ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೌನ್ಸಿಲ್ ಇದರ ಸಹಯೋಗದಲ್ಲಿ ಆವಿಷ್ಕಾರ: “ಶಿಕ್ಷಣ ಸಂಸ್ಥೆಗಳ ಭವಿಷ್ಯ ನಿರ್ಧಾರ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲ ಹೈಯರ್ ಎಜುಕೇಷನ್ ನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಎಂಜಿನೀಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಸೋಮಶೇಖರ್ ಭಟ್ ಮಾತನಾಡಿ ನಾವು ಸಂಸ್ಥೆಗೆ ಋಣಿಯಾಗಿರಬೇಕು. ಸಂಸ್ಥೆ ನಮ್ಮ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ದಾರಿ ಮೂಲಕ ನಮ್ಮನ್ನು ಬೆಳೆಸುತ್ತದೆ. ಹಾಗೆ ದೊರಕುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು […]
ಕುಂಭಾಶಿ ಶ್ರೀ ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್, ಕಾವೇರಿ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಅಶಕ್ತರಿಗೆ ಆರೈಕೆ ನೀಡುವ ಹೆಬ್ರಿಯ ಶ್ರೀ ಕೃಷ್ಣ ಸೇವಾ ಕೇಂದ್ರಕ್ಕೆ ಒಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರಿಸಲಾಯಿತು. ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಮಾಜಿ ಅಧ್ಯಕ್ಷರಾದ ರೋ. ಶಾಂತರಾಮ ಪ್ರಭು, ಕಾರ್ಯದರ್ಶಿ ರೋ. ಸಚಿನ್ ನಕ್ಕತ್ತಾಯ, ರೋ. ಸುರೇಖಾ ಪುರಾಣಿಕ, ಹಾಗೂ ಹೆಬ್ರಿಯ ಶ್ರೀ ಕೃಷ್ಣ ಸೇವಾ ಕೇಂದ್ರದ ಡಾ. ಭಾರ್ಗವಿ ಐತಾಳ ಉಪಸ್ಥಿತರಿದ್ದರು.
ಮಂಗಳೂರು: ಜೆಪ್ಪುವಿನ ಸೇಂಟ್ ಜೋಸೆಫ್ ಚರ್ಚ್ ನಲ್ಲಿ ಚರ್ಚ್ನ ಮಕ್ಕಳು ನವೆಂಬರ್ 11 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಿ ಮಕ್ಕಳೆಲ್ಲಒಗ್ಗೂಡ ಸಂತೋಷದಿಂದ ಸಮಯ ಕಳೆದರು. 6 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗಾಗಿ ಕಾರ್ಯಕ್ರಮವನ್ನು ಸೃಜನಾತ್ಮಕ ಮತ್ತು ವಿನೂತನ ರೀತಿಯಲ್ಲಿ ಆಯೋಜಿಸಲಾಗಿತ್ತು. ಚರ್ಚಿನ ಎಲ್ಲಾ ಮಕ್ಕಳಿಗಾಗಿ ಬೈಬಲ್ ಆಟಗಳನ್ನು ಏರ್ಪಡಿಸಲಾಗಿತ್ತು. ಎಲ್ಲಾ ಮಕ್ಕಳು ಉತ್ಸಾಹದಿಂದ ಇದರಲ್ಲಿ ಪಾಲ್ಗೊಂಡರು. ಚಟುವಟಿಕೆಗಳು ಮತ್ತು ಆಟಗಳ ಮೂಲಕ ಮಕ್ಕಳಿಗೆ ಬೈಬಲ್ ಜ್ನಾನವನ್ನು ಕಲಿಸಲು, ಒಂದು ನವೀನ ಮತ್ತು ಪ್ರಾಯೋಗಿಕ ವಿಧಾನದ. […]
ಬಸ್ರೂರು: ನ.13: ಸಂತ ಪಿಲಿಪ್ ನೇರಿ ಚರ್ಚಿನ ತೆರಾಲಿ ಪ್ರಯುಕ್ತ ಸಹೋದರತ್ವ ಭಾನುವಾರವನ್ನು (ನ.13)ಸಂಭ್ರಮದಿಂದ ಆಚರಿಸಲಾಯಿತು. ಪರಮಪ್ರಸಾದಕ್ಕೆ ಭವ್ಯ ಮೆರವಣಿಗೆಯ ಮೂಲಕ ಗೌರವವನ್ನು ಸೂಚಿಸಲಾಯಿತು. ಪ್ರಧಾನ ಧರ್ಮಗುರುಗಳಾಗಿ ವಂ.ಫಾ. ಕೆನ್ಯುಟ್ ಬಾರ್ಬೋಜ ದಿವ್ಯ ಬಲಿಪೂಜೆ ಅರ್ಪಿಸಿದರು, ಅತಿಥಿ ಧರ್ಮಗುರುಗಳಾಗಿ ವಂ.ಫಾ. ರೋಶನ್ ಮಾಬೆನ್ ಹಾಗು ಚರ್ಚಿನ ಗುರುಗಳಾದ ವಂ.ಫಾ . ಚಾರ್ಲ್ಸ್ ನೊರೊನ್ಹಾ, ವಂ.ಫಾ. ಚಾರ್ಲ್ಸ್ ಲೂಯಿಸ್ ಉಪಸ್ಥಿತರಿದ್ದರು. ಬಸ್ರೂರು: ನ.13: ಸಂತ ಪಿಲಿಪ್ ನೇರಿ ಚರ್ಚಿನ ತೆರಾಲಿ ಪ್ರಯುಕ್ತ ಸಹೋರತ್ವ ಭಾನುವಾರವನ್ನು (ನ.13)ಸಂಭ್ರಮದಿಂದ ಆಚರಿಸಲಾಯಿತು. ಪರಮಪ್ರಸಾದಕ್ಕೆ […]
