
ಲಯನ್ಸ್ ಕ್ಲಬ್ ಬಾರ್ಕೂರು, ನ್ಯಾಷನಲ್ ಐಟಿಐ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್, ಕುಂದಾಪುರ ಇವರ ಸಹಯೋಗದಲ್ಲಿ ಇಂದು ನಮ್ಮ ಸಂಸ್ಥೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದಿ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಬಿ.ಶಾಂತಾರಾಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರು ವಹಿಸಿದ್ದರು. NITI ಬಾರ್ಕೂರಿನ ಪ್ರಾಂಶುಪಾಲ ಪ್ರೊ.ಕ್ರಮಧಾರಿ ಅವರು ಎಲ್ಲಾ ಗಣ್ಯರಿಗೆ ಮತ್ತು ಭಾಗವಹಿಸಿದವರಿಗೆ ಆತ್ಮೀಯ ಮತ್ತು […]

ಉಡುಪಿ: 2024 ರ ಡಿಸೆಂಬರ್ 31 ರಂದು ಇಲ್ಲಿಗೆ ಸಮೀಪದ ಉಡುಪಿ ಧರ್ಮಪ್ರಾಂತ್ಯದ ಕಲಿಯಾನಪುರದ ಮಿಲಾಗ್ರೆಸ್ ಕ್ಯಾಥೆಡ್ರಲ್ನಲ್ಲಿ ದೇವರ ಪವಿತ್ರ ಮಾತೆ ಮತ್ತು ಹೊಸ ವರ್ಷದ ಮುನ್ನಾದಿನದ ಜಾಗರಣೆ ಮಾತೆ ಮೇರಿ ಅವರ ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಸುಂದರವಾದ ಸಂಜೆ ಪ್ರಾರ್ಥನೆ ಮತ್ತು ಹೊಸ ವರ್ಷದ ಮುನ್ನಾದಿನವು Mngr ನೇತೃತ್ವದ 7pm ನಿಂದ ಪವಿತ್ರ ಸಂಸ್ಕಾರದ ಆರಾಧನೆಯೊಂದಿಗೆ ಪ್ರಾರಂಭವಾಯಿತು. ಫರ್ಡಿನಾಂಡ್ ಗೊನ್ಸಾಲ್ವಿಸ್, ಕ್ಯಾಥೆಡ್ರಲ್ ರೆಕ್ಟರ್ ಮತ್ತು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅಪಾರ ಭಕ್ತರೊಂದಿಗೆ. […]

ಕುಂದಾಪುರ; ಆರತಿರಾಜ್ ಟ್ರೈನಿಂಗ್ ಸೆಂಟರ್ ಕುಂದಾಪುರ, ಮಹಿಳೆಯರಿಗಾಗಿ ನಡೆದ ಉಚಿತ ಟೈಲರಿಂಗ್ ಶಿಬಿರದ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ನಡೆಯಿತು, ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ, ಅಶೋಕ್ ಸುವರ್ಣ ನಾಮ ನಿರ್ದೇಶಕ ಸದಸ್ಯರು ಪುರಸಭೆ ಕುಂದಾಪುರ, ಪ್ರಸಾದ್ ಖಾರ್ವಿ ಬಯೋ ಟೆಕ್ನಿಕಲ್ ಮೆಡಿಕಲ್ ಎಂಜಿನಿಯರ್ ಕತಾರ್ , ಹಾಗೂ ಸದಾನಂದ ಖಾರ್ವಿ ಅಧ್ಯಕ್ಷರು ಶ್ರೀ ಮಂಜುನಾಥ ಭಜನಾ ಮಂಡಳಿ ಖಾರ್ವಿಕೇರಿ ಕುಂದಾಪುರ ಭಾಗವಹಿಸಿದ್ದರು,ಸಂಸ್ಥೆಯ ಮಾಲೀಕರಾದ ರಾಜೇಶ್ ಖಾರ್ವಿ ಶ್ರೀಮತಿ ಆರತಿರಾಜ್ ಹಾಗೂ ತರಬೇತುದಾರರಾದ ಶ್ರೀಲತಾ ಪ್ರಶಾಂತ್ ಆಚಾರ್ಯ, ಜುಬೇದ […]

ಕುಂದಾಪುರ (ಡಿ.31): ಶ್ರೀ ಸಿದ್ಧಿವಿನಾಯಕ ಚೆಸ್ ಅಕಾಡೆಮಿ(ರಿ.) ಉಪ್ಪುಂದ ಇದರ ವತಿಯಿಂದ ಬ್ರಹ್ಮಾವರದಲ್ಲಿ ಡಿ.22 ರಂದು ನಡೆದ ಶ್ರೀ ಸಿದ್ಧಿವಿನಾಯಕ ಟ್ರೋಫಿ 2024 ರ ಚೆಸ್ ಪಂದ್ಯಾಟದಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ಎರಡನೇ ತರಗತಿ ವಿದ್ಯಾರ್ಥಿ ಶ್ರೀನಿತ್ ಶೇಟ್ 7ರ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿ 6 ರೌಂಡ್ಸ್ ಗಳಲ್ಲಿ5 ಪಾಯಿಂಟ್ಸ್ ಗಳನ್ನು ಗಳಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಈ ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗು ಎಲ್ಲಾ […]

