ಕುಂದಾಪುರ, ಅ. 15 ರಂದು ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಶಾಲೆಯ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಮಕ್ಕಳಿಗೆ ಸಿಹಿ ಹಂಚಲಾಯಿತು ಕಾರ್ಯಕ್ರಮದಲ್ಲಿ ಕುಂದಾಪುರ ರೋಟರಿ ಕ್ಲಬ್ ರಿವರ್ಸೈಡ್ ಇದರ ಅಧ್ಯಕ್ಷರಾದ ರೋ. ಸದಾನಂದ ಉಡುಪ. ರೊಟೇರಿಯನ್ ಉಲ್ಲಾಸ್ ಕ್ರಾಸ್ತ, ರೋಟೋರಿಯಂ ದಂಡಪಾಣಿ (ಸಾರ್ಜೆಂಟ್) ನಿತೀಶ್ ರಾವ್ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾದ್ಯಾಯಿನಿ ಭಗಿನಿ ಐವಿ, ಶಾಲಾ ದೈಹಿಕ ಶಿಕ್ಷಕ ಮೈಕಲ್ ಪುಟಾರ್ಡೊ, ಇನ್ನಿತರ ಶಿಕ್ಷಕ ಶಿಕ್ಷೇತರರು ಉಪಸ್ಥಿತರಿದ್ದರು.
MCC Bank Hosts NRI Meet 2025 ಮಂಗಳೂರು ; 113 ವರ್ಷಗಳ ಸಮರ್ಪಿತ ಸೇವೆಯ ಪರಂಪರೆಯನ್ನು ಹೊಂದಿರುವ ಪ್ರತಿಷ್ಠಿತ ಬ್ಯಾಂಕ್ ಎಂಸಿಸಿ ಬ್ಯಾಂಕ್, ಆಗಸ್ಟ್ 17, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ದಿ ಅವತಾರ್ ಹೋಟೆಲ್ನಲ್ಲಿ ತನ್ನ ಎನ್ಆರ್ಐ ಸಮಾವೇಶ 2025 ಅನ್ನು ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಕಾರ್ಯಕ್ರಮವನ್ನು ಕಂಕನಾಡಿಯ ಎಫ್ಎಂಸಿಐ ನಿರ್ದೇಶಕ ವಂದನೀಯ ಫೌಸ್ಟಿನ್ ಲೋಬೊ ಉದ್ಘಾಟಿಸಿದರು. ರಿಲಯೆಬಲ್ ಫೆಬ್ರಿಕೇಟರ್ಸ್ ಎಲ್ಎಲ್ಸಿ, ದುಬಾಯಿ […]
ತಲ್ಲೂರು ; 2025ರ ಆಗಸ್ಟ್ 15 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ದೇವಾಲಯದಲ್ಲಿ “ಗಾಯನ್ ಸೊಭಾನ್” ಎಂಬ ಗಾಯನ ಸ್ಪರ್ಧೆಯನ್ನು ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲ ವಯೋಮಾನದವರಿಗಾಗಿ ಆಯೋಜಿಸಲಾಯಿತು. ಚರ್ಚಿನ ಮಕ್ಕಳ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನಂತರ ದೇಶಾಭಿಮಾನವನ್ನು ವ್ಯಕ್ತಪಡಿಸುವ ದೇಶಭಕ್ತಿ ಗೀತೆ ಹಾಡಲಾಯಿತು.ಚರ್ಚಿನ ಧರ್ಮಗುರು ವಂದನೀಯ ಫಾ. ಎಡ್ವಿನ್ ಡಿಸೋಜಾ ಅವರು ಸ್ವಾಗತಿಸಿ ತೀರ್ಪುಗಾರರಾದ ಶ್ರೀ ಡಾಲ್ಫಿ ಮಾಸ್ಕರೇನಾಸ್ – ಕೊಂಕಣಿ ಭಾಷೆಯ ಪ್ರಸಿದ್ಧ ಸಂಗೀತಗಾರ ಮತ್ತು ಶ್ರೀ ಅಶ್ವಿನ್ ಡಿ’ಕೋಸ್ಟಾ – […]
MCC BANK KULSHEKAR BRANCH SHIFTED TO OWN PREMISES AND 11TH ATM INAUGURATED ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು.ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್ನ ನಿರ್ದೇಶಕ ವಂದನೀಯ ಸ್ಟಿಫನ್ […]
ಗುರುವಾಯನಕೆರೆ; ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ, ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಇದರ ಆಶ್ರಯದಲ್ಲಿ ಆಯೋಜಿಸಿದ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ ” ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ” ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ನಿವೃತ್ತ ಪ್ರಾಂಶುಪಾಲ ಹಾಗೂ ಶಿಕ್ಷಣ ತಜ್ಞ ಶ್ರೀಯುತ ಪಾರ್ಥಸಾರಥಿಯವರು ಭಾಗವಹಿಸಿದ್ದರು.ಸಭಾ […]
