ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ  ಇಂಡಕ್ಷನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ  ಗವರ್ನ್‌ಮೆಂಟ್ ಟೆಕ್ ಕೆ ಪಿ ಎಮ್ ಜಿ ಇಂಡಿಯಾದ ಸಹಾಯಕ ನಿರ್ದೇಶಕರಾದ ಡಾ. ರತನ್ ಮುರಳೀದರ್  ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು “ಒಬ್ಬ ವಿದ್ಯಾರ್ಥಿಯಾಗಿ, ನಿಮ್ಮ ಸುತ್ತಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಪರಿಹರಿಸಲು ನಿಮ್ಮ ಕೌಶಲ್ಯಗಳನ್ನು ಬಳಸಿಕೊಳ್ಳಬೇಕು, ಆ ನಿಟ್ಟಿನಲ್ಲ್ ವಿದ್ಯಾರ್ಥಿಗಳು ಪ್ರಯತ್ನ ಪಡುತ್ತಲೇ ಇರಬೇಕು ಎಂದು ಪ್ರೋತ್ಸಾಹಿಸಿದರು.” ವಿವಿಧ ವಿಭಾಗದ ಡೀನ್ ಅವರು ಮಾತಾಡಿ ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು […]

Read More

ಕುಂದಾಪುರದ‌ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್ ಎಡ್ಮಿನಿಸ್ಟ್ರೇಶನ್ ಸಂಸ್ಥೆಯ ಉಪನ್ಯಾಸಕರಾದ ಶ್ರೀ ಪ್ರಭುಲಿಂಗ ರವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಆಡಳಿತಾತ್ಮಕ ಕಛೇರಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಧನ್ಯವಾದ ಸಲ್ಲಿಸಿದರು. 

Read More

ಉಡುಪಿ : ಸಹಕಾರ ಸಂಘಗಳು ಹೆಚ್ಚಿನ ಪತ್ರ ವ್ಯವಹಾರವಿಲ್ಲದೇ, ಸರಳ ರೀತಿಯಲ್ಲಿ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಲ ಸೌಲಭ್ಯವನ್ನು ನೀಡುತ್ತವೆ. ಇದರಿಂದಾಗಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ನಡೆಸಲು ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಜನರಲ್ಲಿ ಆರ್ಥಿಕ ಉಳಿತಾಯ ಮನೋಭಾವ ಬೆಳೆಸುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಮಹತ್ತರದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ತಿಳಿಸಿದರು. ನಗರದ ಶೋಕಮಾತಾ ದೇವಾಲಯದ ಆವರಣದಲ್ಲಿರುವ ಆವೇ ಮರಿಯಾ ಸಭಾಂಗಣದಲ್ಲಿ ನಡೆದ ಉಡುಪಿ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 28ನೇ ವಾರ್ಷಿಕ […]

Read More

ಮಂಗಳೂರು : ದೇರಳಕಟ್ಟೆ ನವಾಜ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಮತ್ತು ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಆಶ್ರಯದಲ್ಲಿ ನಡೆದ “ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ’ ಹಾಗೂ “‘ಭಾವೈಕ್ಯತೆ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ’ ಸಮಾರಂಭದಲ್ಲಿ ಸೆಪ್ಟೆಂಬರ್ 14 ರಂದು ಮಾಯ್ ದೆ ದೇವುಸ್ ಶಾಲಾ ಶಿಕ್ಷಕಿ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಇವರಿಗೆ ” ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ – 2025″ ನೀಡಿ ಗೌರವಿಸಲಾಯಿತು. ಇವರು ಕವಯತ್ರಿ ಹಾಗೂ ಅನುವಾದಕಿಯಾಅಗಿದ್ದಾರೆ. ಇವರ […]

Read More

ಡಾ|| ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟು ಹಬ್ಬದ ಸಲುವಾಗಿ ಡಾ|| ವಿಷ್ಣುವರ್ಧನ್ ಅಭಿಮಾನಿ ಸಂಘ, ತ್ರಾಸಿ ಇವರ ವತಿಯಿಂದ ನಾರಾಯಣ ವಿಶೇಷ ಮಕ್ಕಳ ಶಾಲೆ, ತಲ್ಲೂರು ಮತ್ತು ಚೈತನ್ಯ ಸ್ಪೆಶಲ್ ಸ್ಕೂಲ್, ವಡೇರ ಹೋಬಳಿ, ಕುಂದಾಪುರ ಇವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ ಮೊವಾಡಿ, ತ್ರಾಸಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಘುರಾಮ ದೇವಾಡಿಗ ಸಹಿತ ಅಭಿಮಾನಿಗಳಾದ ಮಿಥುನ್ ಎಂ. ಡಿ. ಬಿಜೂರು, ರವಿ ಶೆಟ್ಟಿಗಾರ್, ತ್ರಾಸಿ., ಪಾಂಡುರಂಗ […]

