
ಕುಂದಾಪುರ:ಜು.24. ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆಯಲ್ಲಿ ಜು.23 ರಂದು ಯುವಕನೋರ್ವ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ನೀರುಪಾಲಾದ ಯುವಕ. ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂದು ತಿಳಿದು ಬಂದಿದೆ. ಭಾನುವಾರ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದ ಶರತ್ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ ಕಾಲು ಜಾರಿ […]

ಪಡುಕೊಣೆ: ದಿನಾಂಕ 23.07.2023 ರಂದು ಸಂತ ಅಂತೋನಿ ಪಡುಕೊಣೆ ಚರ್ಚ್ ನಲ್ಲಿ ಕ್ರಿಸ್ತ ಸಮುದಾಯದ 70 ವರ್ಷ ಮೇಲ್ಪಟ್ಟವರ ಜೊತೆ ವಯಸ್ಕರ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರುಗಳು ವಂ ಫಾ ಫ್ರಾನ್ಸಿಸ್ ಕರ್ನೆಲಿಯೊರವರು ವಹಿಸಿ ’ಹಿರಿಯರು ಕುಟುಂಬದ ಆಸ್ತಿ ಅವರನ್ನು ನಾವು ಪ್ರೀತಿಯಿಂದ ಆರೈಕೆ ಮಾಡುವುದುರೊಂದಿಗೆ ಅವರನ್ನು ಗೌರವಿಸೋಣ’ ಎಂದು ಅವರು ಸಂದೇಶ ನೀಡಿದರು. ಅತಿಥಿಗಳಾಗಿ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಪ್ರಭು ಕೆನಡಿ ಪಿರೇರ ಕಾರ್ಯದರ್ಶಿ ಶ್ರೀ ಅಲೆಕ್ಸ್ ಅಂತೋನಿ ಡಿಸೋಜ ಮತ್ತು 21 […]

ಮಂಗಳೂರು: ಜು.೨೪ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ,ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಇಂದು ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ಕ್ಲಾಕ್ ಟವರ್ ಮುಂಭಾಗದಲ್ಲಿ ದಿನಾಂಕ ಜುಲಾಯ್ ೨೩ ರಂದು ಬೃಹತ್ ಪ್ರತಿಭಟನೆ ನಡೆಯಿತು. ಸುರಿಯುತ್ತಿದ್ದ ಧಾರಾಕಾರ ಮಳೆಯನ್ನೂ ಲೆಕ್ಕಿಸದೆ ಅಪಾರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು.ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜಾತ್ಯಾತೀತ ಪಕ್ಷಗಳು ಮತ್ತು ಸಂಘಟನೆಗಳ ಜಂಟಿ ವೇದಿಕೆಯ ಅಧ್ಯಕ್ಷರಾದ ಮಾಜಿ ಸಚಿವ ಬಿ ರಮಾನಾಥ […]

ಕುಂದಾಪುರ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಭಾರತದ ಆತ್ಮವನ್ನು ಘಾಸಿಗೊಳಿಸಿದೆ. ನಾವೆಲ್ಲರೂ ತಲೆ ತಗ್ಗಿಸಿ ನಿಲ್ಲುವಂತಾಗಿದೆ* ಹಿಂಸಾಚಾರದಲ್ಲಿ ನಲುಗಿರುವ ಮಣಿಪುರ ಜನತೆ, ಅತ್ಯಾಚಾರಕ್ಕೊಳಗಾದ ಮಹಿಳೆಯರ ಜೊತೆ ನಾವೆಲ್ಲರೂ ನಿಲ್ಲಬೇಕಿದೆ. ಈ ಹಿಂಸಾಚಾರಕ್ಕೆ ಅಂತ್ಯ ಹಾಡುವಂತೆ ಸರ್ಕಾರವನ್ನು ಒತ್ತಾಯಿಸಬೇಕಿದೆ.ಆ ನಿಟ್ಟಿನಲ್ಲಿ ಕುಂದಾಪುರದ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ತಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸುವೆವು. ದಿನಾಂಕ: 24/07/2023 ಸ್ಥಳ : ಶಾಸ್ತ್ರೀ ಸರ್ಕಲ್ ಕುಂದಾಪುರ ಸಮಯ : ಸಂಜೆ 6.00 ಕ್ಕೆ ಸಹಬಾಳ್ವೆ ಕುಂದಾಪುರ, […]

