ಕಾರ್ಕಳ, ಮಾ. 17: 32 ವರ್ಷಗಳ ಇತಿಹಾಸ , 155 ಕೋಟಿಗೂ ಮಿಕ್ಕಿ ಠೇವಣಿ, 130 ಕೋಟಿ ಸಾಲ, 186 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳ ಹೊಂದಿ ಸ್ಥಾಪನೆಯದ ವರ್ಷದಿಂದ ನಿರಂತರ ಡಿವಿಡೆಂಡ್ ನೀಡುತ್ತಿರುವ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಕುಂದಾಪುರ ಇದರ 12ನೇ ಶಾಖೆಯು ಕಾರ್ಕಳದಲ್ಲಿ ದಿನಾಂಕ 17.3.2024 ರಂದು ಕಾರ್ಕಳದ ಮಿನಿವಿಧಾನಸೌಧ ರಸ್ತೆ ತಾಲೂಕು ಆಫೀಸ್ ಹತ್ತಿರ, ವಿಶಾಲ ಕಟ್ಟಡದ ನೆಲಮಹಡಿಯಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಕಾರ್ಕಳ ಅತ್ತೂರು, ಸಂತ ಲಾರೆನ್ಸ್ ಬಸಿಲಿಕಾ […]
ಡಾ. ಅಶೋಕ್ ಹೆಚ್. ಎಂ.ಬಿ.ಬಿ.ಎಸ್, ಡಿ.ಪಿ.ಎಚ್ ಇವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.ಇವರೊಬ್ಬ ಅನುಭವಿ ವೈದ್ಯರಾಗಿ ಸೇವೆ ಸಲ್ಲಿಸಿದವರು.ಅಲ್ಲದೆ 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದವರು.ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಂಚಲನ ಮೂಡಿಸಿ, ಆರೋಗ್ಯ ಇಲಾಖೆಯ […]
ಉಡುಪಿ: ಹಿರಿಯ ನಾಗರಿಕರು ನಮ್ಮ ಕುಟುಂಬದ ಹಾಗೂ ಸಮಾಜದ ಆಸ್ತಿಯಾಗಿದ್ದು ಅವರಿಗಿರುವ ಕಾನೂನು ಹಾಗೂ ಸವಲತ್ತುಗಳ ಬಗ್ಗೆ ಸೂಕ್ತ ಮಾಹಿತಿಯನ್ನು ಗಳಿಸಿ ಅವುಗಳ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾ ಸಭಾಭವನದಲ್ಲಿ ಧರ್ಮಪ್ರಾಂತ್ಯದ ಕುಟುಂಬ ಆಯೋಗ ವತಿಯಿಂದ ನಡೆದ ಹಿರಿಯ ನಾಗರಿಕರ ಬೃಹತ್ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಉಡುಪಿ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ […]
ಮಂಗಳೂರು, ಮಾ.16: ಮಂಗಳೂರು ಧರ್ಮಪ್ರಾಂತ್ಯದ ಮಾಜಿ ವಿಕಾರ್ ಜನರಲ್ ಡೆನಿಸ್ ಮೊರಾಸ್ ಪ್ರಭು ಅವರು ಮಾರ್ಚ್ 16 ಶನಿವಾರದಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. Msgr ಡೆನಿಸ್ ಮೊರಾಸ್ ಪ್ರಭು ಅವರು ಬಜ್ಪೆಯ ಮೂಲದವರಾಗಿದ್ದು,, ದಿವಂಗತ ಫ್ರಾನ್ಸಿಸ್ ಮೊರಾಸ್ ಮತ್ತು ದಿವಂಗತ ಜುವಾನ್ ಪಿರೇರಾ ಅವರ ಪುತ್ರ. ಅವರು ಡಿಸೆಂಬರ್ 5, 1967 ರಂದು ಅರ್ಚಕರಾಗಿ ನೇಮಕಗೊಂಡರು.Msgr ಪ್ರಭು ಅವರು 1975 ರಿಂದ 1985 ರವರೆಗೆ CBE ಯ ಕಾರ್ಯದರ್ಶಿಯಾಗಿ ಮತ್ತು 1977 ರಿಂದ 1986 […]
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಆನಗಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಗಂಗಾಧರ ಶೆಟ್ಟಿಯವರು ಶುಕ್ರವಾರ ರಾತ್ರಿ ನಿಧನರಾಗಿರುತ್ತಾರೆ. ಕುಂದಾಪುರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರರಾಗಿದ್ದು. ಕಾಂಗ್ರೆಸಿನ ಸಭೆ ಹೋರಾಟದಲ್ಲಿ ಮಂಚೂಣಿಯಲ್ಲಿ ಇರುತ್ತಿತ್ತು. ಅದೆಷ್ಟೋ ನಾಯಕರು ಮತ್ತು ಕಾರ್ಯಕರ್ತರು ಗೆಲುವಿನ ಬೆನ್ನು ಹತ್ತಿ ಬೇರೆ ಪಕ್ಷದಲ್ಲಿ ತಮ್ಮ ಭವಿಷ್ಯವನ್ನು ಕಂಡುಕೊಂಡರು. ಆದರೆ ಗಂಗಾಧರರವರು ಪಕ್ಷನಿಷ್ಠೆಯಿಂದ ಕಾಂಗ್ರೆಸ್ ಪಕ್ಷದಲ್ಲೇ […]
