ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ತಾಡಿಗೋಳ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಚ್.ಚಲಪತಿ ಅವರನ್ನು ನೇಮಿಸಿ ತಾ ಪಂ ಇಒ ಅವರು ಆದೇಶ ಹೊರಡಿಸಿದ್ದಾರೆ.ಈವರೆಗೂ ಯಲ್ದೂರು ಗ್ರಾಮ ಪಂಚಾಯಿತಿ ಪಿಡಿಒ ಆಗಿದ್ದ ಮಂಗಳಾಂಭ ಆಡಳಿತ ವೈಖರಿ ವಿರುದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಸೇರಿದಂತೆ ಸದಸ್ಯರು ತಿರುಗಿಬಿದ್ದ ಹಿನ್ನಲೆಯಲ್ಲಿ ಪಿಡಿಒ ಹುದ್ದೆ ವಿವಾದಕ್ಕೀಡಾಗಿತ್ತು. ಮತ್ತು ತುರ್ತು ಸಭೆ ನಡೆಸಿ ಗ್ರಾಮ ಪಂಚಾಯಿತಿ ಸದಸ್ಯರು ಅವರನ್ನು ವರ್ಗಾವಣೆ ಮಾಡಲು ನಿರ್ಣಯ ಅಂಗೀಕರಿಸಿ ದೂರು […]
ಕೋಲಾರ:- ಶಿಕ್ಷಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಮೂಲಕ ಗುರುಸ್ನೇಹಿಯಾಗಿ ಕೆಲಸ ಮಾಡಿ ಎಲ್ಲರ ಪ್ರೀತಿ ವಿಶ್ವಾಸ ಉಳಿಸಿಕೊಳ್ಳಿ ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ್ ಮನವಿ ಮಾಡಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ಇತ್ತೀಚೆಗೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಸ್.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಪ್ಪ, […]
ಕೋಲಾರ:- ತಾಲ್ಲೂಕಿನ 18 ಕೇಂದ್ರಗಳಲ್ಲಿ ಮಾ.25 ರಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 5029 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡಿರುವ ಕೊಠಡಿ ಮೇಲ್ವಿಚಾರಕರು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಗಮ ಪರೀಕ್ಷೆ ನಡೆಸಿಕೊಡಿ ಎಂದು ತಾಲ್ಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಮುನಿರತ್ನಯ್ಯಶೆಟ್ಟಿ ಕಿವಿಮಾತು ಹೇಳಿದರು.ನಗರದ ಅಲ್ಅಮೀನ್ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೇಮಕಗೊಂಡ ಕೊಠಡಿ ಮೇಲ್ವಿಚಾರಕರಿಗಾಗಿ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಕೇಂದ್ರಗಳಲ್ಲಿ ಮೂಲಸೌಲಭ್ಯಗಳ ಕುರಿತು ಬಿಇಒ ಎಸ್.ಎನ್.ಕನ್ನಯ್ಯ ಮಾರ್ಗದರ್ಶನದಲ್ಲಿ ಎಲ್ಲಾ ಅಗತ್ಯ […]
ಶ್ರೀನಿವಾಸಪುರ: ತಾಲೂಕಿನ ಇಲ್ದೋಣಿ ಗ್ರಾಮದ ಅಸ್ಲಾಂಪಾಷ ಎಂಬುವವರ ಸರ್ವೆ ನಂ 168ರ 4 ಎಕರೆ ಮಾವಿನ ತೋಟಕ್ಕೆ ಗುರುವಾರ ಮಧ್ಯ್ಯಾಹ್ನ ಆಕಸ್ಮಿಕ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಕೋಲಾರದಿಂದ ಅಗ್ನಿಶಾಮಕ ದಳವು ಸಮಯಕ್ಕೆ ಸರಿಯಾಗಿ ಬಂದು ಅಗ್ನಿನಂದಿಸುವ ಕಾರ್ಯದಲ್ಲಿ ಯಶ್ವಸಿಯಾಗಿದ್ದು, ಮಾವಿನ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ 3ಲಕ್ಷ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ ಅಗ್ನಿಶಾಮಕದಳದ ಅಧಿಕಾರಿ ಮಾಹಿತಿ ನೀಡಿದರು.
