ಮಂಗಳೂರು, ಆ. 13: ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (ಪಿಎಂಐ), ಮಂಗಳೂರು ಘಟಕದ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು ಸಹಯೋಗದಲ್ಲಿ ನಗರದ ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಕೈದಿಗಳಿಗಾಗಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜೈಲು ಅಧೀಕ್ಷಕ ಶರಣಬಸಪ್ಪ ಅವರು, ಜೈಲನ್ನು ಕೇವಲ ಶಿಕ್ಷೆಯ ಸ್ಥಳವಾಗಿ ನೋಡದೆ **‘ತಿದ್ದುಪಡಿ ಕೇಂದ್ರ’**ವಾಗಿ ಪರಿಗಣಿಸಬೇಕು. ತಮ್ಮ ತಪ್ಪುಗಳನ್ನು ಅರಿತುಕೊಂಡು ಜೀವನವನ್ನು ಸುಧಾರಿಸಿಕೊಂಡು ಸಮಾಜಕ್ಕೆ ಜವಾಬ್ದಾರಿಯುತ ವ್ಯಕ್ತಿಗಳಾಗಿ ಮರಳಲು ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂದರು. […]
ಉಡುಪಿ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಪ್ರತಿಮೆಯ ಮೆರವಣಿಗೆಯು ಗುರುವಾರ ಆದಿಉಡುಪಿಯಿಂದ ಕಲ್ಮಾಡಿ ಚರ್ಚಿನವರೆಗೆ ಅದ್ದೂರಿಯಿಂದ ನಡೆಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಗುರುಗಳಾದ ವಂ|ಫ್ರಾಂಕ್ಲಿನ್ ಡಿಸೋಜಾ ವೆಲಂಕಣಿ ಮಾತೆಯ ಮೂರ್ತಿಯನ್ನು ಆಶೀರ್ವದಿಸಿ ಮೆರವಣಿಗೆಗೆ ಚಾಲನೆ ನೀಡಿದರು. ವಾರ್ಷಿಕ ಹಬ್ಬಗಳ ಸಂದರ್ಭದಲ್ಲಿ ಚರ್ಚುಗಳ ಪಾಲಕರ ಮಂಜೂಶಾ (ಮೂರ್ತಿ)ಗಳನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಕೊಂಡೊಯ್ದು ಗೌರವ ಸೂಚಿಸುವುದು ಕ್ರೈಸ್ತ ಸಂಪ್ರದಾಯದ ಒಂದು ಭಾಗವಾಗಿದೆ. ವೆಲಂಕಣಿ ಮಾತೆ ಪವಾಡದ ಮಾತೆ […]
ಕುಂದಾಪುರ, ದಿನಾಂಕ : 14-08-2026ರಂದು ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ 80ನೇ ಸ್ವಾತಂತ್ರೋತ್ಸವದ ಅಂಗವಾಗಿ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಸರಿ ಆಂಗ್ಲ ಮಾದ್ಯಮ ಶಾಲೆ ಮತ್ತು ಸೈಂಟ್ ಮೇರೀಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಧರ್ಮಗುರು ವಂ. ರೋಲ್ವಿನ್ ಫೆರ್ನಾಂಡೀಸ್ ರವರು ಅಧ್ಯಕ್ಷೀಯ ಸ್ಥಾನವನ್ನು ವಹಿಸಿಕೊಂಡು ‘ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಸಂಕೇತವಾಗಿದ್ದು, ಅದನ್ನು ನಾವು ಉತ್ತಮ ರೀತಿಯಲ್ಲಿ ಅನುಭವಿಸಿ ಇತರರಿಗೆ ಅನುಭವಿಸುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು. AI-ತಂತ್ರಜ್ಞಾನದ ಅಭಿವೃದ್ಧಿಯಿಂದ […]
