
ಜಾಹಿರಾತು ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡ ಸಾಹಿತ್ಯ್ ಸಂಭ್ರಮ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ ಪ್ರಾಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಆಮ್ಚಿ ಮಾಂಯ್ ಪತ್ರಿಕೆಯ ಮಾಜಿ ಸಂಪಾದಕರಾದ ಮುಕ್ತಿ ಪ್ರಕಾಶ್ ನಾಮಾಂಕಿತ ವಂದನೀಯ ಗುರು ಫ್ರಾನ್ಸಿಸ್ ಡಿಸೋಜ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಕಾಡೆಮಿಯು ಸಾಹಿತ್ಯ ಕಾರ್ಯಕ್ರಮಗಳನ್ನು ಊರೂರುಗಳಲ್ಲಿ ಹಮ್ಮಿಕೊಂಡು ಅಕಾಡೆಮಿಯ ಇರುವಿಕೆಯನ್ನು ಕೊಂಕಣಿಗರಲ್ಲಿ ತೋರ್ಪಡಿಸುತ್ತದೆ ಇಂತಹ […]

ಕುಂದಾಪುರ – ಕಾಶ್ಮೀರದ ಫಹಲ್ಗಾಮದಲ್ಲಿ ನಡೆದ ಭಯೋತ್ಪಾದಕೆ ದಾಳಿ ಇಡಿ ದೇಶಕ್ಕೆ ಆಫಾತ ನೀಡಿದೆ. ನಮ್ಮವರನ್ನು. ಕಳೆದುಕೊಂಡ ಯಾತನೆ ಆವರಿಸಿದೆ. ‘ಇಂತಹ ದುಷ್ಕತ್ಯ ಎಸಗಿರುವ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಆಗಲೇಬೆಕು. ಕೇಂದ್ರ’ ಸರಕಾರ ಈ ವಿಚಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಪೂರ್ಣ ಬೆಂಬಲವಿದೆ. ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆಮೊಳಹಳ್ಳಿ ಹೇಳಿದರು. ಸೋಮವಾರ (28) ರಂದು ಸಂಜೆ ಇಲ್ಲಿನ ಶಾಸ್ತ್ರಿ ವ್ರತ್ತದಲ್ಲಿ ಫಹಲ್ಗಾಮದಲ್ಲಿ ನಡದ ಭಯೋತ್ಪಾದಕ ದಾಳಿ ಖಂಡಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಆಯೋಜಿದ ಪ್ರತಿಭಟನೆ […]

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಆಯೋಜಿಸಿದ ಕುಡುಬಿ ಜಾನಪದ ಸಮಾವೇಶ 2025 ಕಾರ್ಯಕ್ರಮವು 27-04-2025ರಂದು ಮಿಜಾರಿನ, ಮಿಜಾರು ಅಣ್ಣಪ್ಪ ಸಭಾಂಗಣದಲ್ಲಿ ಜರುಗಿತು. ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಮೆರವಣಿಗೆಯು ವೈಭವಯುತವಾಗಿ ದೂಮಚಡವು ಮುಖ್ಯರಸ್ತೆಯಿಂದ ಮಿಜಾರ್ ಅಣ್ಣಪ್ಪ ಸಭಾಭವನದವರೆಗೆ ನಡೆಯಿತು. ಮೆರವಣಿಗೆಯಲ್ಲಿ 1500 ಕ್ಕೂ ಮಿಕ್ಕಿ ಜನರು ಭಾಗವಹಿಸಿದ್ದರು. ವೇದಿಕೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮೋಹನ್ ಆಳ್ವರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂತಹ ವಿಶಿಷ್ಟ ಕಾರ್ಯಕ್ರಮವನ್ನು ಉದ್ಘಾಟಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ತನಗೂ, ತನ್ನ […]

ಸೇಂಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್(AIMIT) ಬೀರಿ ಕ್ಯಾಂಪಸಿನ ಎಂಬಿಎ ವಿಭಾಗ, ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್ ನಡೆಸಿದ 8ನೇ ಅಂತರರಾಷ್ಟ್ರೀಯ ಸಮ್ಮೇಳನ ‘ನೋವೇಶನ್ 2025’: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು – ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ ಎಂಬ ವಿಷಯದ ಮೇಲೆ ಎಪ್ರಿಲ್ 25, 2025ರಂದು ಏರ್ಪಡಿಸಲಾಯಿತು. ಉದ್ಘಾಟನೆಯ ಮುಖ್ಯ ಅತಿಥಿ ಎಂ.ಆರ್.ಪಿ.ಎಲ್.ನ ಮುಖ್ಯ ಜನರಲ್ ಮ್ಯಾನೇಜರ್(ಎಚ್.ಆರ್), ಶ್ರೀ ಸಂದೇಶ್ ಜೆ. ಕುಟೀನ್ಹೋ ಪ್ರಭು, ಮುಂದಿನ ದಶಕದಲ್ಲಿ (5.0) […]

