ಕುಂದಾಪುರ, ದಿನಾಂಕ : 25/11/2024 ರಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶಾಲಾ ಸಭಾಂಗಣದಲ್ಲಿ ಅದ್ದೂರಿಯಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷಿಯ ಸ್ಥಾನವನ್ನು ವಹಿಸಿರುವ ಹೋಲಿ ರೋಜರಿ ಚರ್ಚಿನ ಪ್ರಧಾನಗುರುಗಳು ಹಾಗೂ ಹೋಲಿ ರೋಜರಿ ಮತ್ತು ಸೈಂಟ್ ಮೇರಿಸ್ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾಗಿರುವ ಅತೀ ವಂದನೀಯ ಪೌಲ್ ರೆಗೋರವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಕಾರ್ಯಕ್ರಮ ನಿರೂಪಿಸಿದ, ಸ್ವಾಗತಿಸಿದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ […]
“ಭಾರತದ ಸಂವಿಧಾನವು ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಸಮಾಜದ ಎಲ್ಲರಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವವನ್ನು ಪ್ರತಿಪಾದಿಸುವುದರ ಮೂಲಕ ಸರ್ವರ ಒಳಿತನ್ನು ಬಯಸುವ ಸಂವಿಧಾನವಾಗಿದೆ” ಎಂದು ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಐವನ್ ದೋನಾತ್ ಸುವಾರಿಸ್ ರವರು ಹೇಳಿದರು. ಅವರು ಎಸ್ ಎಮ್ ಎಸ್ ಪದವಿ ಪೂರ್ವ ಕಾಲೇಜು ಹಾಗೂ ನೀತಿ ಮತ್ತು ಶಾಂತಿ ಆಯೋಗ ಉಡುಪಿ ಧರ್ಮಪ್ರಾಂತ್ಯ ಇವರ ಜಂಟಿಯಾಗಿ ಸಂವಿಧಾನ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಅಂತರ್ ಪ್ರೌಢಶಾಲಾ ಭಾರತದ ಸಂವಿಧಾನ ಕುರಿತ […]
ನ.29 ರಂದು ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ‘ದುರ್ಗಾ ನಮಸ್ಕಾರ ಪೂಜೆ’ ಕುಂದಾಪುರ: ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀಮಹಾಕಾಳಿ ದೇವಸ್ಥಾನದಲ್ಲಿ ನ.29 ಶುಕ್ರವಾರ ದಂದು ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಲೋಕ ಕಲ್ಯಾಣಾರ್ಥವಾಗಿ ಅಮ್ಮನವರ ಸಾನಿಧ್ಯದಲ್ಲಿ ಸಂಜೆ 6 ಗಂಟೆಗೆ ಸಾಮೂಹಿಕ “ದುರ್ಗಾ ನಮಸ್ಕಾರ ಪೂಜೆ” ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಕುಂದಾಪುರ: ನಿರಂತರವಾಗಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ದೈಹಿಕ, ಮಾನಸಿಕವಾಗಿ ನಾವು ಬಲಿಷ್ಟರಾಗುತ್ತೇವೆ. ಕ್ರೀಡೆ ಜೀವನದಲ್ಲಿ ಗೆಲುವು ಸೋಲು ಸಮಾನವಾಗಿ ಸ್ವೀಕರಿಸುವುದನ್ನು ಕಲಿಸುತ್ತದೆ ಎಂದು ಕುಂದಾಪುರ ವಲಯದ ಪ್ರಧಾನ ಧರ್ಮಗುರು, ಸೈಂಟ್ ಮೇರಿಸ್ ವಿದ್ಯಾಸಂಸ್ಥೆಗಳ ಸಂಚಾಲಕ ಅತೀ ವಂ.ಫಾ.ಪೌಲ್ ರೇಗೋ ಹೇಳಿದರು. ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಗಳ ಸೈಂಟ್ ಮೇರಿಸ್ ಪ್ರೌಢಶಾಲೆ ಮತ್ತು ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ, ಸಮಾರಂಭ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರದ […]
ಕುಂದಾಪುರ(ನ.25) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್, ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅವನಿ.ಎ. ಶೆಟ್ಟಿಗಾರ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ “ಜ್ಞಾನ ವರ್ಷಿಣಿ”/ “ಜ್ಞಾನ ದರ್ಶಿನಿ” ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಆಧಾರ ಜರುಗಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು
