ಕುಂದಾಪುರ ; ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ನಡೆಸುತ್ತಿರುವ ರಕ್ತ ನಿಧಿ ಕೇಂದ್ರ ಪ್ರಾರಂಭವಾಗಿ ಹನ್ನೊಂದು ವರ್ಷ ಪೂರೈಸಿದೆ. ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ರಕ್ತ ನಿಧಿ ಕೇಂದ್ರದ ಸ್ಥಾಪನೆಯ ಸಂದರ್ಭವನ್ನು ನೆನಪಿಸಿಕೊಂಡರು. ಈ ಮಹತ್ಕಾರ್ಯಕ್ಕೆ ಸಹಕರಿಸಿದ, ಪ್ರೋತ್ಸಹಿಸಿದ ವ್ಯಕ್ತಿಗಳನ್ನು , ಸಂಘ ಸಂಸ್ಥೆಗಳನ್ನು, ದಾನಿಗಳನ್ನು ಸ್ಮರಿಸಿಕೊಂಡರು. ಉಡುಪಿ ಜಿಲ್ಲೆಯ ಮೂರನೆ ರಕ್ತ ನಿಧಿ ಕೇಂದ್ರವಾದ ಇದು ಕುಂದಾಪುರ ತಾಲೂಕು ಮಾತ್ರವಲ್ಲದೇ ಭಟ್ಕಳ,ಮುರ್ಡೇಶ್ವರದಿಂದ ಶಿರ್ವ,ಕಾರ್ಕಳದ ತನಕದ ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಪ್ರತಿ […]
ಕುಂದಾಪುರ: ಇಲ್ಲಿನ ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಹೋಲಿ ರೋಜರಿ ಆ.ಮಾ.ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರಾರಂಭೋತ್ಸವ ಸಂಭ್ರಮದಿಂದ ಸೋಮವಾರ ಜರಗಿತು. ಸೈಂಟ್ ಮೇರಿಸ್ ಪ.ಪೂ ಕಾಲೇಜು ಹಾಗೂ ಹೋಲಿ ರೋಜರಿ ಆ.ಮಾ.ಶಾಲೆಗೆ ನೂತನ ಪ್ರಾಂಶುಪಾಲರಾಗಿ ಆಗಮಿಸಿದ ವಂ.ಫಾ.ರೋಲ್ವಿನ್ ಫೆರ್ನಾಂಡಿಸ್ ಅವರನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಯಿತು.ಶಾಲಾ ಜಂಟಿ ಕಾರ್ಯದರ್ಶಿ, ಕುಂದಾಪುರ ವಲಯದ ಪ್ರಧಾನ ಧರ್ಮಗುರುಗಳಾದ ಅತೀ ವಂ.ಫಾ.ಫೌಲ್ ರೇಗೋ ಶುಭ […]
ಮಂಗಳೂರು; ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ, ಜೆಪ್ಪು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ಶಾಲಾ ಬ್ಯಾಂಡಿನೊಂದಿಗೆ ಅತಿಥಿಗಳನ್ನು ಸ್ವಾಗತಿಸಲಾಯಿತು. ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ವಿದ್ಯಾರ್ಥಿಗಳು ಸ್ವಾಗತ ನೃತ್ಯದ ಮೂಲಕ ನೆರೆದಿರುವ ಸರ್ವರನ್ನು ಸ್ವಾಗತಿಸಿದರು.ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಸಂಚಾಲಕರಾದ ಫಾ| ರೀತೇಶ್ ರೊಡ್ರಿಗಸ್ ಇವರನ್ನು ಶಾಲೆ ಹಾಗೂ ಶಿಕ್ಷಕ – ರಕ್ಷಕ ಸಂಘದ ಪರವಾಗಿ ಸ್ವಾಗತಿಸಲಾಯಿತು. ದೀಪ ಬೆಳಗುವುದರ ಮೂಲಕ ಹೊಸ ಶೈಕ್ಷಣಿಕ ವರ್ಷದ ಕಾರ್ಯಾಚಟುವಟಿಗಳಿಗೆ […]
