ಶ್ರೀನಿವಾಸಪುರ : ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಕಿವಿ, ಮೂಕು, ಗಂಟಲು (ಇಎನ್‌ಟಿ) ತಜ್ಞರ ಕೊರತೆ ಉಂಟಾಗಿದೆ. ಈ ನಡುವೆ, ಸ್ತ್ರೀರೋಗ ತಜ್ಞೆ ಡಾ. ಗೌಸಿಯಾ ಬಾನು ರಾಜೀನಾಮೆ ನೀಡಿದ ಕಾರಣ, ಮಹಿಳಾ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಿಲ್ಲ. ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ 300ಕ್ಕೂ ಹೆಚ್ಚು ಹಳ್ಳಿಗಳ ಜನತೆ ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ರೋಗಿಗಳು ತುರ್ತು ಚಿಕಿತ್ಸೆಗಾಗಿ, ಖಾಸಗಿ ಆಸ್ಪತ್ರೆಗಳು, ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಯ […]

Read More

ಶ್ರೀನಿವಾಸಪುರ : ಪ್ರಪಂಚದ ಅತಿ ಹೆಚ್ಚು ಮಾವು ಉತ್ಪಾದಿಸುವ ಶ್ರೀನಿವಾಸಪುರ ತಾಲ್ಲೂಕು ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಕೃಷಿ ಪ್ರದೇಶವಾಗಿ ಗುರುತಿಸಿಕೊಂಡಿದೆ. ಇಲ್ಲಿ ಸುಮಾರು 70% ರೈತರು ಹಾಗೂ ವ್ಯಾಪಾರಸ್ಥರು ಮಾವಿನ ಬೆಳೆಗಾರಿಕೆಯಿಂದ ಬದುಕು ಸಾಗಿಸುತ್ತಿದ್ದಾರೆ. ಸುಮಾರು 56 ಸಾವಿರ ಹೆಕ್ಟರ್ ಪ್ರದೇಶದಲ್ಲಿ ವಿವಿಧ ವೆರಿಟಿಗಳ ಮಾವಿನ ತೋಟಗಳು ಹರಡಿಕೊಂಡಿದ್ದು, ಪ್ರತಿ ದಿನ ಲಕ್ಷಾಂತರ ಟನ್ ಮಾವು ದೇಶದ ವಿವಿಧ ರಾಜ್ಯಗಳಲ್ಲದೇ ವಿದೇಶಗಳಿಗೂ ರಫ್ತು ಆಗುತ್ತದೆ. ಮಾವು ಸುಗ್ಗಿ ಮೇ ತಿಂಗಳಿನಿಂದ ಆರಂಭವಾಗುವಿದ್ದು ಪ್ರತಿವರ್ಷ ದೇಶದ ವಿವಿಧ ಭಾಗಗಳಿಂದ […]

Read More

ಕೋಲಾರ,ಮಾ.17: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೆ.ಯು.ಡಬ್ಲ್ಯೂ.ಜೆ ಸಂಸ್ಥಾಪಕ ಡಿ.ವಿ.ಗುಂಡಪ್ಪ (ಡಿ.ವಿ.ಜಿ) ಅವರ ಜಯಂತಿಯನ್ನು ನಗರದ ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ಸೋಮವಾರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಪತ್ರಕರ್ತರು ಡಿವಿಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸ್ಮರಿಸಿದರು.ಡಿವಿಜಿ ಅವರ ಪ್ರಸಿದ್ಧ “ಮಂಕುತಿಮ್ಮನ ಕಗ್ಗ” ಸಾಹಿತ್ಯದ ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು, ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆಟ ಬೆಲ್ಲ-ಸಕ್ಕರೆಯಾಗು ದೀನದುರ್ಬಲರಿಂಗೆಟ ಎಲ್ಲರೊಳಗೊಂದಾಗು ಮಂಕುತಿಮ್ಮ ಸೇರಿದಂತೆ ಕೆಲ ಸಾಲುಗಳನ್ನು ವಾಚನ ಮಾಡಿ ಅರ್ಥ ತಿಳಿದುಕೊಳ್ಳಲಾಯಿತು.ಪತ್ರಕರ್ತ ಕೆ.ಓಂಕಾರ […]

Read More

ಕೋಲಾರ,ಮಾ.17: ನಾನು ಎಷ್ಟೇ ಎತ್ತರಕ್ಕೆ ಬೆಳೆದಿದ್ದರೂ ಸಹ ನನ್ನ ಬೇರುಗಳು ಇರುವುದು ಕೋಲಾರದ ನೆಲದಲ್ಲಿಯೇ ಹಾಗಾಗಿ ನನ್ನ ಜನ್ಮಭೂಮಿ ಮತ್ತು ಕರ್ಮಭೂಮಿಯಾಗಿರುವ ಕೋಲಾರದ ಋಣವನ್ನು ತೀರಿಸಲು ನಿರಂತರವಾಗಿ ಶ್ರಮಿಸುವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಒಂದುಕೋಟಿ ರೂಗಳ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕರ್ನಾಟಕ ಸರ್ಕಾರದ 25 ಲಕ್ಷ ರೂಗಳ ಅನುದಾನವನ್ನು ಕೊಡುಗೆಯಾಗಿ ಕೊಡಿಸಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಪತ್ರಕರ್ತರ ಸಂಘದಿಂದ ಭಾನುವಾರ […]