ಉಡುಪಿ: ಪೋಪ್ ಫ್ರಾನ್ಸಿಸ್ ಅವರು ದ್ವೇಷ, ಯುದ್ಧ, ವಿಭಜನೆಯಿಂದ ಮೋಡ ಕವಿದಿರುವ ಜಗತ್ತಿನಲ್ಲಿ ಶಾಂತಿ-ಪ್ರೀತಿಯ, ಭರವಸೆಯ ದಾರಿದೀಪವಾಗುವುದರೊಂದಿಗೆ. ಕರುಣೆ, ದಯೆಯೇ ಧರ್ಮಸಭೆಯ ಅತ್ಯಂತ ಶ್ರೇಷ್ಟ ಬಡಿತ ಎಂದು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಹೇಳಿದರು.ಅವರು ಶುಕ್ರವಾರ ಎಪ್ರಿಲ್ 21 ರಂದು ನಿಧನರಾದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪವಿತ್ರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥವಾಗಿ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಅಖಿಲ ಕರ್ನಾಟಕ ಮಾನವ […]

ಮಂಗಳೂರು; ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದಿನಾಂಕ 24.04.2025ರಂದು ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಶ್ರೀಮತಿ ಕ್ಯಾರೆನ್ ಕ್ರಾಸ್ತಾ ತಂಡದಿAದ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಪ್ರಾರಂಭವಾಯಿತು.ಈ ಸಂದರ್ಭದಲ್ಲಿ ಫಾ| ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ವಂ. ಪೌಸ್ತಿನ್ ಲೋಬೊ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಅವರು ಹಲವಾರು ಸಂದರ್ಭಗಳಲ್ಲಿ ಪೋಪ್ ಆವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು. ಪರಮಪೂಜ್ಯ […]

ಮಂಗಳೂರು; ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ. ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು […]

ಮಂಗಳೂರು, ಏಪ್ರಿಲ್ 22: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇದೇ ಮೊದಲ ಬಾರಿಗೆ ಕೌಶಲ್ಯ ಸಬಲೀಕರಣ ಕಾರ್ಯಕ್ರಮದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿ ಡಾ. ಪಿ.ಎಲ್. ಧರ್ಮ ನೇತೃತ್ವದ ನಾಯಕತ್ವ ತಂಡ – ಮಂಗಳೂರು ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಗೌರವಾನ್ವಿತ ಅಧ್ಯಕ್ಷ ಡಾ. ಜಯರಾಜ್ ಅಮೀನ್, ಮಂಗಳೂರಿನ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ‘ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ’ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ […]

