ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ “ಸ್ನೇಹ ಮಿಲನ-2024 ” ಎಂಬ  ಕ್ರಿಸ್‌ಮಸ್ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್ 2024 ರಂದು ಆಚರಿಸಲಾಯಿತು ಸ್ನೇಹಾಲಯದ ವಾರ್ಷಿಕ  ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿಹೊಸ ಉತ್ಸಾಹವನ್ನು  ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ ಐಪಿಎಸ್, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್ ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು. ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ ಮರಿಯದಾಸ್, […]

Read More

ಕುಂದಾಪುರ. ದಿನಾಂಕ 23-12-2024 ಸೋಮವಾರದಂದು ಕುಂದಾಪುರ ಸೈoಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಅಧ್ಯಕ್ಷರು ಆಗಿರುವ ಪೂಜ್ಯನೀಯ ಫಾ. ಪಾವ್ಲ್ ರೇಗೋ ರವರು ಮಾತನಾಡಿ ನಮ್ಮಲ್ಲಿ ಪರಸ್ಪರ ಸಹಬಾಳ್ವೆ ಇರಬೇಕು. ಕಿಂಚಿತ್ತಾದರೂ ನಮ್ಮಿಂದ ಇನ್ನೊಬ್ಬರಿಗೆ ಸಹಾಯ ಮಾಡಬೇಕು. ಎನ್ನುತ್ತಾ ಕ್ರಿಸ್ಮಸ್ ಸಂದೇಶದೊಂದಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೇಷ್ಮಾ ಫೇರ್ನಾಂಡೀಸ್ ರವರು, ಸಾಂಸ್ಕೃತಿಕ ಸಂಘದ ವಿದ್ಯಾರ್ಥಿ ಪದಾಧಿಕಾರಿಗಳಾದ ರಿಯಾ ಡಿಸೋಜಾ […]

Read More

ಕುಂದಾಪುರ : ಜಮಿಯತುಲ್ ಮುಸ್ಲಿಮೀನ್ ಕುಂದಾಪುರ ಹಾಗೂ ಕುಂದಾಪುರ ಗ್ರೂಪ್ ಚಾರಿಟೇಬಲ್ ಸೆಂಟರ್ ಇವರ ಸಹಯೋಗದಲ್ಲಿ ದಾನಿಗಳಿಂದ ನೆರವಿನಿಂದ ಸುಮಾರು 10ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಎರಡು ಮನೆಗಳನ್ನು ಬಡತನದಿಂದ ವಸತಿ ಸೌಕರ್ಯ ವಿಲ್ಲದೆ ದಯನೀಯ ಸ್ಥಿತಿಯಲ್ಲಿದ್ದ ಕುಂದಾಪುರ ಕಸಬಾ ಗುಡ್ಡೆ ನಿವಾಸಿಗಳಾದ ಮೈಮುನಾ ಹಾಗೂ ರಮಿಝ ಇವರಿಗೆ ಇಂದು ಸೋಮವಾರ( 23.12.24) ಹಸ್ತಾಂತರಿಸಲಾಯ್ತು. ಮೌಲನಾ ಶಾಹಿದ್ ಹುಸೇನ್ ಅವರ ಕಿರಾತ್ ಪಠಣದಿಂದ ಆರಂಭ ಗೊಂಡ ಸಭಾ ಕಾರ್ಯ ಕ್ರಮಕ್ಕೆ ಉದ್ಯಮಿ ಶೇಕ್ ಫರೀದ್ ಭಾಷಾ ಹಾಗೂ […]

Read More

ಕುಂದಾಪುರ: ಟೈಯರ್ ಪಂಚರ್ ಶಾಪ್ ಒಂದರಲ್ಲಿ ಸ್ಕೂಲ್ ಬಸ್ಸಿನ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟೈಯರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ತಿಳಿದುಬಂದಿದೆ. ಖಾಸಗಿ ಶಾಲೆ ಬಸ್ ಒಂದರ ಟೈಯರ್ ಪ್ಯಾಚ್ ಗೆಂದು ಬಂದಿದ್ದು ಟಯರನ್ನು ಕೆಳಗಿಳಿಸಿ ಗಾಳಿ ತುಂಬುವಾಗ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡಿದೆ. ಈ ಸಂದರ್ಭ ಗಾಳಿ ತುಂಬಿ ಯುವಕ ಎದ್ದು ಬೆನ್ನು ಹಾಕಿದಾಗ ಟೈಯರ್ […]

Read More

ಕುಂದಾಪುರ, ೨೩: ಶನಿವಾರ ತ್ರಾಸಿ ಬೀಚ್ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಬೋಟ್ ರೈಡರ್ ರೋಹಿದಾಸ್ (41) ಮೃತದೇಹ ಇಂದು ಪತ್ತೆಯಾಗಿದೆ.ಸ್ಥಳೀಯ ಮೀನುಗಾರರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಕಂಡು, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿದರು, ನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ 24x 7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ […]