Read More

ಶ್ರೀನಿವಾಸಪುರ : ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ವಿಶೇಷ ಕಾರ್ಯಕ್ರಮ ನಡೆಯಿತು. ಓಕೀನವ ಗೋಜೂ ರೈ ಕರಾಟೆ ತರಬೇತಿ ಶಾಲೆಯ ವತಿಯಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳ ಕರಾಟೆ ಬೆಲ್ಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತರಬೇತಿದಾರ ಎಚ್. ಎನ್. ನರಸಿಂಹಯ್ಯ ಅವರು ಬ್ಲಾಕ್ ಬೆಲ್ಟ್ ಜೊತೆಗೆ ಬ್ರೌನ್, ಗ್ರೀನ್, ಪಿಂಕ್, ಆರೇಂಜ್ ಹಾಗೂ ಎಲ್ಲೋ ಬೆಲ್ಟ್‌ಗಳನ್ನು ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರ ಕಂಬಾಲಪಳ್ಳಿ ಶ್ರೀನಿವಾಸ್, ನಿವೃತ್ತ […]

Read More

ಬ್ರಹ್ಮಾವರ ;ಉಡುಪಿ ಜಿಲ್ಲೆಯ  ಬ್ರಹ್ಮಾವರ ಕಾಲೇಜ್ ಒಂದರ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿದ್ಯಾರ್ಥಿನಿಯು ತಾನು ಬೆಂಗಳೂರಿಗೆ ಹೋಗಿದ್ದು ವಾಪಸು ಬರುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ. ಹಾಸ್ಟೆಲ್‌ ನಿಂದ ಕಾಲೇಜಿಗೆ ಹೊರಟಿದ್ದವಳು  ಕಾಲೇಜಿಗೆ ಬರದೆ ಮನೆಗೂ ಹೋಗದೆ,  ನಾಪತ್ತೆ ಆಗಿರುವ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ವಿದ್ಯಾರ್ಥಿನಿಯೇ ಸ್ವತಃ ತಾನು ಬೆಂಗಳೂರಿಗೆ ಬಂದಿದ್ದು, ವಾಪಸು ಬರುವುದಾಗಿ ತಿಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದು, […]

Read More

ಉಡುಪಿ – ಐಸಿವೈಎಂ ಉಡುಪಿ ಧರ್ಮಪ್ರಾಂತ್ಯದ ಆಶ್ರಯದಲ್ಲಿ ನಡೆದ “ಯುವ ದಬಾಜೋ 2.0” ಯುವ ಮಹಾಸಭೆಯ ಅಂಗವಾಗಿ ಆಯೋಜಿಸಿದ ಶಾರ್ಟ್ ಫಿಲ್ಮ್ ಸ್ಪರ್ಧೆ ಯುವಕರ ಕಲಾತ್ಮಕತೆ ಮತ್ತು ಕಥನ ಸಾಮರ್ಥ್ಯವನ್ನು ಕಂಗೊಳಿಸಿತು. ಸೆಪ್ಟೆಂಬರ್ 15ರಂದು “ಯುವ ಆಯೋಗ, ಉಡುಪಿ ಧರ್ಮಪ್ರಾಂತ್ಯ ”  ಯೂಟ್ಯೂಬ್ ಚಾನೆಲ್‌ನಲ್ಲಿ ಐದು ಶಾರ್ಟ್ ಫಿಲ್ಮ್‌ಗಳನ್ನು ಬಿಡುಗಡೆ ಮಾಡಲಾಗಿದ್ದು, ನಂಬಿಕೆ, ಸಂಸ್ಕೃತಿ ಹಾಗೂ ಸಮುದಾಯದ ಮೌಲ್ಯಗಳನ್ನು ಯುವಕರ ದೃಷ್ಟಿಕೋನದಿಂದ ಹಂಚಿಕೊಂಡವು. ಪ್ರತೀ ಚಿತ್ರ ತನ್ನದೇ ಆದ ಭಾವನಾತ್ಮಕ ಕಥೆಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು: […]

Read More

ಕಲ್ಯಾಣಪುರ ; ಮಿಲಾಗ್ರಿಸ್ ಕಾಲೇಜು ಎನ್ಎಸ್ಎಸ್ ಸ್ವಯಂಸೇವಕರಿಗೆ ಸಮಗ್ರ ಅಗ್ನಿ ಸುರಕ್ಷತೆ, ವಿಪತ್ತು ನಿರ್ವಹಣೆ ಮತ್ತು ವೈದ್ಯಕೀಯ ತುರ್ತು ತರಬೇತಿಯನ್ನು ನಡೆಸುತ್ತದೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಇತ್ತೀಚೆಗೆ ತನ್ನ ಎನ್ಎಸ್ಎಸ್ ಸ್ವಯಂಸೇವಕರಿಗೆ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಕುರಿತು ಸಮಗ್ರ ಸಾಮಾಜಿಕ ಜಾಗೃತಿ ಅಭಿಯಾನವನ್ನು ಆಯೋಜಿಸಿತು. ಮಂಗಳೂರಿನ ವೃತ್ತಿಪರ ಸ್ವತಂತ್ರೋದ್ಯೋಗಿ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿ ಸತ್ಯರಾಜ್ ನಡೆಸಿದ ತರಬೇತಿಯು ಸ್ವಯಂಸೇವಕರಿಗೆ ತುರ್ತು ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಾದ ಜ್ಞಾನ, ಕೌಶಲ್ಯ ಮತ್ತು […]

Read More
1 71 72 73 74 75 537