ಕೆನರಾ ಬ್ಯಾಂಕ್ 06.02.2026 ರಂದು ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಮಂಗಳೂರು ವಲಯ ಮುಖ್ಯಸ್ಥರಾದ ಶ್ರೀ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಶ್ರೀ ಸನತ್ ಕುಮಾರ್ ಶೆಟ್ಟಿ ಮತ್ತು ಶ್ರೀ ಹರಿನಾರಾಯಣದಾಸ ಅಸ್ರಣ್ಣ ಅವರು ಇದನ್ನು ಉದ್ಘಾಟಿಸಿದರು.ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ. ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ […]
ಕುಂದಾಪುರದ ಮೂಡ್ಲಕಟ್ಟೆ ಐ ಎಂ ಜೆ ವಿದ್ಯಾಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಗುಲ್ಬರ್ಗಾ ಕರ್ನಾಟಕದ ಕೇಂದ್ರ ವಿಶ್ವವಿದ್ಯಾಲಯದ 200 ಪ್ರಾಧ್ಯಾಪಕರಿಗೆ ಇತ್ತೀಚೆಗೆ ಫಲಿತಾಂಶ ಆಧಾರಿತ ಶಿಕ್ಷಣ (OBE)” ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಡಾ. ಎಸ್. ಎನ್. ಭಟ್ ಅವರು ಓ ಬಿ ಇ ತತ್ವಗಳು, ಫಲಿತಾಂಶಗಳ ವ್ಯಾಖ್ಯಾನ, ಮ್ಯಾಪಿಂಗ್, ಮೌಲ್ಯಮಾಪನ ವಿಧಾನ ಮತ್ತು ಫಲಿತಾಂಶಗಳ ಸಾಧನೆಯ ವ್ಯವಸ್ಥಿತ ಲೆಕ್ಕಾಚಾರದ ಕುರಿತು ತಮ್ಮ ದಶಕಗಳ ಅನುಭವದಿಂದ ಮೌಲ್ಯಯುತ ಕಾರ್ಯಗಾರ ನಡೆಸಿಕೊಟ್ಟರು.
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ದಿನಾಂಕ 4 ಫೆಬ್ರವರಿ 2026ರಂದು ಕಾರ್ಪೊರೇಟ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಜೊತೆಗೂಡಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಕೈಗೊಳ್ಳಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಬಿ. ದಯಾನಂದ್ ಶೆಟ್ಟಿ , ಡೈರೆಕ್ಟರ್ ಅಂಡ್ ಸೀನಿಯರ್ ಕನ್ಸಲ್ಟೆಂಟ್ ಪ್ರೊಜಿನ್ ಟೆಕ್ಸ್ ಇವರು ಆಗಮಿಸಿ ಹೇಗೆ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಕಾರ್ಯಕ್ಷಮತೆಯನ್ನು […]
ಉಡುಪಿ (ಫೆ.07): ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ಇಂದು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರು ತಮ್ಮ 91 ವರ್ಷನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೈಂದೂರು ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಅಪ್ಪಣ್ಣ ಹೆಗ್ಡೆಯವರು 1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ […]
ಮಂಗಳೂರು ; ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ ಅತೀ ಅಸುರಕ್ಷಿತ ಜನಾಂಗ (PVTG) ಆಗಿರುವ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ ಕಾರ್ಯಕ್ರಮಗಳ ವ್ಯಾಪ್ತಿ, ಸವಾಲುಗಳು ಹಾಗೂ ಪರಿಣಾಮಗಳನ್ನು ವಿಶ್ಲೇಷಿಸಿ, ಸಮಾವೇಶಿತ ಅಭಿವೃದ್ಧಿಗೆ ಸಂಬಂಧಿಸಿದ ನೀತಿಪೂರಕ ಫಲಿತಗಳನ್ನು ನೀಡಿದೆ. ಈ ಸಂಶೋಧನೆಯನ್ನು ಡಾ . ಜಯವಂತ ನಾಯಕ್, ಪ್ರಾಧ್ಯಾಪಕರು, […]