Read More

ಬಜ್ಜೋಡಿ; “ದೇವರು ಮನುಷ್ಯನಾದನು ಮತ್ತು ನಮ್ಮ ನಡುವೆ ವಾಸಿಸಿದನು”. ನಮ್ಮ ಕ್ರೈಸ್ತೇತರ ಸಹೋದರರೊಂದಿಗೆ ಕ್ರಿಸ್‌ಮಸ್‌ನ ಪ್ರೀತಿ, ಶಾಂತಿ ಮತ್ತು ಸಂತೋಷದ ಸಂದೇಶವನ್ನು ಹಂಚಿಕೊಳ್ಳಲು ಸೌಹಾರ್ದ ಕೂಟವನ್ನು ಬಜ್ಜೋಡಿಯ ಇನ್‌ಫೆಂಟ್ ಮೇರಿ ಚರ್ಚ್‌ನಲ್ಲಿ ಡಿಸೆಂಬರ್ 22 ರ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನು ಫಾ. ಡೊಮಿನಿಕ್ ವಾಸ್, ಪ್ಯಾರಿಷ್ ಅರ್ಚಕ ಮತ್ತು ಗೌರವ ಅತಿಥಿಗಳು: ಕೇಶವ ಮರೋಳಿ, ಕಾರ್ಪೊರೇಟರ್; ನವೀನ್ ಡಿಸೋಜಾ, ಕಾರ್ಪೊರೇಟರ್; ಜೇಮ್ಸ್ ಪ್ರವೀಣ್, ಕಾರ್ಪೊರೇಟರ್; ಧರ್ಮಯ್ಯ, ನಿವೃತ್ತ ಉಪ ಪೊಲೀಸ್ ಆಯುಕ್ತ ನಿವೃತ್ತ ಎಎಸ್ […]

Read More

ಕುಂದಾಪುರ; ಯು.ಬಿ.ಎಂ.ಸಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ 21.12.2024 ರಂದು, 2024-25 ಬಹುಮಾನ ವಿತರಣೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಕರೆಸ್ಪಾಂಡೆಂಟ್ ಶ್ರೀಮತಿ ಐರಿನ್ ಸಾಲಿನ್ಸ್ ವಹಿಸಿದ್ದರು. ಪಾಸ್ಟರ್ ಇಮ್ಯಾನ್ಯುಯಲ್ ಜಯಕರ್ ಮತ್ತು ಶ್ರೀ ದಯಾಕರ್ ಜಾತಣ್ಣ ಮತ್ತು ಯುಬಿಎಂಸಿ ಶಾಲೆಯ ಸಹಶಿಕ್ಷಕಿ ಶ್ರೀಮತಿ ರಾಜೇಶ್ವರಿ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ, ಸಿಎಸ್‌ಐ ಕೃಪಾ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ , ಶ್ರೀಮತಿ ಸವಿತಾ, ಯುಬಿಎಂಸಿ ಅಂಗನವಾಡಿ ಶಿಕ್ಷಕಿ […]

Read More

ಕುಂದಾಪುರ,ಡಿ.22: ಸ್ಥಳೀಯ ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ಡಿ.21 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಜಂಟಿ ಕಾರ್ಯದರ್ಶಿ, ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ವಂ।ಭಗಿನಿ ಸುಪ್ರಿಯಾ ವಹಿಸಿದ್ದು, ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೋಲಿ ರೋಜರಿ ಮಾತಾ ಚರ್ಚಿನ ಧರ್ಮಗುರು ಅ।ವಂ। ಪೌಲ್ ರೇಗೊ ಪ್ರತಿಭಾ ಪುರಸ್ಕ್ರತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ “ನಿಮ್ಮ ತಂದೆ ತಾಯಿಗಳೇ ನಿಮಗೆ ಮೊದಲ ಗುರುಗಳು, ಯಾಕೆಂದರೆ ಅವರು ನಡೆಸುವ ಜೀವನ ನೋಡಿ ನೀವು ಅದನ್ನು ಅನುಕರಣೆ ಮಾಡಿ […]

Read More

ಮಂಗಳೂರು: ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಬಜಾಲ್‍ನ ಪಕ್ಕಲಡ್ಕದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಸೌಹಾರ್ದ ಕ್ರಿಸ್‍ಮಸ್ ಆಚರಣೆ ಸಡಗರದಿಂದ ನೆರವೇರಿತು. ಸ್ಥಳೀಯ ಕಾವುಬೈಲ್ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹೋಲಿ ಸ್ಪಿರಿಟ್ ಚರ್ಚ್, ಮೊಹಿಯುದ್ದೀನ್ ಜುಮ್ಮಾ ಮಸೀದಿ, ಪಕ್ಕಲಡ್ಕ, ಪಕ್ಕಲಡ್ಕ ಯುವಕ ಮಂಡಲ ಹಾಗೂ ಜನತಾ ವ್ಯಾಯಾಮ ಶಾಲೆ ಇವುಗಳ ಸಂಯುಕ್ತ ಭಾಗೀದಾರಿಕೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಉದ್ಘಾಟಕರಾಗಿದ್ದ ದೈಯ್ಜಿವರ್ಲ್ಡ್‍ನ ಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, ಮಾನವೀಯತೆಯೇ ಶ್ರೇಷ್ಠ ಧರ್ಮ, ಇತರರು ಬದಲಾಗಬೇಕೆಂದು ಬಯಸುವ ಬದಲು […]

Read More