ಕೋಲಾರ : ಜುಲೈ 9 ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಭರದಿಂದ ಸಾಗಿದ್ದು, ಜುಲೈ 09ರ ಗುರುವಾರ ಸಂಜೆ ವೇಳೆಗೆ ಜಿಲ್ಲೆಯಾದ್ಯಂತ ಶೇ. 95.87 ರಷ್ಟು ಮತದಾರರ ನಮೂನೆಗಳನ್ನು (EFs) ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್ 16ರ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 12,95,265 ಮತದಾರರಿದ್ದಾರೆ. ಪರಿಷ್ಕರಣೆಗಾಗಿ ಮತದಾರರ ನಮೂನೆಗಳನ್ನು ಮುದ್ರಿಸಿ ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳಿಗೆ (BLOs) ತಲುಪಿಸಲಾಗಿದೆ. ಜುಲೈ 09ರ ಸಂಜೆ 4 ಗಂಟೆಯವರೆಗಿನ ವರದಿಯಂತೆ, ಜಿಲ್ಲೆಯ […]

Read More

ಕೋಲಾರ, ಜುಲೈ 9: ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದ್ದು, ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026’ (ಎಸ್‌ಐಆರ್) ಕಾರ್ಯವನ್ನು ಸಂಪೂರ್ಣ ದೋಷರಹಿತವಾಗಿ ಹಾಗೂ ಪಾರದರ್ಶಕವಾಗಿ ಪೂರ್ಣಗೊಳಿಸಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ರೋಲ್ ವೀಕ್ಷಕರಾದ ತುಲಸಿ ಮದ್ದಿನೇನಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026’ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ […]

Read More

ಶ್ರೀನಿವಾಸಪುರ: ಪಟ್ಟಣದ ಪುರಸಭೆ ಕಚೇರಿ ಮುಂಭಾಗದಲ್ಲಿ ಬುಧವಾರ ಪೌರ ಕಾರ್ಮಿಕರು ತಮ್ಮ ಬೇಡಿಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ತಹಶೀಲ್ದಾರ್ ಸುಧೀಂದ್ರ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಮಾತನಾಡಿ, ಪೌರ ಕಾರ್ಮಿಕರಿಗೆ ಸಂಭಾವನೆ ನೀಡುವ ಬಗ್ಗೆ ನೀಡಲಾಗಿರುವ ಮನವಿ ಪತ್ರವನ್ನು ಸಮುಚಿತ ಮಾರ್ಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು. ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಲು ಆಶ್ರಯ ಬಡಾವಣೆಯ ಗಡಿ ಗುರುತಿಸಿಕೊಡಲು ಹೇಳಲಾಗಿದೆ. ಸರ್ವೆ ನಂಬರ್ 17 ರಲ್ಲಿ ವಸತಿ ಸೌಲಭ್ಯ ನೀಡಲು ಪೂರಕವಾಗಿ […]

Read More

ಶ್ರೀನಿವಾಸಪುರ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹಂತ ಹಂತವಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಮುಳಬಾಗಿಲು ವೃತ್ತದಿಂದ ಎಚ್.ನಲ್ಲಪಲ್ಲಿ ಗ್ರಾಮದವರೆಗೆ ₹1 ಕೋಟಿ ವೆಚ್ಚದಲ್ಲಿ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿನ ಮೂರು ರಾಜಕಾಲುವೆಗಳನ್ನು ಸುಮಾರು ₹5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಎಪಿಎಂಸಿ ಮಾರುಕಟ್ಟೆ ಬಳಿಯ ರಾಜಕಾಲುವೆಯಿಂದ ಕಾಮಗಾರಿ ಆರಂಭವಾಗಲಿದ್ದು, ಮೂರು ಪ್ರಮುಖ ರಾಜಕಾಲುವೆಗಳ ಅಭಿವೃದ್ಧಿಯ ಜೊತೆಗೆ ಒಂದು ಸೇತುವೆ ನಿರ್ಮಾಣಕ್ಕೂ ಯೋಜನೆ […]

