
ಕುಂದಾಪುರ, ೨೩: ಶನಿವಾರ ತ್ರಾಸಿ ಬೀಚ್ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಬೋಟ್ ರೈಡರ್ ರೋಹಿದಾಸ್ (41) ಮೃತದೇಹ ಇಂದು ಪತ್ತೆಯಾಗಿದೆ.ಸ್ಥಳೀಯ ಮೀನುಗಾರರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಕಂಡು, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿದರು, ನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ 24x 7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ […]

ಬಜ್ಜೋಡಿ; “ದೇವರು ಮನುಷ್ಯನಾದನು ಮತ್ತು ನಮ್ಮ ನಡುವೆ ವಾಸಿಸಿದನು”. ನಮ್ಮ ಕ್ರೈಸ್ತೇತರ ಸಹೋದರರೊಂದಿಗೆ ಕ್ರಿಸ್ಮಸ್ನ ಪ್ರೀತಿ, ಶಾಂತಿ ಮತ್ತು ಸಂತೋಷದ ಸಂದೇಶವನ್ನು ಹಂಚಿಕೊಳ್ಳಲು ಸೌಹಾರ್ದ ಕೂಟವನ್ನು ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನಲ್ಲಿ ಡಿಸೆಂಬರ್ 22 ರ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನು ಫಾ. ಡೊಮಿನಿಕ್ ವಾಸ್, ಪ್ಯಾರಿಷ್ ಅರ್ಚಕ ಮತ್ತು ಗೌರವ ಅತಿಥಿಗಳು: ಕೇಶವ ಮರೋಳಿ, ಕಾರ್ಪೊರೇಟರ್; ನವೀನ್ ಡಿಸೋಜಾ, ಕಾರ್ಪೊರೇಟರ್; ಜೇಮ್ಸ್ ಪ್ರವೀಣ್, ಕಾರ್ಪೊರೇಟರ್; ಧರ್ಮಯ್ಯ, ನಿವೃತ್ತ ಉಪ ಪೊಲೀಸ್ ಆಯುಕ್ತ ನಿವೃತ್ತ ಎಎಸ್ […]

ಕುಂದಾಪುರ; ಯು.ಬಿ.ಎಂ.ಸಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ 21.12.2024 ರಂದು, 2024-25 ಬಹುಮಾನ ವಿತರಣೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಕರೆಸ್ಪಾಂಡೆಂಟ್ ಶ್ರೀಮತಿ ಐರಿನ್ ಸಾಲಿನ್ಸ್ ವಹಿಸಿದ್ದರು. ಪಾಸ್ಟರ್ ಇಮ್ಯಾನ್ಯುಯಲ್ ಜಯಕರ್ ಮತ್ತು ಶ್ರೀ ದಯಾಕರ್ ಜಾತಣ್ಣ ಮತ್ತು ಯುಬಿಎಂಸಿ ಶಾಲೆಯ ಸಹಶಿಕ್ಷಕಿ ಶ್ರೀಮತಿ ರಾಜೇಶ್ವರಿ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ, ಸಿಎಸ್ಐ ಕೃಪಾ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ , ಶ್ರೀಮತಿ ಸವಿತಾ, ಯುಬಿಎಂಸಿ ಅಂಗನವಾಡಿ ಶಿಕ್ಷಕಿ […]

ಕುಂದಾಪುರ,ಡಿ.22: ಸ್ಥಳೀಯ ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ಡಿ.21 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಜಂಟಿ ಕಾರ್ಯದರ್ಶಿ, ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ವಂ।ಭಗಿನಿ ಸುಪ್ರಿಯಾ ವಹಿಸಿದ್ದು, ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೋಲಿ ರೋಜರಿ ಮಾತಾ ಚರ್ಚಿನ ಧರ್ಮಗುರು ಅ।ವಂ। ಪೌಲ್ ರೇಗೊ ಪ್ರತಿಭಾ ಪುರಸ್ಕ್ರತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ “ನಿಮ್ಮ ತಂದೆ ತಾಯಿಗಳೇ ನಿಮಗೆ ಮೊದಲ ಗುರುಗಳು, ಯಾಕೆಂದರೆ ಅವರು ನಡೆಸುವ ಜೀವನ ನೋಡಿ ನೀವು ಅದನ್ನು ಅನುಕರಣೆ ಮಾಡಿ […]

ಮಂಗಳೂರು: ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಬಜಾಲ್ನ ಪಕ್ಕಲಡ್ಕದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆ ಸಡಗರದಿಂದ ನೆರವೇರಿತು. ಸ್ಥಳೀಯ ಕಾವುಬೈಲ್ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹೋಲಿ ಸ್ಪಿರಿಟ್ ಚರ್ಚ್, ಮೊಹಿಯುದ್ದೀನ್ ಜುಮ್ಮಾ ಮಸೀದಿ, ಪಕ್ಕಲಡ್ಕ, ಪಕ್ಕಲಡ್ಕ ಯುವಕ ಮಂಡಲ ಹಾಗೂ ಜನತಾ ವ್ಯಾಯಾಮ ಶಾಲೆ ಇವುಗಳ ಸಂಯುಕ್ತ ಭಾಗೀದಾರಿಕೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಉದ್ಘಾಟಕರಾಗಿದ್ದ ದೈಯ್ಜಿವರ್ಲ್ಡ್ನ ಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, ಮಾನವೀಯತೆಯೇ ಶ್ರೇಷ್ಠ ಧರ್ಮ, ಇತರರು ಬದಲಾಗಬೇಕೆಂದು ಬಯಸುವ ಬದಲು […]

