ಶ್ರೀನಿವಾಸಪುರ : ತಹಶೀಲ್ದಾರ್ ಕಛೇರಿ ಕಟ್ಟಡ ಮೇಲ್ಬಾಗದಲ್ಲಿ ನೂತನವಾಗಿ ಕಟ್ಟಡ ನಿರ್ಮಾಣ ಮಾಡಲು ಇಂಜಿನೀಯರ್ಗಳೊಂದಿಗೆ ಚರ್ಚೆ ಮಾಡಿದರು. ಅಲ್ಲದೆ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ವಾಹನಗಳ ಪಾರ್ಕಿಂಗ್ ನ್ನ ಸುಜಜ್ಜಿತವಾಗಿ ವ್ಯವಸ್ಥೆಯನ್ನ ಮಾಡುವಂತೆ ಪೊಲೀಸ್ ನಿರೀಕ್ಷ ಎಂ.ಬಿ.ಗೊರವಿನಕೊಳ್ಳ ರವರಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೂಚನೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಛೇರಿಗೆ ಮಂಗಳವಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳಲ್ಲಿನ ಪ್ರಗತಿಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಜಿಲ್ಲಾಧಿಕಾರಿಗಳು ಅಧಿಕಾರಿಗಳ ಸಭೆ ಮುಗಿದ ನಂತರ ಕಛೇರಿಯಿಂದ ಹೊರಬರುವವೇಳೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಬಳಿ […]
ಶ್ರೀನಿವಾಸಪುರ : ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಬಾವಿಸಿ, ಶಿಕ್ಷಕರು ಮನಸ್ಸು ಮಾಡಿದರೆ ದೇಶವನ್ನು ಕಟ್ಟಬಹುದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ತಿಳಿಸಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಸಂಜೆ ಎಸ್ಸಿ , ಎಸ್ಟಿ ಪ್ರಾಥಮಿಕ ಶಿಕ್ಷಕರ ಸಂಘದವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥ ಹಾಗೂ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷದ ಸಂಗತಿ. ನಮ್ಮ ದೇಶವು ಉಜ್ವಲವಾಗಿ ಅಭಿವೃದ್ಧಿಯಾಗಲು ಸಂವಿಧಾನದ ಹಕ್ಕು ಮತ್ತು […]
ಶ್ರೀನಿವಾಸಪುರ; ಫೆ.23: ಸಾವಿರಾರು ಎಕರೆ ಅರಣ್ಯ ಭೂ ಒತ್ತುವರಿಯನ್ನು ತೆರವುಗೊಳಿಸಿರುವ ಅರಣ್ಯ ಉಪ ಸಂರಕ್ಷಣಾಧಿಕಾರಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಭೂಗಳ್ಳರು ನ್ಯಾಯಾಲಯದಲ್ಲಿ ಧಾವೆ ಹೂಡಿದ್ದು, ಅಧಿಕಾರಿಗಳ ರಕ್ಷಣೆಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಒತ್ತಾಯಿಸಿ ಫೆ.29ರ ಗುರುವಾರ ಅರಣ್ಯ ಸಚಿವರ ನಿವಾಸದ ಮುಂದೆ ಹೋರಾಟ ಮಾಡಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಅಮಾಯಕ ರೈತರ ಹೆಸರಿನಲ್ಲಿ ಬಲಾಢ್ಯ, ಶ್ರೀಮಂತ, ರಾಜಕೀಯ, ರಿಯಲ್ […]
ಶ್ರೀನಿವಾಸಪುರ 1 : ಮಕ್ಕಳಿಗೆ ಮೂರು ದಿನ ನೀಡುವ ಬದಲು ಎಲ್ಲಾ ವಾರದ 6 ದಿನಗಳು ನೀಡಿದರೆ ಒಳ್ಳೆಯದೆಂದು ಸಲಹೆ ನೀಡಿ ಸರ್ಕಾರಿ ಶಾಲೆ ಮಕ್ಕಳಿಗೆ ಯಾವುದೇ ರೀತಿಯ ಪೌಷ್ಠಿಕಾಂಶಗಳಿಂದ ವಂಚಿತರಾಗಬಾರದೆಂದು ಕಾರ್ಯಕ್ರಮ ರೂಪಿಸಿರುವ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಸಮಸ್ಥೆಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಧನ್ಯವಾದಗಳು ತಿಳಿಸಿದರುಪಟ್ಟಣದ ತ್ಯಾಗರಾಜ ಬಡವಾಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ, ಪ್ರದಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಿಂದ, […]