2024 ರ ನವೆಂಬರ್ 24 ರ ಭಾನುವಾರದಂದು ಕ್ರಿಸ್ತ ರಾಜನ ಹಬ್ಬವನ್ನು ಗುರುತಿಸುವ ಪ್ರತಿಷ್ಠಿತ ವಾರ್ಷಿಕ ಕಾರ್ಯಕ್ರಮವಾದ ಉಡುಪಿ ಧರ್ಮಪ್ರಾಂತ್ಯದ ಯೂಕರಿಸ್ಟಿಕ್ ಮೆರವಣಿಗೆಯನ್ನು ವೈಭವ ಮತ್ತು ಭಕ್ತಿಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಕಳ್ಳಿಯನಪುರದ ಮಿಲಾಗ್ರೆಸ್ ಕ್ಯಾಥೆಡ್ರಲ್ನಲ್ಲಿ ಪ್ರಾರಂಭವಾಯಿತು ಮತ್ತು ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನಲ್ಲಿ ಸಮಾಪನಗೊಂಡಿತು. ಇದು ಡಯಾಸಿಸ್ನಾದ್ಯಂತದ ಪಾದ್ರಿಗಳು, ಧಾರ್ಮಿಕ ಮತ್ತು ಸಾಮಾನ್ಯರನ್ನು ಒಳಗೊಂಡಂತೆ 3000 ಕ್ಕಿಂತಲೂ ಹೆಚ್ಚಿನ ಸಂಖ್ಯೆಯ ನಿಷ್ಠಾವಂತರನ್ನು ಸೆಳೆಯಿತು. ಗಂಭೀರವಾದ ಪವಿತ್ರ ಮಾಸ್ ಮತ್ತು ಮೆರವಣಿಗೆ ಮಧ್ಯಾಹ್ನ 3.00 ಗಂಟೆಗೆ ಉಡುಪಿ […]
ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (6&7ನೇ) ತರಗತಿ ಮಕ್ಕಳಿಗೆ ಅರ್ಧದಿನದ ವೇದಿಕ್ ಮಾಥ್ಸ್ ಸ್ಪರ್ಧೆ ಆಯೋಜಿಸಲಾಯಿತುಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಗಣಿತದ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 100 ವಿದ್ಯಾರ್ಥಿಗಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ತಮ್ಮತಮ್ಮ ಚಾಣಾಕ್ಷತೆಯನ್ನು ಪ್ರದರ್ಶಿಸಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂಅತ್ಯಂತ ಚುರುಕುತನದಿಂದ ಆರಂಭಗೊಂಡ ಈ ಸ್ಪರ್ಧೆಯು ಪಾಲಕರ/ ಪೋಷಕರಿಂದ ಮೆಚ್ಚುಗೆ ಗಳಿಸಿತುಶಿಕ್ಷಣದಲ್ಲಿ ಸದಾ ನಾವಿನ್ಯತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಉತ್ಸುಕತೆಯನ್ನು ಪೋಷಕರು ಕೊಂಡಾಡಿದರುತಮ್ಮ ಮಕ್ಕಳ ಗಣಿತದ […]
ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ವೈದ್ಯರಿಂದ ಕಾರ್ಯಾಗಾರ ನಡೆಯಿತು ಹಲವು ಪ್ರಾತ್ಯಕ್ಷಿಕೆಗಳಿಂದ ಡಾ II ಶ್ರೀನಿಧಿ, ಡಾ II ಸ್ಫೂರ್ತಿ ಮತ್ತು ಡಾ II ರಚನಾರವರು ವಿದ್ಯಾರ್ಥಿಗಳಿಗೆ ಡಯಟ್, ವ್ಯಾಯಾಮ, ಮಾಲಿಶ್, ನಿಯಮಿತ ಆಹಾರ ಸೇವನೆ,ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ಉಪವಾಸ, ಸ್ಮರಣೆ,ಸಮತೋಲಿತ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೇಮ ಇತ್ಯಾದಿಗಳ ಕುರಿತು ಮೂರು […]
ಶಂಕರನಾರಾಯಣ : ಶಿಕ್ಷಣ ಕ್ಷೇತ್ರದಲ್ಲಿ ಸದಾ ನಾವಿನ್ಯತೆಯನ್ನು ಅಳವಡಿಸಿ ಶಿಕ್ಷಕರಲ್ಲಿ ವೃತ್ತಿಪರ ಮನೋಸ್ಥೈರ್ಯವನ್ನುಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಶಂಕರನಾರಾಯಣ ದಿನಾಂಕ 18/11/2024 ರ ಸೋಮವಾರದಂದು ಎಲ್ ಕೆ ಜಿ ಯಿಂದ ಹತ್ತನೇ ತರಗತಿ ಶಿಕ್ಷಕರಿಗೆ ಒಂದು ದಿನದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿಪರ ಬೆಳವಣಿಗೆ ಕಾರ್ಯಾಗಾರವನ್ನು ಆಯೋಜಿಸಿತುಸಂಸ್ಥೆಯ ಆಡಳಿತಾಧಿಕಾರಿ ಕುಮಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಮನೋಜ್ ಎಮ್ […]

