The Cloistered Carmel Sisters of the Sacred Heart Monastery, Kankanady, Mangaluru, celebrated the Centenary of the Sainthood of St. Thérèse of Lisieux along with the Solemnity of St. Thérèse of Lisieux. ಮಂಗಳೂರಿನ ಕಂಕನಾಡಿಯ ಸೇಕ್ರೆಡ್ ಹಾರ್ಟ್ ಮಠದ ಕ್ಲೋಯಿಸ್ಟೆಡ್ ಕಾರ್ಮೆಲ್ ಸಿಸ್ಟರ್ಸ್, ಸೇಂಟ್ ಥೆರೆಸ್ ಆಫ್ ಲಿಸಿಯಕ್ಸ್ ಅವರ ಸಂತತ್ವದ ಶತಮಾನೋತ್ಸವವನ್ನು ಮತ್ತು ಸೇಂಟ್ ಥೆರೆಸ್ ಆಫ್ ಲಿಸಿಯಕ್ಸ್ ಅವರ ಪವಿತ್ರ ಹಬ್ಬವನ್ನು ಆಚರಿಸಿದರು. […]
ಶಂಕರನಾರಾಯಣದ ಮದರ್ ತೆರೆಸಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ “ ಸೈನ್ಸ್ ಚಾಂಪ್ – 2025” ಸ್ಪರ್ಧೆಯನ್ನು ಅತ್ಯುತ್ತಮವಾಗಿ ಆಯೋಜಿಸಿತು. ವಿಜ್ಞಾನ ವಿದ್ಯಾರ್ಥಿಗಳಲ್ಲಿ ಜ್ಞಾನವೃದ್ಧಿ, ವಿಶ್ಲೇಷಣಾತ್ಮಕ ಚಿಂತನೆ ಹಾಗೂ ನವೀನತೆಗೆ ಪ್ರೋತ್ಸಾಹ ನೀಡುವ ಉದ್ದೇಶದೊಂದಿಗೆ ಈ ಸ್ಪರ್ಧೆ ನಡೆಯಿತು. ಆರಂಭಿಕ ಸುತ್ತಿನ ಮೂಲಕ ಆಯ್ಕೆಯಾದ ನಾಲ್ವರು ಸ್ಪರ್ಧಾರ್ಥಿಗಳು ಅಂತಿಮ ಸುತ್ತಿನಲ್ಲಿ ತಮ್ಮ ಪ್ರತಿಭೆ ಹಾಗೂ ಚಾತುರ್ಯವನ್ನು ಮೆರೆದರು. ವಿವಿಧ ಹಂತಗಳನ್ನು ಒಳಗೊಂಡ ಈ ಸ್ಪರ್ಧೆಯಲ್ಲಿ — ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರದ ಪ್ರಶ್ನೋತ್ತರಗಳು, ತಂತ್ರಜ್ಞಾನದ ಕುರಿತು […]
ಕುಂದಾಪುರ;”ಯಾವುದೇ ವಿಪತ್ತು ಎದುರಾದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸ್ವಯಂಸೇವಕರು ಸ್ವಯಂಸ್ಪೂರ್ತಿಯಿಂದ ನಿಷ್ಪಕ್ಷಪಾತದಿಂದ ತಾರತಮ್ಯವಿಲ್ಲದೇ ಪ್ರಪಂಚದಾದ್ಯಂತ ಅಗತ್ಯವಿರುವ ಸೇವೆ ನೀಡುತ್ತಾರೆ. ವಿದ್ಯಾರ್ಥಿಗಳು ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೇ ಸಹವರ್ತಿಗಳ ಆರೋಗ್ಯ ಕಾಪಾಡುವ ಜವಾಬ್ದಾರಿಯನ್ನು ಕಲಿಯಬೇಕು ” ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಘಟಕದ ಸಭಾಪತಿ ಶ್ರೀ ಜಯಕರ ಶೆಟ್ಟಿಯವರು ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಕರೆ ನೀಡಿದರು.ಕುಂದಾಪುರ ತಾಲೂಕು ವಲಯದ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ದಿನಕರ್ ಆರ್. ಶೆಟ್ಟಿಯವರು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಪ್ರತಿಜ್ಞಾವಿಧಿ ಬೋಧಿಸಿ, ವಿದ್ಯಾರ್ಥಿಗಳು ಸಮಾಜದ ಋಣವನ್ನು ತೀರಿಸುವಲ್ಲಿ ತಮ್ಮಿಂದಾದ ಪ್ರಯತ್ನವನ್ನು ಮಾಡಬೇಕೆಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳು ಇತರರಿಗೆ ಸಕಾಲದಲ್ಲಿ ನೆರವು ನೀಡುವ ನಿಸ್ವಾರ್ಥ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ಕರೆ ನೀಡಿದರು. ಇಂಡಿಯನ್ ರೆಡ್ ಕ್ರಾಸ್, ಕುಂದಾಪುರ ಘಟಕದ ವತಿಯಿಂದ ಕಾಲೇಜಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನು ಹಸ್ತಾಂತರಿಸಲಾಯಿತು.ಇಂಗ್ಲೀಷ್ ಉಪನ್ಯಾಸಕಿ ರೂಪಾ ಜಿ.ಪಾಲಂಕರ್ ರವರು ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಶರಧಿ ಪ್ರಾರ್ಥನೆ ಹಾಡಿದರು.ಇಂಗ್ಲೀಷ್ ಉಪನ್ಯಾಸಕಿ ಸುಮತಿ ಶೆಣೈಯವರು ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪುರ, ಸೆ. 28.: ಕುಂದಾಪುರ ರೋಜರಿ ಚರ್ಚಿನ ವೈಶಂತಿಕ ಸಭೆ ಅವರ ಪೋಷಕ ಸಂತ ವಿನ್ಸೆಂಟ್ ಪಾವ್ಲರ (ಸೆ.28 ರಂದು) ದಿನಾಚರಣೆಯನ್ನು ಆಚರಿಸಿತು.ಚರ್ಚಿನ ಧರ್ಮಗುರುಗಳಾದ ಅ|ವಂ|ಪೌಲ್ ರೇಗೊ ಕ್ರತ್ಞತಾ ಬಲಿದಾನವನ್ನು ಅರ್ಪಿಸಿದರು. ವೈಶಂತಿಕ ಸಭೆಯ ಸದಸ್ಯರು ಬಲಿದಾನದ ಪ್ರಾರ್ಥನ ವಿಧಿಯನ್ನು ನಡೆಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅ|ವಂ|ಪೌಲ್ ರೇಗೊ ‘ಸಂತ ವಿನ್ಸೆಂಟ್ ಪಾವ್ಲ್ ವೈಶಂತಿಕ ಸಭೆಯವರು ಸಮಾಜಕ್ಕೆ ಅಮೂಲ್ಯ ಸೇವೆಯನ್ನು ನೀಡುತಿದ್ದಾರೆ, ಸಂತ ವಿನ್ಸೆಂಟ್ ಪಾವ್ಲರು ದೇವರ ವಾಕ್ಯವನ್ನು ಮನಗಂಡು ಅವರು ನಿರ್ಗತಿಕರಿಗೆ, ರೋಗಿಗಳಿಗೆ, ಅನಾಥರಿಗಾಗಿ […]
ಕುಂದಾಪುರ; ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ “ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ” ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನುಕಾಲೇಜು ಆವರಣದಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಸಿಬ್ಬಂದಿಗಳು ಉದ್ಯೋಗ ಸಂಬಂಧಿತ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿ, ವೈಯಕ್ತಿಕ ಮತ್ತು ವೃತ್ತಿಜೀವನದ ನಡುವೆ ಸಮತೋಲನ ಸಾಧಿಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿತ್ತು. ಕಾರ್ಯಕ್ರಮಕ್ಕೆ ಉಡುಪಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ ಮುಖ್ಯ ಸಂಪನ್ಮೂಲ […]