ಗಂಗೊಳ್ಳಿ; ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ನ್ಯಾಯ ಮತ್ತು ನೀತಿ ಆಯೋಗದ ಸಹಭಾಗಿತ್ವದಲ್ಲಿ, ನ್ಯಾಯ ಮತ್ತು ನೀತಿ ಆದಿತ್ಯವಾರದ ಅಂಗವಾಗಿ” ಭಾರತದ ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗಿರುವ ಹಕ್ಕುಗಳು ” ಎನ್ನುವ ವಿಷಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಆಗಸ್ಟ್ 17, 2025 ರಂದು ಗಂಗೊಳ್ಳಿ ಕೊಸೆಸಾಂವ್ ಮಾತೆಯ ಚರ್ಚ್ ನಲ್ಲಿ ಜರುಗಿತು.ಪ್ರಖ್ಯಾತ ವಕೀಲರಾದ ಶ್ರೀಮತಿ ಅಶ್ವಿನಿ ಡಿಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ , ಭಾರತದ ಸಂವಿಧಾನ ಹಾಗೂ ಅದರಲ್ಲಿ ಅಲ್ಪಸಂಖ್ಯಾತರಿಗಿರುವ ಕಾನೂನುಗಳು ಮತ್ತು ಹಕ್ಕುಗಳು […]
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಅವರು ಗಾಳಿ ಸುದ್ದಿಯನ್ನು ಆಧರಿಸಿ ನೀಡಿರುವ ಹೇಳಿಕೆಗೆ ಯಾವುದಾದರೂ ಪುರಾವೆ ಇದೆಯಾ? ಅವರ ಹೇಳಿಕೆಗೆ ಆಧಾರವಾದರೂ ಏನು ಎಂದುದನ್ನು ನಾವು ತಿಳಿಯ ಬಯಸುತ್ತೇವೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ. ಜೆ.ಬಿ. […]
ಕುಂದಾಪುರ : 15.08.2025 ರಂದು ಕುಂದಾಪುರದ ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿ.ಎಸ್.ಐ. ಕೃಪಾ ವಿದ್ಯಾಲಯದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಅನಿತಾ ಆಲಿಸ್ ಡಿಸೋಜಾ ಸ್ವಾಗತಿಸಿದರು. ಮುಖ್ಯ ಅತಿಥಿ ರೆವರೆಂಡ್ ಇಮ್ಯಾನುಯೆಲ್ ಜಯಕರ್ ತ್ರಿವರ್ಣ ಧ್ವಜಾರೋಹಣ ಮಾಡಿದರು. ಗೌರವಾರ್ಥವಾಗಿ, ಗಣ್ಯರು, ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು ಮತ್ತು ಎಲ್ಲರೂ ರಾಷ್ಟ್ರಗೀತೆಯನ್ನು ಹೆಮ್ಮೆಯಿಂದ ಹಾಡಿದರು. ಮುಖ್ಯ ಅತಿಥಿಗಳು ತ್ರಿವರ್ಣದ ಮಹತ್ವ, ಅದನ್ನು ಅಲಂಕರಿಸುವ ಬಣ್ಣಗಳನ್ನು ವಿವರಿಸಿದರು. ಶಾಲಾ ಸಂಚಾಲಕಿ […]
ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿಯಲ್ಲಿ ಜನ್ಮಾಷ್ಟಮಿಯನ್ನು ಭಕ್ತಿಭಾವ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. ಪುಟ್ಟ ವಿದ್ಯಾರ್ಥಿಗಳು ಶ್ರೀಕೃಷ್ಣ ಮತ್ತು ರಾಧೆಯ ವೇಷದಲ್ಲಿ ತೋರಿ, ತಮ್ಮ ಮುಗ್ಧತೆಯ ಮಧುರತೆಯಿಂದ ಎಲ್ಲರ ಮನ ಸೆಳೆದರು.ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಎಲ್ಲರೂ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅದನ್ನು ಸ್ಮರಣೀಯವನ್ನಾಗಿ ಮಾಡಿದರು. ಶ್ರೀಕೃಷ್ಣನ ಬಾಲ್ಯಕಥೆಗಳು ಹಾಗೂ ಭಕ್ತಿಗೀತೆಗಳು ಕಾರ್ಯಕ್ರಮಕ್ಕೆ ಭಕ್ತಿಯ ನುಡಿಗಟ್ಟು ತುಂಬಿದವು.ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೂ ಸಿಬ್ಬಂದಿಗೂ ಸಿಹಿತಿಂಡಿಗಳನ್ನು ಹಂಚಲಾಯಿತು. ಸಮಸ್ತರ ಶಾಂತಿ, ಸಮೃದ್ಧಿ ಹಾಗೂ ಸುಖಕ್ಕಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.ಯಲ್ಲಿ ಜನ್ಮಾಷ್ಟಮಿಯನ್ನು ಭಕ್ತಿಭಾವ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. […]

