ಕೋಲಾರ; ಲಘು ಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೇಷಲ್ನ್ನು ಬಳಸುವುದರಿಂದ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ತೋಟಗಾರಿಕಾ ಮಹಾವಿದ್ಯಾಲಯ ಕೋಲಾರದ ಹಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ಕೆ. ಎಸ್. ರವರು ತಿಳಿಸಿದರು.ಕೋಲಾರದ ತೋಟಗಾರಿಕಾ ಮಹಾವಿದ್ಯಾಲಯದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ತಾಲ್ಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ತೋಟಗಾರಿಕಾ ಕಾರ್ಯಾನುಭವ ಶಿಬಿರದಲ್ಲಿ ಹಮ್ಮಿಕೊಳ್ಳಲಾದ ‘ಮಾವಿನ ಬೆಳೆಯಲ್ಲಿ ಮಾವು ಸ್ಪೇಷಲ್ ಬಳಕೆ ಪದ್ದತಿ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮಾವು ಸ್ಪೇಷಲ್ ಎಂಬುದು ಲಘು […]
ಕೋಲಾರ: 2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು (ಏಪ್ರಿಲ್ 12) ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಸಂಬಂಧ ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ನೀಡಿದ ನಿರ್ದೇಶನದಂತೆ, ಸೇವಾಸಿಂದು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುವ ಹಿನ್ನೆಲೆ, ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಸಾಮಾನ್ಯ ಪ್ರವೇಶ […]
ಶ್ರೀನಿವಾಸಪುರ : ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅನುದಾನದ ಕೊರತೆ ಇಲ್ಲ. ತಕ್ಷಣ ಕ್ರಿಯಾಯೋಜನೆಗಳನ್ನು ಸಿದ್ಧಪಡಿಸಿ, ತಾಲ್ಲೂಕು ಪಂಚಾಯಿತಿ ಇಒರಿಂದ ಅನುಮೋದನೆ ಪಡೆದು ನೀರು ಸರಬರಾಜು ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹೊಗಳಗೆರೆ ಸಸ್ಯ ಕ್ಷೇತ್ರ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀನಿವಾಸಪುರ ಹಾಗೂ ಮುಳಬಾಗಿಲು ತಾಲ್ಲೂಕಿನ ಗ್ರಾಮಪಂಚಾಯಿತಿ ಆಡಳಿತಾಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಉದ್ಘಾಟಿಸಿ […]
ಶ್ರೀನಿವಾಸಪುರ : ಮನುಷ್ಯನು ದಿನನಿತ್ಯದ ಜಂಜಾಟಗಳಲ್ಲಿ ತೊಡಗಿರುತ್ತಾನೆ . ಅವನಿಗೆ ಮಾನಸಿಕವಾಗಿ ಒಂದಿಲ್ಲದೊಂದು ಸಮಸ್ಯೆಗಳು ಇದ್ದೇ ಇರುತ್ತದೆ. ಎಷ್ಟೇ ಮಾನಸಿಕ ಒತ್ತಡಗಳು ಇದ್ದರೂ ಸಹ ದೇವಾಲಯಗಳಿಗೆ ಬಂದು ಹೋದರೆ ಮನಸ್ಸು ಸಂತಸಗೊಳ್ಳುತ್ತದೆ . ಮಾನಸಿಕವಾಗಿ ಸದೃಡವಾಗಿ ಇರಬಹುದು ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಎಂದರು. ತಾಲೂಕಿನ ಕೊತ್ತಪೇಟ ಗ್ರಾಮಕ್ಕೆ ಬುಧವಾರ ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಗ್ರಾಮದ ನೂತನವಾಗಿ ನಿರ್ಮಿಸಲಾದ ಗಂಗಮ್ಮ ದೇವಿಯ ದೇವಾಲಯಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದು ಮಾತನಾಡಿದರು. ದೇವಸ್ಥಾನಕ್ಕೆ ಸಂಬಂದಿಸಿದಂತೆ ಸಮುದಾಯಭವನವನ್ನು […]