Read More

ಶ್ರೀನಿವಾಸಪುರ 1 : ಕಚೇರಿಯಲ್ಲಿ ಆಸನ ವ್ಯವಸ್ಥೆ ಇಲ್ಲ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಿ, ಮುಂದಿನ ದಿನಗಳಲ್ಲಿ ಪ್ರತಿಯೊಂದು ಹಂತ ಹಂತವಾಗಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರವಿ ಭರವಸೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ದೀಡಿರ್ ಬೇಟಿ ನೀಡಿ ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದರು.ದಾಖಲೆಗಳು ಕೆಲವೊಮ್ಮೆ ಹರಿದುಹೋಗುತ್ತದೆ. ಕಳೆದುಹೋಗುವ ಸಂದರ್ಭವು ಇರಬಹುದು , ಮೂಲ ದಾಖಲೆಗಳು ನಾಪತ್ತೆಯಾಗುವುದು ಈ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ದಾಖಲೆಗಳನ್ನು ಡಿಜಟಲೀಕರಣ ಮೂಲಕ […]

Read More

ಕೋಲಾರ:- ಎಸ್ಸೆಸ್ಸೆಲ್ಸಿ ಮಕ್ಕಳಲ್ಲಿನ ಪರೀಕ್ಷಾ ಗೊಂದಲ ನಿವಾರಣೆಗಾಗಿ ಮಾ.13 ರ ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ನಗರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಡಿವಿಜಿ ಸಭಾಂಗಣದಲ್ಲಿ `ಫೋನ್ ಇನ್ ಕಾಯಕ್ರಮ’ ಹಮ್ಮಿಕೊಳ್ಳಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಫೋನ್ ಇನ್ ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ವಿಷಯ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು ಭಾಷಾ ಮತ್ತು ಐಚ್ಚಿಕ ವಿಷಯಗಳಿಗೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳಿದ್ದರೆ […]

Read More

ಬರಹ ; ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ರಂಜಾನ್ ಮಾಸವು ಮುಸ್ಲಿಂ ಸಮುದಾಯದ ಪವಿತ್ರ ಉಪವಾಸ ಮತ್ತು ಪ್ರಾರ್ಥನೆಯ ಸಮಯ. ಈ ಅವಧಿಯಲ್ಲಿ ಊಟದ ತಯಾರಿ ಮತ್ತು ಆಹಾರದ ವ್ಯಾಪಾರವು ಹೆಚ್ಚಾಗುತ್ತದೆ.ಶ್ರೀನಿವಾಸಪುರ ಪಟ್ಟಣದಲ್ಲಿಯೂ ಈ ಸಂಭ್ರಮ ಸ್ಪಷ್ಟವಾಗಿ ಕಾಣಸಿಗುತ್ತಿದ್ದು, ವಿಶೇಷವಾಗಿ ಆಜಾದ್ ರಸ್ತೆ, ಜಾಮಿಯಾ ಮಸೀದಿ, ಸೂಫಿಯ ಮಸೀದಿ ಹಾಗೂ ನೂರಾಣಿ ಮಸೀದಿ ಸುತ್ತಮುತ್ತಲಿನ ಪ್ರದೇಶಗಳು ಸಮೋಸ ಖರೀದಿ ಕೇಂದ್ರಗಳಾಗಿವೆ.ಶ್ರೀನಿವಾಸಪುರದಲ್ಲಿ ರಂಜಾನ್ ತಿಂಗಳ ವಿಶೇಷ ಆಹಾರಗಳ ಬೇಡಿಕೆ ಹೆಚ್ಚಿದ್ದು, ಸಮೋಸ ವ್ಯಾಪಾರಕ್ಕೆ ಭಾರೀ ಗರಿಗೆದರಿದೆ. ಪ್ರತಿದಿನ […]

Read More

ಶ್ರೀನಿವಾಸಪುರದಲ್ಲಿ, ರಾಜ್ಯ ಮಟ್ಟದ ಮಹಿಳಾ ಮಾಣಿಕ್ಯ ಪ್ರಶಸ್ತಿ ಪಡೆದ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಾಯಾ ಬಾಲಚಂದ್ರ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.ಮಾಯಾ ಬಾಲಚಂದ್ರ ಪ್ರತಿಭೆಗೆ ಸಂದ ಪ್ರಶಸ್ತಿಶ್ರೀನಿವಾಸಪುರ: ಪಟ್ಟಣದ ಸಪ್ತಸ್ವರ ಸಂಗೀತ ವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಜ್ಯ ಮಟ್ಟದ ಮಹಿಳಾ ಮಾಣಿಕ್ಯ ಪ್ರಶಸ್ತಿ ಪಡೆದ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಾಯಾ ಬಾಲಚಂದ್ರ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೋಮವಾರ […]

Read More

ಶ್ರೀನಿವಾಸಪುರ : ತಾಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೬ ಸದಸ್ಯರಿದ್ದು ಅದರಲ್ಲಿ ೯ ಸದಸ್ಯರು ಹಾಜರಿದ್ದರು ಇನ್ನುಳಿದ ೭ ಸದಸ್ಯರು ಗೈರುಹಾಜರಾಗಿದ್ದರು.ಈ ಹಿಂದೆ ಅಧ್ಯಕ್ಷರಾಗಿದ್ದ ನೇತ್ರಾವತಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಸಂಬಂದಿಸಿದ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಬೈಕೊತ್ತೂರು ಚಿನ್ನ ವೆಂಕಟರವಣ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಚುನಾವಣಾ ಅಧಿಕಾರಿ ಕಲ್ಯಾಣ ಸ್ವಾಮಿ ಘೋಷಿಸಿದರು.ಮುಖಂಡ ರಘುನಾಥ ರೆಡ್ಡಿ ಮಾತನಾಡಿ ಸರ್ಕಾರದ ಯೋಜನೆಗಳ […]

Read More
1 2 3 341