
ಕುಂದಾಪುರ: ಡಿಸೆಂಬರ್ 21ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಎಜುಕೇಶನ್ ಇದರ ಸಾಂಸ್ಕೃತಿಕ ಸಹಕಾರ ಸಮಿತಿಯ ಸಹಯೋಗದಲ್ಲಿ ದೆಹಲಿಯ ಸ್ಟಿಕ್ ಮೆಕೆಯಿಂದ ಕಥಕ್ ನೃತ್ಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಿತು.ರಾಷ್ಟ್ರೀಯ ಕಥಕ್ ನೃತ್ಯ ಕಲಾವಿದ ಪಂಡಿತ್ ರಾಜೇಂದ್ರ ಗಂಗಾನಿ ಅವರು ಕಥಕ್ ನೃತ್ಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಜನಮನ ಸೆಳೆಯಿತು.ಮೋಹಿತ್ ಗಂಗಾನಿಯವರು ತಬಲಾ, ವಿನೋದ್ ಕುಮಾರ್ ಅವರು ಹಾಡುಗಾರಿಕೆ ಮತ್ತು ಹಾರ್ಮೋನಿಯಂ, ಕಿಶೋರ್ ಕುಮಾರ್ ಮೃದಂಗ ಮತ್ತು ರವಿಶಂಕರ್ ಶರ್ಮಾ ಅವರು […]

ಬೈಂದೂರು: ಕಥೊಲಿಕ್ ಸಭಾ ಬೈಂದೂರು, ಕುಂದಾಪುರ ವಲಯ ಕಥೊಲಿಕ್ ಸಭಾ ಮತ್ತು ಶೆವೊಟ್ ಶ್ರತಿಷ್ಟಾನ್, ಸಿ.ಎಸ್.ಐ., ಕ್ರೈಸ್ತ ಸಮಿತಿ ಕುಂದಾಪುರ ಮತ್ತು ಪವಿತ್ರ ಶಿಲುಭೆಯ ಇಗರ್ಜಿ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ, ಬೈಂದೂರು ಇಗರ್ಜಿಯ ಸಮುದಾಯ ಭವನದಲ್ಲಿ ಡಿ.೧೮ ರಂದು, ಕುಂದಾಪುರ ವಲಯ ಮಟ್ಟದಲ್ಲಿ “ಸೌರ್ಹಾದ ಕ್ರಿಸ್ಮಸ್” ಕಾರ್ಯಕ್ರಮ ಮತ್ತು ಶೆವೊಟ್ ಶ್ರತಿಷ್ಟಾನ್ ಇವರಿಂದ ಅಶಕ್ತರಿಗೆ ಸಹಾಯಧನ ವಿತರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಕ್ಷೆ ಶಾಂತಿ ಪಿರೇರಾ […]

ಜೇಸಿಐ ಕುಂದಾಪುರದ 49ನೇ ಅಧ್ಯಕ್ಷರಾಗಿ ಸುಧಾಕರ್ ಕಾಂಚನ್ ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿ ಆಯ್ಕೆಜೇಸಿಐ ಕುಂದಾಪುರ ಘಟಕದ 49ನೇ ನೂತನ ಅಧ್ಯಕ್ಷರಾಗಿ ಜೇ.ಎಪ್.ಎಮ್.ಸುಧಾಕರ್ ಕಾಂಚನ್ ನಿಕಟಪೂರ್ವಧ್ಯಕ್ಷರಾಗಿ ಶ್ರೀಮತಿ ನಾಗರತ್ನ ಜಿ ಹೆರ್ಳೆ ಉಪಾಧ್ಯಕ್ಷರುಗಳಾಗಿ ಪ್ರವೀಣ್ ಎಮ್ , ಶ್ರೀಮತಿ ಶರ್ಮಿಳಾ ಕಾರಂತ್, ಚಂದನ್ ಗೌಡ , ಸುಬ್ರಮಣ್ಯ ಆಚಾರ್ಯ , ಶಶಿಧರ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿ ವಕ್ವಾಡಿ , ಜೊತೆ ಕಾರ್ಯದರ್ಶಿಯಾಗಿ ಚೇತನ್ ದೇವಾಡಿಗ , ಕೋಶಾಧಿಕಾರಿಯಾಗಿ ಧನುಷ್ ಕುಮಾರ್, ಜ್ಯೂನಿಯರ್ ಜೇ.ಸಿ ಅಧ್ಯಕ್ಷರಾಗಿ ಸತ್ಯನ್ ಎಸ್ […]