ಕೋಲಾರ : ಕೋಲಾರ ಜಿಲ್ಲೆಯಲ್ಲಿ ಜ. 26ರಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಗಿದ್ದು, 120ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿದೆ. ಹೋದ ಕಡೆಯಲ್ಲೆಲ್ಲಾ ಜನರಿಂದ ಅಭೂತಪೂರ್ವವಾದ ಸ್ವಾಗತ ಸಿಕ್ಕಿದೆ. ಕೋಲಾರ ಜಿಲ್ಲೆಯ ಸಂವಿಧಾನ ಜಾಗೃತಿ ಜಾಥಾದ ವಿಶೇಷತೆಗಳ ಕುರಿತು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೀಡಿದ ವಿಶೇಷ ಸಂದರ್ಶನ ಇಲ್ಲಿದೆ. ಸಂವಿಧಾನದ ಕುರಿತು ಜಾಗೃತಿ ಮೂಡಿಸುವುದೇ ಇದರ ಮೂಲ ಉದ್ದೇಶ. ಮುಖ್ಯವಾಗಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ […]
ಶ್ರೀನಿವಾಸಪುರ : ಹಣಕಾಸಿನ ಸಾಕ್ಷರತೆಯು ವ್ಯಕ್ತಿಗಳು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಹಣಕಾಸಿನ ಉತ್ಪನ್ನಗಳು ಮತ್ತು ಸೇವೆಗಳ ಗ್ರಾಹಕರಿಗೆ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ . ವಂಚನೆಗಳಿ0ದ ತಮ್ಮನ್ನು ರಕ್ಷಿಸಿಕೊಳ್ಳಬಹುರಾಗಿದೆ ಎಂದರು. ಅರ್ಥಿಕ ಸಾಕ್ಷರತೆಯ ಫಲಿತಾಂಶಗಳನ್ನು ಸುಧಾರಿಸಲು ಪರಿಣಾಮಕಾರಿ ಮತ್ತು ಅಂತರ್ಗತ ಹಣಕಾಸು ಶಿಕ್ಷಣ ಕಾರ್ಯಕ್ರಮಗಳು ಮತ್ತು ನೀತಿಗಳ ಅವಶ್ಯಕತೆ ಇದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ತಿಳಿಸಿದರು. ಪಟ್ಟಣದ ಪುರಸಭೆ ಕಛೇರಿಯಲ್ಲಿ ಪಟ್ಟಣದ ವಿವಿಧ ಬ್ಯಾಂಕ್ಗಳ ಸಹಯೋಗದಲ್ಲಿ ಮಂಗಳವಾರ ಅರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಹಣಕಾಸಿನ […]
ಕೋಲಾರ,ಫೆ.19: 20 ವರ್ಷಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಿಸಲು ಕೋಲಾರ ಪತ್ರಕರ್ತರ ಸಂಘವೇ ಮೂಲ ಕಾರಣ ಎಂದು ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಹಮ್ಮಿಕೊಂಡಿದ್ದ ಧನ್ಯವಾದ ಸಮರ್ಪಣಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವರ್ಷ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆಯಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ […]
ಶ್ರೀನಿವಾಸಪುರ 1 : ವಿದ್ಯಾರ್ಥಿ ಜೀವನ ಎನ್ನುವುದು ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಅಮೂಲ್ಯವಾದ ಕ್ಷಣಗಳಾಗಿದ್ದು, ಈ ಸಮಯದಲ್ಲಿ ವಿದ್ಯಾಥಿಗಳು ಹೆಚ್ಚಿನ ಸಮಯವನ್ನು ಜ್ಞಾನಾರ್ಜನೆಗೆ ಮೀಸಲಿಟ್ಟು ಶ್ರಮಪಟ್ಟು ವ್ಯಾಸಂಗ ಮಾಡಿದರೆ ಸುಂದರವಾದ ಭವಿಷ್ಯವನ್ನು ಕಟ್ಟಿಕೊಳ್ಳುವುದು ಸಾಧ್ಯ. ಎಂದು ಉನ್ನತ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ರಾಮೇಗೌಡ ವಿದ್ಯಾರ್ಥಿಗಳಿಗೆ ಹೇಳಿದರು.ತಾಲೂಕಿನ ದಳಸನೂರು ಪ್ರೌಡಶಾಲೆಯಲ್ಲಿ ಶನಿವಾರ ಕಂಕರಿ ಮಹಿಳಾ ಸ್ವಯಂ ಸೇವಾ ಸಂಸ್ಥೆವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.ಕಂಕರಿ ಮಹಿಳಾ ಸ್ವಯಂ ಸೇವಾ ಸಂಸ್ಥೆವತಿಯಿಂದ ವಿಶೇಷವಾಗಿ ಗ್ರಾಮೀಣ ಭಾಗದ ಎಸ್ಎಸ್ಎಲ್ಸಿ […]
ಶ್ರೀನಿವಾಸಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಪಟ್ಟಣದ ಪೋಸ್ಟ್ ಆಫೀಸ್ ಹಿಂಭಾಗದಲ್ಲಿರುವ ಸರ್ಕಾರಿ ಉನ್ನತೀಕೃತ ಶಾಲೆಯಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ತಾಲ್ಲೂಕು ದಂಡಾಧಿಕಾರಿಗಳಾದ ಸುಧೀಂದ್ರ,ತಾಲ್ಲೂಕಿನ ಶಾಸಕರಾಗಿರುವ ಜಿಕೆ ವೆಂಕಟಶಿವಾರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮಕ್ಕೆ ದೀಪ ಬೇಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕ ಜಿಕೆ ವೆಂಕಟಶಿವಾರೆಡ್ಡಿ ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಬದುಕು ಸಾಗಿಸಲು ಸಶಕ್ತರನ್ನಾಗಿ ಮಾಡುವಲ್ಲಿ […]

