ಮಂಗಳೂರು, ಜೂನ್ 15, 2025 – ಆಲ್ ಬ್ಯಾಂಕ್ಸ್ ಕ್ರಿಶ್ಚಿಯನ್ ಎಂಪ್ಲೊಯೀಸ್ ಎಸೋಸಿಯೇಷನ್ (ರಿ), ಮಂಗಳೂರು (ಎಬಿಸಿಇಎ), ಮಂಗಳೂರಿನ ಡಾನ್ ಬಾಸ್ಕೋ ಹಾಲ್ನಲ್ಲಿ ಸಂಸ್ಥಾಪಕರ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿತು. ಎಬಿಸಿಇಎ ಅಧ್ಯಕ್ಷರಾದ ಶ್ರೀ ಮಾರ್ಸೆಲ್ ಎಂ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ರೆಜಿಸ್ಟ್ರಾರ್ ಶ್ರೀ ಅಲ್ವಿನ್ ಡೆಸಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಿವಂಗತ ಡಿ.ಜೆ. ಪತ್ರಾವೊ, ದಿವಂಗತ ಎಡ್ವರ್ಡ್ ಇ ಫೆರಾವೊ ಮತ್ತು ದಿವಂಗತ ವಿನ್ಸೆಂಟ್ ಎಲ್ ಡಿಸೋಜಾ […]
ಕುಂದಾಪುರ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿಮಳೆಯಿಂದಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವೆಡೆ ನೆರೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ, ರವಿವಾರದಂದು ಹಗಲು ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಕುಬ್ಬಾ ನದಿ ಉಕ್ಕಿ ಹರಿಯುತ್ತಿದ್ದು ಪರಿಣಾಮ ನದಿ ನೀರು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಲಾವೃತಗೊಂಡಿದೆ, ತಾಲೂಕುಗಳಲ್ಲಿ ಹಲವು ಮರಗಳು ಉರುಳಿವೆ, ಮನೆಗಳಿಗೆ ಹಾನಿಯಾಗಿದೆ. ಭಾರೀ ಮಳೆಯ ಪರಿಣಾಮ ನದಿ ಉಕ್ಕಿ ಹರಿದು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಒಳಾಂಗಣಕ್ಕೆ ನೀರು […]
ಉದ್ಯಾವರ : “ಸಮಾಜದಲ್ಲಿ ಬದಲಾವಣೆ ಪ್ರಾಕೃತಿಕ ನಿಯಮ. ಸಾಹಿತ್ಯದಿಂದ ಸಾಕಷ್ಟು ಸಮಾಜಿಕ ಚಳವಳಿಗಳು ರೂಪುಗೊಂಡು, ಕವಿ ಮತ್ತು ಸಾಹಿತಿಗಳು ಸಾಮಾಜಿಕ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ತಮ್ಮ ಬಗ್ಗೆಯೇ ಯೋಚಿಸಲು ಸಮಯವಿಲ್ಲದ ಇಂದಿನ ಒಂದು ನಿಮಿಷದ ರೀಲ್ ಕಾಲದಲ್ಲಿ, ಸಾಹಿತಿ, ಕವಿಗಳು ಸಮಾಜದ ಬಗ್ಗೆ ಯೋಚಿಸಿ, ಕವಿತೆ – ಲೇಖನಗಳ ಮೂಲಕ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಳಕಳಿ ಶ್ಲಾಘನೀಯ” ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚಿನ ಪ್ರಧಾನ ಗುರು ವಂ| ಅನಿಲ್ ಡಿ ಸೊಜಾ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸಾಹಿತ್ಯ […]
ದಿನಾಂಕ 15/06/2025 ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನ ಕುಟುಂಬ ಆಯೋಗದ ನೇತೃತ್ವದಲ್ಲಿ ಅಪ್ಪಂದಿರ ದಿನಾಚರಣೆಯನ್ನು ಆಚರಿಸಲಾಯಿತು. ಅಪ್ಪಂದಿರಿಗಾಗಿ ವಿಶೇಷ ಬಲಿಪೂಜೆಯನ್ನು, ಕಟ್ಕೆರೆ ಚರ್ಚಿನ ಧರ್ಮ ಗುರುಗಳಾದ ವಂದನೀಯ ಫಾ. ಜೊಸಿ. ಸಿದ್ದಕಟ್ಟೆ ಇವರು ಪ್ರಧಾನ ಗುರುಗಳಾಗಿ ಆಗಮಿಸಿ ಬಲಿಪೂಜೆ ನೆರವೇರಿಸಿದರು.ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವೈ.ಸಿ.ಎಸ್. ಸಂಘದ ಸದಸ್ಯರು, ಅಪ್ಪಂದಿರಿಗೆ ಶಾಲು ಹೊದೆಸಿ ಗೌರವಪೂರ್ವಕವಾಗಿ ಸಭಾಂಗಣಕ್ಕೆ ಬರಮಾಡಿಕೊಂಡರು.ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾದ ವಂದನೀಯ ಫಾ. ಜೊಸ್ಸಿ ಸಿದ್ದಕಟ್ಟೆ ಗುರುಗಳು ಮಾತನಾಡಿ, ನಮ್ಮ ಜೀವನದಲ್ಲಿ ತಂದೆ, ತಾಯಿ […]