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ 2022-23 ಡಿಸೆಂಬರ್23 ರಿಂದ ಡಿಸೆಂಬರ್29ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿ ಎಂಬಲ್ಲಿ ನಡೆಯಲಿದೆ.ಡಿಸೆಂಬರ್ 23ರಂದು ಶಿಬಿರದ ಉದ್ಘಾಟನಾ ನಡೆಯಲಿದೆ. ಶಿಬಿರವನ್ನು ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕರು ಕುಂದಾಪುರ ಕ್ಷೇತ್ರ ಇವರು ಉದ್ಘಾಟಿಸಲಿದ್ದಾರೆ.25ರಂದು ಕಸ್ತೂರಬಾ ಆಸ್ಪತ್ರೆ ಮಣಿಪಾಲ ಮತ್ತು ಹಾಲಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮಸ್ಥರಿಗೆ ನುರಿತ ವೈದ್ಯರಿಂದ ಬ್ರಹತ್ ಉಚಿತ […]

ಕುಂದಾಪುರ ಡಿಸೆಂಬರ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ 2022-23 ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿಶ್ವಸ್ಥರಾದ ಪ್ರಕಾಶ್ ಟಿ.ಸೋನ್ಸ್ ಅವರು ಸಾವಿರಾರು ಮಕ್ಕಳು ಕರಾಟೆಯಿಂದ ಶಿಸ್ತು ಕಲಿಯುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಪಡೆದ ಕರಾಟೆ ಪಟುಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ಆರ್ಥಿಕ ನೆರವು ನೀಡಬೇಕು ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ […]

ಕುಂದಾಪುರ, ಡಿಸೆಂಬರ್.17: ಐ.ಎಮ್. ಜೆ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆ ಆಗಿರುವ ವಿದ್ಯಾ ಅಕಾಡೆಮಿ ಯಲ್ಲಿ ಎರಡನೇ ವರ್ಷದ ಕ್ರೀಡೋತ್ಸವ ಕಾರ್ಯಕ್ರಮವು, ವಿದ್ಯಾರ್ಥಿಗಳು ಹಾಗೂ ಪೋಷಕರ ಉಪಸ್ಥಿತಿಯಲ್ಲಿ ಸಂಭ್ರಮದಿಂದ ನೆರೆವೇರಿತು.ಈ ಕಾರ್ಯಾರಂಭವನ್ನು ಐ ಎಂ ಜೆ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊ. ದೋಮ ಚಂದ್ರಶೇಖರ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು, ಉದ್ಘಾಟನಾ ಸಮಾರಂಭದಲ್ಲಿ ಎಂ ಐ ಟ ಕಾಲೇಜಿನ ಅಡ್ಮಿನಿಸ್ಟ್ರೇಷನ್ ಆಫೀಸರ್ ಶ್ರೀ ಪ್ರದೀಪ್ ಕುಮಾರ್, ಪಿ ರ್ ಓ ಶ್ರೀ ಸುಧೀರ್ ಹೆಗ್ಡೆ ಹಾಗೂ […]

ಬೀಜಾಡಿ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಬೀಜಾಡಿ ಗೋಪಾಡಿ ಮಿತ್ರ ಸಂಗಮದ 25 ಸಾರ್ಥಕ ವಸಂತಗಳ ಸಂಭ್ರಮಾಚರಣೆ “ರಜತಪಥ”ದ ಸಡಗರ ಫೆಬ್ರುವರಿ 3 ರಿಂದ 5ರ ತನಕ ನಡೆಯಲಿದ್ದು, ಈ ಪ್ರಯುಕ್ತ ಸಂಸ್ಥೆಯ ಸಾಧನೆಯ ಛಾಯಾಚಿತ್ರದ ಸಂಚಿಕೆ ಅನಾವರಣ ಕಾರ್ಯಕ್ರಮ ಭಾನುವಾರ ನಡೆಯಿತು.ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಂಸ್ಥೆಯ ಸಾಧನೆಯ ಛಾಯಾಚಿತ್ರ ಸಂಚಿಕೆ ಅನಾವರಣಗೊಳಿಸಿ ಮಾತನಾಡಿ ಮಿತ್ರಸಂಗಮ ಹತ್ತು ಹಲವು ಜನಪರ ಕಾರ್ಯಕ್ರಮ ಸಂಘಟಿಸಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಸಂಸ್ಥೆಯ ರಜತ ಮಹೋತ್ಸವ ಯಶಸ್ವಿಯಾಗಲಿ ನಡೆಯಲಿ ಎಂದರು.ಈ […]

