ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ, ಕುಂದಾಪುರ ಇಲ್ಲಿಯ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ವಿಭಾಗದ ವಿದ್ಯಾರ್ಥಿಗಳಾದ ಅಮರ್ ಮತ್ತು ವಿಷ್ಣುಮೂರ್ತಿಯವರು ತಮಿಳುನಾಡಿನ ರಾಮಪುರದ ಎಸ್.ಆರ್.ಎಮ್. ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ “ಪ್ರಾಜೆಕ್ಟ್ ಕಲ್ಪನಾ ಪ್ರಸ್ತುತಿ” ಸ್ಫರ್ಧೆಯಲ್ಲಿ “ಸ್ವಯಂಚಾಲಿತ ಘನತ್ಯಾಜ್ಯ ಸಂಸ್ಕರಣೆ” ಎಂಬ ಪ್ರಾಜೆಕ್ಟ್‍ಗೆ “ಭವಿಷ್ಯದ ತಂತ್ರಜ್ಞಾನ ಪ್ರಶಸ್ತಿ”ಯನ್ನು ಪಡೆದು ಕಾಲೇಜಿನ ಹಿರಿಮೆ ಹೆಚ್ಚಿಸಿದ್ದಾರೆ. ಒಂದು ಸಾವಿರಕ್ಕೂ ಅಧಿಕ ತಂಡಗಳು ಭಾಗವಹಿಸಿದ ಈ ಸ್ಫರ್ಧೆಯಲ್ಲಿ ದೇಶದ 50 ತಂಡಗಳು ಮಾತ್ರ ಅಂತಿಮ ಸುತ್ತಿಗೆ ತೇರ್ಗಡೆ ಹೊಂದಿದ್ದು, ಅದರಲ್ಲಿ ಕರ್ನಾಟಕದಿಂದ ಎರಡು ತಂಡಗಳಿಗೆ ಮಾತ್ರ […]

Read More

ಪಕ್ಷಿಗಳಿಗೆ ಬಿಸಿಲಿನ ತಾಪದಿಂದ ಹಾಗೂ ನೀರಿನ ದಾಹ ನೀಗಿಸುವ ಉದ್ದೇಶದಿಂದ ಪಕ್ಷಿ ಸಂಕುಲಕ್ಕೆ ನೀರು ಉಣಿಸುವ ಅಭಿಯಾನದ ಮೂಲಕ ನಾವೆಲ್ಲರೂ ಸ್ವಯಂ ಪ್ರೇರಣೆಯಿಂದ ಮನೆ, ಮರಗಳ ಮೇಲೆ ಪಕ್ಷಿಗಳಿಗಾಗಿ ನೀರು, ಧಾನ್ಯಗಳನ್ನು ಇಟ್ಟು ಪಕ್ಷಿ ಸಂಕುಲದ ರಕ್ಷಣೆಗೆ ಕೈ ಜೋಡಿಸೋಣ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರು ಸಂದೀಪ್ ವಿ. ಪೂಜಾರಿ ಅಬ್ಬನಡ್ಕ ಹೇಳಿದರು.ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಅಬ್ಬನಡ್ಕ ಶ್ರೀ […]

Read More

ಕಳೆದ ಸುಮಾರು ನಾಲ್ಕು ದಶಕಗಳಿಂದ ಟ್ಯಾಕ್ಸಿ,ರಿಕ್ಷಾ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಹೆಮ್ಮಾಡಿ ಸಂತೋಷ್ ನಗರದ ನಿವಾಸಿ ಕೆ.ಸಾದಿಕ್ ಹೆಮ್ಮಾಡಿ ಅವರನ್ನು ಸಮಾಜ ಮುಖಿಯಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಜಿಲ್ಲಾ ಟ್ಯಾಕ್ಸಿ ಮೆನ್ ಹಾಗೂ ಮಾಕ್ಸಿ ಕ್ಯಾಬ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಅಧ್ಯಕ್ಷರಾದ ರಘುಪತಿ ಭಟ್ ಇತ್ತೀಚೆಗೆ ಉಡುಪಿಯಲ್ಲಿ ನಡೆದ ಸಂಘದ ವಾರ್ಷಿಕ ಸಮಾರಂಭದ ವೇದಿಕೆಯಲ್ಲಿ ಸನ್ಮಾನಿಸಿದರು.