ICYM, Commission for Ecology ( Parisar Ayog) and Youth Commission ( Yuva Ayog) of Bajjodi Unit organized Laudate Si Sunday on 23rd July, 2023 at 7.40 am in the Church Premises to mark the World Environment Day. The programme started with a Prayer Song by the ICYM members. Fr. Dominic Vas, Parish Priest of Infant […]

ಉಡುಪಿ:ಜು.23: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ಮುನ್ಸುಚನೆ ನೀಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಈ ಮೊದಲು ಕೇವಲ ಬೈಂದೂರು ತಾಲೂಕಿಗೆ ಸೀಮಿತವಾಗಿ ಘೋಷಣೆ ಮಾಡಿದ್ದ ಆದೇಶವನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ನೂತನ ಆದೇಶ ಹೊರಡಿಸಿದ್ದಾರೆ.

ಕಾಂಞಂಗಾಡ್: ಇತ್ತೀಚಿಗೆ ಕೇರಳದ ಕಾಂಞಂಗಾಡ್ನಲ್ಲಿ ನಡೆದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿದ್ದ ಕಾರ್ಯಕ್ರಮದಲ್ಲಿ್ಕುಂದಾಪುರದ ವಸಂತ ಬೇಕರಿ ಮಾಲೀಕರಾದ K P ಶ್ರೀಶನ್ , ಮುಖ್ಯ ಅತಿಥಿಯಾಗಿದ್ದು, ವಿಶ್ವ ಪ್ರಸಿದ್ಧ ಜಾದುಗಾರ ಪ್ರೊಫೆಸರ್ ಡಾ|| ಶ್ರೀಗೋಪಿನಾಥ್ ಮುದುಕಾಡ್, ಮತ್ತು ಉದ್ಯಮಿ ಫಿಲಂಪ್ರೊಡ್ಯೂಸರ್,MMC ಮೆಡಿಕಲ್ ಗ್ರೂಪನ ಚೇರ್ಮನ್ ಶ್ರೀ ಮನ್ಸೂರ್ ಪಳ್ಳೂರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. K P Sreeshan as President of Anti-Drug Day Program in Kanhangad Kanhangad: In the recently held […]

ಕಾಸರಗೋಡು ಜು 22: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತುಕೊಂಕಣಿ ಸಾಹಿತಿ, ಭಾಷಾ ತಜ್ನ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಭಿಕರಿಗೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಡಿ ಶಂಕರ ಗ್ರಾಮಲೋಕ ಕಾರ್ಯಕ್ರಮಕ್ಕಾಗಿ ಬದಿಯಡ್ಕ ಎಂಬ ಸಣ್ಣ ಗ್ರಾಮವನ್ನು ಆಯ್ಕೆ ಮಾಡಿದಕ್ಕಾಗಿ ಅಕಾಡೆಮಿ […]

ಕಾರ್ಕಳ : ಮಣಿಪುರದಲ್ಲಿ ಕುಕಿ-ಬೋ ಸಮುದಾಯದ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಕುಕೃತ್ಯಕ್ಕೆ ಸುಪ್ರೀಂಕೋರ್ಟ್ ಹಾಕಿರುವ ಛೀಮಾರಿ ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ಕೃತ್ಯಗಳು ನಡೆಯಲು ಅಲ್ಲಿನ ರಾಜ್ಯ ಸರಕಾರದ ಪಾಲೆಷ್ಟಿದೆಯೋ, ಕೇಂದ್ರದ ಪಾಲು ಅಷ್ಟೇ ಇದೆ’ ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತಿನ ವಡೋದರದ ಬೀದಿಯಲ್ಲಿ ಅಲ್ಪಸಂಖ್ಯಾತ ಗರ್ಭಿಣಿ ಮಹಿಳೆಯ ಹೊಟ್ಟೆಗೆ ತಿವಿದು, ಮಗುವನ್ನು ಹೊರ ತೆಗೆದು ಅದನ್ನು ತ್ರಿಶೂಲದಿಂದ ಚುಚ್ಚಿ […]