ಎಂ ಐ ಟಿ ಮೂಡ್ಲಕಟ್ಟೆ, ಕುಂದಾಪುರ ಇಲ್ಲಿ ವಿಶ್ವಯೋಗ ದಿನದಂದು ಒಂದು ಗಿನ್ನಿಸ್ ದಾಖಲೆ ಸಹಿತ ಎಂಟು ಜಾಗತಿಕ ದಾಖಲೆ ಮಾಡಿರುವ “ಯೋಗರತ್ನ”, “ನಾಟ್ಯಮಯೂರಿ” ಬಿರುದಾಂಕಿತ ತನುಶ್ರೀ ಪಿತ್ರೋಡಿಯವರನ್ನು ಸನ್ಮಾನಿಸಲಾಯಿತು. ಸಭಾಕಾರ್ಯಕ್ರಮದ ನಂತರ ತನುಶ್ರೀಯವರು ಆಸಕ್ತ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು ಮಾಡುವ ಬಗೆಯನ್ನು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಹಿರಿಯ ಯೋಗ ಗುರುಗಳಾದ ಮಂಜುನಾಥ ಎಸ್ ರವರು ಯೋಗದ ಹಿರಿಮೆ ಮತ್ತು ಉಪಯೋಗದ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

Read More

ವಿದ್ಯಾರ್ಥಿಗಳಿಗಿಂದು ಪ್ರೇರಣೆ ನೀಡುವ ಉತ್ತಮವಾದ ಸೌಲಭ್ಯಗಳು ದೊರಕುತ್ತಿವೆ. ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್ ಟ್ರಸ್ಟ್‍ನವರು ಎರಡು ದಶಕಗಳಿಂದ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುತ್ತಿದ್ದಾರೆ. ವಿದ್ಯಾರ್ಥಿಗಳು ಮುಂದೆ ಉತ್ತಮ ಗೌರವದ ಸ್ಥಾನ ಪಡೆದು ಸಂಪಾದನೆ ಮಾಡಿದಾಗ ಇದೇ ರೀತಿ ಅರ್ಹರಿಗೆ ಸಹಾಯ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಲ್ಲಿ ವಿಮರ್ಶಾತ್ಮಕವಾದ ಚಿಂತನಾ ಶಕ್ತಿ ಬೆಳೆಸಿಕೊಳ್ಳಬೇಕು. ಯಾರು ಹೆಚ್ಚು ಪ್ರಶ್ನೆ ಕೇಳುವ ಪ್ರಯತ್ನ ಮಾಡುತ್ತಾರೋ ಅವರು ಅಧ್ಯಯನ ಮಾಡುತ್ತಿದ್ದಾರೆ ಎಂದು ಅರ್ಥ. ಏನು, ಏಕೆ, ಯಾವುದು, ಎಲ್ಲಿ, ಹೇಗೆ… ಹೀಗೆ ವಿಷಯದ […]

Read More

ಕುಂದಾಪುರ: ಯೋಗಕ್ಕೆ ಸಮಯ ಮತ್ತು ಗಮನ ಕೊಟ್ಟರೇ ಅದು ನಮಗೆ ಆರೋಗ್ಯವನ್ನು ನೀಡುತ್ತದೆ. ಮಾನಸಿಕವಾಗಿ, ದೈಹಿಕವಾಗಿ ದೇಹ ಸದೃಢವಾಗುತ್ತದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಸದಾ ಕಾಲ ಉತ್ಸಾಹದಿಂದ ಇರಬಹುದು ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಡಶಾಲೆಯ ಎನ್‍ಸಿಸಿ ಅಧಿಕಾರಿ ಭಾಸ್ಕರ್ ಗಾಣಿಗ ಹೇಳಿದರು.ಅವರು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 21 ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿ ಅಸುಂತಾ ಲೋಬೋ ವಹಿಸಿದ್ದರು. ಇದೇ ಸಂದರ್ಭದಲ್ಲಿ […]