Read More

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಆಧೀನದ ಕಥೊಲಿಕ್ ಶಿಕ್ಷಣ ಮಂಡಳಿ (ಸಿಬಿಇ) ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ಭೋಧಿಸುವ ಶಿಕ್ಷಕರಿಗಾಗಿ 5 ದಿನಗಳ ಕಮ್ಯುನಿಕೇಟಿವ್ ಇಂಗ್ಲಿಷ್ ಕೋರ್ಸ್‍ನ್ನು ಏಪ್ರಿಲ್ 17, 2023 ರಂದು ಮಂಗಳೂರಿನ ಪಾದುವಾ ಕಾಲೇಜಿನಲ್ಲಿ ಪ್ರಾರಂಭಿಸಲಾಯಿತು.ಕಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾದರ್ ಆ್ಯಂಟನಿ ಸೆರಾ ಅವರು ಮಾತಾನಾಡುತ್ತಾ, “ಇಂಗ್ಲಿμï ಮಾಧ್ಯಮ ಶಿಕ್ಷಕರಲ್ಲಿ ಸಂವಹನ ಕೌಶಲ್ಯವನ್ನು ಹೆಚ್ಚಿಸುವುದು, ಮತ್ತು ವಿದ್ಯಾರ್ಥಿಗಳೊಂದಿಗೆ ಮತ್ತು ಅವರ ಪೋಷಕರೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸಲು ಅನುಕೂಲವಾಗುವಂತಹ ತರಬೇತಿ ನೀಡುವುದು ಈ ಕಾರ್ಯಕ್ರಮದ […]

Read More

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ವಿಶ್ವ ಭೂಮಿಯ ದಿನಾಚರಣೆಯನ್ನು ಆಚರಿಸಲಾಯಿತು.ಭೂಮಿಯ ದಿನವು ಪರಿಸರ ಸಂರಕ್ಷಣೆಗೆ ಬೆಂಬಲವನ್ನು ಪ್ರದರ್ಶಿಸಲು ,ಹಸಿರು ಜೀವನ ಮತ್ತು ಹವಾಮಾನ ಬಿಕ್ಕಟ್ಟನ್ನು ಎದುರಿಸುವುದರ ಮೇಲೆ ಕೇಂದ್ರೀಕೃತವಾಗಿವೆ. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ ಎಂದು ಮುಖ್ಯ ಅತಿಥಿಯಾಗಿ ಕಾಲೇಜಿನ ರೋವರ್ಸ್ ಸ್ಕೌಟ್ ಲೀಡರ್ ಶ್ರೀ ಪ್ರಕಾಶ್ ರವರು ಮಾತನಾಡಿದರು. ಪರಿಸರ ಸಂರಕ್ಷಣೆಯು ಪರಿಸರದ ಗುಣಮಟ್ಟವನ್ನು ಸುಧಾರಿಸುವುದು, ರಕ್ಷಿಸುವುದು […]

Read More

ಕುಂದಾಪುರ, 12: ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಇಲ್ಲಿನ ಐಕ್ಯೂಎಸಿ, ಚುನಾವಣಾ ಸಾಕ್ಷರತ ಕ್ಲಬ್, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ,ಎನ್. ಸಿ. ಸಿ., ಮತ್ತು ಜಿಲ್ಲಾ ಸ್ವಿಪ್ ಸಮಿತಿಯ ಅವರ ಸಹಯೋಗದಲ್ಲಿ ಮತದಾರರ ಅರಿವು ಕಾರ್ಯಕ್ರಮ ನಡೆಯಿತು.ಡಾ.ಸದಾನಂದ ಬೈಂದೂರು, ಎಸ್ ವಿಈಈಪಿ ತರಬೇತುದಾರರು, ಶಿಕ್ಷಕರು ಸರಕಾರಿ ಶಾಲೆ ಕುಂದಾಪುರ ಮತ್ತು ರಾಘವೇಂದ್ರ ಕಿಣಿ, ಎಲೆಕ್ಷನ್ ಸೆಕ್ಟರ್ ಆಫೀಸರ್, ಉಪನ್ಯಾಸಕರು ಸರಕಾರಿ ಪದವಿ ಪೂರ್ವ ಕಾಲೇಜು, ಬಿದ್ಕಲ್ ಕಟ್ಟೆ ಇವರು ಕಾರ್ಯಕ್ರಮಕ್ಕೆ […]