Inauguration of the New Academic Year in St Aloysius Gonzaga School 2026–27ರ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಜೂನ್ 1, 2026 ರಂದು I ರಿಂದ XII ತರಗತಿಗಳ ವಿದ್ಯಾರ್ಥಿಗಳಿಗಾಗಿ ಔಪಚಾರಿಕ ಮತ್ತು ಪ್ರಾರ್ಥನಾಪೂರ್ವಕ ರೀತಿಯಲ್ಲಿ ನಡೆಯಿತು. ಈ ಕಾರ್ಯಕ್ರಮವು ಕಲಿಕೆ, ಬೆಳವಣಿಗೆ ಮತ್ತು ಸಾಧನೆಯ ಹೊಸ ಪ್ರಯಾಣದ ಆರಂಭವನ್ನು ಗುರುತಿಸಿತು. ಸಮಾರಂಭವು ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸಂಸ್ಥೆಯ ಮೇಲೆ ದೇವರ ಆಶೀರ್ವಾದವನ್ನು ಕೋರುವ ಪ್ರಾರ್ಥನಾ ಸೇವೆಯೊಂದಿಗೆ ಪ್ರಾರಂಭವಾಯಿತು, ನಂತರ ಸಾಂಪ್ರದಾಯಿಕವಾಗಿ […]
ಕುಂದಾಪುರ; ದಿನಾಂಕ : 01.06.2026ರಂದು ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾದ್ಯಾಮ ಶಾಲೆಯಲ್ಲಿ 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭನ್ನು ವಿದ್ಯಾರ್ಥಿಗಳ ಪ್ರಾರ್ಥನೆಯ ಮೂಲಕ ದೇವರನ್ನು ಸ್ಮರಿಸಿ ಪ್ರಾರಂಭಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾಗಿರುವ ವಂ। ಗುರು ರೊಲ್ವಿನ್ ಫೆರ್ನಾಂಡೀಸ್ ರವರು ಶಾಲಾ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ 2025-26ರಲ್ಲಿ ಉತ್ತಮ ಫಲಿತಾಂಶಕ್ಕೆ ಕಾರಣಿಕರ್ತರಾದ ವಿಷಯ ಶಿಕ್ಷಕರನ್ನು ಸನ್ಮಾನಿಸಿ, ನಮ್ಮ ಶಾಲೆಗೆ ಸೇರಿರುವ ಹೊಸ ಅಧ್ಯಾಪಕರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು ಹಾಗೂ ಶಾಲಾ ಪ್ರಾಥಮಿಕ ಶಿಕ್ಷಕರು ನೀಡುವ ಸೇವೆಯನ್ನು ಗುರುತಿಸಿ […]
ಕುಂದಾಪುರ ; ದಿನಾಂಕ 01-06-2026 ರಂದು ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಉತ್ಸಾಹದಿಂದು ನಡೆಯಿತು. ಆ ಪ್ರಯುಕ್ತ ಶಾಲಾ ಕೊಠಡಿಗಳಿಗೆ ತಳಿರು ತೋರಣಗಳಿಂದ ಅಲಂಕರಿಸಲಾಯಿತು. ವಿದ್ಯಾರ್ಥಿಗಳನ್ನು ವಾದ್ಯ ವೃಂದದೊಂದಿಗೆ ಬರ ಮಾಡಿಕೊಡಲಾಯಿತು. ಶಾಲಾ ಸಭಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಸುಗುಣ ಇವರು ವಿದ್ಯಾರ್ಥಿಗಳಿಗೆ ಸರಕಾರ ಕೂಡ ಮಾಡಿದ ಉಚಿತ ಪಠ್ಯ ಪುಸ್ತಕಗಳನ್ನು ಹಾಗೂ ಎಂಸಿಸಿ ಬ್ಯಾಂಕ್ ಉಚಿತವಾಗಿ ನೀಡಿದ […]