“Bagless Day” celebrated at St. Aloysius Gonzaga Schooll ;India can become a great power in the world through unity and brotherhood: Fr. Rohan ಮಂಗಳೂರು: “ಭಾರತ ನಮ್ಮ ತಾಯ್ನಾಡು ಎಂಬ ಭಾವನೆ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿದ್ದಾಗ ಮಾತ್ರ, ಏಕತೆ ಮತ್ತು ಸಹೋದರತ್ವದ ಶಕ್ತಿಯಿಂದ ಭಾರತ ವಿಶ್ವದ ಮಹಾಶಕ್ತಿಯಾಗಿ ಬೆಳೆಯಲು ಸಾಧ್ಯ. ಭಾರತದ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನ, ರಕ್ತ ಮತ್ತು ತ್ಯಾಗವನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಅರ್ಪಿಸಿ, ಸ್ವತಂತ್ರ ಭಾರತದ […]
Rohan Corporation Marks the Finale of Freedom Palette 2026 at Rohan City ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ ಫ್ರೀಡಂ ಪ್ಯಾಲೆಟ್ 2026ರ ಅಂತಿಮ ಸುತ್ತು ಮಂಗಳೂರಿನ ಬೇಜೈಯಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು. 16 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಆಯೋಜಿಸಿದ್ದ ಸ್ಪರ್ಧೆಯ ಮೊದಲ ಸುತ್ತಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 2,857 ಚಿತ್ರಗಳು ಸ್ಪರ್ಧೆಗೆ ಸಲ್ಲಿಕೆಯಾಗಿದ್ದವು. ಈ ಪೈಕಿ 60 ಮಂದಿ ಸ್ಪರ್ಧಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. “ದಿ ಕೋಸ್ಟ್ […]
ಕೊಲ್ಲೂರು: ಕೊಲ್ಲೂರಿನ ಕೆಲವೆಡೆ ಲಘು ಭೂ ಕಂಪನವಾಗಿರುವುದಾಗಿ ನಿವಾಸಿಗಳು ತಿಳಿಸಿದ್ದಾರೆ. ಮಂಗಳವಾರಮಧ್ಯಾಹ್ನ 3.20ರ ಸುಮಾರಿಗೆ ಮನೆಯು ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ಕೊಲ್ಲೂರು ನಗರ, ಕಲ್ಯಾಣಿಗುಡ್ಡೆ, ಹಳ್ಳಿಬೇರು ಮುಂತಾದ ಕಡೆ10 ಸೆಕುಂಡುಗಳ ಕಾಲ ಭೂಮಿ ಕಂಪಿಸಿದೆ, ಪಾತ್ರೆಗಳು ನೆಲಕ್ಕೆ ಬಿದ್ದವು. ಭಯದಿಂದ ಮನೆಯ ಹೊರಗಡೆ ಓಡಿರುವುದಾಗಿ ಹೆಗ್ಡೆ ಹಕ್ಲು ನಿವಾಸಿ ಚಂದ್ರ ಬಳೇಗಾರ್ ತಿಳಿಸಿದ್ದಾರೆ. ಕೊಲ್ಲೂರು ನಿವಾಸಿ ರಮೇಶ ಕುಂದರ್, ರಿಕ್ಷಾ ಚಾಲಕ ರಾಜು, ಸುದರ್ಶನ ಜೋಯಿಸ್ ಭೂಮಿ ಕಂಪಿಸಿದ ಅನುಭವ ಹಂಚಿಕೊಂಡಿದ್ದಾರೆ. ಕಲ್ಯಾಣಿ ಗುಡ್ಡೆಯಲ್ಲಿಯೂ ಇದೇ ಅನುಭವ […]
