ಉಡುಪಿ, ಆ. 20: ಜಿಲ್ಲಾ ಲಯನ್ಸ್ 317C ಸಂಪುಟ – ಪದಪ್ರದಾನ ‘ಬೆಳಕು’ ಸಮಾರಂಭ ಶನಿವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ನಡೆಯಿತು. ಹಿಂದಿನ ಅಂತಾರಾಷ್ಟ್ರೀಯ ನಿರ್ದೇಶಕ ಕೆ.ಜಿ. ರಾಮಕೃಷ್ಣಮೂರ್ತಿ ನೂತನ ಸಂಪುಟ ಪದಪ್ರದಾನ ನೆರವೇರಿಸಿದರು. ಲಯನ್ಸ್ ಜಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಥಮ ಮಹಿಳೆ ಓಫಿಲಿಯಾ ಫಿಲೋಮಿನಾ ಕರ್ನೆಲಿಯೋ ಬೆಳಕು ಪದ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿದರು. ಉಡುಪಿ ಧರ್ಮಪ್ರಾಂತದ ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರು ಆಶೀರ್ವಚನ ನೀಡಿ, ಡಾ| ನೇರಿ ಕರ್ನೇಲಿಯೊ ಅವರು […]

Read More

ಕುಂದಾಪುರ :ಅನಗಳ್ಳಿ ಗ್ರಾಮ ಪಂಚಾಯತ್‍ನ 2ನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಚ್. ಕೆ.ಸವಿತಾ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಉದಯ ಪೂಜಾರಿ ಇವರು ಆಯ್ಕೆಯಾದರು. ಈ ಗ್ರಾಮ ಪಂಚಾಯತ್‍ನಲ್ಲಿ ಒಟ್ಟು 8 ಸ್ಥಾನಗಳಿದ್ದು. 3 ಕಾಂಗ್ರೆಸ್ , 3 ಬಿಜೆಪಿ, 2 ಪಕ್ಷೇತರ. ಸೋಮವಾರ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಕಾಂಗ್ರೆಸ್ ಆಭ್ಯರ್ಥಿಗೆ 4 ಮತ ಮತ್ತು ಬಿಜೆಪಿ ಬೆಂಬಲಿತ ಆಭ್ಯರ್ಥಿ 4 ಮತಗಳನ್ನು ಸಮಬಲವಾಗಿ ಪಡೆದುಕೊಂಡಿದ್ದರು. ಇಬ್ಬರು ಆಭ್ಯರ್ಥಿಗಳಿಗೂ […]

Read More

ಹೊನ್ನಾವರ: ಉತ್ತರಕನ್ನಡಜಿಲ್ಲೆ ಹೊನ್ನಾವರದ ಬಂದರುರಸ್ತೆಯ ಭಗತ್ ಸಿಂಗ್ ಸಂಘ ಆಗಸ್ಟ್ 15ರಂದು ಏರ್ಪಡಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಹಾಗೂ ಲೇಖಕ ವಿಶ್ವ ಕುಂದಾಪುರ ಇವರನ್ನು ಸನ್ಮಾನಿಸಲಾಯಿತು. ಭೂಪಟ ಮತ್ತು ಬಾವುಟದ ಆರಾಧನೆಯಷ್ಟೇ ದೇಶಪ್ರೇಮವಲ್ಲ. ಜನರ ಸಂಕಷ್ಟ ನಿವಾರಣೆಗೆ ದುಡಿಯುವುದು, ಅಂಥ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದೇ ನಿಜವಾದ ರಾಷ್ಟ್ರ ಪ್ರೇಮಎಂದು ಮುಖ್ಯ ಅತಿಥಿಯಾಗಿ ಮಾತನಾಡಿದ ವಿಶ್ವ ಕುಂದಾಪುರ ಹೇಳಿದರು. ಜಾತಿ-ದೇವರು-ಧರ್ಮದ ಹೆಸರಿನಲ್ಲಿ ಜನರ ನಡುವೆ ದ್ವೇಷಾಗ್ನಿ ಹಚ್ಚುವ ಶಕ್ತಿಗಳ ಬಗ್ಗೆ ಎಚ್ಚರದಿಂದಿರುವುದು ಅಗತ್ಯಎಂದರು.ಸ್ವಾತಂತ್ರ್ಯ ಹೋರಾಟದಲ್ಲಿ ವಿದ್ಯಾರ್ಥಿಗಳು […]

Read More

ದೇವರು ನಮಗೆ ನೀಡಿದ ವರ, ಚಿನ್ನ, ಬೆಳ್ಳಿ, ಕಾರು, ಬಂಗಲೆ ಅಲ್ಲ. ಮುಖ್ಯವಾಗಿ ನಮಗೆ ನೀಡಿದ ವರ, ಸಮಯ. ಈ ಸಮಯವನ್ನು ಸರಿಯಾಗಿ ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಬೇರೆ ಎಲ್ಲಾ ರೀತಿಯ ಸಂಪತ್ತನ್ನು ಗಳಿಸಬಹುದು. ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ನಡೆ-ನುಡಿ, ಗುರಿ ಸಾಧನೆಯ ಹಾದಿ, ಎಲ್ಲ ವಿಷಯಗಳಲ್ಲೂ ಪರಿಪೂರ್ಣತೆ ಪಡೆಯಲು ಶಿಸ್ತು, ಶ್ರದ್ಧೆಯಿಂದ ಶ್ರಮಿಸಬೇಕು. ದೇವರ ಮೇಲೆ ವಿಶ್ವಾಸವಿಟ್ಟು, ಗುರು ಹಿರಿಯರಲ್ಲಿ ಗೌರವ ಇಟ್ಟು, ಮಾತಾ ಪಿತಾರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಯಶಸ್ಸು ಖಂಡಿತ” ಎಂದು ಉಡುಪಿ ಕುಂಜಿಬೆಟ್ಟು […]

