ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ […]
ಕಟಪಾಡಿ : ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗಾಗಿ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಐರಿನ್ ಪಿರೇರಾ ಹಾಗೂ ಗ್ಲೋರಿಯ ಪಿಂಟೊ ಕಾರ್ಯನಿರ್ವಹಣಾಧಿಕಾರಿಯಾಗಿ ಆಯ್ಕೆಯಾಗಿದ್ದು, ಹೊಸ ನಿರ್ದೇಶಕರಾಗಿ ಗೊಡ್ಫ್ರಿ ಡಿಸೋಜಾ, ವಿಲಿಯಂ ಲೋಬೊ, ಆಸ್ಟಿನ್ ಕರ್ಡೋಜಾ, ಜೆರೊಮ್ ಕಸ್ತೆಲಿನೊ, ಲಾರೆನ್ಸ್ ಕ್ರಾಸ್ಟೊ, ರೊನಾಲ್ಡ್ ಮಾಚಾದೊ, ಶಾಂತಿ ಕ್ವಾಡ್ರಸ್, ಮೇರಿ ಡಿಸಿಲ್ವ ಆಯ್ಕೆಯಾಗಿದ್ದಾರೆ.
ಕುಂದಾಪುರ :ಮುಸ್ಲಿಮರ ಪವಿತ್ರ ಮಾಸವಾದ ರಮಝಾನ್ ತಿಂಗಳ ಉಪವಾಸ ವ್ರತಚಾರಣೆಯ ಈದುಲ್ ಫಿತರ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮ ದಿಂದ ಆಚರಿಸಿದರು.ಬೆಳಿಗ್ಗೆ ಕುಂದಾಪುರ ಜಾಮೀಯ ಮಸೀದಿ ಯಿಂದ ಹೊರಟ ಸ್ವಲಾತ್ ಮೆರವಣಿಗೆಯು ಜಮಾತ್ ಅಧ್ಯಕ್ಷರಾದ ವಸೀಮ್ ಬಾಷಾ, ಪದಾಧಿಕಾರಿಗಳಾದ ತಬರೇಜ್, ಪುರಸಭಾ ಸದಸ್ಯ ಎಂ.ಅಬು ಮಹ್ಮದ್ ಮುಂತಾದವರ ಮುಂದಾಳತ್ವದಲ್ಲಿ ಮುಖ್ಯ ಬೀದಿಯ ಮೂಲಕ ಸಾಗಿ ಈದ್ಗ ಮೈದಾನವನ್ನು ತಲುಪಿತು. ಜಮಾತಿನ ಖತೀಬರಾದ ಶಾಹೀದ್ ಹುಸೇನ್ ಅವರು ಈದ್ ನಮಾಜ್ ನೆರವೇರಿಸಿ ಸಕಲರ ಕಲ್ಯಾಣ, ಶಾಂತಿ, ನೆಮ್ಮದಿ ಗಾಗಿ […]
ಉಡುಪಿ, ಮಾರ್ಚ್ 31, 2025 : ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಮಾರ್ಚ್ 31, 2025 ರಿಂದ ಜಾರಿಗೆ ಬರುವಂತೆ ರೆವರೆಂಡ್ ಫಾದರ್ ಸ್ಟೀಫನ್ ಡಿಸೋಜಾ ಅವರನ್ನು ಡಯಾಸಿಸ್ನ ನೂತನ ಕುಲಪತಿಗಳಾಗಿ ನೇಮಿಸಿದ್ದಾರೆ. ಬಿಷಪ್ ಜೆರಾಲ್ಡ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬಿಷಪ್ ಹೌಸ್ ಚಾಪೆಲ್ನಲ್ಲಿ ನಡೆದ ಪ್ರಾರ್ಥನಾ ಸೇವೆಯ ಸಮಯದಲ್ಲಿ ರೆವರೆಂಡ್ ಫಾದರ್ ಸ್ಟೀಫನ್ ಡಿಸೋಜಾ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಅವರು ನಂಬಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು […]
ಉಡುಪಿ: ಉತ್ತಮ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಯಕತ್ವವನ್ನು ಸಮಾಜಕ್ಕೆ ನೀಡಿದಾಗ ಜನರು ಕೂಡ ಅಂತಹ ನಾಯಕನ್ನು ಒಪ್ಪಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸರ್ವರೊಂದಿಗೆ ಬೆರೆತು ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಸಹಕಾರಿ ಕ್ಷೇತ್ರದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ […]
