JANANUDI.COM NETWORK ಕುಂದಾಪುರ,ಫ್ರೆ.18; ಕಾಳಾವರ ಗ್ರಾಮ ಪಂಚಾಯತಿಯ ಪ್ರಥಮ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ವಕ್ವಾಡಿ ಆಶಾಲತ ಶೆಟ್ಟಿ, ಉಪಾಧ್ಯಕ್ಷರಾಗಿ ರಾಮಚಂದ್ರ ನಾವಡ ಸಿಪಿಎಮ್ ಬೆಂಬಲಿತರಾದ ರಾಮಚಂದ್ರ ನಾವಡ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಫೆ.18 ರಂದು ನಡೆಯಿತು. ಇಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷನ ಸ್ಥಾನ ಸಾಮನ್ಯಕ್ಕೆ ಮೀಸಲಾಗಿತ್ತು. ಯುವಜನ ಕ್ರೀಡಾ ಇಲಾಖೆಯ ಅಧಿಕಾರಿ ಕುಸುಮಾಕರ ಶೆಟ್ಟಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.ಒಟ್ಟು 17 ಸದಸ್ಯರ ಬಲ ಹೊಂದಿರುವ ಕಾಳಾವರ ಗ್ರಾಮ ಪಂಚಾಯತಿಲ್ಲಿ 7 […]
ವರದಿ: ಸ್ಟೀವನ್ ಕುಲಾಸೊ, ಉದ್ಯಾವರ ಉದ್ಯಾವರ : ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಸಹಕಾರದೊಂದಿಗೆ ಕಾಪು ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅತಿ ವಂ. ಫಾ. ಸ್ಟ್ಯಾನಿ ಬಿ ಲೋಬೊ ಮಾತನಾಡಿ, ಕಾನೂನಿಗೆ ಗೌರವ ನೀಡುವುದು ನಮ್ಮೆಲ್ಲರ ಆದ್ಯ […]
JANANUDI.COM NETWORK ಪ್ರಥಮ ವರ್ಷದ ಎಂ.ಬಿ.ಎ ವಿಧ್ಯಾರ್ಥಿಗಳಿಗೆ ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಪಂಚಾಯತ್ ಗೆ ಎಂ.ಬಿ.ಎ ವಿಧ್ಯಾರ್ಥಿಗಳ ಕೊಡುಗೆ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಕೋಟ ಗ್ರಾಮ ಪಂಚಾಯತ್ Pಆಔ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, ವಿಧ್ಯಾರ್ಥಿಗಳು ತಮ್ಮ ವಿಧ್ಯಾರ್ಥಿ ಜೀವನದಲ್ಲೇ ಸಮಾಜಕ್ಕೆ ತಮ್ಮಿಂದಾದ ಸೇವೆಯನ್ನು ಸಲ್ಲಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು, ಎಂ.ಬಿ.ಎ ಆದ ವಿಧ್ಯಾರ್ಥಿಗಳು ಗ್ರಾಮಾಭಿವೃದ್ದಿಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದರು.ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ ನ ವಿಶೇಷ ಕರ್ತವ್ಯಾಧಿಕಾರಿ […]
JANANUDI.COM NETWORK ಕೋಟ,ಫೆ.16: ಪಾಸ್ಟ್ಯಾಗ್ ಗಡ್ಡಾಯಗೊಳಿಸಿದ ಕೇಂದ್ರ ಸರಕಾರದ ಆದೇಶದಂತೆ ಇಂದು ಬೆಳಗ್ಗಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿರು ಸಾಸ್ತಾನದಲ್ಲಿರುವ ಟೋಲ್ ಗೇಟ್ ನಲ್ಲಿ ಸ್ಥಳಿಯರಿಗೂ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿಯ ನೇತ್ರದವದಲ್ಲಿ ಸ್ಥಳಿಯರು ಪ್ರತಿಭಟನೆ ನಡೆಸಿದರು
JANANUDI.COM NETWORK ಬೈಂದೂರು:- ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬೈಂದೂರಿನ ಹೋಟೆಲ್ ಅಂಬಿಕಾ ಇಂಟರ್ನ್ಯಾಷನಲ್ ನ ಹಾಲ್ ನಲ್ಲಿ ಸರ್ಕಾರಿ ಉದ್ಯೋಗ ಮಾಹಿತಿ ಶಿಬಿರ ಹಾಗೂ ಮಾದಕ ವ್ಯಸನಿ ವಿರುದ್ಧ ಜಾಗ್ರತಿ ಕಾರ್ಯಕ್ರಮ ನಡೆಯಿತು.ನಮ್ಮ ನಾಡ ಒಕ್ಕೂಟ ಬೈಂದೂರು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮಿ ಪ್ರಾಸ್ತಾವಿಕ ಭಾಷಣ ನುಡಿದು ಅತಿಥಿಗಳನ್ನು ಸ್ವಾಗತಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಜೊತೆಗೆ ಉದ್ಯೋಗದ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳಬೇಕೆಂದು , ನಮ್ಮ ನಾಡ […]