ಶ್ರೀನಿವಾಸಪುರ ತಾಲ್ಲೂಕಿನ ಗೌನಪಲ್ಲಿಯ ಆದಿರಾಜಹಳ್ಳಿ ಗ್ರಾಮದ ಎ.ಆರ್.ನಾಗರಾ ಜ್ರವರು ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣೆಯ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದು ಇತ್ತೀಚೆಗೆ ಅವರ ಠಾಣಾ ವ್ಯಾಪ್ತಿಯಲ್ಲಿ ಸಂಪ್ಗೆ ಬಿದ್ದಿದ್ದ ಮಗು ಜೀವ ಉಳಿಸಿ ಕೋಲಾರ ಜಿಲ್ಲೆ ಹೆಮ್ಮೆಯ ಪುತ್ರರಾ ಗಿದ್ದಾರೆ. ಘಟನೆ ವಿವರ : ಬೆಂಗಳೂರಿನ ಬ್ಯಾಡರಹಳ್ಳಿಯ ಬಿಇಎ ಲ್ ಲೇಔಟ್ನಲ್ಲಿ ಮಾರ್ಚ್ 6 ರಂದು ಬುಧವಾರ ಮಧ್ಯಾಹ್ನ 3-30ರಲ್ಲಿ ಸುಮಾರಿಗೆ ಕರ್ತವ್ಯಕ್ಕೆ ಹಾಜರಾಗಲು ಮನೆಯಿಂದ ಪೋಲಿಸ್ ಠಾಣೆಗೆ ಕಡೆಗೆ ದ್ವಿಚಕ ವಾಹನದಲ್ಲಿ ಬರುತ್ತಿದ್ದರು. ಈ ವೇಳೆ […]
ಕೋಲಾರ : ವ್ಯಕ್ತಿಯ ಕೊಲೆ ಪ್ರಕರಣದಲ್ಲಿ 4 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ 32 ಸಾವಿರ ರೂ. ದಂಡ ವಿಧಿಸಿ ಇಲ್ಲಿನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪುನೀಡಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 06-06-2017 ರಂದು ಆವಣಿ ಗ್ರಾಮದ ನಾಗಭೂಷಣ್ ಎಂಬುವರನ್ನು ಆಸ್ತಿ ವಿವಾದದ ಹಿನ್ನಲೆಯಲ್ಲಿ ಕೊಲೆ ಮಾಡಲಾಗಿತ್ತು, ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಅದೇ ಗ್ರಾಮದ ನಾರಾಯಣಸ್ವಾಮಿ, ಗೋಪಾಲ್, ಸುರೇಶ್, ಶಿವಪ್ಪ ಈ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. […]
ಶ್ರೀನಿವಾಸಪುರ : ಪಟ್ಟಣದ ತಾಲೂಕು ಕಾರ್ಯನಿರ್ವಹಣಾಧಿಕಾರಿ ಕಛೇರಿ ಮುಂದೆ ಬುಧವಾರ ಶ್ರೀನಿವಾಸಪುರ ತಾಲೂಕು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಬಳಗದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಬಳಗದ ರಾಜ್ಯಾಧ್ಯಾಧ್ಯಕ್ಷ ಕೋದಂಡರಾಮ ಮಾತನಾಡಿ ತಾಲೂಕಿನ ಗಾಂಡ್ಲಹಳ್ಳಿ ಗ್ರಾಮದಲ್ಲಿನ ದಲಿತ ಕಾಲೋನಿಯಲ್ಲಿ ಸರ್ಕಾರಿ ರಸ್ತೆಗೆ ಹನುಮಯ್ಯ ಬಿನ್ ಲೇಟ್ ಮುನಿಬೈರಪ್ಪ ಮತ್ತು ಮಕ್ಕಳು ಸೇರಿ ಸರ್ಕಾರಿ ರಸ್ತೆಗೆ ಅಡ್ಡಲಾಗಿ ಕಾಂಪೌಡ್ ಮತ್ತು ಮನೆಯ ಶೆಡ್ನ್ನು ನಿರ್ಮಿಸುತ್ತಿದ್ದು, ಇದರಿಂದ ದಲಿತ ಕಾಲೋನಿ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಪಡೆಯಲು ತುಂಬಾ ತೊಂದರೆಯಾಗಿ ಮತ್ತು ಸುಮಾರು […]
ಶ್ರೀನಿವಾಸಪುರ, ಮಾ-13, ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಅನಧಿಕೃತ ಹುದ್ದೆಗಳನ್ನು ಸೃಷ್ಟಿ ಮಾಡುತ್ತಿರುವ ಶಿಶು ಅಭಿವೃದ್ದಿ ಅಧಿಕಾರಿ ವಿರುದ್ದ ಕಾನೂನು ಕ್ರಮ ಕೈಗೊಂಡು, ಶಿಥಲಗೊಂಡಿರುವ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿ ಮಕ್ಕಳ ಆಹಾರವನ್ನು ಕಾಳಸಂತೆಯಲ್ಲಿ ಮಾರಾಟ ದಂದೆ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಬೇಕೆಂದು ರೈತ ಸಂಘದಿಂದ ಶಿಶು ಅಭಿವೃದ್ದಿ ಇಲಾಖೆ ಮುಂದೆ ಹೋರಾಟ ಮಾಡಿ ಶಿಶು ಅಭಿವೃದ್ಧಿ ಅಧಿಕಾರಿ ನವೀನ ಮುಖಾಂತರ ಉಪ ನಿರ್ದೇಶಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಸರ್ಕಾರ ನಿಯಮದ ಪ್ರಕಾರ ಅಂಗನವಾಡಿ […]
ಶ್ರೀನಿವಾಸಪುರ : ಕಾಂಗ್ರೆಸ್ ಸರ್ಕಾರ ಶಿಕ್ಷಕ, ಶಿಕ್ಷಣ, ವಿದ್ಯಾರ್ಥಿ ಹಾಗು ಶಿಕ್ಷಣ ಸಂಸ್ಥೆಗಳನ್ನು ಕಂಡರೆ ಅರ್ಲಜಿ. ಹಾಗಾಗಿ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಪರವಾಗಿ ಯಾವುದೇ ಯೋಜನೆಗಳನ್ನು ತರುವುದಿಲ್ಲ ಎಂದು ಆಗ್ನೇಯ ಪದವಿದರ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಟೀಕಿಸಿದರು. ಪಟ್ಟಣದ ವೆಂಕಟೇಗೌಡ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಗ್ನೇಯ ಪಧವಿ ದರ ಕ್ಷೇತ್ರದ ಚುನಾವಣೆಯ ಪೂರ್ವಬಾವಿಯಾಗಿ ನಡೆದ ಸಭೆಯ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಯಾವ ಯಾವ ಕಾಲಘಟಕದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಳ್ವಿಕೆಗೆ ಬಂದಿದೆಯೋ ಅಷ್ಟೋ […]