Read More

ಮಂಗಳೂರು: ಬಿಕರ್ನಕಟ್ಟೆ ಬಾಲ ಯೇಸು ದೇವಾಲಯದಲ್ಲಿ ಏಪ್ರಿಲ್ 16 ರಂದು ದೈವಿಕ ಕರುಣೆಯ ಹಬ್ಬವನ್ನು ಆಚರಿಸಲಾಯಿತು. ಫಾ. ಅಲ್ವಿನ್ ಸಿಕ್ವೇರಾ, ಸಾಮೂಹಿಕ ಮುಖ್ಯ ಆಚರಣೆಯ ಪುರೋಹಿತರಾಗಿದ್ದರು. ಸ್ವಾಮಿ ಯೇಸು ಕೃಪೆಯ ಬಾವಿಯಿಂದ ಕುಡಿಯಲು ಅವರು ಕರೆ ನೀಡಿದರು. ಡಿವೈನ್ ಮರ್ಸಿ ಭಾನುವಾರ ವಿಶೇಷ ದಿನವಾಗಿದೆ, ಸ್ವಾಮಿ ಯೇಸುವಿನ ಆಶೀರ್ವಾದವನ್ನು ಪಡೆಯಲಾಗುತ್ತದೆ. ಫಾ. ಲ್ಯಾನ್ಸಿ ಲೂಯಿಸ್ ಮತ್ತು ಫಾ.. ಜೋಸೆಫ್ ಡಿಸೋಜ ಅವರು ಸಾಮೂಹಿಕವಾಗಿ ನೆರವೇರಿಸಿದರು. ದೈವಿಕ ಕರುಣೆಯ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ ಶ್ರೀ ಆಲ್ಫ್ರೆಡ್ ರೆಬೆಲ್ಲೊ, ಡಿವೈನ್ […]

Read More

ಕುಂದಾಪುರ, ಎ.18: ಪಿಯುಸ್ ನಗರ ಚರ್ಚಿನ ಧರ್ಮಗುರು ಆಲ್ಬರ್ಟ್ ಕ್ರಾಸ್ತಾರ ಗುರುದೀಕ್ಷೆಯ 26 ನೇ ವರ್ಷದ ಸಂಭ್ರಮವನ್ನು ಎ.17 ರಂದು ಪಿಯುಸ್ ನಗರ ಧರ್ಮಕೇಂದ್ರದವರು ಆಚರಿಸಿದರು.ವಂ|ಆಲ್ಬರ್ಟ್ ಕ್ರಾಸ್ತಾ ಅವರು, ವಂ|ವಾಲ್ಟರ್ ಡಿಮೆಲ್ಲೊ ಇವರ ಸಹಭಾಗಿತ್ವದೊಂದಿಗೆ ಕ್ರತಜ್ಞತಾ ಪೂರ್ವಕ ಬಲಿದಾನವನ್ನು ಅರ್ಪಿಸಿದರು. ಧರ್ಮಕೇಂದ್ರದ ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗಿಯಾಗಿ ಧರ್ಮಗುರುಗಳ ಒಳಿತಿಗಾಗಿ ಪ್ರಾರ್ಥಿಸಿ ಶುಭ ಹಾರೈಸಿದರು.ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಧರ್ಮಗುರುಗಳು ಕೇಕ್ ಕತ್ತರಿಸಿ, ತಮ್ಮ ಸಂಭ್ರಮ ಸಂತೋಷವನ್ನು ಎಲ್ಲರೊಂದಿಗೆ ಹಂಚಿಕೊಂಡರು. ಪಾಲನ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಜೆಮ್ಸ್ ಡಿಮೆಲ್ಲೊ […]

Read More

ಮಂಗಳೂರಿನ ಸುರತ್ಕಲ್ ನಲ್ಲಿ ಪಾಂಡಿಚೇರಿಯ ಕುಟುಂಬವೊಂದು ದಿನಗೂಲಿ ಮಾಡಿ ಜೀವಿಸುತ್ತಿತ್ತು . 2017ರಲ್ಲಿ ಕಲ್ಯಾಣಿ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದುರದೃಷ್ಟವಶಾತ್, ಪೊಲೀಸರು ಅವರ ದೂರನ್ನು ಸ್ವೀಕರಿಸಲಿಲ್ಲ ಮತ್ತು ತಂದೆಯೂ ಅಪಘಾತಕ್ಕೊಳಗಾಗಿ ಮರಣ ಹೊಂದಿದರು.ತದನಂತರ ಅಸಹಾಯಕ ತಾಯಿ ಮತ್ತು ಮಗ ಪಾಂಡಿಚೇರಿಗೆ ಹಿಂತಿರುಗಿದರು. ಕಲ್ಯಾಣಿಯ ಹುಡುಕಾಟ ಮತ್ತು ಆಕೆ ಮರಳಿ ಬರುವ ಭರವಸೆ ಅವರಲ್ಲಿ ಬಲವಾಗಿತ್ತು. ಕಲ್ಯಾಣಿಯನ್ನು ಮತ್ತೆ ಪಡೆಯುವ ಅವರ ವಿಶ್ವಾಸವು ಆಕೆಯು ಕಾಣೆಯಾಗಿ 6 ​​ವರ್ಷಗಳ […]

Read More