ಉಡುಪಿ; ಮಾನವ ಬಂಧುತ್ವ ಹಾಗೂ ಮಹಿಳಾ ಬಂಧುತ್ವ ವೇದಿಕೆ ಜಿಲ್ಲಾ ಘಟಕ ಉಡುಪಿ ಜಿಲ್ಲಾ ವತಿಯಿಂದ ಅನಾಥ ವಿದ್ಯಾರ್ಥಿಗಳ ಶಾಲೆಯಲ್ಲಿ ಸಂವಿಧಾನ ಹಾಗೂ ಮುಂದಿನ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಶೇಷ ಕಾರ್ಯಕ್ರಮವನ್ನು ನಡೆಸಿ ವಿದ್ಯಾರ್ಥಿಗಳಿಗೆ ಅಗತ್ಯ ಉಡುಗೊರೆ ಸಹಿತ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು. ಮಾನವ ಬಂಧುತ್ವ ರಾಜ್ಯ ನಾಯಕರಾದ ರೋನಾಲ್ಡ್ ಮನೋಹರ್ ಮಾತನಾಡುತ್ತ ವಿದ್ಯಾರ್ಥಿಗಳು ಸಂವಿಧಾನವನ್ನು ಸರಿಯಾಗಿ ಅಭ್ಯಾಸಿಸಿ ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಸಂಪಾದಿಸಬೇಕು. 55ವರ್ಷಗಳ ಹಿಂದೆ ನಮ್ಮ ದೇಶದಲ್ಲಿ […]
ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಶಿಕ್ಷಣ ಕೇವಲ ಪದವಿಗೆ ಮಾತ್ರ ಸೀಮಿತವಾಗಿಲ್ಲ. ಜಗತ್ತು ಪ್ರತಿಭಾನ್ವೇಷಣೆಯಲ್ಲಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲೇ ಇದೇ ಮೊದಲ ಬಾರಿಗೆ ಎಂಬಂತೆ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನದ ಕಾರ್ಯಕ್ರಮವನ್ನು ಗುರುವಾಯನಕೆರೆ ವಿದ್ವತ್ ಪಿಯು […]
ಪಡುಕೋಣೆ; ಫೆ.5; ಪಡುಕೋಣೆ ಪವಾಡ ಪುರುಷ ಸಂತ ಅಂತೋನಿ ಚರ್ಚಿನಲ್ಲಿ ದೇವರ ವಾಕ್ಯದ (ವೆಸ್ಪರ್ಸ್) ಸಂಭ್ರಮ ಮತ್ತು ವಾರ್ಷಿಕ ಮಹಾಹಬ್ಬದ ಸಂಭ್ರಮ ನಡೆಯಿತು 3/2/2026ರಂದು ಸಂಜೆ ಸಮಯಕ್ಕೆ ತುಂಬಾ ವೖಭವದಿಂದ ತೆರಾಲಿ ಹಬ್ಬದ ಮೊದಲನೇ ದಿನ ನಡೆಯುವ ವೆಸ್ಪರ್ಸ್ ದೇವರ ವಾಕ್ಯದ ಸಂಭ್ರಮಕ್ಕೆ ಪವಾಡ ಪುರುಷ ಭಕ್ತ ಸಂತ ಅಂತೋನಿಯವರ ಪಲ್ಲಕ್ಕಿ ಮೇಲೆ ಇರಿಸಲ್ಪಟ್ಟ ಪ್ರತಿಮೆಯನ್ನು ಆಶೀರ್ವಾದಿಸಿ, ಮೆರವಣಿಗೆಯ ಮೂಲಕ ಪ್ರತಿ ಭಕ್ತರ ಕೈಯಲ್ಲಿ ಬೆಳಗಿಸಿದ ಮೇಣದ ಬತ್ತಿಗಳನ್ನು ಹಿಡಿದು ಪ್ರಾರ್ಥನೆ, ಭಕ್ತಿಗೀತೆಗಳನ್ನು ಹಾಡುತ್ತಾ ದೇವಪೀಠದ ಮಕ್ಕಳು […]
St Aloysius Gonzaga School Organises ‘Jyothi Pradaan’ ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿ, ಆತ್ಮೀಯ ವಿದಾಯವನ್ನು ನೀಡುವ ಉದ್ದೇಶದಿಂದ ‘ಜ್ಯೋತಿ ಪ್ರದಾನ’ ಕಾರ್ಯಕ್ರಮವು “ನಂಬಿಕೆಯ ದೀಪ” ಎಂಬ ವಿಷಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂ.ಫಾ. ಡಾ. ಪ್ರವೀಣ್ ಮಾರ್ಟಿಸ್ ಎಸ್ ಜೆ ಅವರು ಮಾತನಾಡಿ ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಜೆಸ್ಯೂಟ್ […]

