ್ಯ ಬಲಿದಾನ ಅರ್ಪಿಸುವ ಮೂಲಕ ಆಚರಿಸಲಾಯಿತು. ಹಬ್ಬದ ಈ ಬಲಿದಾನವನ್ನು ಉಡುಪಿ ಧರ್ಮಪ್ರಾಂತ್ಯದ ಅ|ವಂ|ಚಾನ್ಸಲರ್ ಸ್ಟೀಫನ್ ಡಿಸೋಜಾ ಇವರ ನೇತ್ರತ್ವದಲ್ಲಿ ನಡೆಯಿತು. ಅವರು ಕಾರ್ಮೆಲ್ ಮಾತೆಯ ವಿಶೇಷತೆಯನ್ನು ತಿಳಿಸಿ “ಮೇರಿ ಮಾತೆ ಎಲ್ಲೆಲ್ಲಿ ಪ್ರತ್ಯಕ್ಷಗೊಂಡೊಳೊ ಅಲ್ಲಿಯ ಹೆಸರಿನಲ್ಲಿ ಮೇರಿ ಮಾತೆಯನ್ನು ಕರೆಯುತ್ತೇವೆ, ಹಾಗೆ ಮೇರಿ ಮತ್ತು […]
ಬೈಂದೂರು : ಜ್ಞಾನದಾ ಶಿಕ್ಷಣ ಸಂಸ್ಥೆ ಶಿರೂರಿನಲ್ಲಿ ದಿನಾಂಕ 19/07/2025 ಶನಿವಾರದಂದು ಪ್ರೀ ಕೆಜಿ ಯಿಂದ 3ನೇ ತರಗತಿ ವಿದ್ಯಾರ್ಥಿಗಳಿಗೆ ರೈನಿ ಡೇ ಆಚರಿಸಲಾಯಿತು. ಸಾಮಾನ್ಯವಾಗಿ ಪುಟ್ಟ ಮಕ್ಕಳಿಗೆ ಮಳೆಯಲ್ಲಿ ಆಡಬೇಕು ಎಂಬ ಆಸೆ ಇದ್ದರೂ ಸಹ ಹಿರಿಯರು ಅದಕ್ಕೆ ಅವಕಾಶ ನೀಡುವುದಿಲ್ಲ ಅವರು ಬಾಲ್ಯದಲ್ಲಿ ಸಂತೋಷದಿಂದ ಅನುಭವಿಸಬಹುದಾದ ವಿಶೇಷ ಸಂದರ್ಭ. ಈ ಕಾರಣಕ್ಕಾಗಿ ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿಶನಿವಾರ ರೈನಿ ಡೇ ಆಚರಿಸುವ ಮೂಲಕ ಮಕ್ಕಳಿಗೆ ಅವಕಾಶ ಒದಗಿಸಲಾಯಿತು. ಪ್ರೀ ಕೆ ಜಿ ಯಿಂದ 3ನೇ ತರಗತಿಯ […]
ಮಂಗಳೂರು ಜುಲೈ 19: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾಧರಿಯಾಗಬೇಕೆಂದು ಹೇಳಿದರು.ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, […]
ಮಂಗಳೂರು ; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಶಿಶು ವಿಹಾರದ ವಿಭಾಗದಲ್ಲಿ ಬಣ್ಣದ ದಿನಾಚರಣೆಯನ್ನು ಬಹಳ ಸ೦ಭ್ರಮದಿ೦ದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿಅಲ್ಮೇಡ ಎಸ್.ಜೆ ರವರು ಮಾತನಾಡಿ, “ಬಣ್ಣಗಳು ನಮ್ಮ ಭಾವನೆಗಳ ಮೇಲೆ ಪ್ರಭಾವ ಬೀರುತ್ತವೆ ಮತ್ತು ಧನಾತ್ಮಕ ಚಿಂತನೆಗೆ ಸಹಾಯ ಮಾಡುತ್ತವೆ. ಬಣ್ಣಗಳು ವ್ಯಕ್ತಿಯ ಮನಸ್ಥಿತಿ ಮತ್ತು ಆಲೋಚನೆಗಳ ಮೇಲೆ ಪರಿಣಾಮ ಬೀರುತ್ತವೆ” ಎಂಬ ಸಂದೇಶವನ್ನು ನೀಡಿದರು. ಉಪ ಪ್ರಾ೦ಶುಪಾಲೆಯಾದ ಶ್ರೀಮತಿ ಅಪರ್ಣ ಸುರೇಶ್ ಹಾಗೂ ಮಕ್ಕಳ ಪೋಷಕರು […]
ಮದರ್ ತೆರೆಸಾ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಅಪಾಯ, ಸೈಬರ್ ಭದ್ರತೆ,ರಸ್ತೆ ಸುರಕ್ಷತೆಯ ನಿಯಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ16-07-2025 ರಂದು ಪೊಲೀಸ್ ಇಲಾಖಾ ಅಧಿಕಾರಿ ವರ್ಗದವರ ಸಹಕಾರದೊಂದಿಗೆ ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಶಂಕರನಾರಾಯಣ ಠಾಣೆಯ ಉಪ ನಿರೀಕ್ಷಕ ತನಿಖಾಧಿಕಾರಿಗಳಾದ ಶ್ರೀಯುತ ಶಂಭುಲಿಂಗಯ್ಯ ಅವರು ಮಾತನಾಡಿ “ಮಾದಕ ವ್ಯಸನದಿಂದ ದೂರವಿದ್ದು ಜೀವನವನ್ನು ಸಂತೋಷದಿಂದ ಅನುಭವಿಸಿ ” ಎಂದು ಹಿತನುಡಿಗಳನ್ನಾಡಿದರು.ಇಂದು ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದಾಗಿ ಹಾಗೂ ವಿದ್ಯಾರ್ಥಿಗಳ […]