ಶಂಕರನಾರಾಯಣ : ಕಳೆದ ಎರಡೂವರೆ ದಶಕಗಳಿಂದ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸಿ ಹತ್ತು ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದು ಪ್ರಸ್ತುತ ಮದರ್ ತೆರೇಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣ, ಕುಂದಾಪುರ ತಾಲೂಕಿನಲ್ಲಿ ಮುಖ್ಯಶಿಕ್ಷಕರಾಗಿ ಸೇವೆಸಲ್ಲಿಸುತ್ತಿರುವ ಶ್ರೀ ರವಿದಾಸ್ ಶೆಟ್ಟಿ ಇವರ ನಿಷ್ಠಾವಂತ,ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಎಷಿಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಕೊಯಂಬತ್ತೂರು ತಮಿಳುನಾಡಿನ ಹೊಸೂರು ಕ್ಲಾಸ್ಟಾ ಹಿಲ್ಸ್ ನಲ್ಲಿ ನಡೆದ ಘಟಿಕೋತ್ಸವದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದ […]

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ), ಸಿಟಿ ವಲಯವು ಈ ವರ್ಷದ ಕ್ರಿಸ್ಮಸ್ ಹಬ್ಬವನ್ನು ಒಂದು ಬಡ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿ ವಿಭಿನ್ನ ಹಾಗೂ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು. ವಲಯಕ್ಕೆ ಒಳಪಟ್ಟ ಎಲ್ಲಾ ಘಟಕಗಳು ಹಾಗೂ ಸದಸ್ಯರ ಆರ್ಥಿಕ ನೆರವು ರುಪಾಯಿ 90,000/- ವನ್ನು ಕ್ರಿಸ್ಮಸ್ ದಿನದಂದು ಸಿಟಿ ವಲಯದ ಅಧ್ಯಕ್ಷರಾದ ಶ್ರೀಯುತ ಅರುಣ್ ಡಿಸೋಜ ಇವರು ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀಯುತ ಡೇವಿಡ್ ಕ್ರಾಸ್ತಾ ಇವರಿಗೆ ಹಸ್ತಾಂತರ ಮಾಡಿದರು. ಈ ವೇಳೆ ಸಿಟಿ ವಲಯದ […]

ಉಡುಪಿ: 2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷಗಳಾಗಿದ್ದು ಅದನ್ನು ಸಾಮಾನ್ಯ ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು ಉಡುಪಿ ಧರ್ಮಪ್ರಾಂತ್ಯದಲ್ಲಿ ಡಿಸೆಂಬರ್ 29 ರಂದು ಭಾನುವಾರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉಡುಪಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಚಾಲನೆ ನೀಡಿದರು. ಜುಬಿಲಿ ವರ್ಷಕ್ಕೆ ಡಿಸೆಂಬರ್ 24 ರಂದು ವ್ಯಾಟಿಕನ್ ನಲ್ಲಿ ಜಗದ್ಗುರು ಪೋಪ್ ಜಗದ್ಗುರು ಫ್ರಾನ್ಸಿಸ್ ಅವರು ಸೈಂಟ್ ಪೀಟರ್ ಬೆಸಿಲಿಕಾದ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉದ್ಘಾಟನೆ ಮಾಡಿದ್ದು […]

ಮೂಲ ವಿಜ್ಞಾನ ಮತ್ತು ಮಾನವಿಕ ವಿಭಾಗದ ವತಿಯಿಂದ ಎಂಐಟಿ ಕುಂದಾಪುರದಲ್ಲಿ ಆಯೋಜಿಸಿದ್ದ ವಿಜ್ಞಾನ ಮಾದರಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ವೈಜ್ಞಾನಿಕ ಪರಿಕಲ್ಪನೆಗಳ ತಿಳುವಳಿಕೆಯನ್ನು ಹೆಚ್ಚಿಸುವ ಜೊತೆಗೆ ವಿದ್ಯಾರ್ಥಿಗಳಲ್ಲಿ ಆವಿಷ್ಕಾರ ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕೋಟ ವಿವೇಕ ಪಿಯು ಕಾಲೇಜಿನ ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥೆ ಪ್ರೊ.ಸುಜಾತಾ , ಕೋಟ ವಿವೇಕ ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕಿ ಯಶವಂತಿ ಸ್ಪರ್ಧೆಯ ತೀರ್ಪುಗಾರಾಗಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ 80 […]

ಕುಂದಾಪುರ; ಆರೋಗ್ಯ ತಪಾಸಣಾ ಶಿಬಿರ ರೆಡ್ ಕ್ರಾಸ್ ಸಂಸ್ಥೆಯು ನಿಯತವಾಗಿ ನಡೆಸುತ್ತಾ ಬಂದಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಇತ್ತೀಚಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ಬಳಿಯಿರುವ ಜನೌಷಧಿ ಕೇಂದ್ರದ ವಠಾರದಲ್ಲಿ ಜರುಗಿದ್ದು 150ಕ್ಕೂ ಅಧಿಕ ಮಂದಿ ಇದರ ಪ್ರಯೋಜನ ಪಡೆದರು.