Read More

ಮಂಗಳೂರು ಕಥೋಲಿಕ್ ಕೊ – ಅಪರೇಟಿವ್ ಬ್ಯಾಂಕ್ ನಿಯಮಿತ ಇದರ, ಅಗೋಸ್ತ್ 13ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಚುನಾವಣಾ ಪ್ರಕ್ರಿಯೆಗೆ, ಆಕಾಂಕ್ಷೆವುಳ್ಳ 14 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅಗೋಸ್ತ್ 20 ರಂದು ನಾಮಪತ್ರ ಪರಿಶೀಲನೆಯಲ್ಲಿ ನಾಮಪತ್ರ ಸಲ್ಲಿಸಿದ ಎಲ್ಲಾ 14 ಅಭ್ರ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ಕ್ರಮಬದ್ದವಾಗಿದ್ದು, ಬ್ಯಾಂಕಿನ ಆಡಳಿತ ಮಂಡಲಿ ರಚನೆಯಾಗಲು ಇರಬೇಕಾದ ಕೋರಂ ಇದ್ದುದನ್ನು ಪರಿಗಣಿಸಿ, ರಿಟರ್ನಿಂಗ್ ಅಧಿಕಾರಿ ಶ್ರೀ ಸುಧೀರ್ ಕುಮಾರ್ ಜೆ., ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಂಗಳೂರು ಇವರು – ಅರ್ಜಿ […]

Read More

ಮಂಗಳೂರಿನ ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯದ, ಸ್ತ್ರೀರೋಗ ಮತ್ತು ಹೆರಿಗೆಶಾಸ್ತ್ರ ವಿಭಾಗದಲ್ಲಿ ಪ್ರಾದ್ಯಾಪಕಿಯಾಗಿರುವ ಪ್ರಮೀಳಾ ಡಿ ಸೊಜಾ ಇವರು “ಇಫೆಕ್ಟಿವ್‌ನೆಸ್ ಒಫ್ ಮಲ್ಟಿ ಮೊಡ್ಯುಲರ್ ಇಂಟರ್ವೆನ್ಶನ್ಸ್ ಒಫ್ ಲೈಫ್‌ಸ್ಟೈಲ್ ಮೋಡಿಫಿಕೇಶನ್ ಒನ್ ಸಿಂಫ್ಟಮ್ಸ್ ಒಫ್ ಪೊಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಆಂಡ್ ಕ್ವಾಲಿಟಿ ಒಫ್ ಎಮಂಗ್ ವಿಮೆನ್ ಇನ್ ಸಿಲೆಕ್ಟೆಡ್ ಹೊಸ್ಪಿಟಲ್ಸ್, ಮಂಗಳೂರು, ಇಂಡಿಯಾ” ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಯೆನೆಪೋಯಾ ಡೀಮ್ಡ್ ಯುವಿವರ್ಸಿಟಿ  ಪಿ.ಎಚ್.ಡಿ ಪದವಿ ನೀಡಿದೆ. ಈ ಮಹಾಪ್ರಬಂದವನ್ನು ಅವರು ಡಾ| ಕೆ. ರಾಜಗೋಪಾಲ್, ಪ್ರಾಧ್ಯಾಪಕರು ಮತ್ತು […]

Read More

ಮಂಗಳೂರು : ಸಂತ ಆಗ್ನೇಸ್ ಕಾಲೇಜಿನಲ್ಲಿ ಅಗಸ್ಟ್ 18 ರಂದು ‘ಕೊಂಕಣಿ ಮಾನ್ಯತಾ ದಿನ’ ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಕ್ಣೊಂ ಕೊಂಕಣಿ ಪತ್ರದ ಸಂಪಾದಕರಾದ ವಂ. ಫಾ. ರೂಪೇಶ್ ಮಾಡ್ತಾ, ಕೊಂಕಣಿ ಭಾಷೆಯನ್ನು ಪ್ರೀತಿಸಿ ಮನೆ ಮನಗಳಲ್ಲಿ ಮಾತನಾಡಲು ಕರೆ ನೀಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅ ತಿಥಿಯಾಗಿ ಆಗಮಿಸಿದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ರೋಯ್ ಕ್ಯಾಸ್ತಲಿನೋ ಕೊಂಕಣಿ ಭಾಷೆ ವಿವಿಧ ಹಂತಗಳಲ್ಲಿ ನಡೆದು ಬಂದ ರೀತಿಯನ್ನು ವಿವರಿಸಿ, ಮಾತೃ ಭಾಷೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವಂತೆ ಕರೆ […]

Read More

ಕುಂದಾಪುರ: ಕುಂದಾಪುರದ ರೋಜರಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ 2022-23ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಪ್ರಶಸ್ತಿ ಲಭಿಸಿದೆ. ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆ.19 ರಂದು ಮಂಗಳೂರಿನಲ್ಲಿ ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸಹಕಾರಿ ಸೌಧದಲ್ಲಿ ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಮ್‌. ಎನ್‌. ರಾಜೇಂದ್ರ ಕುಮಾರ್‌ ಪ್ರಶಸ್ತಿಯನ್ನುಪ್ರದಾನ ಮಾಡಿದರು. […]

Read More