ಬಾರ್ಕೂರಿನ ನ್ಯಾಷನಲ್ ಹೈಸ್ಕೂಲ್ನಲ್ಲಿ ಹಳೆಯ ವಿದ್ಯಾರ್ಥಿಗಳ ಉದಾರ ಕೊಡುಗೆಯಿಂದ ಡಿಜಿಟಲ್ ಕಲಿಕೆಯನ್ನು ಹೆಚ್ಚಿಸುತ್ತದೆ.ಬೆಂಗಳೂರಿನ ಬ್ರಾಡಿ ಕಂಪನಿ ಲಿಮಿಟೆಡ್ನಿಂದ ಹೊಸ ಕಂಪ್ಯೂಟರ್ ಸೆಟ್ಗಳ ಉದಾರ ದೇಣಿಗೆಯನ್ನು ನ್ಯಾಷನಲ್ ಪಿಯು ಕಾಲೇಜು ಗುರುತಿಸುತ್ತದೆ ಮತ್ತು ಅವರ ಹಳೆಯ ವಿದ್ಯಾರ್ಥಿಗಳ ಉಪಕ್ರಮ ಮತ್ತು ಕಾಳಜಿಗೆ ಧನ್ಯವಾದಗಳನ್ನು ಅರ್ಪಿಸುತ್ತದೆ…ಬಾರ್ಕೂರು, ಮಾರ್ಚ್ 29, 2025 – ಬಾರ್ಕೂರಿನ ನ್ಯಾಷನಲ್ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗವು ತನ್ನ ಹಳೆಯ ವಿದ್ಯಾರ್ಥಿಗಳು 6 ಹೊಚ್ಚ ಹೊಸ ಕಂಪ್ಯೂಟರ್ ಸೆಟ್ಗಳು, 5 ಮಾನಿಟರ್ಗಳು, ಒಂದು ಯುಪಿಎಸ್ ಮತ್ತು ಎರಡು […]
ಕುಂದಾಪುರದ ಪ್ರತಿಷ್ಟಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ “ಸಾವಿಷ್ಕಾರ್ 2025” ಏಪ್ರಿಲ್ 2 ಮತ್ತು 3 ರಂದು ಬಹಳ ವಿಜೃಂಭಣೆ ಇಂದ ನಡೆಯಲಿದೆ. ರಾಜ್ಯಧ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ತಾಂತ್ರಿಕ ಮತ್ತು ಸಾಂಸ್ಕೃತಿಕ ಸಂಬಂದಿಸಿದ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಲಿದ್ದಾರೆ. ಎಲ್ಲಾ ಸ್ಪರ್ಧೆಗಳ ವಿಜೇತರಿಗೆ ನಗದು ಹಣ ಸಹಿತ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಸ್ಪರ್ಧಾಕೂಟದ ವಿಶೇಷ ಆಕರ್ಷಣೆಯಾಗಿ ಹಲವು ಆಕರ್ಷಕ ಮಾದರಿಗಳ ಕಾರು ಮತ್ತು […]
ಸಂತತ್ವದ ಹಾದಿಯಲ್ಲಿ ವಿನಮ್ರ ಕುರುಬ ಫಾದರ್ ಆಲ್ಫ್ರೆಡ್ ರೋಚ್, OFM ಕ್ಯಾಪ್., ತಮ್ಮ ಸಂತ ಜೀವನ, ನಿಸ್ವಾರ್ಥ ಸೇವೆ ಮತ್ತು ಆಳವಾದ ಆಧ್ಯಾತ್ಮಿಕತೆಗೆ ಹೆಸರುವಾಸಿಯಾದ ಕ್ಯಾಪುಚಿನ್ ಪಾದ್ರಿಯಾಗಿದ್ದರು. ಅವರ ಪಾದ್ರಿಯ ಧ್ಯೇಯ, ವಿಶೇಷವಾಗಿ ಕರ್ನಾಟಕದಲ್ಲಿ, ನಂಬಿಕಸ್ಥರ ಮೇಲೆ ಅಳಿಸಲಾಗದ ಗುರುತು ಬಿಟ್ಟಿತ್ತು. ಚರ್ಚ್ ಈಗ ಅವರ ಸಂತ ಪದವಿ ಪ್ರದಾನದ ಉದ್ದೇಶವನ್ನು ಮುಂದುವರಿಸುತ್ತಿದ್ದಂತೆ, ಏಪ್ರಿಲ್ 3, 2025 ರಂದು ಬ್ರಹ್ಮಾವರದ ಹೋಲಿ ಫ್ಯಾಮಿಲಿ ಚರ್ಚ್ನಲ್ಲಿ ಅವರ ಜನ್ಮ ಶತಮಾನೋತ್ಸವದ ಅಂತಿಮ ಆಚರಣೆಯು ಅವರ ಪರಂಪರೆಯನ್ನು ಗೌರವಿಸುವಲ್ಲಿ ಮಹತ್ವದ […]
ದಿನಾಂಕ ಮಾರ್ಚ್ 18ರಂದು ಕುಂದಾಪುರದ ಈಸ್ಟ್ ಬ್ಲಾಕ್ ರಸ್ತೆಯಲ್ಲಿರುವ ರಾಘವೇಂದ್ರ ಭಜನಾ ಮಂದಿರದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಶ್ರೀಯುತ ಹೆಗ್ಡೆ ಸುಧೀರ್ ಖಾರ್ವಿ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಶ್ರೀಯುತ ಗಣೇಶ್ ಹೆಚ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಶ್ರೀಯುತ ಸಂತೋಷ ನಾಯ್ಕ್ ಕಾರ್ಯದರ್ಶಿಯಾಗಿ ಮತ್ತು ಗೌತಮ್ ಖಾರ್ವಿ ಕೋಶಾಧಿಕಾರಿಯಾಗಿ ಹೊಸ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಕುಂದಾಪುರದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿರುವ ಫ್ರೆಂಡ್ಸ್ ಗ್ರೂಪ್, ಮುಂಬರುವ ದಿನಗಳಲ್ಲಿ ಇನ್ನಷ್ಟು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಕ್ರೀಡಾ ಕಳಕಳಿಯ ವಿನೂತನ […]