ಉರ್ವ, ಜೂನ್ 1: ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ತಮ್ಮ ಗುರಿಗಳನ್ನು ಸಾಧಿಸಲಿ ಎಂದು ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವದ ಸಂಚಾಲಕ ಮತ್ತು ಉರ್ವ ಇಮ್ಯಾಕ್ಯುಲೇಟ್ ಚರ್ಚ್ ಇದರ ಧರ್ಮಗುರು ವಂ| ಬೆಂಜಮಿನ್ ಪಿಂಟೊ ಹೇಳಿದರು. ಇಂದಿನ ಸಣ್ಣ ಪ್ರಯತ್ನಗಳು ನಾಳಿನ ದೊಡ್ಡ ಯಶಸ್ವಿಗೆ ಅಡಿಪಾಯವಾಗುತ್ತದೆ ಎನ್ನುತ್ತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರಸೇವೆ ಅಮೂಲ್ಯವಾದದು ಎಂದು ಶಾಲಾ ಮುಖ್ಯ ಶಿಕ್ಷಕ ಅಲೋಶಿಯಸ್ ಡಿ’ಸೋಜಾ ಸ್ವಾಗತಿಸಿ ಸಾಂಕೇತಿಕ ವಾಗಿ […]
ಎಂ.ಸಿ.ಸಿ. ಬ್ಯಾಂಕ್ ವತಿಯಿಂದ 28 ಮೇ 2026 ರಂದು ಸಂಜೆ 6:00 ಗಂಟೆಗೆ ಯರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ನಲ್ಲಿ “ಇಂಪ್ರಿಂಟ್ಸ್ ಅಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮವನ್ನು ಅಯೋಹಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರು, ನಿರ್ದೇಶಕರು, ಶಾಖಾ ವ್ಯವಸ್ಥಾಪಕರು, ಗಣ್ಯರು, ಧರ್ಮಗುರುಗಳು, ಚಾರ್ಟರ್ಡ್ ಅಕೌಂಟೆಂಟ್ಸ್ ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ವಿಶಿಷ್ಟ ಅತಿಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ| […]
ಮಂಗಳೂರು, ಮೇ 29: ಜೂನ್ 1 ರಂದು ಹೊಸ ಶೈಕ್ಷಣಿಕ ವರ್ಷಕ್ಕಾಗಿ ಶಾಲೆಗಳು ಪುನರಾರಂಭಗೊಳ್ಳಲು ಸಜ್ಜಾಗುತ್ತಿರುವಂತೆಯೇ, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮೇ 29 ರಂದು ವಿದ್ಯಾರ್ಥಿಗಳಿಗಾಗಿ ವಿಶೇಷ ಬಲಿಪೂಜೆ ಮತ್ತು ದಿವ್ಯ ಸತ್ಪ್ರಸಾದದ ಆರಾಧನೆಯನ್ನು ಆಯೋಜಿಸಲಾಯಿತು. ಈ ಮೂಲಕ ಮಕ್ಕಳು, ಪೋಷಕರು, ಶಿಕ್ಷಕರು ಹಾಗೂ ಮುಂಬರುವ ಇಡೀ ಶೈಕ್ಷಣಿಕ ವರ್ಷಕ್ಕೆ ದೇವರ ಆಶೀರ್ವಾದವನ್ನು ಕೋರಲಾಯಿತು. ಈ ಸಮಾರಂಭದಲ್ಲಿ ಸುಮಾರು 500 ಮಕ್ಕಳು ತಮ್ಮ ಪೋಷಕರೊಂದಿಗೆ ಭಾಗವಹಿಸಿದ್ದರು. ಇದು ಹೊಸ ಶಾಲಾ ಅವಧಿಯ ಆರಂಭಕ್ಕೂ ಮುನ್ನ ನಡೆದ […]