Attur Basilica Celebrates Decennial of Dedication ಕಾರ್ಕಳ: ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಬಡವರ ನಿರ್ಗತಿಕರ ಹಾಗೂ ತುಳಿತಕ್ಕೆ ಒಳಪಟ್ಟ ಕಷ್ಟಕಾರ್ಪಣ್ಯಗಳನ್ನು ಅರಿತುಕೊಂಡು ಅವರ ಬಾಳಿನಲ್ಲಿ ಸಂತೋಷವನ್ನು ತರಲು ಕಾರಣವಾದಾಗ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಧರ್ಮಾದ್ಯಕ್ಷರಾದ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾರವರು ಅಭಿಪ್ರಾಯಪಟ್ಟರು. ಅವರು ಇತಿಹಾಸ ಪ್ರಸಿದ್ಧ ಸಂತ ಲಾರೆನ್ಸರ ಬಾಸಿಲಿಕದ ಸಮರ್ಪಣೆ ಸಮರ್ಪಣೆಯ ದಶಮಾನೋತ್ಸವದ ಹಾಗೂ ಪಾಲಕ ಸಂತರ ಹಬ್ಬದ ಪ್ರಯುಕ್ತ ಬಲಿ ಪೂಜೆಯಲ್ಲಿ ಪಾಲ್ಗೊಂಡು […]
“ಚಾರ್ಟರ್ಡ್ ಅಕೌಂಟೆನ್ಸಿ ಕೇವಲ ವೃತ್ತಿಯಲ್ಲ; ಇದು ವೃತ್ತಿಪರ ಮನ್ನಣೆ, ಆರ್ಥಿಕ ಪರಿಣತಿ ಮತ್ತು ಸಾಮಾಜಿಕ ಜವಾಬ್ದಾರಿಗೆ ಒಂದು ಮಾರ್ಗವಾಗಿದೆ” Reported by: Prof. Ganesh Nayak Photography by: Miss Soujanya ಬ್ರಹ್ಮಾವರ, ಆಗಸ್ಟ್ 7, 2026: ಹೆಚ್ಚುತ್ತಿರುವ ಜಾಗತೀಕರಣಗೊಂಡ ಮತ್ತು ಹೆಚ್ಚು ಸ್ಪರ್ಧಾತ್ಮಕ ವಾತಾವರಣದಲ್ಲಿ, ಸರಿಯಾದ ವೃತ್ತಿಪರ ಕೋರ್ಸ್ ಅನ್ನು ಆಯ್ಕೆ ಮಾಡುವುದು ಯಶಸ್ವಿ ವೃತ್ತಿಜೀವನವನ್ನು ನಿರ್ಮಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ವಾಣಿಜ್ಯ ವಿದ್ಯಾರ್ಥಿಗಳ ಬೆಳೆಯುತ್ತಿರುವ ಆಕಾಂಕ್ಷೆಗಳನ್ನು ಮತ್ತು ಹಣಕಾಸು, ತೆರಿಗೆ ಮತ್ತು ಲೆಕ್ಕಪತ್ರ ಕ್ಷೇತ್ರಗಳಲ್ಲಿ […]
ಕುಂದಾಪುರ: ಪದವಿ ಯೊಂದಿಗೆ ಕೌಶಲ್ಯ ಅಭಿವೃದ್ಧಿ ಇಂದಿನ ಶಿಕ್ಷಣದ ಅಗತ್ಯ. ಪದವಿ ಪಾಠಗಳ ಜೊತೆಗೆ ಹಲವು ವಿಷಯಗಳ ಕುರಿತು ಡಿಪ್ಲೊಮಾ ಮಾಡಬಹುದಾಗಿದೆ. ಈ ಸರ್ಟಿಫಿಕೇಟ್ ಜೀವನದಲ್ಲಿ ಪದವಿ ನಂತರ ಮುನ್ನಡೆಯಲು ಸಹಕಾರಿ. ವಿದ್ಯಾರ್ಥಿಗಳಿಗೆ ಉತ್ತಮ ಸಂಪನ್ಮೂಲ ತಜ್ಞರು ತರಬೇತಿ ನೀಡಲಿದ್ದು ಈ ಪ್ರಯೋಗ ಬಹಳಷ್ಟು ಕಾಲೇಜುಗಳಲ್ಲಿ ಯಶಸ್ವಿಯಾಗಿದೆ ಎಂದು ಮಣಿಪಾಲದಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ಛೇರ್ಮನ್ ಬ್ರಿಗೇಡಿಯರ್ ಡಾ.ಸುರ್ಜಿತ್ ಸಿಂಗ್ ಪಾಬ್ಲಾ ಹೇಳಿದರು.ಅವರು ಭಂಡಾರ್ಕಾರ್ಸ್ ಕಾಲೇಜು ಏರ್ಪಡಿಸಿದ “ಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೊಮಾ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಹಿತಿ […]

