ಬ್ರಹ್ಮಾವರ,ಎ, 01; ಕಾರು ಡಿಕ್ಕಿ- ಕುಂದಾಪುರದ ವಕ್ವಾಡಿ ನಿವಾಸಿ ಶಾಲಾ ವಿದ್ಯಾರ್ಥಿ ಸಾವು ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್ ಕ್ಯಾಂಪ್ ಗೆ ತೆರಳುವಾಗ ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ವಿದ್ಯಾರ್ಥಿ ವಂಶಿ […]

Read More

ಮಂಗಳೂರು; ಫಾದರ್ ಮುಲ್ಲರ್ ಚಾರೀಟೇಬಲ್ ಸಂಸ್ಥೆಗಳ ಘಟಕವಾದ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ತನ್ನ 35ನೇ ಪದವಿ ಪ್ರದಾನ ಸಮಾರಂಭವನ್ನು 03.04.2025 ರಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಿದೆ. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಅಧ್ಯಕ್ಷರಾದ ಅತಿ ವಂ. ಡಾ. ಪೀಟರ್ ಪೌಲ್ ಸಲ್ಡಾನ್ಹಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ. ಡಾ. […]

Read More

ಕುಂದಾಪುರ  ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ […]

Read More

ಕಟಪಾಡಿ : ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗಾಗಿ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಐರಿನ್ ಪಿರೇರಾ ಹಾಗೂ ಗ್ಲೋರಿಯ ಪಿಂಟೊ ಕಾರ್ಯನಿರ್ವಹಣಾಧಿಕಾರಿಯಾಗಿ ಆಯ್ಕೆಯಾಗಿದ್ದು, ಹೊಸ ನಿರ್ದೇಶಕರಾಗಿ ಗೊಡ್ಫ್ರಿ ಡಿಸೋಜಾ, ವಿಲಿಯಂ ಲೋಬೊ, ಆಸ್ಟಿನ್ ಕರ್ಡೋಜಾ, ಜೆರೊಮ್ ಕಸ್ತೆಲಿನೊ, ಲಾರೆನ್ಸ್‌ ಕ್ರಾಸ್ಟೊ, ರೊನಾಲ್ಡ್ ಮಾಚಾದೊ, ಶಾಂತಿ ಕ್ವಾಡ್ರಸ್, ಮೇರಿ ಡಿಸಿಲ್ವ ಆಯ್ಕೆಯಾಗಿದ್ದಾರೆ.

Read More

ಕುಂದಾಪುರ :ಮುಸ್ಲಿಮರ ಪವಿತ್ರ ಮಾಸವಾದ ರಮಝಾನ್ ತಿಂಗಳ ಉಪವಾಸ ವ್ರತಚಾರಣೆಯ ಈದುಲ್ ಫಿತರ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮ ದಿಂದ ಆಚರಿಸಿದರು.ಬೆಳಿಗ್ಗೆ ಕುಂದಾಪುರ ಜಾಮೀಯ ಮಸೀದಿ ಯಿಂದ ಹೊರಟ ಸ್ವಲಾತ್ ಮೆರವಣಿಗೆಯು ಜಮಾತ್ ಅಧ್ಯಕ್ಷರಾದ ವಸೀಮ್ ಬಾಷಾ, ಪದಾಧಿಕಾರಿಗಳಾದ ತಬರೇಜ್, ಪುರಸಭಾ ಸದಸ್ಯ ಎಂ.ಅಬು ಮಹ್ಮದ್ ಮುಂತಾದವರ ಮುಂದಾಳತ್ವದಲ್ಲಿ ಮುಖ್ಯ ಬೀದಿಯ ಮೂಲಕ ಸಾಗಿ ಈದ್ಗ ಮೈದಾನವನ್ನು ತಲುಪಿತು. ಜಮಾತಿನ ಖತೀಬರಾದ ಶಾಹೀದ್ ಹುಸೇನ್ ಅವರು ಈದ್ ನಮಾಜ್ ನೆರವೇರಿಸಿ ಸಕಲರ ಕಲ್ಯಾಣ, ಶಾಂತಿ, ನೆಮ್ಮದಿ ಗಾಗಿ […]