ಕುಂದಾಪುರ: ಗೆಳೆಯರ ಸ್ವಾವಲಂಬನ ಕೇಂದ್ರದ ಆಶ್ರಯದಲ್ಲಿ ಕುಂದಾಪುರದಲ್ಲಿ ದಿನಾಂಕ 25 ಮಾರ್ಚ್ 2024 ರಂದು ಉಚಿತ ಪ್ರಾಥಮಿಕ ಹೊಲಿಗೆ ಶಿಬಿರವನ್ನು ಬೆಳಿಗ್ಗೆ 11:00 ಗಂಟೆಗೆ ಉದ್ಘಾಟಿಸಲಾಗುತ್ತದೆ. ಈ ಶಿಬಿರದಲ್ಲಿ ಪ್ರಾಥಮಿಕ ಹೊಲಿಗೆ, ವಿವಿಧ ವಿನ್ಯಾಸಗಳ ಬಟ್ಟೆ ಚೀಲಗಳ ಹೊಲಿಗೆ, ಹೊಲಿಗೆ ಯಂತ್ರದ ಚಿಕ್ಕ ಪುಟ್ಟ ರಿಪೇರಿ, ಮೋಟಾರ್ ಅಳವಡಿಸಿ ಹೊಲಿಗೆ ಇತ್ಯಾದಿ ಉಚಿತವಾಗಿ ಕಲಿಸಲಾಗುವುದು. ಯಾವುದೇ ವಯೋಮಿತಿ ಇರುವುದಿಲ್ಲ. ಸಮಯ ಬೆಳಿಗ್ಗೆ 10:30 ರಿಂದ 12:30ರ ವರೆಗೆ ಹೆಚ್ಚಿನ ವಿವರಗಳಿಗೆ ಕೇಂದ್ರದ ಅಧ್ಯಕ್ಷರಾದ ವೆಂಕಟೇಶ ಪೈ ಅವರನ್ನು […]
ಉದ್ಯಾವರ : ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆ ನಿರಂತರ್ ಉದ್ಯಾವರ ಇವರ ನೇತೃತ್ವದಲ್ಲಿ ಎರಡು ದಿನದ ಸಾಂಸ್ಕೃತಿಕ ಕಾರ್ಯಕ್ರಮವು ಮಾರ್ಚ್ 16 ಮತ್ತು 17ರಂದು ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವಠಾರದಲ್ಲಿ ಸಂಜೆ ಗಂಟೆ 6:30ಕ್ಕೆ ಸರಿಯಾಗಿ ನಡೆಯಲಿದೆ. ಮಾರ್ಚ್ 16ರಂದು ಮಂಗಳೂರಿನ ಅಸ್ತಿತ್ವ (ರಿ) ಇವರಿಂದ ವo.ಫಾ. ಆಲ್ವಿನ್ ಸೆರಾವೊ ಬರೆದಂತಹ ಕೊಂಕಣಿ ನಾಟಕ ‘ಹಿಮ್ಟೊ’ ಮತ್ತು ಮಾರ್ಚ್ 17 ಆದಿತ್ಯವಾರದಂದು ಪ್ರಖ್ಯಾತ ನಾದ ಮಣಿನಾಲ್ಕೂರು ಇವರಿಂದ ‘ಕತ್ತಲ ಹಾಡು’ ಕಾರ್ಯಕ್ರಮ ಜರುಗಲಿದೆ ಎಂದು ಸಂಘಟನೆಯ […]
ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ನೀರುಮಾರ್ಗದ ಶಾಂತ, ಸುಂದರ ಪರಿಸರದಲ್ಲಿ, ಆಧುನಿಕ ಜೀವನ ಶೈಲಿಗೆ ಅಗತ್ಯವಾದ ಅತ್ಯಾಧುನಿಕ ಸಕಲ ಸೌಕರ್ಯಗಳೊಂದಿಗೆ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್ ರೂಪುಗೊಳ್ಳುತ್ತಿದೆ. ವಿಶೇಷತೆಗಳು • ಸುಸಜ್ಜಿತ ಕ್ಲಬ್ ಹೌಸ್ • 96 ನಿವೇಶನಗಳು • 30 ಮತ್ತು 40 ಅಡಿ ಅಗಲದ ಕಾಂಕ್ರೀಟ್ ರಸ್ತೆಗಳು • ಬೀದಿ ದೀಪಗಳು • ಭೂಗತ ವಿದ್ಯುತ್ ಕೇಬಲ್ಗಳು • ಸುಂದರ ಉದ್ಯಾನ • ಮಳೆನೀರು ಕೊಯ್ಲು, ನೀರು ಸಂಸ್ಕರಣ ಘಟಕ • 24×7 ಸಿಸಿಟಿವಿ ಕಣ್ಗಾವಲಿನೊಂದಿಗೆ […]
ಕುಂದಾಪುರ, ಮಾ.1 : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ , ವಿ.ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿ ವಿದ್ಯಾರ್ಥಿನಿ ಅವನಿ ಶೆಟ್ಟಿಗಾರ್ ಫೆ.27 ರಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ 2023-24 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ […]