ಶ್ರೀನಿವಾಸಪುರ : ಈಗ ನಡೆಯುತ್ತಿರುವ ಯುದ್ದದ ಸೂಚನೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಳೆದ 3 ತಿಂಗಳ ಹಿಂದೆಯೇ ಮಾಹಿತಿ ಇದ್ದರೂ ಸಹ ಗಂಭೀರ ಯೋಜನೆ ಮಾಡದೆ ನಿರ್ಲಕ್ಷ ವಹಿಸಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡಿದರು. ನಮ್ಮ ರಾಜ್ಯವು ಟ್ಯಾಕ್ಸ್ ಕಟ್ಟುವ ವಿಚಾರದಲ್ಲಿ ದೇಶಕ್ಕೆ ಎರಡು ಸ್ಥಾನ . ಹೀಗಿದ್ದರು ಸಹ ನಮ್ಮ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆಹಾರ ಮತ್ತು ನಾಗರೀಕ ಸರಬಾರಜು ಸಚಿವ ಕೆ.ಎಚ್.ಮುನಿಯಪ್ಪಪಟ್ಟಣದಲ್ಲಿ ಬುಧವಾರ ಖಾಸಗಿ ಕಾರ್ಯಕ್ರಮದಲ್ಲಿ […]
ಬೆಂಗಳೂರು : ಬೀದರ ಜಿಲ್ಲೆಯ ಬಸವನನಾಡಿನಲ್ಲಿ ಇದೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಬೆಂಗಳೂರಿನ ಸಿಎಂ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನ ಪತ್ರವನ್ನು ಸಲ್ಲಿಸಿದರು. ಬೀದರ ನಗರವು ಬಸವಣ್ಣನವರ ನಾಡು ಮತ್ತು ಸೂಫಿ ಸಂತರ ನೆಲೆಬೀಡು ಎಂಬ […]
ಕೋಲಾರ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಕು. ಎಂ. ಚಿರಂತನ ಅವರು 596 ಅಂಕಗಳನ್ನು ಗಳಿಸಿ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ನಿರಂತರ ಪರಿಶ್ರಮ, ದೃಢ ನಿಷ್ಠೆ ಮತ್ತು ಶಿಸ್ತಿನ ಅಧ್ಯಯನದ ಫಲವಾಗಿ ಚಿರಂತನ ಅವರು ಈ ಉನ್ನತ ಸಾಧನೆ ಮಾಡಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರ ಸಾಧನೆಗೆ ತಂದೆ ಮಾರುತಿ ತಾಯಿ ಕೆಂಪಮ್ಮ ಮತ್ತು […]
ಶ್ರೀನಿವಾಸಪುರ : ಹಾಲು ಉತ್ತಮ ಗುಣಮಟ್ಟದಲ್ಲಿದ್ದರೆ ಮಾತ್ರ ಅದಕ್ಕೆ ಹೆಚ್ಚಿನ ಬೆಲೆ ಲಭ್ಯವಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ತಾಲ್ಲೂಕಿನ ಆರ್. ತಿಮ್ಮಸಂದ್ರ ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಂಘದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘದ ಲೆಕ್ಕಪತ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹೈನುಗಾರಿಕೆ ಒಂದು ದೊಡ್ಡ ಉದ್ಯಮವಾಗಿದ್ದು, ಅದನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವುದು ಅಗತ್ಯ ಎಂದು ಹೇಳಿದರು. ದಿವಂಗತ ಎಂ.ವಿ. ಕೃಷ್ಣಪ್ಪ ಅವರು ಕ್ಷೀರ ಕ್ರಾಂತಿಯ ಹರಿಕಾರರಾಗಿದ್ದು, ಅವರ […]
ಶ್ರೀನಿವಾಸಪುರ : ಸ್ಥಳೀಯ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿ, ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಪಾತಪಳ್ಳಿ ಪಿ.ಎನ್. ಮಂಜುನಾಥ ರೆಡ್ಡಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಶಬ್ಬೀರ್ ಅಹ್ಮದ್ ಪಾಷಾ ಅಧಿಕಾರ ಸ್ವೀಕರಿಸಿದ್ದಾರೆ. ಈ ಆಯ್ಕೆಯಲ್ಲಿ ವಿಶೇಷವೆಂದರೆ, ಸಂಘದ ಇತಿಹಾಸದಲ್ಲಿ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಶಬ್ಬೀರ್ ಅಹ್ಮದ್ ಪಾಷಾ ಉಪಾಧ್ಯಕ್ಷ ಸ್ಥಾನಕ್ಕೇರಿರುವುದು ಗಮನಾರ್ಹ ಮೈಲಿಗಲ್ಲಾಗಿದೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ […]