ಮಂಗಳೂರು;ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್, ಬಜ್ಜೋಡಿ ಇವರ ಸಹಯೋಗದಲ್ಲಿ ಬಜ್ಜೋಡಿಯ ಇನ್ಫೆಟ್ ಮೇರಿ ಚರ್ಚ್ ಸಭಾಂಗಣದಲ್ಲಿ ʼಮಾಣ್ಕಾಂ-ಮೊತಿಯಾಂʼ ಶೀರ್ಷಿಕೆಯಡಿ ಎಪ್ರಿಲ್ 21ರಿಂದ 23ರವರೆಗೆ, 3 ದಿನ ಮಕ್ಕಳ ರಜಾ ಶಿಬಿರವನ್ನು ಹಮ್ಮಿಕೊಂಡಿತ್ತು. ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ರೋಯ್ ಕ್ಯಾಸ್ತೆಲಿನೊರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ನಮ್ಮ ಕೊಂಕಣಿ ಭಾಷೆಯು ರಾಷ್ಟದ 22 ಅಧಿಕೃತ ಭಾಷೆಗಳಲ್ಲಿ ಒಂದು. ನಾವು ಕೊಂಕಣಿ ಭಾಷೆ ಮಾತನಾಡಿದ್ದರಿಂದ ಕೊಂಕಣಿ ಭಾಷೆಯು ಉಳಿದಿದೆ. ಕೊಂಕಣಿ ಅಕಾಡೆಮಿಯು ಕೊಂಕಣಿ ಭಾಷೆಯನ್ನು ಉಳಿಸಲು ಹಲವಾರು ಕಾರ್ಯಕ್ರಮದ ಮೂಲಕ ಪ್ರಯತ್ನಿಸುತ್ತಿದೆ. ಅಕಾಡೆಮಿಯು ಆಯೋಜಿಸಿದ ಈ ಕಾರ್ಯಕ್ರಮವು ಮಕ್ಕಳಿಗೆ ವಿವಿಧ ವಿಚಾರಗಳನ್ನು ಕಲಿಸಿದೆ. ಇಂತಹ ಶಿಬಿರಗಳಿಂದ ಕೊಂಕಣಿ ಭಾಷೆಯನ್ನು ಮಕ್ಕಳು ಕಲಿಯುವ ಮೂಲಕ ಅವರ ಸಮಗ್ರ ಅಭಿವೃದ್ದಿಯಾಗಲಿ, ಮಕ್ಕಳು ಮುಂದೆ ಬರಲು ಶಿಬಿರವು ಪ್ರೇರಣೆಯಾಗಲಿ ಎಂದು ಹೇಳಿದರು. ಗೌರವ ಅತಿಥಿಗಳಾಗಿ ಇನ್ಫೆಂಟ್ ಜೀಸಸ್ ಶ್ರೈನಿನ ರೆಕ್ಟರ್ ಆದ ವಂದನೀಯ ಮೆಲ್ವಿನ್ ಡಿಕುನ್ಹಾ, ಬಜ್ಜೋಡಿ ಚರ್ಚ್ ನ ಧರ್ಮಗುರುಗಳಾದ ವಂ.ದೊಮಿನಿಕ್ ವಾಸ್, ಬಜ್ಜೋಡಿ ಚರ್ಚ್ ನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀಮತಿ ಜಾನೆಟ್ ಡಿಸೋಜ, ಶಿಬಿರದ ಸಂಚಾಲಕರಾದ ಅರುಣ್ ರಾಜ್ ರೊಡ್ರಿಗಸ್, ಅಕಾಡೆಮಿಯ ಸದಸ್ಯ ಸಂಚಾಲಕರಾದ ನವೀನ್ ಲೋಬೊ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕಾಡೆಮಿ ಅಧ್ಯಕ್ಷರು ಅಧ್ಯಕ್ಷೀಯ ಭಾಷಣದಲ್ಲಿ, ಅಕಾಡೆಮಿಯು ಮುಂದೆಯೂ ಕೂಡ ಇಂತಹ ಶಿಬಿರಗಳನ್ನು ಆಯೋಜಿಸಲು ತಯಾರಿದೆ. ಆದುದರಿಂದ ಎಲ್ಲಾ ಸಮುದಾಯದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೊಂಕಣಿ ಭಾಷೆ ಮತ್ತು ಗುಮಟ್ ಗೆ ಬಹಳ ಹತ್ತಿರದ ಸಂಬಂಧವಿದೆ. ಗುಮಟ್ ಹಾಗೂ ಹೊಸ ವಿಷಯದ ಬಗ್ಗೆ ಮಕ್ಕಳಿಗೆ ಈ ಶಿಬಿರದಲ್ಲಿ ಕಲಿಯಲು ಅವಕಾಶ ಸಿಕ್ಕಿದೆ ಎಂದು ಹೇಳಿ, ಕಾರ್ಯಕ್ರಮಕ್ಕೆ ಶ್ರಮಿಸಿದ ಎಲ್ಲರನ್ನು ಗೌರವಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಕಾರ್ಯಕ್ರಮದ ಮೊದಲಿಗೆ ಶಿಬಿರಾರ್ಥಿಗಳು ಸಂಗೀತ, ನಾಟಕ, ನೃತ್ಯವನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು ಮತ್ತು ತಾವು ಶಿಬಿರದಲ್ಲಿ ಕಲಿತ ವಿಷಯಗಳನ್ನು ತಮ್ಮ ಅನಿಸಿಕೆಯಲ್ಲಿ ಹಂಚಿಕೊಂಡರು. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ಹಂಚಲಾಯಿತು. ಬಜ್ಜೋಡಿ ಚರ್ಚ್ ನ ಧರ್ಮಗುರುಗಳಾದ ವಂ|ದೊಮಿನಿಕ್ ವಾಸ್ ರವರು ಸ್ವಾಗತಿಸಿ, ಶಿಬಿರಾರ್ಥಿಯಾದ ರಿಯಾನ್ ಪಿಂಟೊರವರು ವಂದಿಸಿದರು. ಶಿಬಿರಾರ್ಥಿಗಳಾದ ಸಮೈರಾ ಫೆರ್ನಾಂಡಿಸ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.