JANANUDI.COM NETWORK ಕುಂದಾಪುರ : ಇಲ್ಲಿನ ಹಳೆ ಆಳಿವೆ ನಿವಾಸಿ ಭಾರತೀಯ ಜೀವಾ ವಿಮಾ ನಿಗಮದ ಅಡವೈಸರ್ , ಪ್ರಗತಿಪರ ಕೃಷಿಕರು ಪಿಯುಸ್ ನಗರ ಚರ್ಚಿನಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡ, ಸ್ಟ್ಯಾನಿ ಡಿ’ಸೋಜ (58) ಅಲ್ಪಕಾಲದ ಅಸೌಖ್ಯದಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾಗಿ, ಕಥೊಲಿಕ್ ಸಭಾದ ಅಧ್ಯಕ್ಷರಾಗಿ, ಕುಂದಾಪುರದ ಬ್ಲಾಕ್ ಕಾಂಗ್ರೆಸ್ ನ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾಗಿ, ರೋಟರಿ ಕ್ರೆಡಿಟ್ ಕೋ- ಒಪರೇಟಿವ್ ಸೊಸೈಟಿ ಲಿಮಿಟೆಡ್ ನ […]
JANANUDI.COM NETWOEK ಕುಂದಾಪುರ: ಫೆಬ್ರವರಿ 13ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ” ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್. ಪಿ.ನಾರಾಯಣ ಶೆಟ್ಟಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಯೊಂದಿಗೆ ಸಾಕಷ್ಟು ಪ್ರಯತ್ನ ಮತ್ತು ತಯಾರಿ ಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ನಿಮ್ಮ ಪರಿಶ್ರಮ ಇರಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ ಜಿ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಬೆಂಗಳೂರಿನ ‘ಅಗೋಚರ’ ಮಾಸ ಪತ್ರಿಕೆಯ ಆಶ್ರಯದಲ್ಲಿ ಕೋಟೇಶ್ವರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಮತ್ತು ತಾಲೂಕು ಘಟಕಗಳ ಕುಂದು ಕೊರತೆ – ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮೊಡರ್ನ್ ಮಹಾಭಾರತ ಸಿನಿಮಾ ನಿರ್ದೇಶಕ ಕೋಟೇಶ್ವರ ಶ್ರೀಧರ ಉಡುಪರನ್ನು ಅಗೋಚರ ಪತ್ರಿಕಾ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಪತ್ರಿಕಾ ಬಳಗ ಮತ್ತು ಸಾಹಿತ್ಯ ಪರಿಷತ್ ಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಯುವ ನಿರ್ದೇಶಕ ಶ್ರೀಧರ್ ಉಡುಪ, – ಒಂದು […]
ವರದಿ: ಸ್ಟೀವನ್ ಕುಲಾಸೊ, ಉದ್ಯಾವರ ಉಡುಪಿ : ಕಲೆ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆಯ ಮೂರನೇ ವರ್ಷದ ಮೂರು ದಿನಗಳ ನಿರಂತರ್ ನಾಟಕೋತ್ಸವವನ್ನು ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ. ವಂ. ಫಾ. ಸ್ಟ್ಯಾನಿ ಬಿ ಲೋಬೊ ನಗಾರಿ ಬಾರಿಸುವುದರೊಂದಿಗೆ ಉದ್ಘಾಟಿಸಿದರು.ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ರಂಗ ಮಂದಿರದ ವೇದಿಕೆಯಲ್ಲಿ ಉದ್ಘಾಟಿಸಿ, ಮಾತನಾಡಿದ ಅವರು, ನಾಟಕ ಒಂದು ಅತ್ಯುತ್ತಮ ಮಾಧ್ಯಮ. ಸಮಾಜದಲ್ಲಿ ಆಗುವಂತಹ […]