Read More

ಕುಂದಾಪುರ : ಸ್ಥಳೀಯ ಸಂತ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ವಹಿಸಿ ’ಯೋಗ ಹಾಗೂ ಪ್ರಾಣಾಯಾಮ ಮಾಡುವುದರಿಂದ ದೇಹದ ಸರ್ವತೋಮುಖ ಬೆಳವಣಿಗೆ ಆಗುತ್ತದೆ, ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು’ ಎಂದು ಮಕ್ಕಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶಾಂತಿ ರಾಣಿ ಇವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು. ಶಿಕ್ಷಕಿಯರಾದ ಜ್ಯೋತಿ […]

Read More

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು . ಇಂದಿನ ಬಿಡುವಿಲ್ಲದ ಜೀವನದಲ್ಲಿ ಯುವಕರು ಯೋಗದತ್ತ ಗಮನಹರಿಸಬೇಕು, ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಕಾಪಾಡಿಕೊಳ್ಳಲು ಯೋಗ ಮುಖ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ […]

Read More

ಮಂಗಳೂರು, ಜೂನ್ 20: ಕಥೊಲಿಕ್ ಕ್ರೈಸ್ತ ಧರ್ಮಪ್ರಾಂತ್ಯದ ನಿಯೋಗವು ಇಂದು ನೂತನ ಜಿಲ್ಲಾಧಿಕಾರಿಯವರನ್ನು ಭೇಟಿ ನೀಡಿ ಶುಭ ಹಾರೈಸಿದರು. ಮಂಗಳೂರಿನ ಬಿಷಪ್ ಅತೀ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇವರ ಪರವಾಗಿ ನೂತನ ಜಿಲ್ಲಾಧಿಕಾರಿಯವರಾದ ಶ್ರೀ ಮುಳ್ಳಯಿ ಮುಗಿಲನ್ ಇವರಿಗೆ ಕ್ರೈಸ್ತ ಸಮುದಾಯದ ಪರವಾಗಿ ಸ್ವಾಗತಿಸಿ ಶುಭ ಹಾರೈಕೆಗಳನ್ನು ತಲುಪಿಸಿದರು. ನಿಯೋಗದಲ್ಲಿ ಸದಸ್ಯರಾದ, ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ರಾಯ್ ಕ್ಯಾಸ್ತೆಲಿನೊ, ರಾಕ್ಣೊ ವಾರ ಪತ್ರಿಕೆಯ ಸಂಪಾದಕರಾದ ಫಾ. ರೂಪೇಶ್ ಮಾಡ್ತಾ, ಫಾದರ್ ಮುಲ್ಲರ್ […]

Read More

ಕೋಲಾರ : ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಇಡೀ ದೇಶದ ಗಮನ ಸೆಳೆಯುವಂತೆ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿಅಕ್ರಮ್ ಪಾಷ ಅವರನ್ನು ಕೋಲಾರದ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆ ತಾಲೂಕಿನಲ್ಲಿ ಪೊಲಿಟಿಕಲ್ ಸೈನ್ಸ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಬಳಿಕ ಕೆಎಸ್ ಅಧಿಕಾರಿಯಾಗಿ ಸೇವೆಯನ್ನು ಆರಂಭಿಸಿದ ಅಕ್ರಂ ಪಾಷಾ ಅವರು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರೋಬೇಷನರಿ ಕೆಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಕೊಡಗು ಜಿಲ್ಲೆಯ ಉಪವಿಭಾಗಧಿಕಾರಿ […]

Read More

ಕೋಲಾರ:- 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-2 ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಮತ್ತು ವಿಶೇಷ ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆಗಳು ಹಾಗೂ ನಿರ್ಧಿಷ್ಟ ಪಡಿಸಿದ ವೃಂದದ (ಕನಿಷ್ಠ 03 ರಿಂದ 05 ವರ್ಷದೊಳಗಡೆ) ಶಿಕ್ಷಕರ ಗಣಕೀಕೃತ ವರ್ಗಾವಣೆ ಕೌನ್ಸಿಲಿಂಗ್ ಜೂ.20 ರಿಂದ ಇಲಾಖೆಯ ಉಪನಿರ್ದೇಶಕರ ಕಚೇರಿ ಎಸ್‍ಎಸ್‍ಎ ಇಲ್ಲಿ ನಡೆಯಲಿದೆ ಎಂದು […]

Read More