ಕುಂದಾಪುರ ; ” KCET ಮತ್ತು NEET ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆದು ವೈಯುಕ್ತಿಕ ಆಯ್ಕೆಯ ಕಾಲೇಜುಗಳನ್ನು ಉನ್ನತ ವ್ಯಾಸಂಗಕ್ಕೆ ಆಯ್ದುಕೊಳ್ಳುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ. ವ್ಯಾಪಕ ಪಠ್ಯಕ್ರಮವಿರುವ ರಸಾಯನ ಶಾಸ್ತ್ರ ವಿಷಯದಲ್ಲಿ ಹೆಚ್ಚು ಒತ್ತು ನೀಡುವ ಓರ್ಗಾನಿಕ್ ರಿಯಾಕ್ಷನ್ ಗಳಂಥ ಕೆಲವು ಅಧ್ಯಾಯಗಳು ವಿದ್ಯಾರ್ಥಿಗಳಿಗೆ ಬಹುಬೇಡಿಕೆಯ ರಾಸಾಯನಿಕ ಉತ್ಪಾದನಾ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ಉದ್ಯೋಗ ಪಡೆಯುವಲ್ಲಿ ಸಹಾಯಕವಾಗುತ್ತದೆ ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ […]
Mangalore – Carmelite Sisters to celebrate centenary of Saint Teresa of Lisieux’s sanctification with devotion ಮಂಗಳೂರು ಕಂಕನಾಡಿ ಸೆಕ್ರೆಡ್ ಹಾರ್ಟ್ ಮೋನಾಸ್ಟ್ರಿಯ ಕ್ಲೋಸ್ಟರ್ಡ್ ಕಾರ್ಮೆಲ್ ಸಹೋದರಿಗಳು, ಸಂತ ತೆರೇಸಾ ಆಫ್ ಲಿಸ್ಯೂದ ಪವಿತ್ರತೆಯ ಶತಮಾನೋತ್ಸವವನ್ನು ಸಂತ ತೆರೇಸಾ ಲಿಸ್ಯೂದ ಭಕ್ತಿಪೂರ್ಣ ಉತ್ಸವದೊಂದಿಗೆ ಆಚರಿಸುತ್ತಿದ್ದಾರೆ.ಆಚರಣೆಯ ಭಾಗವಾಗಿ, ಸಂತ ತೆರೇಸಾ ಲಿಸ್ಯೂದ ಜೀವನದ ಮೇಲೆ ಒಂದು ಪ್ರದರ್ಶನವನ್ನು ಸೆಕ್ರೆಡ್ ಹಾರ್ಟ್ ಮೋನಾಸ್ಟ್ರಿಯಲ್ಲಿ,ಕಂಕನಾಡಿ ಮಂಗಳೂರು, ಸೆಪ್ಟೆಂಬರ್ 28ರಿಂದ ಅಕ್ಟೋಬರ್ 1, 2025ರವರೆಗೆ ( ಬೆಳಿಗ್ಗೆ ಯಿಂದ […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ನಾಲ್ಕನೇ ಸೆಮಿಸ್ಟರ್ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಸೆಪ್ಟೆಂಬರ್ 25 ರಂದು ಆಧಿತ್ಯ ಗೆರುಬೀಜ ಕಾರ್ಖಾನೆ, ಮೂಡ್ಲಕಟ್ಟೆಯಲ್ಲಿ ವಿಶ್ವ ಶ್ವಾಸಕೋಶ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದರು. ಕಾರ್ಯಕ್ರಮವು ದೀಪ ಬೆಳಗಿಸುವದರ ಮೂಲಕ ಆರಂಭಗೊಂಡಿತು.ಈ ಸಂದರ್ಭದಲ್ಲಿ ಗೇರುಬೀಜ ಕಾರ್ಖಾನೇಯ ಮೇಲ್ವಿಚಾರಕರಾದ ಕೇಶವ, ಮೂಡ್ಲಕಟ್ಟೆ ಕಾಲೇಜಿನ ಉಪನ್ಯಾಸಕರಾದ ಕುಮಾರಿ ಕೀರ್ತನಾ ಹಾಗೂ ಕುಮಾರಿ ರಕ್ಷಿತಾ , ಗೇರುಬೀಜ ಕಾರ್ಖಾನೆಯ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಕಾರ್ಮಿಕರಿಗೆ ಶ್ವಾಸಕೋಶದ ರಚನೆ, ಶ್ವಾಸಕೋಶದ ಕಾಯಿಲೆಗಳು ಹಾಗೂ ತಡೆಗಟ್ಟುವ […]
Konkani Culture Takes Center Stage at CASK (catholic association of south kanara) Reunion 2025 ಮಂಗಳೂರು ; ಸಪ್ಟೆಂಬರ್ 21ರಂದು ಬೆಂದೂರ್ ಚರ್ಚ್ ಸಭಾಂಗಣದಲ್ಲಿ ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು.ಫ್ಲೋರಾ ಕ್ಯಾಸ್ಟೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ […]