ಕುಂದಾಪುರ (ಡಿ 21) : ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿಸೆಂಬರ್ 28 ರಂದು ನೀಡಲಾಗುವ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಕುಂದಾಪುರದ ಎಚ್.ಎಮ್.ಎಮ್ ಶಾಲೆಯ ಪ್ರಾಥಮಿಕ ವಿಭಾಗದ ಪ್ರತಿಭೆಗಳಾದ ಅವನಿ ಎ ಶೆಟ್ಟಿಗಾರ್ ಮತ್ತು ಶ್ರೇಯಸ್ ಎಸ್ ರಾವ್ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ರವರು […]

ಕುಂದಾಪುರ: ಸೈಂಟ್ ಮೇರಿಸ್ ವಿದ್ಯಾರ್ಥಿಗಳ ಶಿಸ್ತು ನನಗೆ ಖುಷಿಕೊಟ್ಟಿದೆ. ನಾನು ಈ ಶಾಲೆಯ ಹಳೆ ವಿದ್ಯಾರ್ಥಿ ಎನ್ನುವ ಹೆಮ್ಮೆ ನನಗಿದೆ.ಜಗತ್ತಿಗೆ ಶಾಂತಿ ಹಾಗೂ ಭಾವೈಕ್ಯತೆಯ ಸಂದೇಶ ನೀಡಿದ ಪ್ರಭು ಯೇಸು ಕ್ರಿಸ್ತರ ಜನನದ ಹಬ್ಬವನ್ನು ಸೌಹಾರ್ದ ಕ್ರಿಸ್ಮಸ್ ರೂಪದಲ್ಲಿ ಆಚರಿಸುತ್ತಿರುವದು ಸಂತಸದ ವಿಷಯ ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ ಹೇಳಿದರು.ಅವರು ಶುಕ್ರವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಮತ್ತು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ […]

ಉಡುಪಿ: ಮಾನವ ಹಾಗೂ ದೇವರೊಂದಿಗೆ ಹೇಗೆ ಬದುಕಬೇಕು ಎನ್ನುವುದನ್ನು ತೋರಿಸಿಕೊಡುವುದೇ ನಿಜವಾದ ಕ್ರಿಸ್ಮಸ್ ಆಗಿದೆ ಎಂದು ಸಿಎಸ್ ಐ ಕರ್ನಾಟಕ ದಕ್ಷಿಣ ಪ್ರಾಂತ ಧರ್ಮಾಧ್ಯಕ್ಷರಾದ ಅತಿ ವಂ|ಹೇಮಚಂದ್ರ ಕುಮಾರ್ ಹೇಳಿದರು.ಅವರು ಗುರುವಾರ ಶೋಕಮಾತಾ ಚರ್ಚ್ ಸಭಾಂಗಣದಲ್ಲಿ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ವತಿಯಿಂದ ಮಾಧ್ಯಮ ಮಿತ್ರರಿಗೆ ಆಯೋಜಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆಯ ಅಧ್ಯಕ್ಷತೆ ವಹಿಸಿದ ಮಾತನಾಡಿದರು.ಯೇಸು ಸಮುದಾಯದ ಮಧ್ಯೆ ಮನುಷ್ಯತ್ವದ ಕಾರ್ಯವುಳ್ಳ ವ್ಯಕ್ತಿಯಾಗಿ ಬದುಕುವುದರ ಮೂಲಕ ಮಾದರಿಯಾದರು. ಅದೇ ಕೆಲಸವನ್ನು ಇಂದಿಗೂ ಪ್ರತಿಯೊಬ್ಬರೂ ಕೂಡ ಮುಂದುವರೆಸುವಂತೆ ಮಾಡಲು ಕ್ರಿಸ್ಮಸ್ […]

ಕುಂದ ಕನ್ನಡ ಭಾಷಾಭಿವೃದ್ಧಿ ಸಮಿತಿಯ ಸದಸ್ಯತ್ವ ಅಭಿಯಾನಕ್ಕೆ ಅಧ್ಯಕ್ಷ ಶ್ರೀ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಚಾಲನೆ ನೀಡಿದರು.ಸದಸ್ಯತ್ವ ಸ್ವೀಕರಿಸುವ ಮೂಲಕ ಹಾಗೂ ಸಂಘಟನೆಯ ಪೋಷಕರಾಗುವ ಮೂಲಕ ಅವರು ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆಯ ಉದ್ದೇಶಕ್ಕೆ ಶುಭ ಕೋರಿದರು.“ಕುಂದಾಪ್ರ ಕನ್ನಡ ಭಾಷಾಭಿಮಾನಿಗಳು ಕುಂದಾಪ್ರ ಕನ್ನಡ ಸಾಹಿತ್ಯ, ಕಲೆ, ಜಾನಪದ ಸಂಸ್ಕøತಿ ಉಳಿಸುವಲ್ಲಿ ಒಗ್ಗೂಡಿ ನಮ್ಮತನ ಉಳಿಸಿ ಬೆಳೆಸಬೇಕು.” ಎಂದರು.ಸಮಿತಿಯ ಖಜಾಂಚಿ ಕೆ. ಆರ್. ನಾಯ್ಕ, ಬಿ. ಅಪ್ಪಣ್ಣ ಹೆಗ್ಡೆಯವರಿಗೆ ಪ್ರಥಮ ರಶೀದಿ […]