ಕುಂದಾಪುರ, ಜೂ.16; ಸಂತ ಪಿಯುಸ್ ಹತ್ತನೇ ಚರ್ಚ್ ಹಂಗ್ಳೂರಿನಲ್ಲಿ ದಿನಾಂಕ 15ರ ರವಿವಾರದಂದು ದಿವ್ಯ ಬಲಿ ಪೂಜೆಯೊಂದಿಗೆ ಅಪ್ಪಂದಿರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು ನಾಲ್ಕು ಮಂದಿ ಧರ್ಮಗುರುಗಳು ಬಲಿಪೂಜೆಯನ್ನು ಅರ್ಪಿಸಿದರು. ಕಟ್ಕೆರೆಯ ಕಾರ್ಮೆಲ್ ಆಶ್ರಮದ ವಂ. ಗುರು ಜೊ.ಸಿ. ಸಿದ್ದಕಟ್ಟೆ ಪ್ರವಚನ ನೀಡಿದರು.ಬಲಿಪೂಜೆಯ ನಂತರ ಅಪ್ಪಂದಿರಿಗೆ ಶುಭಾಶಯ ಕೋರುವ ಕಾರ್ಯಕ್ರಮವು ಧರ್ಮಕೇಂದ್ರದ ವಂ. ಗುರು ಆಲ್ಬರ್ಟ್ ಕ್ರಾಸ್ತಾ ಇವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ವಂ. ಗುರು ಜೊ.ಸಿ. ಸಿದ್ದಕಟ್ಟೆ ಇವರು ಉಪಸ್ಥಿತರಿದ್ದರು. ಇವರೊಂದಿಗೆ ವೇದಿಕೆಯಲ್ಲಿ ಪಾಲನಾ […]
ಉದ್ಯಾವರ : ಕರಾವಳಿಯಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತ, ಧರೆ ಕುಸಿತ ತೋಡು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಅಲ್ಲಲ್ಲಿ ಅನಾಹುತಗಳು ನಡೆಯತ್ತಲೇ ಇವೆ. ಮಳೆಯ ಕಾರಣ ಹಲವರ ಪ್ರಾಣಕ್ಕೆ ಕುತ್ತಾಗಿದೆ. ಕರ್ನಾಟಕ ರಾಜ್ಯದಲ್ಲಿ ವವಿಪರೀತ ಮಳೆಯಿಂದಾಗಿ ಸುಮಾರು ೨೭ ಜನರ ಪ್ರಾಣ ಕಳೆದುಕೊಂಡಿದ್ದಾರೆ. ತೋಡಿಗೆ ಬಿದ್ದು ವ್ಯಕ್ತಿ ಸಾವು ಉಡುಪಿ ಜಿಲ್ಲೆಯಲ್ಲಿಯೂ ಒಂದು ಸಾವಾಗಿದೆ. ಜೂನ್ 15 ರಂದು ಉದ್ಯಾವರ ಕೇದಾರ್ ನಿವಾಸಿಯೊಬ್ಬರು, ಕೆಲಸ ಮುಗಿಸಿ […]
ಕೋಟ, ಜೂ.15; ಎಸು ಕ್ರಿಸ್ತರ 2025 ವರ್ಷಗಳ ಮಹೋತ್ಸವದ ಅಂಗವಾಗಿ ಕೋಟ ಸಂತ ಜೋಸೆಫ್ ಚರ್ಚಿನಲ್ಲಿ ವಿದ್ಯಾರ್ಥಿಗಳ ಮಹೋತ್ಸವನ್ನು ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂ।ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿದಾನವನ್ನು ಅರ್ಪಿಸಿದರು. ವಿದ್ಯಾರ್ಥಿಗಳು ಬಲಿದಾನದ ದೇವ ಸ್ತುತಿ ಪ್ರಾರ್ಥನೆಗಳನ್ನು ನಡೆಸಿಕೊಟ್ಟರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜಿನ ಪ್ರಾಂಶುಪಾಲೆ ರೆಶ್ಮಾ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಂದೇಶ ನೀಡಿದರು. ವಿದ್ಯಾಥಿಗಳಿಗೆ ಭಾಶಣ ಸ್ಪರ್ಧೆ ಮತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. […]
ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 14.06.2025ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]
ಮಂಗಳೂರು; ಕದ್ರಿ ಯೋಗೇಶ್ವರ ಮಠ, ಚಿನ್ಮಯ ಹೈ ಸ್ಕೂಲ್, ಮಂಗಳೂರು, ಕರಾವಳಿ ಮಾಣಿಕ್ಯ ಸೇವಾಸಂಸ್ಥೆ(ರಿ.) ಮಂಗಳೂರು, ಮತ್ತು ನೇಜಿಗುರಿ ಗುಂಪು ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಾಗೂ ರಾಕೇಶ್- ದಿವ್ಯ ಅವರ ದ್ವಿತೀಯ ಪುತ್ರಿ ಧ್ರುಹಿಯ ಹುಟ್ಟಿದಬ್ಬದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ – 2025 ಜೂನ್ 14 ಶನಿವಾರ ಬೆಳಿಗ್ಗೆ 9.00 ಗಂಟೆಗೆ ಸರಿಯಾಗಿಕದ್ರಿ ಜೋಗಿ ಮಠ, ಕದ್ರಿ ಪಾರ್ಕಿನ ಹತ್ತಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ಯೋಗೀಶ್ವರ (ಜೋಗಿ) ಮಠ, ಕದ್ರಿ ಮಂಗಳೂರು ಇಲ್ಲಿಯ ಪೀಠಾಧಿಪತಿ […]