ಕುಂದಾಪುರ: ಡಿ.20: “ಪ್ರತಿಭೆಗಳು ಎಲ್ಲರಲ್ಲಿಯು ಆದಗಿವೆ, ಅವುಗಳನು ಸದುಪಯೋಗಿಸಿ ಕೊಂಡರೆ ಅವುಗಳು ಅಭಿವ್ರದ್ದಿ ಹೊಂದುತ್ತವೆ, ಉಪಯೋಗಿಸಿಕೊಳ್ಳದಿದ್ದಲ್ಲಿ, ಕಬ್ಬಿಣ ತುಕ್ಕು ಹಿಡಿಯುವಂತೆ, ನಶಿಸಿ ಹೋಗುತ್ತವೆ. ಓದು, ಧ್ಯಾನ ಮತ್ತು ವ್ಯಾಯಮ ಮನುಷ್ಯನಿಗೆ ಅತೀ ಮುಖ್ಯ” ಎಂದು ಸಂತ ಜೋಸೆಫ್ ಶಾಲೆಗಳ ಜಂಟಿ ಕಾರ್ಯದರ್ಶಿ ಭಗಿನಿ ಆಶಾ ಎ.ಸಿ. ಹೇಳಿದರು.ಅವರು ಸಂತ ಜೋಸೆಫ್ ಪ್ರೌಢ ಶಾಲೆಯ ವಾರ್ಷಿಕೋತ್ಸವದ (10—12-22) ದಿನದಂದು ಅಧ್ಯಕ್ಷತೆ ವಹಿಸಿಕೊಂಡು ಮಾತಾನಾಡುತ್ತ ‘ವಿದ್ಯಾರ್ಥಿಗಳು ತಮ್ಮ ಓದಿನಲ್ಲಿ ತೊಡಗಿಕೊಳ್ಳಲು ಬೆಳಗಿನ ಸಮಯವನ್ನು ಆರಿಸಿಕೊಳ್ಳಬೇಕು, ಬೆಳಿಗೆ ಮನಸು ಶುಭ್ರವಾಗಿದ್ದು, ನಾವು […]

ಶಿರ್ವ: ಇತಿಹಾಸ ಪ್ರಸಿದ್ಧ 27ನೇ ವರ್ಷದ ಶಿರ್ವ ನಡಿಬೆಟ್ಟುಸೂರ್ಯ ಚಂದ್ರ ಜೋಡುಕರೆ ಕಂಬಳವು ದಿನಾಂಕ 13-12-2022 ರಂದು ವೈಭವದಿಂದ ನೆಡೆಯಿತು. ಇದರ ಉದ್ಭಾಟನೆಯನ್ನು ಶ್ರೀ ವೈ. ಪ್ರಫುಲ್ಲಶೆಟ್ಟಿ, ಎಲ್ಲೂರು ಗುತ್ತು ಮಾಜಿ ಆಡಳಿತ ಮೊಕ್ತೇಸರರು, ಶ್ರೀ ವಿಶ್ವೇಶ್ವರ ದೇವಸ್ಥಾನ ಶ್ರೀ ಕ್ಷೇತ, ಎಲ್ಲೂರು ಇವರುಗಳು ನೆರವೇರಿಸಿದರು ಶಿರ್ವ ನಡಿಬೆಟ್ಟು ಶ್ರೀ ದಾಮೋದರ ಚೌಟ ಕಂಬಳದ ಯಜಮಾನರಾಗಿದ್ದು, ಶಿರ್ವ ನಡಿಬೆಟ್ಟು ತ್ರೀ ನಿತ್ಯಾನಂದ ಹೆಗ್ಡೆ ಅಧ್ಯಕ್ಷರಾಗಿದ್ದರು ಶಿರ್ವ ನಡಿಬೆಟ್ಟು ಶ್ರೀ ಶಶಿಧರ ಹೆಗ್ಡೆ ವ್ಯವಸ್ಥಾಪಕರಾಗಿದ್ದರು. ಶಿರ್ವ ನಂಗ್ಯೊಟ್ಟು ಮನೆತನದವರು […]