Read More

ಉಡುಪಿ, ಮಾರ್ಚ್ 31, 2025 : ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಮಾರ್ಚ್ 31, 2025 ರಿಂದ ಜಾರಿಗೆ ಬರುವಂತೆ ರೆವರೆಂಡ್ ಫಾದರ್ ಸ್ಟೀಫನ್ ಡಿಸೋಜಾ ಅವರನ್ನು ಡಯಾಸಿಸ್‌ನ ನೂತನ ಕುಲಪತಿಗಳಾಗಿ ನೇಮಿಸಿದ್ದಾರೆ. ಬಿಷಪ್ ಜೆರಾಲ್ಡ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬಿಷಪ್ ಹೌಸ್ ಚಾಪೆಲ್‌ನಲ್ಲಿ ನಡೆದ ಪ್ರಾರ್ಥನಾ ಸೇವೆಯ ಸಮಯದಲ್ಲಿ ರೆವರೆಂಡ್ ಫಾದರ್ ಸ್ಟೀಫನ್ ಡಿಸೋಜಾ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಅವರು ನಂಬಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು […]

Read More

ಉಡುಪಿ: ಉತ್ತಮ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಯಕತ್ವವನ್ನು ಸಮಾಜಕ್ಕೆ ನೀಡಿದಾಗ ಜನರು ಕೂಡ ಅಂತಹ ನಾಯಕನ್ನು ಒಪ್ಪಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸರ್ವರೊಂದಿಗೆ ಬೆರೆತು ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಸಹಕಾರಿ ಕ್ಷೇತ್ರದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ […]

Read More

ಬಾರ್ಕೂರಿನ ನ್ಯಾಷನಲ್ ಹೈಸ್ಕೂಲ್‌ನಲ್ಲಿ ಹಳೆಯ ವಿದ್ಯಾರ್ಥಿಗಳ ಉದಾರ ಕೊಡುಗೆಯಿಂದ ಡಿಜಿಟಲ್ ಕಲಿಕೆಯನ್ನು ಹೆಚ್ಚಿಸುತ್ತದೆ.ಬೆಂಗಳೂರಿನ ಬ್ರಾಡಿ ಕಂಪನಿ ಲಿಮಿಟೆಡ್‌ನಿಂದ ಹೊಸ ಕಂಪ್ಯೂಟರ್ ಸೆಟ್‌ಗಳ ಉದಾರ ದೇಣಿಗೆಯನ್ನು ನ್ಯಾಷನಲ್ ಪಿಯು ಕಾಲೇಜು ಗುರುತಿಸುತ್ತದೆ ಮತ್ತು ಅವರ ಹಳೆಯ ವಿದ್ಯಾರ್ಥಿಗಳ ಉಪಕ್ರಮ ಮತ್ತು ಕಾಳಜಿಗೆ ಧನ್ಯವಾದಗಳನ್ನು ಅರ್ಪಿಸುತ್ತದೆ…ಬಾರ್ಕೂರು, ಮಾರ್ಚ್ 29, 2025 – ಬಾರ್ಕೂರಿನ ನ್ಯಾಷನಲ್ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗವು ತನ್ನ ಹಳೆಯ ವಿದ್ಯಾರ್ಥಿಗಳು 6 ಹೊಚ್ಚ ಹೊಸ ಕಂಪ್ಯೂಟರ್ ಸೆಟ್‌ಗಳು, 5 ಮಾನಿಟರ್‌ಗಳು, ಒಂದು ಯುಪಿಎಸ್ ಮತ್ತು ಎರಡು […]

Read More

ಕುಂದಾಪುರದ ಪ್ರತಿಷ್ಟಿತ  ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ “ಸಾವಿಷ್ಕಾರ್ 2025” ಏಪ್ರಿಲ್ 2 ಮತ್ತು 3 ರಂದು ಬಹಳ ವಿಜೃಂಭಣೆ ಇಂದ ನಡೆಯಲಿದೆ.  ರಾಜ್ಯಧ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದು,  ತಾಂತ್ರಿಕ ಮತ್ತು ಸಾಂಸ್ಕೃತಿಕ ಸಂಬಂದಿಸಿದ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಲಿದ್ದಾರೆ.  ಎಲ್ಲಾ  ಸ್ಪರ್ಧೆಗಳ ವಿಜೇತರಿಗೆ ನಗದು ಹಣ ಸಹಿತ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು.   ಸ್ಪರ್ಧಾಕೂಟದ ವಿಶೇಷ ಆಕರ್ಷಣೆಯಾಗಿ  ಹಲವು ಆಕರ್ಷಕ ಮಾದರಿಗಳ ಕಾರು ಮತ್ತು […]

Read More
1 16 17 18 19 20 418