ಕುಂದಾಪುರ, ನ.:12 ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಪಠ್ಯದ ಜೊತೆಗೆ ವ್ಯವಹಾರ ಜ್ಞಾನ ಅಗತ್ಯವಿದೆ, ಅದಕ್ಕೆ ನೆರವಾಗುವ ಉದ್ದೇಶದಿಂದ ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಸಂಘಟಿಸಿದ ವ್ಯವಹಾರ ದಿನ (Buissiness day) ವ್ಯಾಪರ ಮೇಳದಲ್ಲಿ ಕುಂದಾಪುರ ಪ್ರತಿಷ್ಟಿತ ಸಂತ ಮೇರಿಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ವಿಜಯಲಕ್ಷ್ಮಿ, ಲಿನೇಟ್, ರಕ್ಷಿತಾ, ದೀಪಿಕಾ ಪೈ, ಮಂಜುನಾಥ, ಭಾಗವಹಿಸಿ ವಿದ್ಯೆಯ ಜತೆಗೆ ವ್ಯವಹಾರ ಜ್ಞಾನ ವೃದ್ಧಿಸಿಕೊಂಡು ಹೆಮ್ಮೆಗೆ ಪಾತ್ರರಾಗಿದ್ದಾರೆ. ವ್ಯಾಪರ ಮೇಳದ ಮಳಿಗೆಯಲ್ಲಿ ಜೋನಿ ಬೆಲ್ಲ, ತೆಂಗಿನ ಎಣ್ಣೆ, ಹಪ್ಪಳ, ಪಿಸ್ತಾ, […]
ಶಿರ್ವ: ವಿದ್ಯಾರ್ಥಿಗಳ ವೃತ್ತಿಜೀವನದ ಗುರಿಗಳನ್ನು ರೂಪಿಸುವಲ್ಲಿ ಉದ್ಯೋಗ ತರಬೇತಿ ಪ್ರಮುಖ ಪಾತ್ರ ವಹಿಸುತ್ತದೆ. ನೇಮಕಾತಿಗಾಗಿ ತಮ್ಮ ಕ್ಯಾಂಪಸ್ಗೆ ಭೇಟಿ ನೀಡುವ ಉನ್ನತ ಸಂಸ್ಥೆಯಲ್ಲಿ ಸ್ಥಾನ ಪಡೆಯುವುದು ಪ್ರತಿಯೊಬ್ಬ ಕಂಪ್ಯೂಟರ್ ಪದವಿ ವಿದ್ಯಾರ್ಥಿಯ ಕನಸಾಗಿದೆ. ಈ ಪ್ರಮುಖ ಅಂಶವನ್ನು ಪರಿಗಣನೆಗೆ ಇಟ್ಟುಕೊಂಡು, ಪದವಿ ವಿದ್ಯಾರ್ಥಿಗಳಿಗೆ ತಮ್ಮ ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ವಿವಿಧ ಉದ್ಯಮಗಳಲ್ಲಿ ಉತ್ತಮ ಉದ್ಯೋಗವನ್ನು ಸಾಧಿಸಲು ತರಬೇತಿ ಮುಖ್ಯವಾಗಿದೆ ಎಂದು ಸಂತ ಮೇರಿ ಮಹಾ ವಿದ್ಯಾಲಯ,ಶಿರ್ವ ಮತ್ತು ಮೈಟ್ ಕಾಲೇಜು, ಮಿಜಾರು ನಡುವೆ ಒಡಂಬಡಿಕೆಯ ಅನುಸರಿಸಿ […]
ಕುಂದಾಪುರ: ನವೆಂಬರ್ 9ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಸಂವಹನ ಕಲೆ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಡಾ. ಹಯವದನ ಉಪಾಧ್ಯಾಯ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ಸಂವಹನ ಕಲೆ ಕರಗತ ಮಾಡಿಕೊಳ್ಳಲು ಬೇಕಾದ ವಿಧಾನಗಳ ಕುರಿತು ತಿಳಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ, ಯುಥ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಸತ್ಯನಾರಾಯಣ, ಉಪನ್ಯಾಸಕಿ ಶ್ವೇತಾ ಮತ್ತು ಉಪನ್ಯಾಸಕ ವಿದ್ಯಾಧರ ಉಪಸ್ಥಿತರಿದ್ದರು.ಯುಥ್ ರೆಡ್ ಕ್ರಾಸ್ […]
ಭಾರತೀಯ ಜೇಸಿಐನ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಬೆಳ್ಮಣ್ಣಿನ 43ನೇ ವರ್ಷದ ನೂತನ ಅಧ್ಯಕ್ಷರಾಗಿ ಅಬ್ಬನಡ್ಕ ಸತೀಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇವರು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ವಿಂಶತಿ ವರ್ಷದ ಅಧ್ಯಕ್ಷರಾಗಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಇಟ್ಟಮೇರಿ ಲಿಟ್ಲ್ ಫ್ಲವರ್ ಫ್ರೆಂಡ್ಸ್ನ ಕಾರ್ಯದರ್ಶಿಯಾಗಿ, ಅಬ್ಬನಡ್ಕ ಕ್ರಿಕೆಟ್ ತಂಡದ ನಾಯಕರಾಗಿ, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸದಸ್ಯರಾಗಿ […]