Read More

ಶ್ರೀನಿವಾಸಪುರ: ಪಟ್ಟಣದ ಕ್ರೀಡಾಂಗಣದಲ್ಲಿ ಸುಸಜ್ಜಿತ ಈಜುಕೊಳ ನಿರ್ಮಿಸುವಂತೆ ಹಾಗೂ ರಸ್ತೆ ನಿರ್ಮಾಣ ಮತ್ತು ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸುವಂತೆ ಆಗ್ರಹಿಸಿ, ತಾಲ್ಲೂಕು ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಜಿಎನ್.ಸುಧೀಂದ್ರ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ. ಪ್ರಕಾಶ್ ಮಾತನಾಡಿ, ಮುಖ್ಯ ಮಂತ್ರಿಗಳ ವಿವೇಚನಾ ನಿಧಿಯಡಿ ರೂ.5 ಕೋಟಿ ಮಂಜೂರಾಗಿದ್ದು, ಆ ಧನದಲ್ಲಿ ಕ್ರೀಡಾಂಗಣದಲ್ಲಿ ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಈಜುಕೊಳ ನಿರ್ಮಿಸಲು ಪುರಸಭೆ ಅನುಮೋದನೆ ನೀಡಿದೆ ಆದರೆ ಈವರೆಗೆ ಅದರ ಅನುಷ್ಠಾನ ಸಾಧ್ಯವಾಗಿಲ್ಲ ಎಂದು […]

Read More

ಕೋಲಾರ, ಜು.2: ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಪ್ರಮುಖ ಸೇತುವೆಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಹೇಳಿದರು. ಭಾರತ ಸರ್ಕಾರದ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ (ಪಿಐಬಿ), ಬೆಂಗಳೂರು, ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ […]

Read More

ಶ್ರೀನಿವಾಸಪುರ : ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ರಮದಡಿ ನಿಖರ ಹಾಗೂ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಜಾಥಾ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಚುನಾವಣಾಧಿಕಾರಿ (ಇಆರ್‌ಒ) ಟಿ.ಕೆ. ರಮೇಶ್ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತದಾರರಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬೂತ್ […]

Read More

ಕೋಲಾರ:- ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರ, ಸಂಬಂಧಿಕರು, ಆಪ್ತರ ಹೆಸರಿನಲ್ಲಿ ಮಾಡಿರುವ ಅಪಾರ ಆಸ್ತಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮತ್ತು ಸರ‍್ವಜನಿಕರಿಗೆ ಅಗತ್ಯ ಗಿಡಗಳನ್ನು ಒದಗಿಸಬೇಕು, ಕೃಷಿ ಅರಣ್ಯ ಪ್ರೋತ್ಸಾಹಧನದ ಮೊತ್ತ ಹೆಚ್ಚಿಸಲು ಆಗ್ರಹಿಸಿ ಬಹುಜನ ಸಮೈಖ್ಯ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಮುಖಂಡರು, ಅರಣ್ಯ ಇಲಾಖೆ ವತಿಯಿಂದ ಸರ‍್ವಜನಿಕರಿಗೆ ಉತ್ತಮವಾದ ಎತ್ತರವಾದ ಹುಣಸೆ, ತೇಗ, […]

Read More

ಕೋಲಾರ:- ದೇವರು ಕೊಟ್ಟಿದ್ದನ್ನು ಇತರರಿಗೆ ಹಂಚಿ, ಬಡವರಿಗೆ ಸಹಾಯ ಮಾಡುವ ಮಾಡುವ ಸೇವಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ, ಶಾಂತಿಯನ್ನು ನೀಡುತ್ತವೆ ಎಂದು ಎಲ್.ಜಿ.ಫೌಂಡೇಷನ್ ಸಂಸ್ಥಾಪಕ ಎಂ.ಲಕ್ಷ್ಮಣ್‍ಗೌಡ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಹಾಗೂ ಎಲ್.ಜಿ ಫೌಂಡೇಷನ್ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಹಾಗೂ 11 ಸರ್ಕಾರಿ ಶಾಲೆಯ 600 ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಕ್ಕಳಿಗೆ ಬ್ಯಾಗ್, ನೋಟ್‍ಪುಸ್ತಕಗಳು ಸೇರಿದಂತೆ […]

Read More
1 2 3 387